ರೇಷ್ಮೇ ಬೆಳೆ ಕಡಿಮೆ ಬಂಡವಾಳ, ಹೆಚ್ಚಿನ ಲಾಭ


Team Udayavani, Oct 6, 2019, 3:00 AM IST

reshme

ದೇವನಹಳ್ಳಿ: ರೇಷ್ಮೇ ಕೃಷಿ ಅನೇಕ ರೈತರಿಗೆ ಕೃಷಿ ಕಾರ್ಮಿಕರಿಗೆ ಉದ್ಯೋಗ ಒದಗಿಸುವಲ್ಲಿ ಮಹತ್ತ‌ರ ಪಾತ್ರ ವಹಿಸಿದೆ. ಕಡಿಮೆ ಜಾಗದಲ್ಲಿ , ಕಡಿಮೆ ಬಂಡವಾಳದಲ್ಲಿ ಅವಧಿ ಮತ್ತು ಕಡಿಮೆ ಬಂಡವಾಳದಲ್ಲಿ ಹೆಚ್ಚಿನ ಲಾಭ ನೀಡುವ ರೇಷ್ಮೇ ಬೆಳೆಯಾಗಿದೆ ಎಂದು ರೇಷ್ಮೇ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಕುಮಾರಸ್ವಾಮಿ ಹೇಳಿದರು. ತಾಲೂಕಿನ ಕೊಯಿರಾ ಗ್ರಾಮದ ರೈತ ಚಿಕ್ಕೇಗೌಡರ ಮರಕಡ್ಡಿ ರೇಷ್ಮೇ ತೋಟ ಮತ್ತು ಕೊಳವೆ ಭಾವಿಗಳಿಗೆ ಅಳವಡಿಸಿರುವ ಇಂಗು ಗುಂಡಿ ಪರಿಶೀಲಿಸಿ ಮಾತನಾಡಿದರು.

ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ರೇಷ್ಮೇ ಬೆಳೆ ಬೆಳೆಯಲಾಗುತ್ತಿದ್ದು, ಒಟ್ಟು 6944.60 ಹೆಕ್ಟೇರ್‌ ಪ್ರದೇಶದಲ್ಲಿ 6624 ರೈತರು ರೇಷ್ಮೇ ಕೃಷಿಯಲ್ಲಿ ತೊಡಗಿದ್ದಾರೆ. ರೇಷ್ಮೇ ಕೃಷಿ ಅನೇಕ ರೈತರಿಗೆ, ಕೃಷಿ ಕಾರ್ಮಿಕರಿಗೆ ಉದ್ಯೋಗ ಒದಗಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ. ಕಡಿಮೆ ಜಾಗ, ಕಡಿಮೆ ಬಂಡವಾಳ, ಕಡಿಮೆ ಅವಧಿಯಲ್ಲಿ ಹೆಚ್ಚಿನ ಲಾಭ ನೀಡುವ ಬೆಳೆಯಾಗಿದೆ ಎಂದರು.

2019-20 ನೇ ಸಾಲಿನಲ್ಲಿ 102 ಹೆಕ್ಟೇರ್‌ ಪ್ರದೇಶದಲ್ಲಿ ರೇಷ್ಮೇ ವಿಸ‌¤ರಿಸಿ 59.80 ಲಕ್ಷ ಮಿಶ್ರ ತಳಿ ಮತ್ತು 5.20 ಲಕ್ಷ ದ್ವಿತಳಿ ರೇಷ್ಮೇ ಮೊಟ್ಟೆಗಳನ್ನು ಚಾಕಿ ಮಾಡಿಸಿ, 3887 ಮೆಟ್ರಿಕ್‌ ಟನ್‌ ಮಿಶ್ರ ತಳಿ ರೇಷ್ಮೇ ಗೂಡು ಹಾಗೂ 338 ಮೆಟ್ರಿಕ್‌ ಟನ್‌ ದ್ವಿತಳಿ ರೇಷ್ಮೇ ಗೂಡುಗಳನ್ನು ಉತ್ಪಾದಿಸಿ, ಕ್ರಮವಾಗಿ 539.90 ಮೆಟ್ರಿಕ್‌ ಟನ್‌ ಮತ್ತು 52 ಮೆಟ್ರಿಕ್‌ ಟನ್‌ ರೇಷ್ಮೇ ನೂಲನ್ನು ಉತ್ಪಾದಿಸುವ ಗುರಿ ಹೊಂದಲಾಗಿದೆ ಎಂದರು.

