ಮಳೆಗೆ ಮನೆ ಗೋಡೆ, ಸಂಪರ್ಕ ಮೋರಿ ಕುಸಿತ


Team Udayavani, Oct 13, 2017, 11:45 AM IST

blore-g1.jpg

ದೇವನಹಳ್ಳಿ: ತಾಲೂಕಿನಲ್ಲಿ ಬುಧವಾರ ರಾತ್ರಿ ಸುರಿದ ಮಳೆಗೆ ಒಂದು ಮನೆ ಕುಸಿದಿದೆ. ಯಾವುದೇ ಹಾನಿ ಸಂಭವಿಸಿಲ್ಲ. ರಾತ್ರಿ ಸುರಿದ ಮಳೆಗೆ ತಾಲೂಕು ಮತ್ತು ನಗರದಲ್ಲಿ ಜನ ಓಡಾಟ ಕಡಿಮೆಯಾಗಿತ್ತು. ತಾಲೂಕಿನ ಹೊಸಕುರುಬರಕುಂಟೆ ಗ್ರಾಮದಲ್ಲಿ ಮನೆ ಬಿದ್ದಿದ್ದು, ಯಾವುದೇ ಹಾನಿಯಾಗಿಲ್ಲ. ಮತ್ತೂಂದೆಡೆ ತಾಲೂಕಿನ ವಿಶ್ವನಾಥಪುರ ಮತ್ತು ಕೆಂಪೇಗೌಡ ಅಂತಾರಾಷ್ಟ್ರೀಯ
ವಿಮಾನ ನಿಲ್ದಾಣದ ಪಕ್ಕದ ಬೆಟ್ಟಕೋಟೆ ಕೆರೆಗೆ ಸ್ವಲ್ಪ.

ಕನ್ನಮಂಗಲ 37ಮಿ.ಮೀ ಮಳೆ: ಪ್ರಮಾಣದಷ್ಟು ನೀರು ಬಂದಿದೆ. ತಾಲೂಕಿನ ಗ್ರಾಮ ಪಂಚಾಯಿತಿವಾರು ಮಳೆ ಪ್ರಮಾಣದ ಅಂಕಿ ಅಂಶ ಹೀಗೆದೆ. ಅಣ್ಣೇಶ್ವರ ಗ್ರಾಪಂ 33ಮಿ.ಮೀ., ಕನ್ನಮಂಗಲ 37ಮಿ.ಮೀ, ನಲ್ಲೂರು 20ಮಿ.ಮೀ, ಗೊಡ್ಲುಮುದ್ದೇನಹಳ್ಳಿ 42ಮಿ.
ಮೀ, ಹಾರೋಹಳ್ಳಿ 50ಮಿ.ಮೀ, ಕೋರಮಂಗಲ 28ಮಿ.ಮೀ, ಬೂದಿಗೆರೆ 16ಮಿ.ಮೀ, ಬಿಜ್ಜವಾರ 50ಮಿ. ಮೀ, ವಿಶ್ವನಾಥಪುರ 27ಮಿ.ಮೀ, ವೆಂಕಟಗಿರಿಕೋಟೆ 42ಮಿ.ಮೀ, ಕೊಯಿರಾ 4ಮಿ.ಮೀ, ಬೆಟ್ಟಕೋಟೆ 17ಮಿ. ಮೀ, ಕಾರಹಳ್ಳಿ 32ಮಿ.ಮೀ, ಆಗಿದೆ. ತಾಲೂಕಿನಲ್ಲಿ 9ಮಿ. ಮೀ ಮಳೆ ಪ್ರಮಾಣವಾಗಿದೆ. ದೇವನಹಳ್ಳಿ ಕಸಬಾ 5ಮಿ. ಮೀ, ಚನ್ನರಾಯಪಟ್ಟಣ 2ಮಿ.ಮೀ, ಕುಂದಾಣ 1ಮಿ.
ಮೀ, ವಿಜಯಪುರ 1ಮಿ.ಮೀ, ಮಳೆಯಾಗಿದೆ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಎಂ.ಎನ್‌. ಮಂಜುಳಾ ತಿಳಿಸಿದ್ದಾರೆ.

