ಡಯಟ್‌ ಸ್ಥಳಾಂತರಕ್ಕೆ ಶಿಕ್ಷಕರ ಒತ್ತಾಯ


Team Udayavani, Jul 13, 2019, 3:00 AM IST

diat-stala

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಕಚೇರಿಗಳು ದೇವನಹಳ್ಳಿ ತಾಲೂಕಿನ ಚಪ್ಪರದ ಕಲ್ಲು ಸರ್ಕಲ್‌ ಬಳಿ ಇರುವ ಜಿಲ್ಲಾ ಸಂಕೀರ್ಣಕ್ಕೆ ಸ್ಥಳಾಂತರವಾಗಿವೆ. ಆದರೆ ಶಿಕ್ಷಕರ ತರಬೇತಿ ಕೇಂದ್ರ ಮಾತ್ರ ಈ ವರೆಗೆ ಸ್ಥಳಾಂತರವಾಗಿಲ್ಲ. ಹೀಗಾಗಿ ತರಬೇತಿಗೆ ನಿಯೋಜನೆಯಾಗುವ ವಿಷಯವಾರು ಶಿಕ್ಷಕರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.

ಡಯಟ್‌ ಸ್ಥಳಾಂತರಕ್ಕೆ ಒತ್ತಾಯ: ಬೆಂಗಳೂರು ನಗರದ ಜಿಲ್ಲಾಡಳಿತ ಕಚೇರಿ ಹಾಗೂ ನಗರದ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳು, ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಹಂತಹಂತವಾಗಿ ಸ್ಥಳಾಂತರಗೊಂಡು, ಕಾರ್ಯನಿರ್ವಹಿಸುತ್ತಿವೆ. ಆದರೆ ಶಿಕ್ಷಕರ ತರಬೇತಿ ಕೇಂದ್ರ ಡಯಟ್‌ ಸ್ಥಳಾಂತರವಾಗದೇ ಬೆಂಗಳೂರಿನ ರಾಜಾಜೀ ನಗರದಲ್ಲೇ ಇದೆ. ಹೀಗಾಗಿ 4 ತಾಲೂಕುಗಳ ಪ್ರಾಥಮಿಕ ಹಾಗೂ ಪ್ರೌಡಶಾಲೆ ವಿಷಯವಾರು ಶಿಕ್ಷಕರಿಗೆ ತೊಂದರೆಯಾಗುತ್ತಿದೆ. ಕೂಡಲೇ ಡಯಟ್‌ ಜಿಲ್ಲಾ ಕೇಂದ್ರವನ್ನು ಸ್ಥಳಾಂತರಗೊಳಿಸಬೇಕು ಎಂದು ಶಿಕ್ಷಕರ ಒತ್ತಾಯವಾಗಿದೆ.

ನರಕಯಾತನೆ: ಜಿಲ್ಲೆಯಲ್ಲಿ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಡಶಾಲಾ ಶಿಕ್ಷಕರ ಸಂಖ್ಯೆ 4 ಸಾವಿರಕ್ಕೂ ಹೆಚ್ಚಿದೆ. ಪ್ರೌಡಶಾಲಾ ಶಿಕ್ಷಕರಿಗೆ ಆಯಾ ತಾಲೂಕಿನ ಲ್ಲಿ ಡಯಟ್‌ ವಿಷಯವಾರು ಶಿಕ್ಷಣಾಧಿಕಾರಿಗಳು ಬೋಧನೆ ತರಬೇತಿ ನೀಡುತ್ತಾರೆ. ಪ್ರಾಥಮಿಕ ಶಿಕ್ಷಕರಿಗೆ ಹೆಚ್ಚಿನ ತರಬೇತಿ ನೀಡುಲಾಗುತ್ತಿದೆ. ತರಬೇತಿಗಾಗಿ ಹೆಚ್ಚುವರಿ ಭತ್ಯೆ ನೀಡುವುದಿಲ್ಲ. ಜತೆಗೆ ಕೇಂದ್ರದಲ್ಲಿ ತರಬೇತಿ ಪಡೆದು ವಾಪಸ್ಸಾಗುವ ಹೊತ್ತಿಗೆ ಸಂಜೆ ತುಂಬಾ ಹೊತ್ತಾಗುತ್ತದೆ. ಮನೆಯಲ್ಲಿ ವೃದ್ಧರು, ಚಿಕ್ಕ ಮಕ್ಕಳನ್ನು ಬಿಟ್ಟು ತರಬೇತಿಗೆ ಹೋಗಬೇಕು. ತರಬೇತಿಯನ್ನು ಬಿಡಲು ಸಾಧ್ಯವಿಲ್ಲ. ಆದರೆ ಹೋಗಿಬರುವುದು ನರಕಯಾತನೆಯಾಗಿದೆ ಎಂದು ಶಿಕ್ಷಕರು ಅಳಲು ತೋಡಿಕೊಂಡಿದ್ದಾರೆ.

