ಗ್ರಂಥಾಲಯ ಸೇವೆ ಆರಂಭ


Team Udayavani, Sep 13, 2020, 1:05 PM IST

ಗ್ರಂಥಾಲಯ ಸೇವೆ ಆರಂಭ

ದೇವನಹಳ್ಳಿ: ಕೋವಿಡ್ ಲಾಕ್‌ಡೌನ್‌ ಸಂದರ್ಭದಲ್ಲಿ ಸರ್ಕಾರದ ಆದೇಶದಂತೆ ಬಾಗಿಲು ಹಾಕಿದ್ದ ಗ್ರಂಥಾಲಯಗಳು ಶನಿವಾರ ಕಾರ್ಯನಿರ್ವಹಿಸಿದವು. ನಗರದ ಕೋಟೆ ರಸ್ತೆಯ ಸಾರ್ವಜನಿಕ ಗ್ರಂಥಾಲಯದಲ್ಲಿ ದಿನಪತ್ರಿಕೆ, ಪುಸ್ತಕ ಓದಿದರು. ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಓದುಗರಿಗೆ ಮಾಸ್ಕ್, ಸ್ಯಾನಿಟೈಸರ್‌, ಸಾಮಾಜಿಕ ಅಂತರ ಕಡ್ಡಾಯ ಮಾಡಲಾಗಿದೆ.

ಗ್ರಂಥಾಲಯಕ್ಕೆ ಆಗಮಿಸುವ ಓದುಗರಿಗೆ ಥರ್ಮಲ್‌ ಸ್ಕ್ಯಾನಿಂಗ್‌ ಮಾಡಲಾಯಿತು. ಗ್ರಂಥಾಲಯದ ಸಹಾಯಕ ಮಂಜುನಾಥ್‌ ಮಾತನಾಡಿ, ಲಾಕ್‌ಡೌನ್‌ ಸಮಯದಲ್ಲಿ ಸಾರ್ವಜನಿಕ ಗ್ರಂಥಾಲಯ ಮುಚ್ಚಲಾಗಿತ್ತು. ಗ್ರಂಥಾಲಯದ ಉಪನಿರ್ದೇಶಕಿ ಸರೋಜಮ್ಮ ಮಾರ್ಗದರ್ಶನದಲ್ಲಿ ಮುಚ್ಚಿದ್ದ ಗ್ರಂಥಾಲಯದ ಬಾಗಿಲು ತೆರೆಯಲಾಗಿದೆ ಎಂದು ಹೇಳಿದರು.

ಡಿಜಿಟಲ್‌ ಗ್ರಂಥಾಲಯಕ್ಕೆ 2 ಕಂಪ್ಯೂಟರ್‌ ಗಳನ್ನು ನೀಡಲಾಗಿತ್ತು. ಗ್ರಂಥಾಲಯವನ್ನೇ ಓದುಗರ ಮನೆ ಬಾಗಿಲಿಗೆ ತರಲು, ಡಿಜಿಟಲ್‌ ಲೈಬ್ರರಿ ಮತ್ತು ಆ್ಯಪ್‌ ವಿನ್ಯಾಸ ಮಾಡಿ, ಮೊಬೈಲ್‌ನಲ್ಲಿಯೇ ಎಲ್ಲಿ ಬೇಕಾದರೂ ಓದುವ ವಿನೂತನ ಕಾರ್ಯ ಆರಂಭಿಸಲಾಗಿತ್ತು ಎಂದು ತಿಳಿಸಿದರು.

ಸಾರ್ವಜನಿಕ ಗ್ರಂಥಾಲಯಗಳಲ್ಲಿ ಲಭ್ಯ ವಿರುವ 4 ಲಕ್ಷಕ್ಕೂ ಹೆಚ್ಚು ಪುಸ್ತಕ, ನೂರಾರು ನಿಯತಕಾಲಿಕೆಗಳನ್ನು ಎಲ್ಲೆಂದರಲ್ಲೇ ಓದುವ ಅವಕಾಶ ಸಾರ್ವಜನಿಕ ಗ್ರಂಥಾಲಯ ಕಲ್ಪಿಸಿದೆ. ಇನ್ನು ಡಿಜಿಟಲ್‌ ಗ್ರಂಥಾಲಯಕ್ಕೆ ನೋಂದಣಿ ಮಾಡಿಕೊಳ್ಳುವಂತೆ ಕಾಲೇಜು ಗಳಲ್ಲಿ ಅಭಿಯಾನ ಹಮ್ಮಿಕೊಂಡಿರುವುದರ ಫಲವಾಗಿ ಇದುವರೆಗೆ 5978 ಮಂದಿ ನೋಂದಣಿ ಮಾಡಿಕೊಂಡಿದ್ದಾರೆಂದರು.

