ಪ. ಜಾತಿ, ಪಂಗಡದ ಕುಂದುಕೊರತೆ ಸಭೆ ಬಹಿಷ್ಕಾರ

ವಿವಿಧ ಸಂಘಟನೆಯ ಸಮುದಾಯದ ಮುಖಂಡರು ಸಭೆಯನ್ನು ಬಹಿಷ್ಕಾರ ಮಾಡಿ ಕಚೇರಿ ಹೊರಗೆ ಪ್ರತಿಭಟನೆ ಮಾಡಿದರು.

Team Udayavani, Apr 1, 2022, 6:07 PM IST

ಪ. ಜಾತಿ,ಪಂಗಡದ ಕುಂದುಕೊರತೆ ಸಭೆ ಬಹಿಷ್ಕಾರ

ನೆಲಮಂಗಲ: ಹತ್ತಾರು ವರ್ಷಗಳಿಂದ ಕೆಲವೇ ಸಮಸ್ಯೆ ಚರ್ಚೆ ಮಾಡುವ ಅನಿವಾರ್ಯತೆ ಬಂದಿದ್ದು, ಆ ಸಮಸ್ಯೆಗಳನ್ನು ಬಗೆಹರಿಸಿದ ಮೇಲೆ ಮಾತ್ರ ನಾವು ಸಭೆಗೆ ಬರುತ್ತೇವೆ ಎಂದು ಶಾಸಕರ ಅಧ್ಯಕ್ಷತೆಯಲ್ಲಿ ನಡೆದ ಕುಂದು ಕೊರತೆ ಸಭೆಯನ್ನು ಎಸ್‌ಸಿ, ಎಸ್‌ಟಿ ಮುಖಂಡರು ಬಹಿಷ್ಕಾರ ಮಾಡಿದರು.

ನಗರದ ತಾಲೂಕು ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ಪ. ಜಾತಿ,  ಪಂಗಡದ ಕುಂದು ಕೊರತೆ ಸಭೆಯಲ್ಲಿ ಶಾಸಕ ಡಾ.ಕೆ ಶ್ರೀನಿವಾಸಮೂರ್ತಿ ಮಾತನಾಡಿ, ಸಭೆಯಲ್ಲಿ ಸಮಸ್ಯೆ ಹೇಳಬೇಕು ಕೂಗಾಡಬಾರದು. ಅಧಿಕಾರಿಗಳು ಮುಂದಿನ ಬಾರಿ ಸಭೆಗೆ ಸಮುದಾಯದ ಅರ್ಹ ವ್ಯಕ್ತಿಗಳನ್ನು ಆಹ್ವಾನ ನೀಡ ಬೇಕು. ಸುಖಾ ಸುಮ್ಮನೆ ಎಲ್ಲರನ್ನೂ ಕರೆಸಬೇಡಿ ಎಂದರು.

ಸಮುದಾಯದಲ್ಲಿ ಅನೇಕ ಸಮಸ್ಯೆಗಳಿದ್ದು ಕೆಲವು ಜನರು ಈ ಸಭೆಗಾಗಿ ವರ್ಷದಿಂದ ಕಾದು  ಕುಳಿತಿರುತ್ತಾರೆ. ಬಹಿಷ್ಕಾರದಿಂದ ಅಂತವರಿಗೆ ಸಮಸ್ಯೆ ಆಗಲಿದೆ. ಕೆಲವು ಕುಂದು ಕೊರತೆಗಳು ಬಹಳ ವರ್ಷದಿಂದ ಉಳಿಕೆಯಾಗಿದ್ದು, ತುರ್ತು ಬಗೆಹರಿಸಲು ನಾನು ಜಿಲ್ಲಾಧಿಕಾರಿ ಕರೆಸಿ ಮಾತನಾಡಿಸುವ ಪ್ರಯತ್ನ ಮಾಡಿದೆ. ಆದರೆ, ಸಮುದಾಯದ ಮುಖಂಡರಿಗೆ ತಿಳಿಸಿದರೂ ಬರ ಲಿಲ್ಲ. ಆದರೆ, ಈಗ ಬಹಿಷ್ಕಾರ ಮಾಡುವುದು ಸರಿಯಲ್ಲ ಎಂದರು.

