ಭಾರತ-ಚೀನಾ ಗಡಿಯಲ್ಲಿ ಘರ್ಷಣೆ ದುರದೃಷ್ಟಕರ
Team Udayavani, Jun 18, 2020, 6:58 AM IST
ದೇವನಹಳ್ಳಿ: ಪ್ರಪಂಚದಾದ್ಯಂತ ಕೋವಿಡ್-19 ಇರುವುದರಿಂದ ಜನರು ಆತಂಕದಲ್ಲಿದ್ದಾರೆ. ಆದರೆ ಭಾರತ ಹಾಗೂ ಚೀನಾ ಗಡಿಯಲ್ಲಿ ಘರ್ಷಣೆ ದುರದೃಷ್ಟಕರ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು. ತಾಲೂಕಿನ ಕಾರಹಳ್ಳಿ ಗ್ರಾಮದಲ್ಲಿ ಸುದ್ದಿಗಾಗರೊಂದಿಗೆ ಮಾತನಾಡಿದರು.
ಭಾರತ ಮತ್ತು ಚೀನಾ ದೇಶದ ಪ್ರಧಾನಿಗಳಿಗೆ ಮನವಿ ಮಾಡುತ್ತೇನೆ. ಇಂತಹ ಸನ್ನಿವೇಶ ದಲ್ಲಿ ಪರಸ್ಪರ ಅವಿಶ್ವಾಸದಿಂದ ಯುದ್ಧದ ವಾತಾರಣದ ನಿರ್ಮಾಣ ಬೇಡ. ಅಮಾಯಕ ಯೋಧರ ಬಲಿ ಹಾಗೂ ದೇಶಗಳ ನಡುವಿನ ಸಾಮರಸ್ಯ ಹಾಳು ಮಾಡುವುದು ಬೇಡ. 1967ರಲ್ಲಿ ಯುದ್ಧದ ನಂತರ 1996ರಲ್ಲಿ ಅಂದಿನ ಪ್ರಧಾನಿಯಾಗಿದ್ದ ದೇವೇಗೌಡರು, ಅಂದಿನ ಚೀನಾ ಪ್ರಧಾನಿಯನ್ನು ದೆಹಲಿಗೆ ಕರೆಸಿ ಮಾತು ಕತೆ ನಡೆಸಿದ್ದರು.
ಆಗ ಕೆಲವು ಗಡಿ ಸಮಸ್ಯೆ ಮತ್ತು ಇನ್ನಿತರೆ ಒಪ್ಪಂದಗಳನ್ನು ಮಾಡಿಕೊಂಡು ಇಂದಿಗೂ ಇತಿಹಾಸದಲ್ಲಿ ಉಳಿಯುವಂತೆ ಮಾಡಿ ದ್ದಾರೆ. ಆದರೆ ಅದು ಪ್ರಚಾರ ವಾಗಿರಲಿಲ್ಲ. ನಾನು ಆ ಸಮಯದಲ್ಲಿ ಲೋಕಸಭೆ ಸದಸ್ಯನಾಗಿದ್ದೆ. ಐಎಎಸ್ ಅಧಿಕಾರಿ ಟಿ.ಎಸ್. ಸುಬ್ರಮಣ್ಯಂ ಟರ್ನಿಂಗ್ ಪಾಯಿಂಟ್ ಎಂಬ ಪುಸ್ತಕದಲ್ಲಿ ಬರೆದಿದ್ದಾರೆ. ದೇಶಕ್ಕೆ ಮಾಜಿ ಪ್ರಧಾನಿ ದೇವೇಗೌಡರ ಕೊಡುಗೆ ಅಪಾರವಿದೆ.
ಚೀನಾ ದಾಳಿ ಮಾಡಿರುವುದನ್ನು ಖಂಡಿಸು ತ್ತೇನೆ. 2 ದೇಶಗಳು ಶಾಂತಿಯುತವಾಗಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದರು. ಶಾಸಕ ಎಲ್.ಎನ್.ನಾರಾಯಣಸ್ವಾಮಿ, ಮಾಜಿ ಶಾಸಕ ಕೋನರೆಡ್ಡಿ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ, ತಾಲೂಕು ಜೆಡಿಎಸ್ ಅಧ್ಯಕ್ಷ ಬಿ.ಶ್ರೀನಿವಾಸ್, ಕಾರ್ಯಾಧ್ಯಕ್ಷ ಆರ್.ಮುನೇಗೌಡ, ಪ್ರಧಾನ ಕಾರ್ಯದರ್ಶಿ ಜಿ.ಎ. ರವೀಂದ್ರ ಸೇರಿದಂತೆ ಮುಖಂಡರು, ಕಾರ್ಯ ಕರ್ತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ
Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ
BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ
Sandalwood; ಎವಿಡೆನ್ಸ್ ಮೇಲೆ ಪ್ರವೀಣ್ ಕಾನ್ಫಿಡೆನ್
MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024