ಗ್ರಾಮಸ್ಥರಿಗೆ ಬಯಲು ಶೌಚವೇ ಗತಿ!


Team Udayavani, Jun 2, 2020, 7:14 AM IST

showchala

ನೆಲಮಂಗಲ: ಬಯಲು ಶೌಚ ಮುಕ್ತ ಉದ್ದೇಶಕ್ಕೆ ನಿರ್ಮಾಣವಾದ ಶೌಚಾಲಯಗಳು ನೀರಿಲ್ಲದೆ ಪಾಳುಬಿದ್ದಿವೆ. ಮೂಲಸೌಕರ್ಯಗಳ ಅಭಿವೃದ್ಧಿಯಾಗಿಲ್ಲ. ಸಾಕಷ್ಟು ಬಾರಿ ಗ್ರಾಪಂ ಅಧಿಕಾರಿ ಗಳಿಗೆ ಮನವಿ ಮಾಡಿದ್ದರೂ ನಿರ್ಲಕ್ಷ್ಯ  ಹಾಗೂ ಅತ್ಯಂತ ಬೇಜವಾಬ್ದಾರಿತನ ದಿಂದ ವರ್ತಿಸಿದ್ದಾರೆ. ಇನ್ನಾದರೂ ಸಂಬಂಧಿಸಿದವರು ಕ್ರಮಕೈ  ಗೊಳ್ಳ ಬೇಕು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಲೂಕಿನ ಅರೆಬೊಮ್ಮನಹಳ್ಳಿ ಗ್ರಾಪಂನ ತಿಮ್ಮಸಂದ್ರದ ಸಮುದಾಯದ ಜನರ 40ಕ್ಕೂ ಹೆಚ್ಚು ಮನೆಗಳಿಗೆ ಶೌಚಾಲಯ ನಿರ್ಮಾಣಕ್ಕೆ ಬಂಡೆ ಸಮಸ್ಯೆ ಎಂದು ಸರಕಾರ 20ಕ್ಕೂ ಹೆಚ್ಚು ಶೌಚಾಲಯಗಳನ್ನು ಒಂದೆಡೆ ನಿರ್ಮಿಸಿದೆ. ಆದರೆ   ವರ್ಷಗಳಾದರೂ ನೀರಿನ ಸರಬರಾಜು ವ್ಯವಸ್ಥೆ ಮಾಡಿಲ್ಲೆ ಎಂಬುದು ಗ್ರಾಮಸ್ಥರು ದೂರಿದ್ದಾರೆ.

ಪಾಳು ಬಿದ್ದಿರುವ ಶೌಚಾಲಯಗಳು: ಬಯಲು ಶೌಚ ಮುಕ್ತ ಗ್ರಾಮದ ಪಟ್ಟಿಗೆ ಸೇರ ಬೇಕಾದ ಗ್ರಾಮದಲ್ಲಿ ಸರಕಾರ ನಿರ್ಮಿಸಿರುವ ಶೌಚಾಲಯಗಳ ಹಸ್ತಾಂತರ ಹಾಗೂ ನೀರು ಸರಬರಾಜು ಮಾಡಿಲ್ಲ. ಹೀಗಾಗಿ ಪಾಳು ಬಿದ್ದಿರುವ  ಶೌಚಾಲಯಗಳ ಬಾಗಿಲು ಮುರಿದಿವೆ. ಸುತ್ತಲೂ ಬೇಲಿ ಬೆಳೆದಿದೆ. ಆದರೆ ಸರಕಾರದ ದಾಖಲೆಯಲ್ಲಿ ಬಯಲು ಶೌಚ ಮುಕ್ತ ಗ್ರಾಪಂ ಎಂದು ಘೋಷಣೆ ಮಾಡಿದ್ದಾರೆ. ಗ್ರಾಮದ ಜನರ ಬಯಲು ಶೌಚ ಮಾತ್ರ ನಿಂತಿಲ್ಲ ಎಂದು ಗ್ರಾಮದ ಯುವಕರು ಆರೋಪಿಸಿದ್ದಾರೆ.

ಮೂಲಸೌಕರ್ಯ ವಂಚಿತ ಜನರು: ತಿಮ್ಮಸಂದ್ರ ಗ್ರಾಮದಲ್ಲಿ 40ಕ್ಕೂ ಹೆಚ್ಚು ಮನೆಗಳಿಗೆ ಉತ್ತಮ ಕುಡಿಯುವ ನೀರಿನ ವ್ಯವಸ್ಥೆ, ಚರಂಡಿ, ಬೀದಿ ದೀಪಗಳು ಸೇರಿ ದಂತೆ ಮೂಲ ಸೌಕರ್ಯ ನೀಡಲು ಗ್ರಾಪಂ ಅಧಿಕಾರಿಗಳು ಮುಂದಾಗಿಲ್ಲ.  ಅನೇಕ ಬಾರಿ ಮನವಿ ಪತ್ರ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ.

ಕೊಳಕು ನೀರು ಸರಬರಾಜು: ಗ್ರಾಮದ ಕೊಳವೆ ಬಾವಿಯಿಂದ ವಾಟರ್‌ ಟ್ಯಾಂಕ್‌ಗೆ ನೀರು ಸರಬರಾಜು ಮಾಡಲು ಹಾಕಿರುವ ಪೈಪುಗಳು ಹೊಡೆದುಹೋಗಿ ಕೊಳಕು ನೀರು ಟ್ಯಾಂಕ್‌ಗೆ ಸೇರುತ್ತಿದೆ. ಆದರೆ ಸರಿಪಡಿಸುವ ಕೆಲಸವಾಗಿಲ್ಲ.  ಕೇಳಿದರೆ ಮಾಡೋಣ ಬಿಡಿ ಎಂದು ಸುಮ್ಮನಾಗುತ್ತಾರೆ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದರು.

ಪಿಡಿಒ ಕೆಲಸ ಏನು?: ಪಂಚಾಯಿತಿ ಅಭಿವೃದ್ಧಿ ಮಾಡಬೇಕಾದ ಅಧಿಕಾರಿ, ಗ್ರಾಮಗಳಿಗೆ ಬಂದು ಜನರ ಸಮಸ್ಯೆ ಕೇಳಿ ಪರಿಹರಿಸುವ ಬದಲು ಪ್ರಭಾವಿಗಳ ಮಾತಿಗೆ ತಲೆಬಾಗುತ್ತಿದ್ದಾರೆ. ಹತ್ತಾರು ಬಾರಿ ಸಮಸ್ಯೆ ಬಗೆಹರಿಸುವಂತೆ ಮನವಿ  ಪತ್ರ ಸಲ್ಲಿಸಿದರೂ ಸಮಸ್ಯೆ ಹೆಚ್ಚಾಗಿದೆ ವಿನಾ ಬಗೆಹರಿಸಲು ಮಾತ್ರ ಬಂದಿಲ್ಲ. ಪಿಡಿಒ ಕೆಲಸ ಮರೆತು ಅಧಿಕಾರದ ಅಮಲಿನಲ್ಲಿದ್ದಾರೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದರು.

ತಿಮ್ಮಸಂದ್ರ ಗ್ರಾಮದ ಸಮಸ್ಯೆಯ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗಿದೆ. ಶೌಚಾಲಯ ಬಳಕೆ ಹಾಗೂ ನೀರಿನ ಸರಬರಾಜಿಗೆ ತಿಳಿಸಲಾಗಿದೆ. 
-ನಾಗರಾಜು, ಜಿಪಂ ಇಒ

* ಕೊಟ್ರೇಶ್‌ ಆರ್.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.