ಬೈವೋಲ್ಟಿನ್‌ ಬೆಳೆಯುವ 200 ರೈತರಲ್ಲಿ ಕೊಯಿರಾ ಚಿಕ್ಕೇಗೌಡ ಎಲ್ಲರ ಮಾದರಿ ಆಗಿದ್ದಾರೆ. ರೇಷ್ಮೇ ಸೊಪ್ಪು ಕತ್ತರಸುವ ಹೊಸ ಆವಿಷ್ಕಾರದ ಯಂತ್ರವನ್ನು ಉಪಯೋಗಿಸುತ್ತಿದ್ದಾರೆ. ರಸ ಗೊಬ್ಬರಗಳನ್ನು ಬಳಕೆ ಮಾಡದೆ ಸಾವಯುವ ಗೊಬ್ಬರವನ್ನು ಬಳಸಿಕೊಂಡು ರೇಷ್ಮೇ ಕೃಷಿ ಮಾಡುತ್ತಿರುವುದು ವಿಶೇಷವಾಗಿದೆ ಎಂದು ಶ್ಲಾಘಿಸಿದರು.

ರೈತ ಚಿಕ್ಕೇಗೌಡ ಮಾತನಾಡಿ 3.10 ಎಕರೆಯಲ್ಲಿ ರೇಷ್ಮೇ ಮರಕ‌ಡ್ಡಿ ಪದ್ಧತಿಯಲ್ಲಿ ಬೆಳೆಯಲಾಗುತ್ತಿದೆ. ಕಳೆದ 1 ವರ್ಷದಿಂದ ಬೈವೋಲ್ಟಿನ್‌ ಗೂಡು ಉತ್ಪಾದಿಸಲಾಗುತ್ತಿದೆ. ಕಳೆದ 5 ವರ್ಷಗಳಿಂದ ಕೃಷಿ ಹೊಂಡದಲ್ಲಿ ಶೇಖರಣೆ ಆಗುವ 10 ಲಕ್ಷ ಲೀಟರ್‌ ನೀರು ಬೆಳೆಗೆ ಸಹಕಾರಿ ಆಗಿದೆ.

450 ಅಡಿ ಕೊಳವೆ ಭಾವಿ ಕೊರೆಸಿದಾಗ ನೀರು ಇದ್ದು, ನಂತರ ಕೆಲವೇ ತಿಂಗಳಿನಲ್ಲಿ ಅಂರ್ತಜಲ ಬತ್ತಿ ಹೋಗಿದು, ಈಗಿರುವ ಕೃಷಿ ಹೊಂಡವನ್ನು ವಿಸ್ತರಿಸಿ ಒಂದು ಕೋಟಿ ಲೀಟರ್‌ ಸಾಮರ್ಥ್ಯದ ಕೃಷಿ ಹೊಂಡ ನಿರ್ಮಿಸಲು ಚಿಂತಿಸುತ್ತಿದ್ದೇನೆ ಎಂದು ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಈ ವೇಳೆಯಲ್ಲಿ ತಾಲೂಕು ರೇಷ್ಮೇ ಇಲಾಖೆ ಸಹಾಯಕ ನಿರ್ದೇಶಕಿ ಗಾಯಿತ್ರೀ, ವಲಯ ಅಧಿಕಾರಿ ಮುನಿರಾಜು ಮತ್ತಿತರರು ಇದ್ದರು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.