ಕುತೂಹಲ ಮೂಡಿಸಿದ ಸೂರ್ಯ ವೃತ್ತ
Team Udayavani, Apr 15, 2021, 1:29 PM IST
ದೊಡ್ಡಬಳ್ಳಾಪುರ: ಯುಗಾದಿಹಬ್ಬದ ದಿನದಂದು ಸೂರ್ಯನ ಸುತ್ತಲೂ ವೃತ್ತದ ಆಕೃತಿಯೊಂದು ಆವರಿಸಿ, ಆಗಸದಲ್ಲಿ ಅಪರೂಪದ ವಿದ್ಯಮಾನವೊಂದು ಗೋಚರಿಸಿತು. ಸುಮಾರು 11ಗಂಟೆ ಸುಮಾರಿಗೆ ಆರಂಭವಾಗಿ ಸುಮಾರು 2 ಗಂಟೆಗಳ ಕಾಲ ಗೋಚರಿಸಿದ ಈ ವಿದ್ಯಮಾನವನ್ನುನೋಡಿದ ಜನ ಪುಳಕಿತರಾಗಿ ಮೊಬೈಲ್,ಕ್ಯಾಮೆರಾದಲ್ಲೂ ಸೆರೆ ಹಿಡಿದರು.
ವಾಟ್ಸ್ಆ್ಯಪ್ ಗ್ರೂಪ್ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಈ ಚಿತ್ರಗಳು ವೈರಲ್ ಆಗಿದ್ದವು. ಸೂರ್ಯನ ಸುತ್ತಲೂ ಆವರಿಸಿರುವ ಮೋಡದಲ್ಲಿ ಹುದುಗಿರುವ ಮಂಜುಗಡ್ಡೆ ಕಣಗಳ ಮೇಲೆ ಬೆಳಕು ಹರಿದ ಪರಿಣಾಮ ಆಕರ್ಷಕ ವೃತ್ತ ಗೋಚರಿಸಿದೆ. ಕಾಮನಬಿಲ್ಲು ಸೃಷ್ಟಿಯಾದಂತೆ ನಡೆದ ವಿದ್ಯಮಾನ ಇದಾಗಿದ್ದು ಬಣ್ಣಗಳಲ್ಲಿ ಮಾತ್ರ ವ್ಯತ್ಯಾಸ ಕಂಡುಬಂದಿದೆ.
ವಾತಾವರಣದಲ್ಲಿ ತೇವಾಂಶ ಹೆಚ್ಚು ಇರುವ ಮತ್ತು ಮಳೆ ಬರುವ ಮುನ್ಸೂಚನೆಯನ್ನುಇದು ನೀಡುತ್ತದೆ. ಮೋಡಗಳಲ್ಲಿರುವ ಮಂಜುಗಡ್ಡೆ ಹರಳುಗಳು ಸೂರ್ಯನಿಗೆ 22 ಡಿಗ್ರಿ ಅಥವಾ ಹೆಚ್ಚಿನ ಕೋನದಲ್ಲಿ ವಕ್ರೀ ಭವನಕ್ಕೀಡಾಗುತ್ತವೆ. ಸೂರ್ಯನ ಸುತ್ತ ವೃತ್ತಾಕಾರವಾಗಿ ಹರಡಿಕೊಳ್ಳುತ್ತವೆ.ಈ ಹರಳುಗಳ ಮೂಲಕ ಸೂರ್ಯನ ಬೆಳಕು ಹಾದುಹೋಗುವಾಗ, ಕಿರಣಕಾಮನಬಿಲ್ಲಿನ ಏಳು ಬಣ್ಣಗಳಾಗಿ ಚದುರಿ,ಆಕರ್ಷಕ ಕಾಮನಬಿಲ್ಲು ಗೋಚ ರಿಸುತ್ತದೆ. ಇದು ತೀರಾ ಅಪರೂಪವೇನಲ್ಲ ಎನ್ನುತ್ತಾರೆ ವಿಜ್ಞಾನಿಗಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್ ಸಮಸ್ಯೆ
Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ
Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್ ಸ್ಪರ್ಧೆ
Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ
Road Dispute: ರಸ್ತೆ ವಿವಾದ; ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ
MUST WATCH
ಹೊಸ ಸೇರ್ಪಡೆ
Sandalwood: ಗಾಡ್ ಪ್ರಾಮಿಸ್ಗೆ ಸ್ಕ್ರಿಪ್ಟ್ ಪೂಜೆ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್ ನಿರೀಕ್ಷೆ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