………………………………………………………………………………………………………………………………………………………

ಹಾಲು ನೀಡದ ಡೇರಿ: ಪರಿಶೀಲನೆ : ದೇವನಹಳ್ಳಿ: ತಾಲೂಕಿನ ಸಾವಕನಹಳ್ಳಿ ಡೇರಿಯಿಂದ ಹಾಲು ನೀಡುತ್ತಿಲ್ಲ. ಡೇರಿ ಜಾಗದಲ್ಲಿ ಓಡಾಡಲು ಅವಕಾಶ ಕೊಡುತ್ತಿಲ್ಲ ಎಂದು ಆರೋಪಿಸಿ ಗ್ರಾಮದ 5 ಕುಟುಂಬ ಬೆಂಗಳೂರು ಕೇಂದ್ರ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ ಹಿನ್ನೆಲೆಯಲ್ಲಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಆರಕ್ಷಕ ಉಪನಿರೀಕ್ಷಕ ಶ್ರೀನಿವಾಸ್‌ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ನಡೆಯಿತು.

ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಠಾಣಾ ವ್ಯಾಪ್ತಿಯ ಸಾವಕನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ ಪಿಎಸ್‌ಐ ಶ್ರೀನಿವಾಸ್‌ ಮಾತನಾಡಿ, ಈ ಗ್ರಾಮದ ಮುನಿಆಂಜಿನಪ್ಪ ಎಂಬವರು ನೀಡಿದ ದೂರಿನ ಅನ್ವಯಗ್ರಾಮದಲ್ಲಿ ನೈಜ ಘಟನೆ ವರದಿ ಮಾಡಲಾಗಿದ್ದು ಮೇಲಧಿಕಾರಿಗಳಿಗೆ ಸಲ್ಲಿಸಲಾಗುತ್ತದೆ. ಆರೋಪ ಸಾಬೀತಾಗಿ ಪ್ರಕರಣ ದಾಖಲಾದರೆ, 3-6ತಿಂಗಳವರೆಗೆ ಜಾಮೀನು ಸಿಗದ ಕಠಿಣ ಶಿಕ್ಷೆ ಇದೆ. 7ವರ್ಷಕ್ಕಿಂತ ಹೆಚ್ಚು ಕಾಲ ಕಠಿಣ ಶಿಕ್ಷೆ ಇದೆ ಎಂದು ಹೇಳಿದರು.

ಗ್ರಾಮಸ್ಥೆ ಲಕ್ಷ್ಮಮ್ಮ ಮಾತನಾಡಿ, ನಮಗೆ 2 ತಿಂಗಳಿನಿಂದ ಡೇರಿಯಿಂದ ಹಾಲು ನೀಡುತ್ತಿಲ್ಲ. ವಿಶ್ವನಾಥಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಲು ಹೋದರೆ ದೂರು ಸ್ವೀಕರಿಸುತ್ತಿಲ್ಲ. ಮಗುವಿಗೂ ಹಾಲು ನೀಡುತ್ತಿಲ್ಲ. ಬೇರೆಯವರನ್ನು ಕಳುಹಿಸಿದರೂ ಅವರಿಗೆ ಹಾಕಬೇಡಿ ಎಂದು ವಾಪಸ್‌ ಕಳುಹಿಸುತ್ತಾರೆಂದರು.ಎಂಪಿಸಿಎಸ್‌ ಅಧ್ಯಕ್ಷ ಎಸ್‌. ಪಿ.ಮುನಿರಾಜು, ಈ ಹಿಂದೆ ಡೇರಿ ಮೇಲೆ ಮೊದಲ ಅಂತಸ್ತು ಕಟ್ಟಲಾಗುತ್ತಿದೆ. ಅರ್ಜಿದಾರರು ಕರಾರು ತೆಗೆದಿದ್ದರು ಎಂದು ದೂರಿದ್ದಾರೆ. ಡೇರಿ ಸಂಬಂಧ ಯಾವುದೇ ಒಬ್ಬ ಅರ್ಜಿ ಹಾಕಿಕೊಂಡಿದ್ದರೆ, ಹಾಲು ಕೊಡಲು ಬರುವುದಿಲ್ಲ ಎಂಬುದು ಬೈಲಾದಲ್ಲಿದೆ. ಮುಂದಿನ ಹಂತದಲ್ಲಿ ಡೇರಿ ತೀರ್ಮಾನ ತೆಗೆದುಕೊಳ್ಳಲಾಗುವುದೆಂದು ತಿಳಿಸಿದರು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಕಾಂಗ್ರೆಸ್‌ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್‌ನಲ್ಲಿ ಉದ್ವಿಗ್ನ ಸ್ಥಿತಿ

Crime: ಕಾಂಗ್ರೆಸ್‌ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್‌ನಲ್ಲಿ ಉದ್ವಿಗ್ನ ಸ್ಥಿತಿ

Ganja peddler: ಪೊಲೀಸರ ಮೇಲೆಯೇ  ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್‌ಗೆ ಗುಂಡೇಟು; ಸೆರೆ

Ganja peddler: ಪೊಲೀಸರ ಮೇಲೆಯೇ  ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್‌ಗೆ ಗುಂಡೇಟು; ಸೆರೆ

R.Ashok

Assembly Electionನಲ್ಲಿ ಮೈತ್ರಿಗೆ ದೇವೇಗೌಡರು ಒಪ್ಪಲಿಲ್ಲ: ಅಶೋಕ್‌

BRural

Devanahalli: ಗ್ರಾಮ ಪಂಚಾಯಿತಿಗಳಲ್ಲಿ ಇ- ಜನ್ಮ ದಾಖಲೆ

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.