ಮುಖಂಡರಲ್ಲಿ ಗೊಂದಲ: ನಮ್ಮ ಸಮಸ್ಯೆಗಳ ಪರಿಹಾರ ನೀಡದೇ ಸಭೆ ನಡೆಸುತ್ತಿದ್ದಾರೆ ಎಂದು ಘೋಷಣೆ ಕೂಗಿ ಸಭೆಯನ್ನು ಬಹಿಷ್ಕಾರ ಮಾಡಿ ಬಹುಪಾಲು ಮುಖಂಡರು ಹೊರಗೆ ಹೋದರೆ, ಕೆಲ ಮುಖಂಡರು ಮಾತ್ರ ಸಭೆಯಲ್ಲಿ ಅಧಿಕಾರಿಗಳ ಜತೆ ಚರ್ಚೆ ಮಾಡಿ ಸಮಸ್ಯೆ  ಬಗೆ ಹರಿಸುವಂತೆ ಮನವಿ ಮಾಡಿದರು. ಕೆಲ  ಮುಖಂಡರ ಗೊಂದಲದ ನಡೆ ಸಾರ್ವಜನಿಕ ವಲಯದಲ್ಲಿ ಹಾಗೂ ಅಧಿಕಾರಿಗಳ ವಲಯದಲ್ಲಿ ಚರ್ಚೆಗೆ ಕಾರಣವಾಯಿತು.

ಬಹಿಷ್ಕಾರ: ಪ. ಜಾತಿ,ಪಂಗಡದ ಕುಂದು ಕೊರತೆ ಸಭೆಯಲ್ಲಿ ಬಹಳ ವರ್ಷಗಳಿಂದ ಕೆಲವೇ ಸಮಸ್ಯೆಗಳು ಚರ್ಚೆ ಆಗುತ್ತಿದ್ದು, ಅಜೆಂಡಾ ಪಟ್ಟಿಯಲ್ಲಿ ಸರ್ವೆ ನಂ.246 ಸಮಸ್ಯೆ, ಬಾವಿ ಕೆರೆಯಲ್ಲಿ ನಿವೇಶನ ಸಮಸ್ಯೆ, ಸರ್ವೆ ನಂ 8/3 ಸ್ಥಳದ ಸಮಸ್ಯೆ ಹಾಗೂ ವೈನ್‌ಶಾಪ್‌ ಗಳ ಪರವಾನಗೆ ರದ್ದು ಸೇರಿದಂತೆ ವಿವಿಧ ಸಮಸ್ಯೆಗಳನ್ನು ಬಗೆಹರಿಸದೇ ಸಭೆ ಮಾಡುತ್ತಿರುವುದು ಸರಿಯಲ್ಲ ತಕ್ಷಣ ಸಮಸ್ಯೆ ಬಗೆಹರಿಸಬೇಕು.

ಅಲ್ಲಿಯವರೆಗೂ ಕುಂದು ಕೊರತೆ ಸಭೆ, ಅಂಬೇಡ್ಕರ್‌ ಜಯಂತಿ, ಬಾಬು ಜಗಜೀವನ್‌ ರಾಮ್‌ ಜಯಂತಿಯನ್ನು ತಾಲೂಕು ಆಡಳಿತದಿಂದ ಮಾಡಬಾರದು ಎಂದು ವಿವಿಧ ಸಂಘಟನೆಯ ಸಮುದಾಯದ ಮುಖಂಡರು ಸಭೆಯನ್ನು ಬಹಿಷ್ಕಾರ ಮಾಡಿ ಕಚೇರಿ ಹೊರಗೆ ಪ್ರತಿಭಟನೆ ಮಾಡಿದರು.

