ಶಿಕ್ಷಕರ ಬೇಡಿಕೆ ಈಡೇರಿಕೆಗೆ ಆಗ್ರಹ


Team Udayavani, Feb 19, 2019, 7:40 AM IST

shikasa.jpg

ದೇವನಹಳ್ಳಿ: ಶಿಕ್ಷಕರ ಪ್ರಮುಖ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ವತಿಯಿಂದ ತಾಲೂಕಿನ ಚಪ್ಪರದ ಕಲ್ಲು ಸರ್ಕಲ್‌ ಬಳಿಯ ಜಿಲ್ಲಾ ಸಂಕೀರ್ಣದ ಮುಂಭಾಗದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲಾಯಿತು.

ನೂತನ ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ಸಮಿತಿಯ ವರದಿಯನ್ನು ಪಡೆದು, ತಕ್ಷಣವೇ ನೂತನ ಪಿಂಚಣಿಯನ್ನು ರದ್ದುಪಡಿಸಿ ಹಳೇ ಪಿಂಚಣಿ ವ್ಯವಸ್ಥೆಯನ್ನೇ ಮುಂದುವರೆಸಬೇಕು. ಅಲ್ಲದೆ‌, ಇತರೆ ಬೇಡಿಕೆಗಳನ್ನು ಈಡೇರಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.  

3 ವರ್ಷದಿಂದ ವರ್ಗಾವಣೆ ನಡೆದಿಲ್ಲ: ಸಂಘದ ಜಿಲ್ಲಾಧ್ಯಕ್ಷ ಕೆ.ಕಾಂತರಾಜು ಮಾತನಾಡಿ, ಶಿಕ್ಷಕರ ಆರು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಲಾಗಿದೆ. ಶಿಕ್ಷಕರ ವರ್ಗಾವಣೆ ಕಾಯ್ದೆ 2007ರ ಅನ್ವಯ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಪ್ರತಿ ವರ್ಷ ಮಾರ್ಚ್‌, ಏಪ್ರಿಲ್‌ ತಿಂಗಳಲ್ಲೇ ಕೈಗೊಳ್ಳಬೇಕಾಗಿತ್ತು. ಆದರೆ, ಅನಿವಾರ್ಯ ಕಾರಣಗಳಿಂದ ಹಾಗೂ ಚುನಾವಣಾ ನೀತಿ ಸಂಹಿತೆಯಿಂದ ಮುಂದೂಡುತ್ತಾ ಬರಲಾಗಿದೆ. ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಕಳೆದ 3 ವರ್ಷಗಳಿಂದ ನಡೆದಿಲ್ಲ. ಇದರಿಂದ ವರ್ಗಾವಣೆ ಬಯಸುತ್ತಿರುವ ಶಿಕ್ಷಕರಿಗೆ ತೀವ್ರ ತೊಂದರೆಯಾಗಿದೆ ಎಂದರು.

ವರ್ಗಾವಣೆ ಕಾರ್ಯ ಪೂರ್ಣಗೊಳಿಸಿ: ವರ್ಗಾವಣೆ ಪ್ರಕ್ರಿಯೆ ನಡೆಸದ ಬಗ್ಗೆ ಸಂಘ ಸಾಕಷ್ಟು ಬಾರಿ ಸರಕಾರಕ್ಕೆ, ಇಲಾಖೆ ಅಧಿಕಾರಿಗಳಿಗೆ ನಿವೇದನೆ ಸಲ್ಲಿಸಿದೆ. 2018ರ ಡಿ.16ರಂದು ನಡೆದ ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನದಲ್ಲಿ ಫೆಬ್ರವರಿಯಲ್ಲೇ ವರ್ಗಾವಣೆ ಮಾಡುವುದಾಗಿ ತಿಳಿಸಿದ್ದರು. ಆದರೆ, ಇನ್ನೂ ಯಾವುದೇ ಪ್ರಕ್ರಿಯೆಗಳಿಗೆ ಚಾಲನೆ ನೀಡದಿರುವುದು ವಿಷಾದನೀಯ. ಪ್ರಸಕ್ತ ಸಾಲಿನ ವರ್ಗಾವಣೆ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ, ಜೂನ್‌ನಲ್ಲಿ ಮತ್ತೂಮ್ಮೆ ವರ್ಗಾವಣೆ ಮಾಡಿಕೊಡಬೇಕೆಂದು ಆಗ್ರಹಿಸಿದರು.

