ಪೆಟ್ಟಿಗೆ ಅಂಗಡಿ ದಂಧೆಗೆ ಕಡಿವಾಣ ಹಾಕಲು ಆಗ್ರಹ


Team Udayavani, May 29, 2020, 7:09 AM IST

dhadhe

ವಿಜಯಪುರ: ಲೋಕೋಪಯೋಗಿ ಇಲಾಖೆ ಜಾಗದಲ್ಲಿ ರಾಜಾರೋಷವಾಗಿ ನಡೆಯುತ್ತಿರುವ ಪೆಟ್ಟಿಗೆ ಅಂಗಡಿ ಗಳ ದಂಧೆ, ಸರ್ಕಾರದ ನಿಯಮಗಳಿಗೆ ವಿರುದ್ಧವಾಗಿದ್ದು, ಅಧಿಕಾರಿಗಳ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು  ಒತ್ತಾಯಿಸಿದ್ದಾರೆ. ತಾಲೂಕಿನಲ್ಲಿ ಪ್ರಭಾವಿಗಳು ಹಾಗೂ ಕೆಲವು ಹಣವುಳ್ಳ ವರು ರಸ್ತೆ ಬದಿಯಲ್ಲಿ ಖಾಲಿಯಿರುವ ಜಾಗವನ್ನು ಅಕ್ರಮವಾಗಿ ಆಕ್ರಮಿಸಿಕೊಂಡು ಪೆಟ್ಟಿ ಅಂಗಡಿಗಳನ್ನು ಸಿದ್ಧಪಡಿಸಿಕೊಳ್ಳುತ್ತಾರೆ.

ಬಳಿಕ ಅವುಗಳನ್ನು  ಬೇರೆಯವರಿಗೆ ಬಾಡಿಗೆ ನೀಡುತ್ತಾರೆ. ಬಡವರು ಅವುಗಳನ್ನು ಬಾಡಿಗೆ ಪಡೆದು ಜೀವನ ನಡೆಸುತ್ತಾರೆ. ಆದರೆ ಪ್ರಭಾವಿ  ಗಳು ತಮ್ಮದೇ ಜಾಗವೆಂದು ಹೇಳಿಕೊಂಡು ತರಕಾರಿ ಅಂಗಡಿ, ಹೋಟೆಲ್, ದ್ವಿಚಕ್ರ ವಾಹನಗಳ ಸರ್ವೀಸ್‌,  ಕಾರ್‌  ಗ್ಯಾರೇಜ್, ಮರಗಳ ಬಾಡಿಗೆ ಅಂಗಡಿ, ಗುಜರಿ ಅಂಗಡಿ, ವುಡ್‌ ವರ್ಕ್‌ನಂತಹ ಅಂಗಡಿಗಳನ್ನು ತೆರೆಯುತ್ತಾರೆ.

ಹೀಗೆ ಪಟ್ಟಣದ ಚಿಕ್ಕಬಳ್ಳಾಪುರ ರಸ್ತೆ ಎರಡೂ ಬದಿಯಲ್ಲಿ ಸಾಲಾಗಿ ಇಂತಹ 50-60 ಅಂಗಡಿಗಳಿವೆ. ಆದರೆ ಈ  ಅಂಗಡಿಗಳಿಗೆ ಪರವಾನಗಿ ಬೇಕಿಲ್ಲ, ಬಾಡಿಗೆ ಕಟ್ಟಬೇಕಿಲ್ಲ. 30-40 ಸಾವಿರದ ಪೆಟ್ಟಿಗೆಯೇ ಅವರ ಬಂಡವಾಳ ಆಮೇಲೆ ದುಡಿದಿದ್ದೆಲ್ಲ ಲಾಭ. ಆದರೆ ಸರ್ಕಾರಕ್ಕೆ ಇದರಿಂದ ಲಾಭವೇನೂ ಇಲ್ಲ. ಹೀಗಾಗಿ ಸಂಬಂಧಿಸಿದ ಅಧಿಕಾರಿಗಳು  ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಲೋಕೋಪಯೋಗಿ ಇಲಾಖೆ ಜಾಗದಲ್ಲಿ ಅಂಗಡಿತೆರೆಯೋ ಹಾಗಿಲ್ಲ.

ಸರ್ಕಾರದ ಅನುಮತಿ ಹಾಗೂ  ನಿಯಮ ಪಾಲಿಸಬೇಕು. ಇಲ್ಲವೆಂದರೆ ಜಾಗ ತೆರವು ಮಾಡಬೇಕು  ಎಂದು ಸಾರ್ವಜನಿಕರು ಸಂಬಂಧಿಸಿದ ಅಧಿಕಾರಿಗಳ ಗಮನ ಸೆಳೆಯಲು ಆಗ್ರಹಿಸಿದೆ. ಪಿಡ ಬ್ಲ್ಯುಡಿ ಇಂಜಿನಿಯರ್‌ (ಎಇಇ) ಕೃಷ್ಣಪ್ಪ ಮಾತನಾಡಿ, ಈ ವಿಚಾರವಾಗಿ ಮೌಖೀಕ ದೂರು ಬಂದಿದೆ. ಸ್ಥಳೀಯ ಪುರಸಭೆ ಈ ಜಾಗದಲ್ಲಿ ಅಂಗಡಿ  ಇರಿಸಲು ಅನುಮತಿ ನೀಡಿದ್ದಾರಾ ಅಥವಾ ಅಕ್ರಮ ನಡೆಯುತ್ತಿರುವ ಬಗ್ಗೆ ಬಂದ ದೂರು ಸತ್ಯಸತ್ಯತೆ ಬಗ್ಗೆ ಪರಿಶೀಲಿಸುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.