ತಂಬಾಕು ಸೇವನೆ ಅಪಾಯಕಾರಿ

ವಿಶ್ವ ತಂಬಾಕು ರಹಿತ ದಿನಾಚರಣೆಯಲ್ಲಿ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಚಂದ್ರಶೇಖರ್‌ ಅಭಿಮತ

Team Udayavani, Jun 1, 2019, 9:19 AM IST

BR-TDY-1..

ದೊಡ್ಡಬಳ್ಳಾಪುರ: ಇಂದಿನ ಯುವ ಪೀಳಿಗೆ ಧೂಮಪಾನ ಮೊದಲಾದ ತಂಬಾಕು ಚಟಗಳಿಗೆ ಬಲಿಯಾಗುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ತಂಬಾಕಿನ ದುಷ್ಪರಿಣಾಮಗಳ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವಲ್ಲಿ ಆರೋಗ್ಯ ಕಾರ್ಯಕರ್ತರ ಪಾತ್ರ ಮಹತ್ವದ್ದಾಗಿದೆ ಎಂದು ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾ ಧೀಶ ಸಿ.ಚಂದ್ರಶೇಖರ್‌ ತಿಳಿಸಿದರು.

ನಗರದ ಆರೋಗ್ಯಾಧಿಕಾರಿಗಳ ಕಾರ್ಯಾಲಯದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ವಕೀಲರ ಸಂಘದ ವತಿಯಿಂದ ನಡೆದ ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜನಜಾಗೃತಿ ಅಗತ್ಯ: ಜಗತ್ತಿನಲ್ಲಿ ಪ್ರತಿ ವರ್ಷ 70ಲಕ್ಷ ಮಂದಿ ತಂಬಾಕು ಸೇವನೆಯಿಂದ ಮೃತಪಡುತ್ತಿದ್ದಾರೆ. ಇದರಲ್ಲಿ ಐದನೇ ಒಂದು ಭಾಗ ಧೂಮಪಾನಿಗಳ ಸಮೀಪವಿದ್ದು, ಪರೋಕ್ಷ ವಾಗಿ ತೊಂದರೆಗೊಳಗಾಗುತ್ತಿದ್ದಾರೆ. ವರ್ಷದಿಂದ ವರ್ಷಕ್ಕೆ ಮಾರಕ ರೋಗಗಳಿಗೆ ಬಲಿಯಾಗುವ ಜನರ ಸಂಖ್ಯೆ ಇಳಿಮುಖವಾಗಬೇಕು ಎಂದು ಸರ್ಕಾರಗಳು ಸಾಕಷ್ಟು ಕಾಯಿದೆಗಳನ್ನು ರಚಿಸುತ್ತಿವೆ. ಆದರೆ, ಈ ಬಗ್ಗೆ ಜನಜಾಗೃತಿ ಇಲ್ಲದೇ ಇರುವುದು ಹೆಚ್ಚಿನ ದುಷ್ಪರಿಣಾಮಗಳಿಗೆ ಕಾರಣವಾಗುತ್ತಿವೆ ಎಂದರು.

ಶಾಶ್ವತ ನಿಧಿ ಸ್ಥಾಪಿಸಿ: ಸದ್ಯಕ್ಕೆ ತಂಬಾಕು ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟ ಮಾಡುವುದು ಅಸಾಧ್ಯವಾಗಿದೆ. ಆದರೆ, ಸರ್ಕಾರ ತಂಬಾಕು ಉತ್ಪನ್ನಗಳಿಗೆ ಹೆಚ್ಚಿನ ತೆರಿಗೆ ಹಾಕುವುದು ಹಾಗೂ ತಂಬಾಕು ಉತ್ಪನ್ನಗಳಿಂದ ಸರ್ಕಾರಕ್ಕೆ ಬರುವ ಆದಾಯದಿಂದ ಒಂದು ಶಾಶ್ವತ ನಿಧಿ ಸ್ಥಾಪಿಸಿ, ತಂಬಾಕು ಸೇವನೆಯಿಂದ ಅಥವಾ ಪರೋಕ್ಷವಾಗಿ ತೊಂದರೆಗೊಳಗಾದವರ ನೆರವಿಗೆ ಬಳಸಬಹುದಾಗಿದೆ ಎಂದು ಅಭಿಪ್ರಾಯಪಟ್ಟರು.