ಕನಿಷ್ಠ ಷರತ್ತು ಬದ್ಧ ಬಡ್ತಿ ನೀಡಿ: ಸೇವಾ ನಿರತ ಪದವೀಧರ ಶಿಕ್ಷಕರಿಗೆ ಬಡ್ತಿ ನೀಡುವುದು ಅತ್ಯವಶ್ಯಕವಾಗಿದೆ. ಈಗಾಗಲೇ ಎರಡು ಬಾರಿ ನೇರ ನೇಮಕಾತಿ ಮೂಲಕ ಪದವೀಧರ ಶಿಕ್ಷಕರ ನೇಮಕಾತಿ ಪೂರ್ಣಗೊಂಡಿದ್ದು, ಈಗ ಮತ್ತೆ 1,000 ಪದವೀಧರ ಶಿಕ್ಷಕರಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಇದರಿಂದ ಸೇವಾನಿರತ ಶಿಕ್ಷಕರಿಗೆ ನಿರಂತರ ಅನ್ಯಾಯವಾಗುತ್ತಿದೆ. ಕಾರಣ ಬಡ್ತಿ ಪ್ರಕ್ರಿಯೆಗಳು ಸಂಪೂರ್ಣ ಸ್ಥಗಿತವಾಗಿದೆ. ಎಲ್ಲದಕ್ಕೂ ಪವಿತ್ರಾ ಪ್ರಕರಣದ ಕಾರಣ ನೀಡುತ್ತಿರುವುದು ತೀವ್ರ ಅಸಮಧಾನಕ್ಕೆ ಕಾರಣವಾಗಿದೆ. ಕನಿಷ್ಠ ಷರತ್ತು ಬದ್ಧ ಬಡ್ತಿ ನೀಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು.

ನೂತನ ಪಿಂಚಣಿ ರದ್ದುಗೊಳಿಸಿ: ಪ್ರಧಾನ ಕಾರ್ಯದರ್ಶಿ ಜಯರಾಮಯ್ಯ ಮಾತನಾಡಿ, ನೂತನ ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ಸಮಿತಿಯ ವರದಿಯನ್ನು ಪಡೆದು ತಕ್ಷಣ ನೂತನ ಪಿಂಚಣಿ ಯೋಜನೆ ರದ್ದುಗೊಳಿಸಬೇಕು. 6ನೇ ವೇತನ ಶಿಫಾರಸ್ಸಿನಂತೆ ತಕ್ಷಣ ಆದೇಶ ಹೊರಡಿಸಿ, ಬಡ್ತಿ ಹೊಂದಿದ ಮುಖ್ಯ ಶಿಕ್ಷಕರಿಗೆ 10-25 ವರ್ಷಗಳ ಆರ್ಥಿಕ ಸೌಲಭ್ಯ ನೀಡಬೇಕು. ಗ್ರಾಮೀಣ ಕೃಪಾಂಕ ಸೌಲಭ್ಯ ಸೇವೆಯಿಂದ ವಜಾ ಆಗಿರುವ ಶಿಕ್ಷಕರ ಪೂರ್ಣ ಸೇವೆ ಪರಿಗಣಿಸಿ ಎಲ್ಲಾ ಸೌಲಭ್ಯಗಳನ್ನು ನೀಡಬೇಕು.

ಶಿಕ್ಷಕರನ್ನು ಬಿಎಲ್‌ಒ ಹಾಗೂ ಇನ್ನಿತರ ಶಿಕ್ಷಣೇತರ ಕಾರ್ಯಗಳಿಂದ ಮುಕ್ತಗೊಳಿಸಬೇಕೆಂದು ಆಗ್ರಹಿಸಿದರು. ಇದೇ ಸಂದರ್ಭದಲ್ಲಿ ಒಂದು ನಿಮಿಷ ಮೌನಾಚರಣೆ ಮೂಲಕ ಹುತಾತ್ಮ ವೀರ ಯೋಧರ ಪವಿತ್ರ ಆತ್ಮಕ್ಕೆ ಶಾಂತಿ ಕೋರಿದರು.  ಮನವಿ ಸ್ವೀಕರಿಸಿ ಮಾತನಾಡಿದ ಡೀಸಿ ಕಚೇರಿ ಸಹಾಯಕ ನರಸಿಂಹಮೂರ್ತಿ, ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಕಳುಹಿಸಿಕೊಡಲಾಗುವುದು ಎಂದು ತಿಳಿಸಿದರು.  

ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾ ಉಪಾಧ್ಯಕ್ಷೆ ಆರ್‌.ವಿಜಯ್‌ಕುಮಾರಿ, ಸಂಘಟನಾ ಕಾರ್ಯದರ್ಶಿ ಕೆ.ಎನ್‌.ನಾಗೇಶ್‌, ಸಹ ಕಾರ್ಯದರ್ಶಿ ಗೀತಾ, ರಾಜ್ಯ ಉಪಾಧ್ಯಕ್ಷ ಎಸ್‌.ಪಿ.ವೆಂಕಟಾಚಲಯ್ಯ, ದೇವನಹಳ್ಳಿ ತಾಲೂಕು ಅಧ್ಯಕ್ಷ ನಾಗೇಶ್‌, ಹೊಸಕೋಟೆ ತಾಲೂಕು ಅಧ್ಯಕ್ಷ ಮುನಿಶಾಮಣ್ಣ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಬಿ.ಎಸ್‌.ಸಿದ್ಧಗಂಗಯ್ಯ, ನೆಲಮಂಗಲ ತಾಲೂಕು ಅಧ್ಯಕ್ಷ ಶಿವಕುಮಾರ್‌, ರಾಜ್ಯ ಗ್ರೇಡ್‌ 2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕಾರ್ಯದರ್ಶಿ ಪುಟ್ಟಸ್ವಾಮಿ, ಸರ್ಕಾರಿ ನೌಕರರ ಸಂಘದ ಜಿಲ್ಲಾ ನಿರ್ದೇಶಕ ನಾರಾಯಣ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.