ಅಥ್ಲೆಟಿಕ್‌ ಟ್ರ್ಯಾಕ್‌ ಕಾಮಗಾರಿ ಕಳಪೆ


Team Udayavani, Mar 20, 2019, 7:23 AM IST

atheletic.jpg

ದೇವನಹಳ್ಳಿ: ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಆಟದ ಮೈದಾನದಲ್ಲಿ ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯಿಂದ ನಿರ್ಮಾಣ ಮಾಡಿರುವ 200 ಮೀ. ಅಥ್ಲೆಟಿಕ್‌ ಟ್ರ್ಯಾಕ್‌ ಕಾಮಗಾರಿ ಕಳಪೆಯಿಂದ ಕೂಡಿದೆ. ಆಟಗಾರರಿಗೆ ಯಾವುದೇ ಉಪಯೋಗವಿಲ್ಲ ಎಂದು ಕ್ರೀಡಾಭಿಮಾನಿಗಳು ಆರೋಪ ಮಾಡಿದ್ದಾರೆ. 

ನಗರದ ಹೃದಯ ಭಾಗದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಆಟದ ಮೈದಾನದಲ್ಲಿ ದಿನನಿತ್ಯ ಬೆಳಗ್ಗೆ ಮತ್ತು ಸಂಜೆ ನಗರದ ಸುಮಾರು ಒಂದು ಸಾವಿರ ಜನರು ವಾಯುವಿಹಾರ ಮತ್ತು ವಿವಿಧ ರೀತಿಯ ದೈಹಿಕ ವ್ಯಾಯಾಮಗಳನ್ನು ಮಾಡುತ್ತಾರೆ. ಶಾಲಾ ಮಕ್ಕಳು ಹಾಗೂ ಯುವಕರು ಕ್ರಿಕೆಟ್‌, ವಾಲಿಬಾಲ್‌ ಇತರೆ ಆಟಗಳ ಅಭ್ಯಾಸ ಮಾಡುತ್ತಾರೆ. ಆದರೆ, ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ 5.60 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿರುವ 200 ಮೀಟರ್‌ ಟ್ರ್ಯಾಕ್‌ ಸಂಪೂರ್ಣ ಕಳಪೆಯಾಗಿದೆ ಎಂದು ಆರೋಪಿಸಿದ್ದಾರೆ.

ಒತ್ತುವರಿ ತೆರವಿಗೆ ಆಗ್ರಹ: ಟ್ರ್ಯಾಕ್‌ ಅನ್ನು ಸರಿಯಾದ ರೀತಿ ಹಾಗೂ ವ್ಯವಸ್ಥಿತವಾಗಿ ನಿರ್ಮಾಣ ಮಾಡಿಲ್ಲ. ಅಡ್ಡಾದಿಡ್ಡಿ ಮಾಡಿದ್ದಾರೆ. 9 ಇಂಚು ಅಗೆದು ಜೆಸಿಬಿ ಮೂಲಕ ರೋಲ್‌ ಮಾಡಿಸಿದ್ದಾರೆ. ಈ ಮೈದಾನ 5.18 ಎಕರೆ ಜಾಗದಲ್ಲಿದ್ದು, ಅದರಲ್ಲಿ ಅಂದಾಜು 1.18 ಗುಂಟೆ ಜಾಗ ಒತ್ತುವರಿಯಾಗಿದೆ. ಅದನ್ನು ಈ ಕೂಡಲೇ ತೆರವು ಗೊಳಿಸಬೇಕೆಂದು ಕ್ರೀಡಾಸಕ್ತರು ಆಗ್ರಹಿಸಿದ್ದಾರೆ. 

