ಜೆಡಿಎಸ್‌, ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆ


Team Udayavani, May 13, 2019, 3:00 AM IST

jds-tore

ಆನೇಕಲ್‌: ಪಟ್ಟಣವನ್ನು ಅಭಿವೃದ್ಧಿಯಲ್ಲಿ ಮಾದರಿಯಾಗಿ ಮಾಡಿದ ದಿವಂಗತ ಎಂ ಎಸ್‌ಅಶ್ವಥ್‌ ನಾರಾಯಣ್‌ಅವರ ಹೆಸರು ಅಜರಾಮರ ಎಂದು ಸಂಸದ ಡಿ.ಕೆ ಸುರೇಶ್‌ ಹೇಳಿದರು.

ಅವರು ಆನೇಕಲ್‌ ಪಟ್ಟಣದ ಶ್ರೀ ರಾಮಕುಟೀರದಲ್ಲಿ ಕಾಂಗ್ರೆಸ್‌ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಜೆಡಿಎಸ್‌ ಪಕ್ಷವನ್ನು ತೊರೆದು ಪುರಸಭೆ ಮಾಜಿ ಸದಸ್ಯ ಜೆಡಿಎಸ್‌ ಮುಖಂಡ ಪದ್ಮನಾಭ್‌ ಹಾಗೂ ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾದ ಬಿಜೆಪಿ ಪಕ್ಷದ ನಗರ ಬಿಜೆಪಿ ಮಾಜಿ ಅಧ್ಯಕ್ಷ ಶಿವರಾಮ್‌ ನೇತೃತ್ವದಲ್ಲಿ ನೂರಾರು ಜನರನ್ನು ಕಾಂಗ್ರೆಸ್‌ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದರು.

ಪುರಸಭೆ ಮಾಜಿ ಅಧ್ಯಕ್ಷ ಪದ್ಮನಾಭ್‌ ಸಹೋದರ ದಿವಂಗತ ಅಶ್ವಥ್‌ನಾರಾಯಣ್‌ ಆನೇಕಲ್‌ ಪಟ್ಟಣಕ್ಕೆ ಆದರ್ಶನಿಯ ವ್ಯಕ್ತಿ. ಇಂತಹ ವ್ಯಕ್ತಿಗಳು ನಮ್ಮ ಜನಪ್ರತಿನಿಧಿಗಳಾದರೆ ಅಭಿವೃದ್ಧಿಗೆ ಹೆಚ್ಚಿನ ಸಹಾಯವಾಗುತ್ತದೆ ಈ ನಿಟ್ಟಿನಲ್ಲಿ ಅವರ ಸಹೋದರ ಪದ್ಮನಾಭ ಕಾಂಗ್ರೆಸ್‌ಗೆ ಸೇರ್ಪಡೆಯಾಗಿ ಮುಂದಿನ ದಿನಗಳಲ್ಲಿ 27 ವಾರ್ಡಗಳಲ್ಲಿ ಎಲ್ಲಾ ಸ್ಥಾನವನ್ನು ಗೆಲ್ಲುವ ಮೂಲಕ ಆನೇಕಲ್‌ ಪಟ್ಟಣವನ್ನು ಸುಂದರವನ್ನಾಗಿ ಮಾಡುವ ನಿಟ್ಟಿನಲ್ಲಿ ಎಲ್ಲರೂ ಸೇರಿ ಕೆಲಸ ಮಾಡಬೇಕಾಗಿದೆ ಎಂದು ಹೇಳಿದರು.

