ಪಟ್ಟಣದಲ್ಲಿ ಸುರಿದ ಧಾರಾಕಾರ ಮಳೆ


Team Udayavani, Aug 19, 2019, 3:00 AM IST

pattannadalli

ನೆಲಮಂಗಲ: ಭಾನುವಾರ ಸಂಜೆ ಸುರಿದ ಧಾರಾಕಾರ ಮಳೆಗೆ ಸಾರ್ವಜನಿಕರು ಪರದಾಡುವಂತಾಯಿತು. ಜತೆಗೆ ಸುತ್ತಲಿನ ಗ್ರಾಮಗಳಿಗೆ ತೆರಳುತ್ತಿದ್ದ ಗ್ರಾಮಸ್ಥರು ನಿಂತು ನಿಂತು ಸುರಿಯುತ್ತಿದ್ದ ಮಳೆಗೆ ಸರಿಯಾದ ಸಮಯಕ್ಕೆ ಮನೆಗೆ ತೆರಳಲಾಗದೆ ಮಳೆಯನ್ನು ಶಪಿಸಿದರು. ಜತೆಗೆ ಆರಂಭದಲ್ಲಿ ಸುರಿದ ಭಾರೀ ಮಳೆಗೆ, ಪಟ್ಟಣದ ರಸ್ತೆಗಳು ನೀರಿನಿಂದಾವೃತವಾಗುವ ಆತಂಕ ಎದುರಾಯಿತು.

ಅಮಾನಿಕೆರೆ ಕೋಡಿ ಆತಂಕ: ಭಾರೀ ಪ್ರಮಾಣದಲ್ಲಿ ಸುರಿದ ಮಳೆಯಿಂದಾಗಿ ಕೆಲಕಾಲ ಅಮಾನಿಕೆರೆ ಕೋಡಿ ಹರಿಯುವ ಆತಂಕ ಎದುರಾಯಿತು. ಈ ಹಿಂದೆ ಪಟ್ಟಣದಲ್ಲಿ ಹಲವು ವರ್ಷಗಳ ಹಿಂದೆ ಮಳೆ ಆರ್ಭಟಕ್ಕೆ ಅಮಾನಿಕೆರೆ ಕೊಡಿ ಒಡೆದು ಕೆರೆ ಪಾತ್ರದಲ್ಲಿರುವ ಖಾಸಗಿ ಬಡಾವಣೆಗಳಿಗೆ ನೀರು ನುಗ್ಗಿದ್ದರಿಂದ ಪಟ್ಟಣಿಗರು ಸಂಕಷ್ಟ ಎದುರಿಸುವಂತಾಗಿತ್ತು. ರಾಜಕಾಲುವೆಗಳ ಒತ್ತುವರಿ ಹಾಗೂ ನೀರು ಸರಾಗವಾಗಿ ಹರಿದು ಹೋಗುವಂತೆ ಸ್ವಚ್ಚಗೊಳಿಸದಿರುವುದು ಸಮಸ್ಯೆಗೆ ಕಾರಣವಾಗಿತ್ತು.

ಈ ಹಿನ್ನೆಲೆಯಲ್ಲಿ ರಾಜಕಾಲುವೆ ಸ್ವಚ್ಛತೆ ಹಾಗೂ ತೆರವು ಕಾರ್ಯ ಭರದಿಂದ ಸಾಗಿದ್ದು ಅಂದಿಗೆ ಮಾತ್ರ ಸೀಮಿತವಾಯಿತು. ಮತ್ತೇ ಭಾರೀ ಪ್ರಮಾಣದ ಮಳೆ ಸುರಿದರೆ ಪಟ್ಟಣಿಗರು ಸಮಸ್ಯೆಗೆ ಸಿಲುಕುತ್ತಾರೆ. ಈ ನಿಟ್ಟಿನಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಎಚ್ಚೆತ್ತುಕೊಳ್ಳುತ್ತಾರೆಯೇ? ಎಂಬುದನ್ನು ಕಾದುನೋಡಬೇಕಿದೆ ಎಂಬುದು ಸಾರ್ವಜನಿಕರಲ್ಲಿ ಚರ್ಚೆಗೆ ಗ್ರಾಸವಾಗಿದೆ.

