ಕೋವಿಡ್‌ 19 ಹೆಚ್ಚಿದರೆ ವಸತಿ ಶಾಲೆಗಳಲ್ಲಿ ಚಿಕಿತ್ಸೆ


Team Udayavani, Jul 2, 2020, 7:05 AM IST

cor-hechidare

ದೊಡ್ಡಬಳ್ಳಾಪುರ: ನಗರದ ಆಸ್ಪತ್ರೆಯಲ್ಲಿ ಕೋವಿಡ್‌ 19 ಸೋಂಕಿತರ ಚಿಕಿತ್ಸೆಗೆ ಸದ್ಯ 40 ಹಾಸಿಗೆಗಳಿದ್ದು, ಸೋಂಕು ಹೆಚ್ಚಿದರೆ ನಗರದ ಹೊರವಲಯದ ವಸತಿ ಶಾಲೆಗಳಲ್ಲಿ ಚಿಕಿತ್ಸೆ ನೀಡುವ ಅನಿವಾರ್ಯ ಎದುರಾಗಲಿದೆ ಎಂದು  ಆರೋಗ್ಯಾಧಿಕಾರಿ ಡಾ.ಪರಮೇಶ್ವರ ತಿಳಿಸಿದರು. ತಾಪಂ ಸಭಾಂಗಣದಲ್ಲಿ ಡಿ.ಸಿ.ಶಶಿಧರ್‌ ಅಧ್ಯಕ್ಷತೆಯಲ್ಲಿ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿ, ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಸ್ತುತ 20  ಹಾಸಿಗೆಗಳು ಕೋವಿಡ್‌ 19 ಸೋಂಕಿತರ ಚಿಕಿತ್ಸೆಗೆ ಲಭ್ಯವಿದೆ.

ಹೆಚ್ಚುವರಿ 20 ಹಾಸಿಗೆ ಸಿದಟಛಿಗೊಳಿಸಲಾಗುತ್ತಿದೆ. ನಗರದ ಹೊರ ವಲಯದ ವಸತಿ ಶಾಲೆಗಳಲ್ಲಿ ಚಿಕಿತ್ಸೆ ನೀಡಬೇಕಾಗುವುದು.  ಈ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯವಿದೆ  ಎಂದರು. ಅಧ್ಯಕ್ಷ ಡಿ.ಸಿ.ಶಶಿಧರ್‌ ಮಾತನಾಡಿ, ಕೋವಿಡ್‌ 19 ಸೋಂಕು ತಡೆಗೆ ತಾಪಂ ಸದಸ್ಯರ ಸಂಪೂರ್ಣ ಸಹಕಾರವಿದ್ದು, ತಡೆಗೆ ಜನಜಾಗೃತಿ ಮೂಡಿಸಲಾಗುವುದು. ತಾಪಂಗೆ ಅನುಬಂಧಿತ ಅನುದಾನ 2 ಕೋಟಿ ಬಂದಿದ್ದು, ಸದಸ್ಯರ  ಸಲಹೆ ಮೇರೆಗೆ ಅಭಿವೃದ್ಧಿ ಕಾಮಗಾರಿಗೆ ಬಳಸಲಾಗುವುದು ಎಂದರು.

ನೂತನ ಅಂಗನವಾಡಿ ಕಟ್ಟಡಗಳಿಗೆ ವಿದ್ಯುತ್‌ ಮೀಟರ್‌ ಅಳವಡಿಕೆಗೆ ಮೀಸಲಾಗಿದ್ದ 5 ಲಕ್ಷ ಅನುದಾನ ಬಳಕೆಯಾಗದೆ, ಸರ್ಕಾರಕ್ಕೆ ವಾಪಸ್ಸಾಗಿದೆ.  ಅಧಿಕಾರಿಗಳನ ನಡುವಿನ ಸಮ ನ್ವಯದ ಕೊರತೆ ಅಥವಾ ಬೇಜವಾಬ್ದಾರಿ ಕಾರಣವೋ? ಎಂದು ಸದಸ್ಯ ಶಂಕರಪ್ಪ,ನಾರಾಯಣಗೌಡ, ಕಣಿವೇಪುರ ಸುನೀಲ್‌ ಕುಮಾರ್‌ ಬೇಸರಿಸಿದರು. ಅನುದಾನ ಸಿಗುವುದು ಕಷ್ಟ. ಅಂಥದ್ದರಲ್ಲಿ  ಬಂದ ಅನು  ದಾನ ವಾಪಸ್‌ ತೆರಳಿರುವುದಕ್ಕೆ ಹೊಣೆಯಾರು? ಎಂದು ನಾರಾಯಣಗೌಡ ಪ್ರಶ್ನಿಸಿದರು.