ಶಾಸಕ ಬಿ ಶಿವಣ್ಣ ಮಾತನಾಡಿ, ಆನೇಕಲ್‌ನಲ್ಲಿ 18 ವರ್ಷ ಆಡಳಿತ ನಡೆಸಿದ ಮಾಜಿ ಸಚಿವ ಎ. ನಾರಾಯಣಸ್ವಾಮಿ ಸಚಿವರಾಗಿ ಆನೇಕಲ್‌ ತಾಲೂಕು ಯಾವುದು ನೆನಪಿಡುವ ಕಾಮಗಾರಿಯನ್ನು ಮಾಡಿ ತೋರಿಸುವುದರಲ್ಲಿ ವಿಫ‌ಲರಾಗಿದ್ದಾರೆ. ಆದರೆ, ಕಳೆದ 5 ವರ್ಷಗಳಿಂದ ಆನೇಕಲ್‌ ತಾಲೂಕಿನಲ್ಲಿ ನಾವು ಅಭಿವೃದ್ಧಿಯನ್ನು ಸಾಧಿಸಿ ತೋರಿಸಿದ್ದೇವೆ. ಒಂದಷ್ಟು ಕೆಲಸಗಳು ಜನರಿಗೆ ಕಾಣಸಿಗುತ್ತಿವೆ. ಅಭಿವೃದ್ಧಿ ಮೂಲಕ ಆನೇಕಲ್‌ ತಾಲೂಕು ಎರಡನೇ ಸ್ಥಾನಕ್ಕೆ ಕೊಂಡೊಯ್ಯುವಲ್ಲಿ ಸಫ‌ಲರಾಗಿದ್ದೇವೆ ಎಂದು ಹೇಳಿದರು.

ಅಶ್ವತ್ಥ್ ನಾರಾಯಣ್‌ ಸ್ಮರಣೆ: ಜೆಡಿಎಸ್‌ ತೊರೆದು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಪುರಸಭಾ ಸದಸ್ಯ ಪದ್ಮನಾಭ್‌ ಮಾತನಾಡಿ, ಇಷ್ಟು ದಿನ ಜೆಡಿಎಸ್‌ ಪಕ್ಷದಲ್ಲಿ ದುಡಿಯಲು ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ ನಾವು ಅಭಿವೃದ್ಧಿಗೆ ಆದ್ಯತೆ ನೀಡುವವರು ನಮ್ಮ ಸಹೋದರ ಅಶ್ವತ್ಥ್ ನಾರಾಯಣ್‌ ಅವರು ಆನೇಕಲ್‌ ಪಟ್ಟಣವನ್ನು ಅಭಿವೃದ್ಧಿ ಮಾಡುವಲ್ಲಿ ಶ್ರಮಿಸಿದರು.

ಅವರು, ಇನ್ನಷ್ಟು ವರ್ಷ ಬದುಕಿದಿದ್ದರೆ ಆನೇಕಲ್‌ ಪಟ್ಟವನ್ನು ಮತ್ತಷ್ಟು ಅಭಿವೃದ್ಧಿ ಮಾಡುತ್ತಿದ್ದರು. ಆದರೆ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ಅಭಿವೃದ್ಧಿಗೆ ಆದ್ಯತೆ ನೀಡುವ ಸಲುವಾಗಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ ಮುಂದಿನ ದಿನಗಳಲ್ಲಿ ಆನೇಕಲ್‌ ಪಟ್ಟಣದಲ್ಲಿ ಅಭಿವೃದ್ಧಿಯನ್ನು ಮಾಡುವ ಮೂಲಕ ಅಶ್ವತ್ಥ್ ನಾರಾಯಣ್‌ಅವರ ಹೆಸರನ್ನು ಸದಾಜನಮಾನಸದಲ್ಲಿ ಇರುವಂತೆ ಮಾಡಲಿದ್ದೇವೆ ಎಂದು ಹೇಳಿದರು.

ಬಿಜೆಪಿಗೆ ಅಭಿವೃದ್ಧಿ ಕಾಳಜಿ ಇಲ್ಲ: ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್‌ ಸೇರ್ಪಡೆಯಾದ ಬಿಜೆಪಿ ಮಾಜಿ ಅಧ್ಯಕ್ಷ ಶಿವರಾಂ ಮಾತನಾಡಿ, ಆನೇಕಲ್‌ ಪಟ್ಟಣದಲ್ಲಿ ಹದಿನೆಂಟು ವರ್ಷಗಳ ಕಾಲ ಆಡಳಿತ ನಡೆಸಿದ ಬಿಜೆಪಿ ಅವರ ಅಭಿವೃದ್ಧಿಗೆ ಆದ್ಯತೆ ಏನು ಮಾಡಿಲ್ಲ. ಒಂದು ಬೀದಿ ದೀಪವನ್ನು ಹಾಕಿಸಲು ಆಗದ ಪುರಸಭಾ ಸದಸ್ಯರ ಜೊತೆಗೆ ಇರುವ ಬದಲು ಅಭಿವೃದ್ಧಿಯ ಮೂಲ ಮಂತ್ರವನ್ನು ಪಡೆದಿರುವ ಶಿವಣ್ಣನವರ ಜೊತೆಯಲ್ಲಿ ಇರುವುದು ಒಳ್ಳೆಯದು ಎಂದು ನಿರ್ಧರಿಸಿ ಶಾಸಕರ ನೇತೃತ್ವದಲ್ಲಿ ಕಾಂಗ್ರೆಸ್‌ ಸೇರ್ಪಡೆಯಾಗಿದ್ದೇನೆ ಎಂದರು.