ತಂಬಾಕು ಬಳಕೆ ದುರದೃಷ್ಟಕರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ವಿಜಯಲಕ್ಷ್ಮೀ ಮಾತನಾಡಿ, ತಂಬಾಕು ಸೇವನೆ ಎಲ್ಲಾ ರೀತಿಯ ಕ್ಯಾನ್ಸರ್‌ಗಳಿಗೂ ಮೂಲವಾಗಿದೆ. ಇದಲ್ಲದೇ, ಹೃದಯ ಸಂಬಂಧಿ ಕಾಯಿಲೆಗಳಿಗೆ ಕಾರಣವಾಗಿದೆ. ತಂಬಾಕು ನಿಯಂತ್ರಣ ಕಾನೂನು ಕೋಟ್ಪಾ-2003ರ ಪ್ರಕಾರ ಸೆಕ್ಷನ್‌ 4, ಸೆಕ್ಷನ್‌ 5, ಸೆಕ್ಷನ್‌ 6 ಹೀಗೆ ಸಾಕಷ್ಟು ಕಾಯ್ದೆಗಳು ಜಾರಿಗೊಂಡಿವೆ. ದೇಶದಲ್ಲಿ ಕೋಟ್ಪಾ ಕಾಯ್ದೆ 2003 ಸೆಕ್ಷನ್‌-5 ರ ಪ್ರಕಾರ ತಂಬಾಕನ್ನು ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿಸಲಾಗಿದೆ. ಆದರೂ, ಸಾರ್ವಜನಿಕ ಸ್ಥಳಗಳಲ್ಲಿ ಸಾಕಷ್ಟು ತಂಬಾಕು ಬಳಕೆಯ ಪ್ರಕರಣಗಳು ಎದುರಾಗುತ್ತಿರುವುದು ಸಾಮಾನ್ಯವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

401 ಪ್ರಕರಣ ದಾಖಲು: ತಂಬಾಕಿನಿಂದಾಗುವ ದುಷ್ಪರಿಣಾಮಗಳು ಹಾಗೂ ಅಕ್ರಮವಾಗಿ ಮಾರಾಟ ಮಾಡುವ ಮತ್ತು ಸೇವನೆ ಮಾಡುವವರಿಗೆ ಜಿಲ್ಲಾ ತಂಬಾಕು ನಿಯಂತ್ರಣ ಘಟಕದಿಂದ ದಂಡ ವಿಧಿಸಲಾಗುತ್ತಿದೆ. ಕಳೆದ ಸಾಲಿನಲ್ಲಿ 401 ಪ್ರಕರಣ ದಾಖಲಿಸಲಾಗಿದ್ದು, 58,700 ರೂ. ದಂಡ ವಿಧಿಸಲಾಗಿದೆ. ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ ತಂಬಾಕು ವ್ಯಸನ ಮುಕ್ತ ಕೇಂದ್ರವನ್ನು ತೆರೆಯಲಾಗಿದ್ದು, 56 ತಂಬಾಕು ವ್ಯಸನಿಗಳನ್ನು ವ್ಯಸನದಿಂದ ಬಿಡಿಸಲಾಗಿದೆ ಎಂದು ತಿಳಿಸಿದರು.

ಕಾನೂನು ಅರಿವು ಅಗತ್ಯ: ವಕೀಲೆ ಜೆ.ಮಂಜುಳಾ ಮಾತನಾಡಿ, ವಿಶ್ವ ಆರೋಗ್ಯ ಸಂಸ್ಥೆ ಪ್ರತಿ ವರ್ಷದ ಮೇ 31ರಂದು ವಿಶ್ವ ತಂಬಾಕು ರಹಿತ ದಿನವೆಂದು ಘೋಷಿಸಿದೆ. ತಂಬಾಕು ಮುಕ್ತ ದೇಶ ನಿರ್ಮಿಸುವ ಪಣತೊಟ್ಟು, ತಂಬಾಕು ಸೇವನೆಯಿಂದಾಗುವ ಮಾರಣಾಂತಿಕ ಕಾಯಿಲೆಗಳಿಗೆ ಮುಕ್ತಾಯ ಹಾಡಲು ಜಾಗೃತಿ ಮೂಡಿಸುವ ಪ್ರಯತ್ನ ಇದಾಗಿದೆ. ಈ ಸಾಲಿನ ತಂಬಾಕು ದಿನಾಚರಣೆಯನ್ನು ತಂಬಾಕು ಮತ್ತು ಶ್ವಾಸಕೋಶದ ಆರೋಗ್ಯ ಧ್ಯೇಯದೊಂದಿಗೆ ಆಚರಿಸಲಾಗುತ್ತಿದೆ. ತಂಬಾಕು ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುಕೊಳ್ಳುವುದರೊಂದಿಗೆ ಕಾನೂನು ಅರಿವು ಸಹ ಅಗತ್ಯವಾಗಿದೆ ಎಂದರು.

ವಕೀಲ ಡಿ.ಎಂ.ರೇಣುಕಾ ಮೂರ್ತಿ ಕೋಟ್ಪಾ ಕಾಯ್ದೆ ಕುರಿತು ಮಾತನಾಡಿದರು. ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ಬಿ ಕುಲಕರ್ಣಿ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಅಪರ ಸಿವಿಲ್ ನ್ಯಾಯಾಧೀಶರಾದ ಮಮತಾ ಶಿವಪೂಜೆ, ತಾಲೂಕು ಆರೋಗ್ಯಾಧಿಕಾರಿ ಡಾ.ಶರ್ಮಿಳಾ ಹೆಡೆ, ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘದ ಅಧ್ಯಕ್ಷ ಅಸಾದುಲ್ಲಾಖಾನ್‌, ಗೌರವ ಅಧ್ಯಕ್ಷ ರಾ.ಬೈರೇಗೌಡ, ಹಿರಿಯ ವಕೀಲ ಎ.ಆರ್‌.ನಾಗರಾಜನ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ರಾಜೇಶ್ವರಿ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ನರಸಿಂಹಮೂರ್ತಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.