ವಿಜ್ಞಾನದ ಮೂಲಕ ಜಗತ್ತು ಅರಿಯಲು ಮುಂದಾಗಿ


Team Udayavani, Mar 1, 2019, 7:13 AM IST

vijnana.jpg

ದೊಡ್ಡಬಳ್ಳಾಪುರ: ನಮ್ಮ ಬದುಕಿನ ಪ್ರತಿಯೊಂದು ಪ್ರಸಂಗಗಳೂ ವಿಜ್ಞಾನಕ್ಕೆ ಸಂಬಂಧಿಸಿದ್ದವೇ ಆಗಿವೆ. ಈ ದಿಸೆಯಲ್ಲಿ ವಿಜ್ಞಾನವನ್ನು ಕೇವಲ ಪಠ್ಯ ವಿಷಯವಾಗಿ ಅಧ್ಯಯನ ಮಾಡುವುದಕ್ಕಿಂತ ಮುಖ್ಯವಾಗಿ ಜಗತ್ತನ್ನು ಅರಿಯುವ ಹಾಗೂ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವ ಮೂಲಕ ಅಧ್ಯಯನ ಮಾಡಬೇಕಿದೆ ಎಂದು ಜನಪ್ರಿಯ ವಿಜ್ಞಾನ ಲೇಖಕ ಡಾ.ಎ.ಓ.ಆವಲಮೂರ್ತಿ ಹೇಳಿದರು.

ಶ್ರೀ ದೇವರಾಜ ಅರಸು ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ವಿಜ್ಞಾನ ವಿಭಾಗದ ನೇತೃತ್ವದಲ್ಲಿ ಗುರುವಾರ ನಡೆದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ರಾಷ್ಟ್ರೀಯ ವಿಜ್ಞಾನ ದಿನ: ಕಡಿಮೆ ಅವಕಾಶ ಹಾಗೂ ಸೀಮಿತ ಕಾಲಮಿತಿಯಲ್ಲಿ ಜಗತ್ತನ್ನೇ ತನ್ನತ್ತ ಸೆಳೆಯುವ ರೀತಿಯಲ್ಲಿ ವೈಜ್ಞಾನಿಕ ಚಿಂತನೆಯನ್ನು ಪ್ರಸ್ತುತಪಡಿಸಿದ ಸರ್‌ ಸಿ.ವಿ.ರಾಮನ್‌ ಅವರು ಬೆಳಕಿನ ಕುರಿತು ನಡೆಸಿದ ಮಹತ್ವದ ಸಂಶೋಧನೆಯನ್ನು ಜಗತ್ತಿಗೆ ಪರಿಚಯಿಸಿದ ದಿನವಾದ ಫೆ.28 ಅನ್ನು ಪ್ರತಿ ವರ್ಷ ರಾಷ್ಟ್ರೀಯ ವಿಜ್ಞಾನ ದಿನವಾಗಿ ಆಚರಣೆ ಮಾಡುತ್ತಿದ್ದೇವೆ ಎಂದರು.

ರಾಮನ್‌ ಎಫೆಕ್ಟ್ ಸಂಶೋಧನೆ: ಭಾರತದ ವಿಜ್ಞಾನ ಕ್ಷೇತ್ರಕ್ಕೆ ಸಿ.ವಿ.ರಾಮನ್‌ ಬಹು ಅಮೂಲ್ಯ ಕೊಡುಗೆ ನೀಡಿದ್ದಾರೆ. ಈವರೆಗೆ ನೊಬೆಲ್‌ ಪ್ರಶಸ್ತಿಗೆ ಭಾಜನವಾಗಿರುವ ಸರಳ ಸೂತ್ರದ, ಕಡಿಮೆ ವೆಚ್ಚದ ಪ್ರಯೋಗ ಎಂದೇ ರಾಮನ್‌ ಎಫೆಕ್ಟ್ ಸಂಶೋಧನೆ ಖ್ಯಾತವಾಗಿದೆ. ಈ ಸಂಶೋಧನೆಯನ್ನು ಮೊದಲ ಬಾರಿಗೆ ರಾಮನ್‌ ಅವರು ಬೆಂಗಳೂರಿನ ಸೆಂಟ್ರಲ್‌ ಕಾಲೇಜಿನಲ್ಲಿ ಪರಿಚಯಿಸಿದ್ದರು ಎಂಬುದು ವಿಶೇಷ ಎಂದು ತಿಳಿಸಿದರು. 