ಬೆಳೆ ಇಳುವರಿ ಕಡಿಮೆ ಆತಂಕ: ಕಳೆದ 15 ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಅಂತರ್ಜಲ ಪ್ರಮಾಣದಲ್ಲಿ ಏರಿಕೆಯಾಗಿದೆ. ಆದರೆ ಬೆಳೆಗಳಿಗೆ ಅಗತ್ಯಕ್ಕಿಂತ ಹೆಚ್ಚು ಪ್ರಮಾಣದ ಮಳೆ ಸುರಿಯುತ್ತಿರುವುದರಿಂದ ಹಲವು ತಗ್ಗು ಪ್ರದೇಶಗಳಿರುವ
ಜಮೀನುಗಳಲ್ಲಿ ಮಳೆ ನೀರು ನಿಂತಿದೆ. ಮಳೆಯಿಂದಾಗಿ ರಾಗಿ ಪೈರು ಹಳದಿ ಬಣ್ಣದ ರೂಪ ಪಡೆಯುತ್ತಿದೆ ಎಂದು ರೈತ ಚನ್ನರಾಯಪ್ಪ ಆತಂಕ ವ್ಯಕ್ತಪಡಿಸಿದ್ದಾರೆ.

ತರಕಾರಿಗಳಾದ ಆಲೂಗಡ್ಡೆ, ಗಡ್ಡೆಕೋಸು, ಗೆಣಸು, ಕ್ಯಾರೆಟ್‌, ಮೂಲಂಗಿ ಬೆಳೆಗಳಿಗೆ ಅನಾನುಕೂಲವಾಗಿದ್ದು, ಮಳೆ ಒಂದು ವಾರ ಬಿಡುವು ನೀಡಿದರೆ ಎಲ್ಲಾ ಬೆಳೆಗಳಿಗೆ ಅನುಕೂಲವಾಗಲಿದೆ. ಇದೇ ರೀತಿ ಮಳೆ ಮುಂದುವರಿದರೆ ಬೆಳೆಗಳ ಶೇಕಡವಾರು ಇಳುವರಿ ಕಡಿಮೆಯಾಗುವ ಸಾಧ್ಯತೆ ಇರುತ್ತದೆ ಎಂದು ರೈತ ಶ್ರೀನಿವಾಸ್‌ ಅಭಿಪ್ರಾಯಪಟ್ಟರು. 

