ಕೋವಿಡ್ ನಿಯಂತ್ರಣಕ್ಕಾಗಿ ಬಿಗಿ ಲಾಕ್ಡೌನ್
Team Udayavani, Jun 15, 2021, 5:11 PM IST
ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕುಆಡಳಿತ ಹಾಗೂ ಪೊಲೀಸ್ ಇಲಾಖೆ ಜೂ.21ರವರೆಗೆಕಠಿಣ ಲಾಕ್ಡೌನ್ ಜಾರಿ ಮಾಡಲು ಕ್ರಮಕೈಗೊಳ್ಳಲಾಗುತ್ತಿದ್ದು, ಇದರೊಂದಿಗೆ ಕೊರೊನಾ ಪರೀಕ್ಷೆಗಳನ್ನು ಹೆಚ್ಚಳ ಮಾಡಲಾಗುತ್ತಿದೆ ಎಂದು ಉಪವಿಭಾಗಾಧಿಕಾರಿ ಅರುಳ್ ಕುಮಾರ್ ತಿಳಿಸಿದರು.
ನಗರದ ವಿವಿಧೆಡೆಗಳಲ್ಲಿ ಪೊಲೀಸ್ ಚೆಕ್ ಪೋಸ್ಟ್ಗಳಲ್ಲಿ ನಡೆಯುತ್ತಿದ್ದ ವಾಹನ ತಪಾಸಣೆ ಸ್ಥಳಗಳಿಗೆಭೇಟಿ ನೀಡಿ ಮಾತನಾಡಿ, ರಾಜ್ಯದಲ್ಲಿ ದೊಡ್ಡಬಳ್ಳಾಪುರತಾಲೂಕು ಪಾಸಿಟಿವ್ ಪಟ್ಟಿಯಲ್ಲಿ ಕೆಂಪು ವಲಯಕ್ಕೆಸೇರ್ಪಡೆಯಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳಆದೇಶದ ಮೇರೆಗೆ ತಾಲೂಕಿನ ವಿವಿಧೆಡೆಗಳಲ್ಲಿ ಚೆಕ್ಪೋಸ್ಟ್ಗಳನ್ನು ನಿರ್ಮಾಣ ಮಾಡಿ, ಅನಗತ್ಯವಾಗಿಸಂಚಾರ ಮಾಡುವ ವಾಹನಗಳನ್ನು ಜಪ್ತಿ ಮಾಡಲು ಸೂಚಿಸಲಾಗಿದೆ.
ಗ್ರಾಮ ಪಂಚಾಯಿತಿ ವಾರು ಹಾಗೂನಗರಸಭೆ ವ್ಯಾಪ್ತಿಗಳಲ್ಲಿ ಕೊರೊನಾ ಪರೀಕ್ಷೆಗಳನ್ನುನಡೆಸಲಾಗುತ್ತಿದೆ. ಇದರೊಂದಿಗೆ ಲಸಿಕಾ ಕೇಂದ್ರ,ಎಪಿಎಂಸಿ, ತಾಲೂಕು ಕಚೇರಿಗಳಲ್ಲಿಯೂ ಕೊರೊನಾಪರೀಕ್ಷೆ ನಡೆಸಲಾಗುತ್ತಿದೆ. ಎಪಿಎಂಸಿಯಲ್ಲಿ ಬೆಳಗ್ಗೆ10ರವರೆಗೆ ನಡೆಸಲಾಗುತ್ತಿದ್ದ ಮಾರುಕಟ್ಟೆಯನ್ನು ಬೆಳಗ್ಗೆ8 ಗಂಟೆಗಳ ವರೆಗೆ ಸೀಮಿತಗೊಳಿಸಲಾಗಿದ್ದು, ಉಳಿದಂತೆ6ರಿಂದ10ರವರೆಗೆ ಮಾತ್ರ ಅಗತ್ಯ ವಸ್ತುಗಳನ್ನು ಕೊಳ್ಳಲುಸಮಯ ನಿಗದಿಪಡಿಸಲಾಗಿದೆ ಎಂದರು.
