ತಂಬಾಕು ಮಾರಾಟ ಅಂಗಡಿಗಳ ಮೇಲೆ ದಾಳಿ
Team Udayavani, Dec 12, 2019, 4:01 PM IST
ದೇವನಹಳ್ಳಿ: ತಾಲೂಕಿನ ಕಾರಹಳ್ಳಿ ಗ್ರಾಮದ ಸುತ್ತಮುತ್ತಲೂ ಜಿಲ್ಲಾ ತಂಬಾಕು ನಿಯಂತ್ರಣ ಸಲಹೆಗಾರ್ತಿ ಡಾ.ವಿದ್ಯಾರಾಣಿ ನೇತೃತ್ವದಲ್ಲಿ ದಾಳಿ ನಡೆಸಿ, 17 ಪ್ರಕರಣ ದಲ್ಲಿ 3200 ರೂ. ದಂಡ ವಿಧಿಸಲಾಯಿತು.
ತಂಬಾಕು ಉತ್ಪನ್ನಗಳನ್ನು ಕಾನೂನು ಬಾಹಿರವಾಗಿ ಮಾರಾಟ ಮಾಡುತ್ತಿದ್ದ ಹಾಗೂ ತಂಬಾಕು ಆರೋಗ್ಯಕ್ಕೆ ಹಾನಿಕಾರಕ ಚಿಹ್ನೆ ನಾಮ ಫಲಕದಲ್ಲಿ ಹಾಕುವಂತೆ ಅಂಗಡಿ ಮಾರಾಟಗಾರರಿಗೆ ಅರಿವು ಮೂಡಿಸಲಾಯಿತು.ಈ ವೇಳೆ ಮಾತನಾಡಿದ ವಿದ್ಯಾರಾಣಿ ಕಾರಹಳ್ಳಿ ಸುತ್ತಮುತ್ತಲು ಅಂಗಡಿ, ಬೇಕರಿ, ಇನ್ನಿತರೆ ಪ್ರದೇಶಗಳಲ್ಲಿ 17 ಪ್ರಕರಣದಲ್ಲಿ 3200 ರೂ. ದಂಡ ವಿಧಿಸಲಾಗಿದೆ ಎಂದು ತಿಳಿಸಿದರು.
ಅಂಗಡಿಯ ಮುಂದೆ ದೂಮಪಾನ ನಿಷೇಧ ಪ್ರದೇಶ ಎಂದು ನಾಮಫಲಕವನ್ನು ಅಳವಡಿಸುವಂತೆ ಈ ಹಿಂದೆ ಸೂಚಿಸಲಾಗಿತ್ತು. ಧೂಮಪಾನ ನಿಷೇಧಿತ ಪ್ರದೇಶವೆಂದು ಅಳವಡಿಸದ ಅಂಗಡಿಗಳಿಗೂ ದಂಡವನ್ನು ವಿಧಿಸಲಾಗಿದೆ ಎಂದು ಹೇಳಿದರು.
ತಂಬಾಕು ನಿಯಂತ್ರಣ ಕಾಯ್ದೆ ರಾಜ್ಯ ಹೈಕೋರ್ಟ್ ಆದೇಶದಂತೆ ತಂಬಾಕು ಉತ್ಪನ್ನ ಮಾರಾಟ ನಿಯಂತ್ರಣಕ್ಕೆ ಉನ್ನತಮಟ್ಟದ ಜಾಗೃತ ದಳ ನೇಮಕಮಾಡಿ ಮಾರಾಟಕ್ಕೆ ಕಡಿವಾಣ ಹಾಕಲು ಈಗಾಗಲೇ ಸಮಿತಿ ರಚಿಸಿದೆ. ಧೂಮಪಾನದಿಂದ ಹಲವಾರು ತೊಂದರೆಗಳಿಗೆ ಜನ ಒಳಗಾಗುತ್ತಿದ್ದಾರೆ. ಧೂಮಪಾನ ಮಾಡುವವರು ಶೇ.10 ಹೊಗೆ ಸೇದುತ್ತಾರೆ ಉಳಿದ 90ರಷ್ಟು ಹೊಗೆಯನ್ನು
ಹೊರಹಾಕುವುದರಿಂದ ಇತರರು ಆ ಹೊಗೆಗೆ ತುತ್ತಾಗಿ ರೋಗ ರುಜಿನುಗಳಿಗೆ ತುತ್ತಾಗುತ್ತಾರೆ. ಧೂಮಪಾನದಿಂದ ಕ್ಯಾನ್ಸರ್ನಂತಹ ರೋಗಗಳು ಬರುವಂತಾಗಿದೆ ಎಂದು ವಿವರಿಸಿದರು. ಸಾರ್ವಜನಿಕ ಆರೋಗ್ಯ ಹಿತದೃಷ್ಟಿಯಿಂದ ಆಸ್ಪತ್ರೆ, ಸರ್ಕಾರಿ ಕಚೇರಿ, ಸಂಘ ಸಂಸ್ಥೆಗಳನ್ನು ಧೂಮಪಾನ ನಿಷೇಧ ಪ್ರದೇಶಗಳು ಎಂದು ಘೋಷಿಸಿ ದೂಮಪಾನ ನಿಷೇಧ ನಾಮ ಫಲಕಗಳನ್ನು ಖಡ್ಡಾಯವಾಗಿ ಬಿತ್ತರಿಸಬೇಕು.
ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ 100 ಗಜ ವರೆಗೆ ತಂಬಾಕು ಉತ್ಪನ್ನಗಳ ಮಾರಾಟ ಮತ್ತು ಬಳಕೆ ಸಂಪೂರ್ಣ ವಾಗಿ ನಿಷೇಧಿಸಿ ಬಗ್ಗೆ ಕುರಿತು ನಾಮ ಫಲಕಗಳನ್ನು ಪ್ರದರ್ಶಿಸಬೇಕು. ದೇಶದಲ್ಲಿ ಪ್ರತಿ ವರ್ಷ 10 ಲಕ್ಷಕ್ಕಿಂತಲೂ ಹೆಚ್ಚಿನ ಜನರು ತಂಬಾಕು ಸೆವನೆಯಿಂದ ಸಾವನ್ನಪ್ಪುತ್ತಿದ್ದಾರೆ. ಪ್ರತಿ ದಿನ 2500 ಜನರು ತಂಬಾಕಿನಿಂದ ತೊಂದರೆಗೆ ಈಡಾಗುತ್ತಿದ್ದಾರೆ. ಇದರ ಸೇವೆಯಿಂದ ಕ್ಯಾನ್ಸ್ರ್ಹಾಗೂ ಹಲವಾರು ತೊಂದರೆಗಳಿಗೆ ತುತ್ತಾಗುತ್ತಿದ್ದಾರೆ ಎಂದರು.
ಈ ವೇಳೆಯಲ್ಲಿ ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹಿರಿಯ ಸಹಾಯಕ ವೆಂಕಟೇಶ್ ಸೇರಿದಂತೆ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್ ಸಮಸ್ಯೆ
Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ
Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್ ಸ್ಪರ್ಧೆ
Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ
Road Dispute: ರಸ್ತೆ ವಿವಾದ; ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