ಜೆಡಿಎಸ್‌ ತೊರೆದು ಪುರಸಭಾ ಮಾಜಿ ಸದಸ್ಯ ರೇಣುಕಾ ಮಲ್ಲಿಕಾರ್ಜುನ್‌, ಚಂದ್ರಿಕಾ ಹನುಮಂತರಾಜು ಸೇರಿದಂತೆ ನೂರಾರು ಕಾರ್ಯಕರ್ತರು ಕಾಂಗ್ರೆಸ್‌ಗೆ ಸೇರ್ಪಡೆಯಾದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್‌ಅಧ್ಯಕ್ಷ ಕೃಷ್ಣಪ್ಪ , ಮಾಜಿ ಅಧ್ಯಕ್ಷ ರಮೇಶ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರಾಜಣ್ಣ, ಚಂದ್ರಪ್ಪ ಕಾಂಗ್ರೆಸ್‌ ಮುಖಂಡರಾದ ಮುರಳಿ, ಶ್ರೀನಿವಾಸ್‌, ವೆಂಕಟೇಶ್‌, ಬಿ.ಪಿ. ರಮೇಶ್‌, ಸುರೇಶ್‌, ಅರೆಹಳ್ಳಿ ರಘು, ಅಪ್ಪಾಜಪ್ಪ ಶ್ರೀನಿವಾಸ್‌ ಪ್ರಸಾದ್‌ರ ಉಷಾ ಮನೋಹರ್‌ ಶೈಲೇಂದ್ರಕುಮಾರ್‌ ಇತರರು ಹಾಜರಿದ್ದರು.

ಅಭಿವೃದ್ಧಿ ಮಂತ್ರ: ಬಿಜೆಪಿ ಆನೇಕಲ್‌ ಪಟ್ಟಣ ಅಭಿವೃದ್ಧಿ ಮಾಡುವಲ್ಲಿ ಆಸಕ್ತಿ ತೋರದೆ ಆನೇಕಲ್‌ ತೀರಾ ಹಿಂದುಳಿದಿತ್ತು ಅಭಿವೃದ್ಧಿಯಲ್ಲಿ ಕಳೆದ ಐದು ವರ್ಷಗಳಲ್ಲಿ ರಸ್ತೆ ಚರಂಡಿ, ಕಾವೇರಿ ಕುಡಿವ ನೀರು ಸೇರಿದಂತೆ ಏತ ನೀರಾವರಿ ಕಾಮಗಾರಿ ಪ್ರಗತಿಯಲ್ಲಿದ್ದು ಅಭಿವೃದ್ಧಿಯ ಮಂತ್ರ ಎಂಬಂತೆ ನಾವೆಲ್ಲರೂ ಒಟ್ಟಾಗಿ ಸೇರಿ ಕೆಲಸ ಮಾಡಿದ್ದರಿಂದ ಆನೇಕಲ್‌ ಅಭಿವೃದ್ಧಿಪಥದಲ್ಲಿ ಸಾಗಿದೆ. ಬಿಜೆಪಿ ಅವರಿಗೆ ಸುಳ್ಳು ಹೇಳುವ ಕೆಲಸ ಬಿಟ್ಟರೆ ಬೇರೆನು ಅವರ ಸಾಧನೆ ಇಲ್ಲ, ಅವರಿಗೆ ಅಭಿವೃದ್ಧಿಯ ಬಗ್ಗೆ ಕಾಳಜಿ ಇಲ್ಲ,ಆದರೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಬಡವರ ದೀನ ದಲಿತರ ಏಳಿಗೆಗೆ ಹಗಲಿರುಳು ಶ್ರಮಿಸುತ್ತಿದೆ ಎಂದು ಡಿ.ಕೆ. ಸುರೇಶ್‌ ಹೇಳಿದರು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.