‘ನಮ್ಮ ದೊಡ್ಡಬಳ್ಳಾಪುರ’ ಆ್ಯಪ್‌ ಅಭಿವೃದ್ಧಿಗೆ ಚಿಂತನೆ


Team Udayavani, Jul 27, 2019, 2:54 PM IST

Udayavani Kannada Newspaper

ದೊಡ್ಡಬಳ್ಳಾಪುರ: ತಾಲೂಕಿನ ಇಲಾಖೆಗಳ ಯೋಜನೆಗಳ ಮಾಹಿತಿ ಹಾಗೂ ಸೌಲಭ್ಯಗಳನ್ನು ಸಾರ್ವಜನಿಕರಿಗೆ ತಲುಪಿಸುವ ನಿಟ್ಟಿನಲ್ಲಿ ಬೆಂಗಳೂರು ಒನ್‌ ರೀತಿಯಲ್ಲಿ ನಮ್ಮ ದೊಡ್ಡಬಳ್ಳಾಪುರ ಮೊಬೈಲ್ ಆ್ಯಪ್‌ ಅಭಿವೃದ್ಧಿಗೆ ಚಿಂತನೆ ನಡೆಸಲಾಗಿದೆ. ಎಲ್ಲಾ ಇಲಾಖೆ ಮುಖ್ಯ ಅಧಿಕಾರಿಗಳು ಸಹಕರಿ ಸಬೇಕು ಎಂದು ತಾಲೂಕು ಪಂಚಾಯಿತಿ ಅಧ್ಯಕ್ಷ ಡಿ.ಸಿ.ಶಶಿಧರ್‌ ಹೇಳಿದರು.

ಶುಕ್ರವಾರ ತಾಪಂ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು.

ಆ್ಯಪ್‌ನಲ್ಲೇ ಎಲ್ಲ ಮಾಹಿತಿ: ‘ನಮ್ಮ ದೊಡ್ಡ ಬಳ್ಳಾಪುರ’ ಮೊಬೈಲ್ ಆ್ಯಪ್‌ ಅಭಿವೃದ್ಧಿಗೊಳಿಸಿ, ಇಲಾಖೆಗಳ ಮಾಹಿತಿಯನ್ನು ಸಮರ್ಪಕವಾಗಿ ದಾಖಲಿಸಿದರೆ ಯೋಜನೆ ತಿಳಿಯಲು ಇಲಾಖೆ ಕಚೇರಿಗಳಿಗೆ ಸಾರ್ವಜನಿಕರು ಅಲೆಯು ವುದು ತಪ್ಪಲಿದೆ. ಈ ನಿಟ್ಟಿನಲ್ಲಿ ಶಾಸಕರ ಸಹಕಾರದೊಂದಿಗೆ ತಾಪಂ ಬೇಕಾದ ಅನುದಾನ ದೊರಕಿಸಲು ಸಿದ್ಧ ವಿದೆ. ತಾಲೂಕಿನಲ್ಲಿ ಸ್ಮಾರ್ಟ್‌ಫೋನ್‌ ಬಳಕೆದಾರರು ಹೆಚ್ಚಿರುವುದರಿಂದ ಯೋಜನೆ ಯಶಸ್ವಿಯಾಗಲಿದೆ. ರಾಜ್ಯದಲ್ಲಿಯೇ ಪ್ರಥಮ ತಾಲೂಕು ಎಂಬ ಹಿರಿಮೆ ದೊರಕಲಿದೆ ಎಂದು ಹೇಳಿದರು.

ನಕಲಿ ವೈದ್ಯರ ಹಾವಳಿ ತಡೆಗೆ ಸಂಪೂರ್ಣ ಸ್ವಾತಂತ್ರ್ಯ: ನಕಲಿ ವೈದ್ಯರ ಹಾವಳಿ ತಡೆಗೆ ಆರೋ ಗ್ಯ ಇಲಾಖೆಗೆ ಮುಕ್ತ ಸ್ವಾತಂತ್ರ್ಯ ನೀಡು ತ್ತೇವೆ. ತಾಲೂಕಿನಲ್ಲಿ ಬೇನಾಮಿ ಹೆಸರಲ್ಲಿ ಚಿಕಿತ್ಸೆ, ನಕಲಿ ವೈದ್ಯರು, ಪಾರಂಪರಿಕ ಚಿಕಿತ್ಸೆ ನಕಲಿ ವೈದ್ಯರಾ ದರೂ ಅವರಿಂದ ತಾಲೂಕನ್ನು ಸಂಪೂರ್ಣ ಮುಕ್ತವಾಗಿಸಬೇಕೆಂದರು

ಆ್ಯಪ್‌ ಅಭಿವೃದ್ಧಿಗೆ ಅಧಿಕಾರಿಗಳು ಒಮ್ಮತದ ಬೆಂಬಲ ನೀಡಿದ್ದಾರೆ. ಹೀಗಾಗಿ ಆ್ಯಪ್‌ ಅನುಷ್ಠಾನದ ಹೊಣೆಯನ್ನು ಟಿಎಚ್ಒ ಪರಮೇಶ್ವರ ಅವರಿಗೆ ಹೊಣೆ ಹೊರಿಸಲಾಯಿತು.

