ಭಗ್ನ ಪ್ರೇಮಿಯಿಂದ ಬಾಲಕಿ ಬರ್ಬರ ಕೊಲೆ


Team Udayavani, Nov 29, 2018, 12:48 PM IST

blore-9.jpg

ದೊಡ್ಡಬಳ್ಳಾಪುರ: ಮದುವೆಯಾಗಲು ನಿರಾಕರಿಸಿದ ಬಾಲಕಿಯನ್ನು, ಭಗ್ನ ಪ್ರೇಮಿಯೊಬ್ಬ ಆಕೆ ಶಾಲೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಮಚ್ಚಿನಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ನಗರದ ರೋಜಿಪುರದ ಸರ್ಕಾರಿ ಶಾಲೆ ಬಳಿ ಬುಧವಾರ ಬೆಳಗ್ಗೆ ನಡೆದಿದೆ.

ಮೃತ ಬಾಲಕಿ ಎನ್‌.ಕೀರ್ತನಾ(15)ಬಸವೇಶ್ವರ ನಗರದ ನಿವಾಸಿಯಾಗಿದ್ದು, ನಗರದ ರೋಜಿಪುರದ ಬಿಎಸ್‌ಎ ಪ್ರೌಢ ಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಆಕೆಯ ಹತ್ತಿರದ ಸಂಬಂಧಿ ನವೀನ್‌ ಎಂಬಾತ ಈ ಕೃತ್ಯ ಎಸಗಿದ್ದು, ಘಟನೆ ನಡೆದ ನಂತರ ಆತ ವಿಷ ಸೇವಿಸಿರುವುದಾಗಿ ಹೇಳಿ ಆಸ್ಪತ್ರೆ ಸೇರಿದ್ದಾನೆ.

ಘಟನೆ ಹಿನ್ನೆಲೆ: ಬಸವೇಶ್ವರ ನಗರದ ನಿವಾಸಿಗಳಾದ ನಂದೀಶ್‌ ಹಾಗೂ ಲಲಿತಾ ದಂಪತಿಗೆ 3 ಜನ ಹೆಣ್ಣು ಮಕ್ಕಳಿದ್ದು, ಎರಡನೇ ಪುತ್ರಿಯೇ ಕೊಲೆಯಾದ ಕೀರ್ತನಾ. ರೋಜಿಪುರದ ಬಿಎಸ್‌ಎ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಕೀರ್ತನಾಳ ಭಾವನ ಅಣ್ಣ ನವೀನ್‌ ಆಕೆಯನ್ನು ಕೊಲೆಗೈದ ಆರೋಪಿ. ಈತ ಕೀರ್ತನಾಳನ್ನು ಪ್ರೀತಿಸುತ್ತಿದ್ದು, ವಿವಾಹವಾಗುವಂತೆ ಆಕೆಯ ಹಿಂದೆ ಬಿದ್ದಿದ್ದ. ನವೀನ್‌ ತನ್ನ ಹಿಂದೆ ಬಿದ್ದಿದ್ದು, ಶಾಲೆಗೆ ಹೋಗುವಾಗ ಕೀಟಲೆ ಮಾಡುತ್ತಿರುವ ಬಗ್ಗೆ ಕೀರ್ತನಾ ಪೋಷಕರಿಗೆ ತಿಳಿಸಿದ್ದಳು. ಈ ಬಗ್ಗೆ ನಗರ ಪೊಲೀಸ್‌ ಠಾಣೆಯಲ್ಲಿ ದೂರು ಸಹ ನೀಡಲಾಗಿತ್ತು. 20 ದಿನಗಳ ಹಿಂದೆಯಷ್ಟೇ ನವೀನ್‌ನನ್ನು ಠಾಣೆಗೆ ಕರೆಸಿ ಪೊಲೀಸರು ಸೂಕ್ತ ರೀತಿಯಲ್ಲಿ ಬುದ್ಧಿವಾದ ಹೇಳಿ, ಕೀರ್ತನಾಳ ತಂಟೆಗೆ ಹೋಗದಂತೆ ಎಚ್ಚರಿಕೆ ನೀಡಿದ್ದರು.