ನೌಕರರು ವಿದ್ಯಾರ್ಥಿಗಳಿಗೆ ಸಂಕಷ್ಟ: ಬೆಳಗ್ಗೆಯಿಂದಲೂ ಮೋಡಕವಿದ ವಾತಾವರಣ. ಆದರೆ ಸಂಜೆ ವೇಳೆಗೆ ಮಳೆ ಧಾರಾಕವಾಗಿ ಸುರಿಯಿತು. ವಿದ್ಯಾರ್ಥಿಗಳು ಸೇರಿದಂತೆ ಖಾಸಗಿ ಕಾರ್ಖಾನೆ ನೌಕರರು ಹಾಗೂ ಗಾರ್ಮೆಂಟ್ಸ್‌ ನೌಕರರು ಸೇರಿದಂತೆ ಎಲ್ಲರೂ ಮನೆಗೆ ತೆರಳುವ ಸಮಯವಾಗಿದ್ದರಿಂದ ಹರಸಾಹಸ ಪಡಬೇಕಾಯಿತು. ವಿದ್ಯಾರ್ಥಿಗಳು ಬಸ್‌ ನಿಲ್ದಾಣಕ್ಕೆ ತೆರಳಲು ಸಾಧ್ಯವಾಗದೇ ಬಸ್‌ಗಳನ್ನು ತಪ್ಪಿಸಿಕೊಂಡರು.

ಮಳೆಯಿಂದಾಗಿ ಗ್ರಾಮೀಣ ಪ್ರದೇಶಗಳು ಮತ್ತು ಪಟ್ಟಣದ ರಸ್ತೆಗಳಲ್ಲಿ ಎಲ್ಲೆಂದರಲ್ಲಿ ನೀರು ಹರಿದ ಪರಿಣಾಮ ದಾರಿಹೋಕರಿಗೆ ಯಾವಕಡೆ ವಾಹನ ಚಲಾಯಿಸಬೇಕೆಂಬುದು ತಿಳಿಯದಂತಾಗಿತ್ತು. ಹಳ್ಳಿಗಳಲ್ಲಿರುವ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಹೈನೋದ್ಯಮಿಗಳು ಸಮಯಕ್ಕೆ ಸರಿಯಾಗಿ ಹಾಲು ಸರಬರಾಜು ಮಾಡಲಾಗದೆ ಪರಿತಪಿಸುವಂತಾಯಿತು.

ಹೆದ್ದಾರಿ ಸಮಸ್ಯೆ: ತಾಲೂಕಿನಾದ್ಯಂತ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಬೆಂಗಳೂರು ತುಮಕೂರು ರಾಷ್ಟ್ರೀಯ ಹೆದ್ದಾರಿ 4 ಹಾಗೂ ಮಂಗಳೂರು ಹೆದ್ದಾರಿ 48ರಲ್ಲಿ ಸಂಚರಿಸುತ್ತಿದ್ದ ದ್ವಿಚಕ್ರ ವಾಹನ ಸವಾರರು ಮಳೆಯ ಆರ್ಭಟಕ್ಕೆ ಹೆದರಿಯ ಆಸುಪಾಸುಗಳಲ್ಲಿ ಎಲ್ಲೆಂದರಲ್ಲಿ ಬೈಕ್‌ಗಳನ್ನು ನಿಲ್ಲಿಸಿ ಬಸ್‌ ನಿಲ್ದಾಣಗಳು ಮತ್ತು ಮರಗಳಡಿಯಲ್ಲಿ ಆಶ್ರಯವನ್ನು ಪಡೆದುಕೊಂಡರೆ, ಮತ್ತೇಕೆಲವರು ಕುಣಿಗಲ್‌ ವೃತ್ತ ಮತ್ತು ಸೊಂಡೆಕೊಪ್ಪ ವೃತ್ತ ಸೇರಿದಂತೆ ಹೆದ್ದಾರಿಗಳಲ್ಲಿರುವ ಮೇಲ್ಸೇತುವೆಗಳ ಕೆಳಗೆ ನಿಂತು ಯಾವಾಗ ಮಳೆ ನಿಲ್ಲುತ್ತದೋ ಎಂಬ ಜಪಕ್ಕೆ ಮೊರೆಹೋಗಿದ್ದರು.

ಟಾಪ್ ನ್ಯೂಸ್

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.