ನಗರಸಭೆ ಮರಗಳ ಹನನ: ಆಕ್ರೋಶ

ಜಿಲ್ಲಾಧಿಕಾರಿ, ಪೌರಾಯುಕ್ತರ ಗಮನಕ್ಕೆ ತರದೇ ಮರಗಳ ಮಾರಣಹೋಮ

Team Udayavani, Oct 20, 2020, 1:56 PM IST

br-tdy-1

ನೆಲಮಂಗಲ: ನಗರಸಭೆಯ ನೀರು ಸಂಗ್ರಹಣಾ ಕೇಂದ್ರದಲ್ಲಿರುವ ಬೃಹತ್‌ ಮರಗಳನ್ನು ರಾಜಾರೋಷವಾಗಿ ಕತ್ತರಿಸಿ ಸಾಗಿಸಿದರೂ, ಅಧಿಕಾರಿಗಳು ಹಾಗೂ ನಗರಸಭೆ ಸದಸ್ಯರು ಜಾಣ ಕುರುಡರಂತಾಗಿದ್ದಾರೆ.

ಜಿಲ್ಲಾಧಿಕಾರಿ ಹಾಗೂ ಪೌರಾಯುಕ್ತರ ಗಮನಕ್ಕೆ ಬಾರದೇ ಬೃಹತ್‌ ಗಾತ್ರದ 13ಕ್ಕೂ ಹೆಚ್ಚು ಮರಗಳನ್ನು ಕತ್ತರಿಸಿ ಸಾಗಾಟ ಮಾಡಲಾಗುತ್ತಿದೆ. ಆದರೆ ಅಧಿಕಾರಿಗಳು ಹಾಗೂ ನಗರಸಭೆ ಸದಸ್ಯರು ಸುಮ್ಮನ್ನಿಸದ್ದು,ಸಾಕಷ್ಟು ಅನುಮಾನಗಳಿಗೆಕಾರಣವಾಗಿದೆ. ಬೆಸ್ಕಾಂ ಇಲಾಖೆ ಭಾಗಿ: ಮರಗಳ ಸಮೀಪದಲ್ಲಿ ಟ್ರಾನ್ಸ್‌ಪಾರ್ಮರ್‌ ಹಾಗೂ ವಿದ್ಯುತ್‌ ಕಂಬಗಳಿದ್ದು, ಭಾನುವಾರ ಅನುಮತಿ ಪಡೆಯದೇ ಮರಗಳನ್ನು ಕತ್ತರಿಸಿದವರಿಗೆ ಬೆಸ್ಕಾಂ ಅಧಿಕಾರಿಗಳು ಆ ಭಾಗದ ಬಡಾವಣೆಗೆ ವಿದ್ಯುತ್‌ ಕಡಿತಗೊಳಿಸಿ ತಂತಿಗಳನ್ನು ಕಳಚಿ ಸಹಾಯ ಮಾಡಿದೆ. ಇದರಿಂದ ಬೆಸ್ಕಾಂ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ಶಂಕಿಸಲಾಗಿದೆ.

ಅನುಮತಿ ಇಲ್ಲ : ಮರಗಳನ್ನು ಕತ್ತರಿಸುವ ಮೊದಲು ಅರಣ್ಯ ಇಲಾಖೆಯಿಂದ ಮರಗಳಅಂದಾಜು ಮೌಲ್ಯ ನಿಗದಿ ಮಾಡಿ ಟೆಂಡರ್‌ ಕರೆದು ಅಧಿಕಾರಿಗಳ ಸಮ್ಮುಖದಲ್ಲಿ ಮರಗಳನ್ನು ತೆರವು ಮಾಡಬೇಕು. ಆದರೆ ಈ ಯಾವುದೇ ನಿಯಮಗಳನ್ನು ಪಾಲಿಸದೆ,ಮರಗಳನ್ನು ಏಕಾಏಕಿ ಕತ್ತರಿಸಿ ಸಾಗಾಟ ಮಾಡಿರುವುದುಕಾನೂನುಬಾಹಿರವಾಗಿದೆ.ನಗರಸಭೆ ಸ್ವತ್ತಿನಲ್ಲಿರುವ ಮರಗಳನ್ನು ಹಗಲಲ್ಲೇ ಕತ್ತರಿಸಿದರೂ, ಅಧಿಕಾರಿಗಳು ಮೌನವಾಗಿರುವುದು ಏಕೆ? ಇದರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಪುರಸಭೆ ಮಾಜಿ ಸದಸ್ಯ ಕೇಶವಮೂರ್ತಿ ಪೌರಾಯುಕ್ತರಿಗೆ ಮನವಿ ನೀಡಿದ್ದಾರೆ.

ಪೈಪ್‌, ಗೋಡೆಗೆ ಹಾನಿ: ನೀರು ಸಂಗ್ರಹಣಾ ಕೇಂದ್ರದಲ್ಲಿ ಮರ ಕತ್ತರಿಸುವ ವೇಳೆ ಕೇಂದ್ರದ ಕಾಂಪೌಂಡ್‌ ಗೋಡೆಗಳು ಹಾಗೂ ವಿವಿಧ ಬಡವಾಣೆಗೆ ಸಂಪರ್ಕ ಕಲ್ಪಿಸುವ ಪೈಪ್‌ಗ್ಳಿಗೆ ಹಾನಿ ಮಾಡಿರುವ ಪರಿಣಾಮ ಬಡವಾಣೆಗಳಲ್ಲಿ ನೀರಿನ ಸಮಸ್ಯೆ ಎದುರಾಗಿದೆ.

ನಗರಸಭೆಗೆ ಬಾರದ ಜಿಲ್ಲಾಧಿಕಾರಿ : ನಗರ ಸಭೆ ಆಡಳಿತಾಧಿಕಾರಿಗಳಾಗಿ ಜಿಲ್ಲಾಧಿಕಾರಿ ಪಿಎನ್‌ ರವೀಂದ್ರರವರನ್ನು ನೇಮಕ ಮಾಡಿದ ನಂತರ ಒಂದು ಬಾರಿಯೂ ಬಂದಿಲ್ಲ. ಇದನ್ನು ಲಾಭವಾಗಿ ಪಡೆದ ಕೆಲ ಅಧಿಕಾರಿಗಳು ಪೌರಾ ಯುಕ್ತರ ಗಮನಕ್ಕೆ ಬಾರದಂತೆ ಇಂತಹ ಹಲವು ಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದಾರೆ. ತಕ್ಷಣ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬಂದು ಸೂಕ್ತ ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ, ನಗರಸಭೆಕಳ್ಳರ ಸಂತೆಯಾಗಲಿದೆ ಎಂದು ಸ್ಥಳೀಯಮುಖಂಡ ಕೇಶವಮೂರ್ತಿ ಹಾಗೂ ಸುಭ್ರ ಮಣಿ ಸೇರಿದಂತೆ ವಿವಿಧ ಮುಖಂಡರು ಒತ್ತಾಯ ಮಾಡಿದ್ದಾರೆ.

ಮರಗಳನ್ನು ಕತ್ತರಿಸಿರುವ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಮರಗಳನ್ನು ಕತ್ತರಿಸಿರುವುದುಕಾನೂನು ಬಾಹಿರ. ಪೊಲೀಸ್‌ ಹಾಗೂಅರಣ್ಯ ಇಲಾಖೆಗೆ ದೂರು ನೀಡಲಾಗುವುದು. ಮಂಜುನಾಥ ಸ್ವಾಮಿ, ಪೌರಾಯುಕ್ತರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.