ಸರ್ಕಾರದ ಹಣ ಪೋಲು: ಅಂತಾರಾಷ್ಟ್ರೀಯ ಅಥ್ಲಾಟಿಕ್‌ ಪಟು ನಟರಾಜ್‌ ಮಾತನಾಡಿ, 200 ಮೀ. ಟ್ರ್ಯಾಕ್‌ಗೆ 40 ಸಿಎಂ ಆಳ ಅಗೆಯಲಾಗಿದೆ. 15 ಸಿಎಂ ಜೆಲ್ಲಿ ಪುಡಿ ಬಳಸಲಾಗಿದೆ. 10 ಸಿಎಂ ಇಟ್ಟಿಗೆ ಪುಡಿ, 8 ಸಿಎಂ ಮಣ್ಣು, 7 ಸಿಎಂ ಶೇ.35 ಮರಳು ಮತ್ತು ಶೇ.65 ಮಣ್ಣು, ಜೆಸಿಬಿ ಮೂಲಕ ರೋಲಿಂಗ್‌ ಹಾಗೂ ವಾಟರಿಂಗ್‌ ಮತ್ತು 5 ಸಿಎಂ ಇಟ್ಟಿಗೆ ಬಾರ್ಡ್‌ ಮಾಡಬೇಕಾಗುತ್ತದೆ. ಆದರೆ, ಕಳಪೆ ಕಾಮಗಾರಿ ಮಾಡಿ ಸರ್ಕಾರದ ಹಣವನ್ನು ಪೋಲು ಮಾಡಿದ್ದಾರೆ. ಇದರಿಂದ ಕ್ರಿಕೆಟ್‌, ವಾಲಿಬಾಲ್‌ ಇತರೆ ಆಟಗಳಿಗೆ ಅನಾನುಕೂಲವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಸೌಲಭ್ಯಗಳಿಲ್ಲದ ಮೈದಾನ: ಅಧಿಕಾರಿಗಳು  ಟ್ರ್ಯಾಕ್‌ ನಿರ್ಮಾಣ ಮಾಡುವಾಗ 9 ಇಂಚು ಅಗೆದು ಮಾಡಿದ್ದೇವೆ ಎನ್ನುತ್ತಾರೆ. ಆದರೆ, ಅಗೆದು ನೋಡಿದಾಗ ಜೆಲ್ಲಿ ಪುಡಿ, ಇಟ್ಟಿಗೆ ಪುಡಿ, ಮರಳು ಹಾಗೂ ಮಣ್ಣು ಕಾಣಿಸುತ್ತಿಲ್ಲ. ಕೇವಲ 2 ರಿಂದ 3 ಬಾರಿ ಜೆಸಿಬಿ ಮೂಲಕ ರೋಲಿಂಗ್‌ ಮಾಡಿದ್ದಾರೆ. 3 ದಿನದಲ್ಲಿ ಕಾಮಗಾರಿ ಮುಗಿಸಿದ್ದಾರೆ. ನಗರದ ಪ್ರದೇಶದಲ್ಲಿ ಸುಸಜ್ಜಿತ ಆಟದ ಮೈದಾನವಿಲ್ಲ. ಇರುವ ಮೈದಾನದ ಮಧ್ಯ ಭಾಗದಲ್ಲಿ ನಾಮಕೆವಾಸ್ತೆ 200 ಮೀ. ಟ್ರ್ಯಾಕ್‌ ನಿರ್ಮಾಣ ಮಾಡಿದ್ದಾರೆ. ಮೈದಾನದಲ್ಲಿ ಶೌಚಾಲಯ, ಕುಡಿಯುವ ನೀರು ಹೀಗೆ ಯಾವುದೇ ಸೌಲಭ್ಯಗಳಿಲ್ಲ. ಯಾವುದಾದರೂ ಕಾರ್ಯಕ್ರಮ ಮಾಡಬೇಕಾದರೆ ಎಲ್ಲಿಗೆ ಹೋಗಬೇಕೆಂದು   ಆರೋಪಿಸಿದರು. 