ಓದಿನಲ್ಲಿ ಮುಂದು: ಈ ಬಗ್ಗೆ ಮಾಹಿತಿ ನೀಡಿದ ಮೃತಳ ತಂದೆ ನಂದೀಶ್‌, ಪೊಲೀಸರು ಠಾಣೆಗೆ ಕರೆಸಿ ನವೀನ್‌ಗೆ ಬುದ್ಧಿ ಹೇಳಿದ ನಂತರ ಕೀರ್ತನಾ ಮನೆಯಿಂದ ಶಾಲೆಗೆ ಹೋಗುವಾಗ ತನ್ನ ತಂಗಿಯೊಂದಿಗೆ ಹೋಗಿ ಬರುತ್ತಿದ್ದಳು. ಒಂದು ವಾರದಿಂದ ಕಾಯಿಲೆ ನಿಮಿತ್ತ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದೆ. ಹೀಗಾಗಿ, ಕೀರ್ತನಾ ಒಬ್ಬಳೇ ಶಾಲೆಗೆ ಹೋಗುವ ಅನಿವಾರ್ಯತೆ ಉಂಟಾಗಿತ್ತು. ಈ ವೇಳೆ ಆಕೆಯನ್ನು ಕೊಲೆ ಮಾಡಲಾಗಿದೆ.  ನವೀನ್‌ ವಿವಾಹವಾಗುವಂತೆ ಪೀಡಿಸುತ್ತಿದ್ದರಿಂದ ಭಯಗೊಂಡು ತಮ್ಮ ಮಗಳಿಗೆ ಶಾಲೆಗೆ ಹೋಗುವುದೇ ಬೇಡ ಎಂದು ಹೇಳಿದ್ದೆವು. ಆದರೆ, ಓದುವುದರಲ್ಲಿ ಹೆಚ್ಚಿನ ಆಸಕ್ತಿ ಹೊಂದಿದ್ದ ಕೀರ್ತನಾ ಶಾಲೆಗೆ ಹೋಗುತ್ತಿದ್ದಳು ಎಂದು ತಿಳಿಸಿದರು.

ಇನ್ನೂ ವಶಕ್ಕೆ ಪಡೆದಿಲ್ಲ: ಕೀರ್ತನಾ ಕೊಲೆ ಆರೋಪಿ ನವೀನ್‌ಗೆ ವೈದ್ಯರು ಇನ್ನೂ ಚಿಕಿತ್ಸೆ ನೀಡುತ್ತಿದ್ದಾರೆ. ಹೀಗಾಗಿ, ಅಧಿಕೃತವಾಗಿ ಪೊಲೀಸ್‌ ವಶಕ್ಕೆ ಪಡೆದಿಲ್ಲ. ಆದರೆ, ಆಸ್ಪತ್ರೆಯಲ್ಲಿ ಪೊಲೀಸ್‌ ಕಾವಲು ನಿಯೋಜಿಸಲಾಗಿದೆ. ವೈದ್ಯರ ಸೂಚನೆ ನಂತರ ಪೊಲೀಸ್‌ ವಶಕ್ಕೆ ಪಡೆಯ ಲಾಗುವುದು ಎಂದು ಸರ್ಕಲ್‌ ಇನ್‌ಸ್ಪೆಕ್ಟರ್‌ ಜಿ. ಸಿದ್ಧರಾಜು ತಿಳಿಸಿದ್ದಾರೆ. 

ಭೀಕರ ದೃಶ್ಯ ಕಂಡು ಬೆಚ್ಚಿಬಿದ್ದ ಜನ: ಭಗ್ನ ರೋಜಿಪುರದಲ್ಲಿ ಬುಧವಾರ ಬೆಳಗ್ಗೆ ಪ್ರೇಮಿಯೊಬ್ಬ ನಡು ರಸ್ತೆಯಲ್ಲಿಯೇ ಶಾಲಾ ಬಾಲಕಿಯನ್ನು ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆಯಿಂದ ಜನರು ಬೆಚ್ಚಿ ಬಿದ್ದಿದ್ದಾರೆ.

 ನಗರದಲ್ಲಿ ಇದೇ ಪ್ರಥಮ ಬಾರಿಗೆ ನಡು ರಸ್ತೆಯಲ್ಲಿಯೇ ಯುವತಿಯನ್ನು ಕೊಚ್ಚಿ ಹಾಕಿರುವುದು ಇದೇ ಮೊದಲಾಗಿದೆ. ರೋಜಿಪುರದಲ್ಲಿ ಖಾಸಗಿ ಶಾಲೆ ಹಾಗೂ ಸರ್ಕಾರಿ ಪ್ರಾಥಮಿಕ ಶಾಲೆಗಳಿದ್ದು, ಶಾಲೆಯ ಹಿಂಭಾಗದಲ್ಲಿಯೇ ಈ ಭೀಕರ ಕೊಲೆ
ನಡೆದಿರುವುದರಿಂದ ವಿದ್ಯಾರ್ಥಿಗಳು ಹಾಗೂ ಪೋಷಕರು ಭಯಭೀತರಾಗಿದ್ದಾರೆ.  

ಟಾಪ್ ನ್ಯೂಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.