ಅಧಿಕಾರಿಗಳ ತರಾಟೆ: ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಇವರು ಮಾಡಿದ್ದರೆ ಸಭೆ ಬಹಿಷ್ಕಾರ ಮಾಡುವ ಅನಿವಾರ್ಯತೆ ಇರಲಿಲ್ಲ. ಕೆಲಸ ಬರದವರು ಬಂದು ಜನರ ಪ್ರಾಣದ ಜತೆ ಚೆಲ್ಲಾಟ ಆಡುತ್ತಾರೆ ಎಂದು ಶಾಸಕ ಡಾ,ಕೆ ಶ್ರೀನಿವಾ ಸ ಮೂರ್ತಿ ಅಧಿಕಾರಿಗೆ ತರಾಟೆಗೆ ತೆಗೆದುಕೊಂಡರು. ತಾಪಂ ಇಒ ಮೋಹನ್‌ ಕುಮಾರ್‌,  ವಾಲ್ಮೀಕ ಸಂಘದ ಅಧ್ಯಕ್ಷ ನರಸಿಂಹಮೂರ್ತಿ, ದಲಿತ ಸಂಘಟನೆ ಮುಖಂಡ
ರಾಜಗೋಪಾಲ್‌, ಮಾದಿಗ ಮಹಾಸಭಾ ದ ರಾಜು, ಮರಿವೆಂಕಟ್ಟಪ್ಪ, ಛಲವಾದಿ ನಾಗೇಂದ್ರ, ನರಸಿಂಹಯ್ಯ, ಬೊಮ್ಮನಹಳ್ಳಿನಾಗರಾಜು, ನಾರಾಯಣ ಸ್ವಾಮಿ, ಗಂಗಾಧರ್‌, ಮಹದೇವ್‌, ದೇಗನಹಳ್ಳಿ ನರಸಿಂಹ ಮೂರ್ತಿ, ಮಲ್ಲೇಶ್‌, ರಾಜು ಹಾಗೂ ಮತ್ತಿತರರಿದ್ದರು.

ಸುಖಾಸುಮ್ಮನೆ ಬಹಿಷ್ಕಾರ ಸರಿಯಲ್ಲ: ತಹಶೀಲ್ದಾರ್‌ ಇಷ್ಟು ವರ್ಷ ಸಂಗ್ರಹಿಸಲಾಗದ ದಾಖ ಲಾತಿ ಕ್ರೋಢಿಕರಿಸಿ ಪ್ರಾಮಾಣಿಕವಾಗಿ ಸಮಸ್ಯೆ ಬಗೆಹರಿಸುವ ಕೆಲಸವನ್ನು ಮಾಡಿದ್ದೇವೆ. ಜಿಲ್ಲಾ ಧಿಕಾರಿ, ಶಾಸಕರು ಹಾಗೂ ವಿವಿಧ ಅಧಿಕಾರಿಗಳ ತಂಡ ಬಹಳಷ್ಟು ಪರಿಶ್ರಮ ಪಟ್ಟಿದ್ದಾರೆ. ಕೆಲವು ತೊಂದರೆಗಳಿರುವ ಕಾರಣ ಸಂಪೂರ್ಣಗೊಳಿಸಲು ಸಾಧ್ಯವಾಗಿಲ್ಲ. ಆದರೆ, ಸುಖಾಸುಮ್ಮನೆ ಮಾಹಿತಿ ಪಡೆಯದೇ ಬಹಿಷ್ಕಾರ ಮಾಡುವುದು ಸರಿಯಲ್ಲ ಎಂದು ತಹಶೀಲ್ದಾರ್‌
ಕೆ.ಮಂಜುನಾಥ್‌ ಹೇಳಿದರು.

ಟಾಪ್ ನ್ಯೂಸ್

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.