ಮಳೆಗೆ ಕೋಡಿ ಬಿದ್ದಕೆರೆ, ಕುಂಟೆಗಳು: ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಬುಧವಾರ ರಾತ್ರಿ ಸುರಿದ ಭಾರಿ ಮಳೆಗೆ ಕೆರೆ, ಕುಂಟೆಗಳು ಕೋಡಿ ಬಿದ್ದಿದ್ದು ರೈತರಲ್ಲಿ ಸಂತಸ ಮೂಡಿಸಿದೆ. ತಾಲೂಕಿನ ಮಧುರೆ ಹೋಬಳಿಯಲ್ಲಿ 34 ಮಿ.ಮೀ, ಸಾಸಲು ಹೋಬಳಿ 83 ಮಿ.ಮೀ,
ತೂಬಗೆರೆ ಹೋಬಳಿ 69 ಮಿ.ಮೀ, ಕಸಬಾ ಹೋಬಳಿ 46 ಮಿ.ಮೀ, ದೊಡ್ಡಬೆಳವಂಗಲ ಹೋಬಳಿ 66 ಮಿ.ಮೀ ಮಳೆಯಾಗಿದೆ. ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಭಕ್ತರಹಳ್ಳಿ, ಕಸಬಾ ಹೋಬಳಿ ಶ್ರವಣೂರು ಕೆರೆ ಕೋಡಿ ಬಿದ್ದಿವೆ. ಸಾಸಲು
ಹೋಬಳಿಯಲ್ಲಿ ಬುಧವಾರ ರಾತ್ರಿ 83 ಮಿ.ಮೀ ಮಳೆಯಾಗಿರುವುದರಿಂದ ಬಹುತೇಕ ಕೆರೆಗಳಿಗೂ ಮುಕ್ಕಾಲು ಭಾಗದಷ್ಟು ನೀರು ಬಂದಿದೆ. ಗುಂಡಮಗೆರೆ ಕೆರೆ ಕೋಡಿ ಬಿದ್ದಿದ್ದರೆ ಸಣ್ಣ ಪುಟ್ಟ ಕೆರೆ, ಕುಂಟೆಗಳು ತುಂಬಿ ಹರಿಯುತ್ತಿವೆ. ದೊಡ್ಡಬೆಳವಂಗಲ ಹೋಬಳಿಯ ಸೋಣ್ಣೇನಹಳ್ಳಿ ಕೆರೆ ತೂಬು ಕಿತ್ತು ಬಿರುಕು ಬಿಟ್ಟಿರುವುದರಿಂದ ಕೆರೆಯಿಂದ ನೀರು ಹೊರ ಹೋಗುತ್ತಿದ್ದವು. ನೀರು ಹೊರ ಹೋಗದಂತೆ ಕೆರೆ ಸುತ್ತ ಮುತ್ತಲಿನ ಗ್ರಾಮಗಳ ಯುವಕರು ಶ್ರಮದಾನ ಮಾಡುವ ಮೂಲಕ ತೂಬಿನ ಮೂಲಕ ನೀರು ಹೊರ ಹೊಗದಂತೆ
ದುರಸ್ತಿಗೊಳಿಸಿದರು. ಸಣ್ಣ ನೀರಾವರಿ ಇಲಾಖೆಗೆ ಸೇರಿರುವ ಸೋಣ್ಣೇನಹಳ್ಳಿ ಕೆರೆ ತೂಬು ಅತ್ಯಂತ ಶೀಥಿಲವಾಗಿದ್ದು ಸೂಕ್ತ ರೀತಿಯಲ್ಲಿ ದುರಸ್ತಿಗೊಳಿಸಬೇಕು. ಈ ಬಗ್ಗೆ ಹಲವಾರು ಬಾರಿ ಜಿಲ್ಲಾ ಪಂಚಾಯಿತಿ ಎಂಜಿನಿಯರ್‌ ವಿಭಾಗದ ಅಧಿಕಾರಿಗಳಿಗೆ ತಿಳಿಸಿದ್ದರೂ ದುರಸ್ತಿ
ಮಾಡಿಸಿಲ್ಲ. ಇದರಿಂದಾಗಿ ಒಂದು ವಾರದಿಂದ ಕೆರೆಗೆ ಬಂದಿದ್ದು ನೀರು ವ್ಯರ್ಥವಾಗಿ ತೂಬಿನ ಮೂಲಕ ಹೊರ ಹೋಗಿವೆ ಎಂದು ಪ್ರಾಂತ ರೈತ ಸಂಘದ ತಾಲೂಕು ಅಧ್ಯಕ್ಷ ಸಿದ್ದಲಿಂಗಪ್ಪ ತಿಳಿಸಿದ್ದಾರೆ.

ಹದಗೆಟ್ಟ ರಸ್ತೆ ಸಂಚಾರ ಅಸ್ತವ್ಯಸ್ತ:  ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಬುಧವಾರ ರಾತ್ರಿ ಸುರಿದ ಭಾರಿ ಮಳೆಗೆ ದಾಬಸ್‌ ಪೇಟೆ-ದೊಡ್ಡಬಳ್ಳಾಪುರ ಮಾರ್ಗದ ರಾಷ್ಟ್ರೀಯ ಹೆದ್ದಾರಿ 207ರಲ್ಲಿ ಗುಂಡಿಗಳು ಬಿದ್ದಿದ್ದು, ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರ ಅಸ್ತವ್ಯಸ್ತಗೊಂಡಿದೆ.