ಮಧ್ಯ ಪ್ರವೇಶಿಸಿದ ತಾಪಂ ಅಧ್ಯಕ್ಷ ಡಿ.ಸಿ.ಶಶಿಧರ್‌, ಮಾ.31ರವರೆಗೂ ಕಾಯದೆ ಅನುದಾನ ಸಮರ್ಪಕವಾಗಿ ಬಳಸಿಕೊಂಡು  ತಾಲೂಕಿನ ಅಭಿವೃದ್ಧಿಗೆ ಅಧಿಕಾರಿಗಳು ಶ್ರಮಿಸಬೇಕಿದೆ ಎಂದರು. ಬಾಲ್ಯವಿವಾಹ ತಡೆಗೆ ದೂರು ಬಂದರೆ ಕ್ರಮಕೈಗೊಳ್ಳದೇ ಸ್ಥಳೀಯ ಅಂಗನವಾಡಿ, ಆಶಾ ಕಾರ್ಯಕರ್ತೆಯರ ನೆರವು ಪಡೆದು ಬಾಲ್ಯವಿವಾಹ ತಡೆಗೆ ಒತ್ತು  ನೀಡುವಂತೆ ಸಿಡಿಪಿಒ ಅನಿತಾ ಅವರಿಗೆ ಸದಸ್ಯರು ಒತ್ತಾಯಿಸಿದರು.

ಬಿಇಒ ಬೈಯಪ್ಪರೆಡ್ಡಿ ಮಾಹಿತಿ ನೀಡಿ, ಶಾಲಾ ಆಸ್ತಿಗಳ ಬಗ್ಗೆ ತಕರಾರಿದ್ದು, ಶೇ.60ರಷ್ಟು ಸರ್ಕಾರಿ ಶಾಲೆ ನೋಂದಣಿಯಾಗಿಲ್ಲ. ಕೆಲ ದಾನಿಗಳು 30-40 ವರ್ಷಗಳ  ಹಿಂದೆ ಕೊಟ್ಟಿರುವುದು ನೋಂದಣಿಯಾಗದೆ ಉಳಿದಿದೆ. ದಾನ ನೀಡಿರುವವರು ಕಾಲವಾಗಿ ಪ್ರಸ್ತುತ ವಾರಸುದಾರರು ಶಾಲೆ ಸ್ವಾಧೀನಕ್ಕೆ ಒಪ್ಪುತ್ತಿಲ್ಲ. ತಾಲೂಕಿನಲ್ಲಿ ಅಂತಹ 80 ಪ್ರಕರಣಗಳಿವೆ. ಅದರಲ್ಲಿ 7 ಪ್ರಕರಣಗಳನ್ನು ನೋಂದಣಿಗೆ  ಒಪ್ಪಿಸಲಾಗಿದೆ ಎಂದರು. ಅದಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷ ಶಶಿಧರ್‌, ಸಮಸ್ಯೆ ಬಗೆಹರಿಸಲು 80 ಶಾಲೆಗಳ ಪಟ್ಟಿ ಪಡೆದು ಸಿಇಒ ಮೂಲಕ ಡೀಸಿಗೆ ತಲುಪಿಸಲಾಗುವುದು ಎಂದು ಭರವಸೆ ನೀಡಿದರು.

ಅರಣ್ಯ ಇಲಾಖೆಯಿಂದ ಶಾಲಾ ಕಾಲೇಜುಗಳ ವ್ಯಾಪ್ತಿಯ ಆವರಣದಲ್ಲಿ ಗಿಡ ನೆಡುವುದು, ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಬೋರ್‌ವೆಲ್‌ ಕೊರೆಸುವುದು, ಅಥವಾ ಟ್ಯಾಂಕರ್‌ನಿಂದ ನೀರು ಪೂರೈಕೆಗೆ ಕ್ರಮ ಮತ್ತಿತರ ವಿಚಾರ ಚರ್ಚಿಸಲಾಯಿತು. ಉಪಾಧ್ಯಕ್ಷೆ ಪದ್ಮಾವತಿ ಅಣ್ಣಯ್ಯಪ್ಪ,  ಇಒ ಮುರುಡಯ್ಯ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಚೆನ್ನಮ್ಮ ರಾಮಲಿಂಗಯ್ಯ, ಸಹಾಯಕ ನಿರ್ದೇಶಕಿ ಸಿ.ಗೀತಾ ಮಣಿ ಸೇರಿ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.