ಅಗತ್ಯವಿರುವ ಸೌಲಭ್ಯಗಳಿವೆ: ಜಿಲ್ಲಾಡಳಿತ ಭವನದಲ್ಲಿ 2 ಕೊಠಡಿಗಳನ್ನು ಕಾಯ್ದಿರಿಸಲಾಗಿದೆ. ಏಕ ಕಾಲದಲ್ಲಿ ತರಬೇತಿ ನೀಡಲು 50 ಕಂಪ್ಯೂಟರ್‌ಗಳಿವೆ. ಡಯಟ್‌ ಆಡಳಿತಾತ್ಮಕವಾಗಿ ಕೆಲಸ ನಿರ್ವಹಿಸಲು ಇಷ್ಟು ಸಾಕಾಗುವುದು. ಆದರೆ ಶಿಕ್ಷಕರಿಗೆ ತರಬೇತಿ ನೀಡಲು ಸಾಕಾಗುವುದಿಲ್ಲ. ಅಲ್ಲದೆ ಡಯಟ್‌ ಕೇಂದ್ರಕ್ಕಾಗಿ ಜಿಲ್ಲಾಡಳಿತ ಭವನದ ಪಕ್ಕದಲ್ಲಿ ಸರ್ಕಾರ 4 ಎಕರೆ ಜಾಗ ನೀಡಲಿದೆ. ಅಲ್ಲಿಯೇ ಡಯಟ್‌ ನಿರ್ಮಿಸಲಾಗುವುದು ಎಂದು ಅಧಿಕಾರಿಗಳು ಹೇಳುತ್ತಾರೆ.

ಶಿಕ್ಷಕರು ಒಂದು ವರ್ಷದಲ್ಲಿ 5ರಿಂದ 15 ದಿನಗಳವರೆಗೆ ತರಬೇತಿ ಪಡೆಯುತ್ತಾರೆ. ಒಂದು ಬಾರಿಗೆ 200ಕ್ಕೂ ಹೆಚ್ಚು ಶಿಕ್ಷಕರಿಗೆ ತರಬೇತಿ ನೀಡಲಾಗುತ್ತದೆ. ಆದರೆ ಬೆಳಗ್ಗೆ ವೇಳೆ ಸಮಯಕ್ಕೆ ಸರಿಯಾಗಿ ತರಬೇತಿಗೆ ಹಾಜರಾಗಲು ಸಾಧ್ಯವಿಲ್ಲ. ಟ್ರಾಫಿಕ್‌ ಜಾಮ್‌ನಿಂದಾಗಿ ಹೋಗಿಬರುವುದರಲ್ಲೇ ಸಮಯ ವ್ಯರ್ಥವಾಗುತ್ತದೆ.
-ಆಂಜನಪ್ಪ, ಶಿಕ್ಷಕ

ಡಯಟ್‌ ಕಟ್ಟಡ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುದಾನ ನೀಡಬೇಕು. ನಮ್ಮದು ತರಬೇತಿ ನೀಡುವ ಕೆಲಸ ಮಾತ್ರ ಆಗಿದೆ. ಆಡಳಿತಾತ್ಮಕವಾಗಿ ಸ್ಥಳಾಂತರ ಮಾಡಿಕೊಳ್ಳಿ ಎಂದು ಆದೇಶ ನೀಡಿದರೆ ತಕ್ಷಣವೇ ಸ್ಥಳಾಂತರ ಮಾಡುತ್ತೇವೆ. ಅಂತಿಮ ತೀರ್ಮಾನ ಸಂಬಂಧ ಪಟ್ಟ ಹಿರಿಯ ಅಧಿಕಾರಿಗಳು ತೆಗೆದುಕೊಳ್ಳಬೇಕು.
-ಉಮೇಶ್‌, ಡಯಟ್‌ ತರಬೇತಿ ಪ್ರಾಂಶುಪಾಲ

ಟಾಪ್ ನ್ಯೂಸ್

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.