ತಾಪಂ ಇಒ ದ್ಯಾಮಪ್ಪ ಮಾತನಾಡಿ, ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿ ವೇತನ ಸಮರ್ಪಕ ಅನುಷ್ಠಾನ, ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಶೇ. 100ರಷ್ಟು ಫಲಿತಾಂಶಕ್ಕೆ ಹೆಚ್ಚಿನ ಒತ್ತು ನೀಡುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಬೈಯಪ್ಪರೆಡ್ಡಿ ಮಾತನಾಡಿ, ಕರ್ನಾಟಕ ಪಬ್ಲಿಕ್‌ ಶಾಲೆಗೆ ಹೆಚ್ಚಿನ ಮನ್ನಣೆ ದೊರಕಿದ್ದು, ಹೋಬಳಿಗೊಂದು ಶಾಲೆ ಆರಂಭಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಮಾತೃ ವಂದನೆ ಯೋಜನೆ ಸಮರ್ಪಕ ಅನುಷ್ಠಾನವಿಲ್ಲ: ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆ ಸಿಡಿಪಿಒ ಜಯಲಕ್ಷ್ಮಿ ಮಾತನಾಡಿ, ತಾಲೂಕಿನಲ್ಲಿ ಮಾತೃ ವಂದನೆ ಯೋಜನೆ ಅನುಷ್ಠಾನ ಸಮರ್ಪಕವಾಗಿ ಆಗುತ್ತಿಲ್ಲ. ಬಿಪಿಎಲ್ ಕಾರ್ಡ್‌ನಲ್ಲಿ ಹೊಸದಾಗಿ ಮದುವೆ ಯಾದ ಮಹಿಳೆಯರ ಹೆಸರು ಬಿಪಿಎಲ್ ಕಾರ್ಡ್‌ನಲ್ಲಿ ಇರದ ಕಾರಣಅನುಷ್ಠಾನ ಸಾಧ್ಯವಾ ಗುತ್ತಿಲ್ಲ. ನಗರ ವ್ಯಾಪ್ತಿಯಲ್ಲಿ ಮಾತೃ ಪೂರ್ಣ ಯೋಜನೆ ಫಲಾನುಭವಿಗಳು ಸ್ಪಂದಿಸದ ಕಾರಣ ತಾಲೂಕಿನಲ್ಲಿ ಶೇ.70 ಮಾತ್ರ ಯಶಸ್ವಿಯಾಗಿದೆ ಎಂದರು.

ಇಒ ದ್ಯಾಮಪ್ಪ ಮಾತನಾಡಿ, ಅಂಗನವಾಡಿಗಳು ಸರ್ಕಾರಿ ಶಾಲೆಗಳ ಕಟ್ಟಡಗಳನ್ನು ಬಳಸಿಕೊಳ್ಳಬೇಕು ಎಂದು ಸಿಡಿಪಿಒಗೆ ಸೂಚನೆ ನೀಡಿದರು.

ಹಾವು, ನಾಯಿ ಕಡಿತಕ್ಕೆ ಔಷಧ: ಟಿಎಚ್ಒ ಪರಮೇಶ್‌ ಮಾತನಾಡಿ, ತಾಲೂಕಿನ ಆಸ್ಪತ್ರೆಗಳಲ್ಲಿ ಹಾವು ಕಡಿತ ಚುಚ್ಚು ಮದ್ದು ಮತ್ತು ನಾಯಿ ಚುಚ್ಚುಮದ್ದು ಶೇಖರಣೆ ಮಾಡಲಾಗಿದೆ. ದೊಡ್ಡಬಳ್ಳಾಪುರದಲ್ಲಿ ರಕ್ತನಿಧಿ ಸ್ಥಾಪನೆಗೆ ಅವಕಾಶ ದೊರಕಿದ್ದು ಕಟ್ಟಡ ನೀಡಲು ಮನವಿ ಮಾಡಿದರು.

ತೋಟಗಾರಿಕೆ ಇಲಾಖೆ ಅಂಜನಮೂರ್ತಿ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಸ್‌.ಪಿ. ನಾರಾಯಣಸ್ವಾಮಿ ಮಾತನಾಡಿದರು. ಪಶು ಸಂಗೋಪನೆೆ, ಅರಣ್ಯ, ಮೀನುಗಾರಿಕೆ, ತೋಟ ಗಾರಿಕೆ ಸೇರಿ ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ಇಲಾಖೆ ಪ್ರಗತಿಯ ವರದಿ, ಯೋಜನೆಗಳ ವಿವರ ತಿಳಿಸಿದರು. ತಾಪಂ ಉಪಾಧ್ಯಕ್ಷೆ ಮೀನಾಕ್ಷಿ ಕೆಂಪಣ್ಣ, ಇಒ ದ್ಯಾಮಪ್ಪ, ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.