ಒಂದು ವರ್ಷದಿಂದಲೂ ಸ್ಥಗಿತ: ಇತ್ತೀಚೆಗಷ್ಟೇ ರಸ್ತೆಯಲ್ಲಿ ಬಿದ್ದಿದ್ದ ಗುಂಡಿಗಳನ್ನು ಮುಚ್ಚುವ ಮೂಲಕ ತೇಪೆ ಹಾಕಲಾಗಿತ್ತು. ಆದರೆ, ರಸ್ತೆ ಕಾಮಗಾರಿ ಅರ್ಧಕ್ಕೆ ನಿಂತಿರುವುದರಿಂದ ತಾಲೂಕಿನ ರಾಮೇಶ್ವರ ಕ್ರಾಸ್‌, ನಾರನಹಳ್ಳಿ, ಕಾಮನ ಅಗ್ರಹಾರ ಗೇಟ್‌ ಸೇರಿದಂತೆ ರಸ್ತೆಯುದ್ದಕ್ಕೂ ಗುಂಡಿಗಳು ಬಿದ್ದಿವೆ. ಬೈಕ್‌ ಸವಾರರು ಅಪಘಾತಗಳು ಆಗುತ್ತಿದ್ದು ಕೈ ಕಾಲುಗಳನ್ನು ಮುರಿದುಕೊಳ್ಳುವಂತಾಗಿದೆ ಎನ್ನುತ್ತಾರೆ ದೊಡ್ಡಬೆಳವಂಗಲ ಗ್ರಾಮದ ನಿವಾಸಿ ಸಿ.ಎಚ್‌.ರಾಮಕೃಷ್ಣ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಒಂದು ವರ್ಷದಿಂದಲೂ ಸ್ಥಗಿತಗೊಂಡಿರುವುದರಿಂದ ಡಾಂಬರು ಹಾಕಿರುವ ರಸ್ತೆಯು ಕಿತ್ತುಹೋಗಿದೆ.

ಬಸ್‌ ಸಂಚಾರ ಬಂದ್‌: ತಾಲೂಕಿನ ಸಾಸಲು ಹೋಬಳಿಯ ಹೊಸಹಳ್ಳಿ ಗ್ರಾಮದ ಮೂಲಕ ಕೊಟ್ಟಿಗೆಮಚ್ಚೇನಹಳ್ಳಿ, ಕುಕ್ಕಲಹಳ್ಳಿ, ಮಲ್ಲಸಂದ್ರ, ಜಕ್ಕೇನಹಳ್ಳಿ, ಕಲ್ಲುಕುಂಟೆ ಸೇರಿದಂತೆ ಐದಾರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯುಲ್ಲಿನ ಮೋರಿ ಕುಸಿದು ಬಿದ್ದಿರುವುದರಿಂದ ಬಸ್‌ ಸಂಚಾರ ಸ್ಥಗಿತಕೊಂಡಿದೆ. ಈ ರಸ್ತೆಯಲ್ಲಿ ನಿರ್ಮಿಸಲಾಗಿರುವ ಮೋರಿ ಅತ್ಯಂತ ಹಳೆಯದಾಗಿದ್ದು ಶಿಥಿಲಗೊಂಡಿತ್ತು. ಈ ಮೋರಿಯನ್ನು ದುರಸ್ತಿಗೊಳಿಸುವಂತೆ ಹತ್ತಾರು ಬಾರಿ ಮನವಿ ಮಾಡಿದ್ದರೂ ನಿರ್ಲಕ್ಷ್ಯ ಮಾಡಲಾಗಿತ್ತು. ಈಗ ಮಳೆ ಹೆಚ್ಚಾಗಿದ್ದರಿಂದ ನೀರು ಹರಿದು ಬಂದು ಮೋರಿ ಕುಸಿದು ಬಿದ್ದಿದೆ ಎಂದು ಉಜ್ಜನಿ ಗ್ರಾಮದ ನಿವಾಸಿ ತಿಮ್ಮಗೌಡ
ತಿಳಿಸಿದ್ದಾರೆ.

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.