5.18 ಎಕರೆ  ಪ್ರದೇಶದಲ್ಲಿ ಆಟದ ಮೈದಾನವಿದ್ದು, ಅದರಲ್ಲಿ ಸುಮಾರು 1.18 ಗುಂಟೆ ಒತ್ತುವರಿ ಆಗಿರುವುದರಿಂದ ಕೂಡಲೇ ಜಿಲ್ಲಾಧಿಕಾರಿಗಳು ಸರ್ವೆ ಮಾಡಿಸಿ ಒತ್ತುವರಿ ಜಾಗವನ್ನು ತೆರವುಗೊಳಿಸಬೇಕು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿಯ ತಪ್ಪುಗಳಿಂದ ಕ್ರೀಡಾಪಟುಗಳು ಸಮಸ್ಯೆ ಎದುರಿಸುವಂತಾಗಿದೆ ಎಂದು ಮತ್ತೂಬ್ಬ ಕ್ರೀಡಾಪಟು ಮುನಿರಾಜು ಬೇಸರ ವ್ಯಕ್ತಪಡಿಸಿದರು. 

ಅಧಿಕಾರಿ ಅಮಾನತು ಮಾಡಿ: ಸಾಕಷ್ಟು ವರ್ಷಗಳಿಂದ ಯುವಕರು ಕ್ರಿಕೆಟ್‌ ಮತ್ತಿತರ ಪಂದ್ಯಾವಳಿಗಳನ್ನು ಆಯೋಜಿಸುತ್ತಿದ್ದರು. ಕ್ರಿಕೆಟ್‌ ಆಡುವ ಪಿಚ್‌ ಅನ್ನೇ ಹಾಳು ಮಾಡಿದ್ದಾರೆ. ಇಂತಹ ಕಾಮಗಾರಿಗಳನ್ನು ಮಾಡುವಾಗ ಜನಪ್ರತಿನಿಧಿಗಳ ಗಮನಕ್ಕೆ ತಂದು ಮುಂದಿನ ಕೆಲಸ ಮಾಡಬೇಕು. ಕಳಪೆ ಕಾಮಗಾರಿ ಹಾಗೂ ಸರ್ಕಾರದ ಹಣ ದುರುಪಯೋಗವಾಗಿದೆ. ಆದ್ದರಿಂದ, ಈ ಕುಡಲೇ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿಯನ್ನು ಅಮಾನತು ಮಾಡಬೇಕು.  ಗುಣಮಟ್ಟದ ಟ್ರ್ಯಾಕ್‌ ನಿರ್ಮಾಣ ಮಾಡಬೇಕು. ತಾಲೂಕಿನ ವಿಜಯಪುರ ರಸ್ತೆಯಲ್ಲಿರುವ ತಾಲೂಕು ಕ್ರೀಡಾಂಗಣದ ಮಾದರಿಯಲ್ಲಿ ಮಿನಿ ಕ್ರೀಡಾಂಗಣವನ್ನು ನಿರ್ಮಿಸಬೇಕೆಂದು ಇನ್ನೊಬ್ಬ ಕ್ರೀಡಾಪಟು ಸುನೀಲ್‌ ಆಗ್ರಹಿಸಿದರು. 

200 ಮೀ.ಟ್ರ್ಯಾಕ್‌ ನಿರ್ಮಾಣ ಮಾಡಿರುವುದು ಸರಿಯಾಗಿಲ್ಲ. ಹಾಗಾಗಿ, ಗುತ್ತಿಗೆದಾರರಿಗೆ ಪತ್ರ ಬರೆದು ಗುಣಮಟ್ಟದ ಟ್ರ್ಯಾಕ್‌ ನಿರ್ಮಾಣ ಮಾಡುವಂತೆ ಸೂಚಿಸಲಾಗಿದೆ. ಇಲ್ಲವಾದರೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆಯನ್ನೂ ನೀಡಲಾಗಿದೆ. ಗುತ್ತಿಗೆದಾರರು ಸರಿಪಡಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಅದಕ್ಕಾಗಿ ನಾವು ಕಾಯಬೇಕಾಗಿದೆ. 
-ದೇವಿಕಾ ರಾಣಿ, ಸಹಾಯಕ ನಿರ್ದೇಶಕಿ, ಜಿಲ್ಲಾ ಯುವ ಸಬಲೀಕರಣ, ಕ್ರೀಡಾ ಇಲಾಖೆ  

ಟಾಪ್ ನ್ಯೂಸ್

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.