ಅಗತ್ಯ ವಸ್ತು ಖರೀದಿಗೆ ಮಾತ್ರ ಅವಕಾಶ:ಡಿವೈಎಸ್ಪಿ ಟಿ.ರಂಗಪ್ಪ ಮಾತನಾಡಿ, ಬೆಂಗಳೂರುನಗರ ಜಿಲ್ಲೆಯಲ್ಲಿ ಮಾತ್ರ ಲಾಕ್ಡೌನ್ ತೆರವಾಗಿದ್ದು,2 ಗಂಟೆವರೆಗೆ ಮಾತ್ರ ಅಗತ್ಯ ವಸ್ತುಗಳನ್ನು ಕೊಳ್ಳಲುಅವಕಾಶವಿದೆ. ಆದರೆ, ಬೆಂಗಳೂರು ಗ್ರಾಮಾಂತರಜಿಲ್ಲೆಯಲ್ಲಿ ಲಾಕ್ಡೌನ್ ಮುಂದುವರಿದಿದ್ದು, 6ರಿಂದ 10 ಗಂಟೆವರೆಗೆ ಮಾತ್ರ ಅಗತ್ಯ ವಸ್ತುಗಳನ್ನುಖರೀದಿಸಲು ಅವಕಾಶವಿದೆ. ಇದರಲ್ಲಿ ಯಾವುದೇಗೊಂದಲ ಬೇಡ. ಈ ಸಮಯದಲ್ಲಿ ಕೊರೊನಾ ಇಲ್ಲಎಂದು ಭಾವಿಸಿ, ಸಾರ್ವಜನಿಕರು ಹೇಗೆಂದರೆ ಹಾಗೆ ವರ್ತಿಸುವಂತಿಲ್ಲ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರಕಾಪಾಡಿಕೊಳ್ಳುವುದು ಅಗತ್ಯ.
ದೊಡ್ಡಬಳ್ಳಾಪುರ ಸುತ್ತಬ್ಯಾರಿಕೇಡ್ ಹಾಕಿ ಪೊಲೀಸ್ ಕಾವಲು ಹಾಕಲಾಗಿದೆ.ಅನಗತ್ಯವಾಗಿ ಓಡಾಡುವ ವಾಹನಗಳ ಮೇಲೆವಿಪತ್ತು ನಿರ್ವಹಣೆ ಕಾಯ್ದೆಯನ್ವಯ ಪ್ರಕರಣದಾಖಲಿಸಲಾಗುವುದು. ಭಾನುವಾರ 40ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದರು.
ಗ್ರಾಪಂ ವ್ಯಾಪ್ತಿಯಲ್ಲಿ ಜಾಗೃತಿ: ತಾಲೂಕಿನಪಾಸಿಟಿವಿಟಿ ದರ ಇಳಿಸುವ ನಿಟ್ಟಿನಲ್ಲಿ ಗ್ರಾಪಂ ವ್ಯಾಪ್ತಿಯಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ.ಗ್ರಾಮದ ಮುಖಂಡರು ಇದಕ್ಕೆ ಸಹಕರಿಸಬೇಕಿದೆ.ತಾಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆಯೊಂದಿಗೆ ಸಾರ್ವಜನಿಕರು ಜವಾಬ್ದಾರಿಯಿಂದವರ್ತಿಸಿ ಸಹಕರಿಸಬೇಕಿದೆ ಎಂದು ಹೇಳಿದರು.ಮಾಂಸ ಮಾರಾಟ ಬಂದ್: ತಾಲೂಕಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಿರುವ ಹಿನ್ನೆಲೆಯಲ್ಲಿ ಜೂ.21ರವರೆಗೆದೊಡ್ಡಬಳ್ಳಾಪುರ ತಾಲೂಕಿನಲ್ಲಿ ಎಲ್ಲಾ ರೀತಿಯ ಮಾಂಸ ಮಾರಾಟದ ಅಂಗಡಿಗಳನ್ನು ಬಂದ್ ಮಾಡುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ ಎಂದು ತಿಳಿಸಿದರು.
ಉಪನೋಂದಣಿ ಕಚೇರಿ ಮುಂದೆ ಜನ: ರಾಜ್ಯಸರ್ಕಾರ ಉಪನೋಂದಣಾಧಿಕಾರಿಗಳ ಕಚೇರಿಗಳನ್ನುತೆರೆಯಲು ಅವಕಾಶ ಮಾಡಿಕೊಟ್ಟಿರುವುದರಿಂದಸೋಮವಾರ ವಿವಿಧ ನೋಂದಣಿ ಕಾರ್ಯಗಳಿಗಾಗಿಉಪನೋಂದಣಿ ಅಧಿಕಾರಿಗಳ ಕಚೇರಿ ಮುಂಭಾಗಜನರು ಸಾಲುಗಟ್ಟಿ ನಿಂತಿದ್ದರು. ಈ ನಡುವೆ ಸರ್ವರ್ಸಮಸ್ಯೆಯಿಂದ ಆಗಬೇಕಾದ ಕಚೇರಿ ಕೆಲಸಗಳುಕೆಲಕಾಲ ಸ್ಥಗಿತಗೊಂಡಿದ್ದರಿಂದ ಹೆಚ್ಚಿನ ಜನಜಂಗುಳಿಉಂಟಾಗಿತ್ತು. ತಾಲೂಕು ಕಚೇರಿ ಮುಂಭಾಗದಲ್ಲಿಕೊರೊನಾ ಲಾಕ್ಡೌನ್ಗೂ ಮುಂಚೆ ಇದ್ದಂತೆವಾಹನಗಳ ಸಾಲು ಹೆಚ್ಚಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್ ಸಮಸ್ಯೆ
Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ
Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್ ಸ್ಪರ್ಧೆ
Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ
Road Dispute: ರಸ್ತೆ ವಿವಾದ; ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