ತಾಳ್ಮೆ, ಬುದ್ಧಿಮತ್ತೆ ಅಗತ್ಯ: ವಿಜ್ಞಾನ ಓದುಗರಿಗೆ ಮೊದಲು ಗ್ರಹಿಸುವ ತಾಳ್ಮೆ, ಪ್ರತಿಕ್ರಿಯಿಸುವ ಚಿಂತನೆ, ಅಭಿವ್ಯಕ್ತಿಸುವ ಬುದ್ಧಿಮತ್ತೆ ಅಗತ್ಯವಾಗಿದೆ. ಇಂದು ವಿಜ್ಞಾನದ ಕುರಿತಾದ ಸರಳ ಪ್ರಶ್ನೆಗಳಿಗೂ ನಮ್ಮಲ್ಲಿ ಉತ್ತರಗಳನ್ನು ಕಂಡುಕೊಳ್ಳಲು ಕಷ್ಟಪಡುವ ಸ್ಥಿತಿಯಲ್ಲಿ ನಾವಿದ್ದೇವೆ. ವಿಜ್ಞಾನ ಬದುಕಾಗಬೇಕು. ಬದುಕಿನ ಪ್ರತಿಯೊಂದು ಕ್ರಿಯೆ-ಪ್ರತಿಕ್ರಿಯೆಗಳೂ ಪ್ರಶ್ನೆ-ಉತ್ತರಗಳ ಸಹಜ ಪ್ರಕ್ರಿಯೆಯಾಗಿದ್ದಾಗ ಮಾತ್ರ ವೈಜ್ಞಾನಿಕ ಆಲೋಚನೆಗಳಿಗೆ ಮನ್ನಣೆ ಸಿಗುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಕೆ.ಆರ್‌.ರವಿಕಿರಣ್‌ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಅಧ್ಯಯನ ಮತ್ತು ಗ್ರಹಿಕೆಯ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುವ ಅಗತ್ಯವಿದೆ. ಭಾಷೆ ಮತ್ತು ವಿಜ್ಞಾನ ಅನೇಕ ಪೂರಕ ಸಂವೇದನೆಗಳನ್ನು ಹೊಂದಿದ್ದು, ಅವುಗಳನ್ನು ಬೆಸೆಯುವ ಪ್ರಯತ್ನ ನಡೆಯಬೇಕು. ವಿಜ್ಞಾನದ ಅನೇಕ ಬೆರಗುಗಳಿಗೆ ಕಾರಣಬದ್ದ ಉತ್ತರಗಳನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಆವಲಮೂರ್ತಿ ಅವರ ಬರೆಹಗಳು ಯುವ ಸಮುದಾಯಕ್ಕೆ ಮಾರ್ಗದರ್ಶಕವಾಗಿವೆ ಎಂದು ತಿಳಿಸಿದರು.

ವಾಣಿಜ್ಯ ವಿಭಾಗದ ಮುಖ್ಯಸ್ಥೆ ಪಿ.ಚೈತ್ರಾ, ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಪಿ.ದಿನೇಶ್‌ ಕುಮಾರ್‌, ಭೌತಶಾಸ್ತ್ರ ವಿಭಾಗದ ನಿಶಾತ್‌ ಸುಲ್ತಾನಾ, ಗಣಿತ ವಿಭಾಗದ ಎಚ್‌.ಆರ್‌.ಭವ್ಯಾ, ಕೇಶವಮೂರ್ತಿ ಮತ್ತಿತರರು ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳಾದ ಸಂಧ್ಯಾ, ರುಮಾನಾ ಕೌಸರ್‌, ಹರ್ಷಿತಾ, ದಿವ್ಯಾ ಮಾತನಾಡಿದರು.

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.