ಆಲಿಕಲ್ಲು ಮಳೆಗೆ ಧರೆಗುರುಳಿದ ಮರಗಳು


Team Udayavani, May 3, 2018, 1:22 PM IST

b-g-1.jpg

ದೇವನಹಳ್ಳಿ: ತಾಲೂಕು ವ್ಯಾಪ್ತಿಯಲ್ಲಿ ಸುರಿದ ಬಿರುಗಾಳಿ ಮತ್ತು ಆಲಿಕಲ್ಲು ಮಳೆಯಿಂದಾಗಿ ಮಾವಿನ ಮರ, ಹಲಸು, ದ್ರಾಕ್ಷಿ, ಬಾಳೆಗಿಡಗಳು ಹಾಗೂ ಇತರೆ ತರಕಾರಿಬೆಳೆ ಹಾನಿಗೀಡಾಗಿ ಲಕ್ಷಾಂತರ ರೂಪಾಯಿ ನಷ್ಟವಾಗಿರುವ ಘಟನೆ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ಚೀಮಾಚನಹಳ್ಳಿ, ಬಾಲೇಪುರ ಗ್ರಾಮಗಳ ಸುತ್ತಮುತ್ತಲು ನಡೆದಿದೆ.

ಕಾಯಿಗಳು ಧರೆಗೆ: ಬುಧವಾರ ಮಧ್ಯಾಹ್ನ ವಿಪರೀತ ಗಾಳಿ ಆಲಿಕಲ್ಲು ಮಳೆಯಿಂದ ಹಲವಾರು ಮರಗಳು ಧರೆಗುರುಳಿದ್ದು, ದ್ರಾಕ್ಷಿ ಬಾಳೆ ಬೆಳೆಗಳು ಹಾಳಾಗಿವೆ. ಬಾಲೇಪುರ, ಚೀಮಾಚನಹಳ್ಳಿ ಗ್ರಾಮಗಳ ಸುತ್ತಮುತ್ತ ಸುಮಾರು 50 ಎಕರೆ ದ್ರಾಕ್ಷಿ ಬೆಳೆ ಹಾಗೂ ಬಾಳೆ ಸೇರಿದಂತೆ ತರಕಾರಿ ಬೆಳೆಗಳು ಹಾಳಾಗಿವೆ. ಹಲಸು, ಮಾವಿನ ಮರಗಳ ಕಾಯಿಗಳು ಧರೆಗೆ ಉರುಳಿವೆ. 

ಅನಾಹುತ: ಈ ವೇಳೆ ಗ್ರಾಮ ಪಂಚಾಯಿತಿ ಸದಸ್ಯ ಬಾಲೇಪುರದ ಆಂಜಿನಪ್ಪ ಮಾತನಾಡಿ, ಬಾಲೇಪುರ ಗ್ರಾಮದಲ್ಲಿ ರೈತರಾದ ಮಂಜುನಾಥ್‌, ಚಂದ್ರಪ್ಪ, ಸೀನಪ್ಪ, ರಮೇಶ್‌, ನಾಗರಾಜ್‌, ಈರಣ್ಣ ಅವರ ತೋಟಗಳಲ್ಲಿ ಸುಮಾರು 20 ದಿನದಲ್ಲಿ ಕಟಾವಿಗೆ ಬರುತ್ತಿದ್ದ ದ್ರಾಕ್ಷಿ ಬೆಳೆ ನಷ್ಟ ಸಂಭವಿಸಿದೆ. ರೈತರು ತಾವು ಬೆಳೆದ ಬೆಳೆ ಕೈಗೆ ಬರುವ ವೇಳೆ ಪ್ರಕೃತಿ ವಿಕೋಪದಿಂದ ಇಂತಹ ಅನಾಹುತಕ್ಕೆ ಕಾರಣವಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬಂತೆ ಆಗಿದೆ. ಕಡಿಮೆ ನೀರಿನಲ್ಲಿಯೇ ರೈತರು ತೋಟಗಾರಿಕೆ ಮತ್ತು ಕೃಷಿ ಮಾಡುತ್ತಿದ್ದಾರೆ ಎಂದರು.

ಪರಿಹಾರ ನೀಡಿ: ತೋಟಗಾರಿಕೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಿಗೆ ದೂರವಾಣಿ ಮುಖಾಂತರ ತಿಳಿಸಿದರೆ ನಾವು ಚುನಾವಣಾ ಬಿಸಿ ಇರುವುದರಿಂದ ವೀಕ್ಷಕರಾಗಿ ನೇಮಕ ಮಾಡಿರುತ್ತಾರೆ. ನಾಳೆ ಸ್ಥಳಕ್ಕೆ ಬಂದು ಪರಿಶೀಲಿಸುತ್ತೇವೆ ಎಂದು ಹೇಳುತ್ತಾರೆ. ಇದನ್ನು ಪರಿಶೀಲಿಸಿ ರೈತರಿಗೆ ನಷ್ಟವಾಗಿರುವುದನ್ನು ಸರ್ಕಾರದ ಮುಖಾಂತರ ಪರಿಹಾರ ಧನ ಕೊಡಿಸಬೇಕು ಎಂದು ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

ಮಳೆ ಖುಷಿ ತಂದಿಲ್ಲ: ಚೀಮಾಚನಹಳ್ಳಿ ರೈತ ಕೆಂಪಣ್ಣ ಮಾತನಾಡಿ, ಸುಮಾರು ಎರಡೂವರೆ ಎಕರೆ ಬಾಳೇತೋಟ ಗೊನೆ ಹಾಕುವ ಸ್ಥಿತಿಯಲ್ಲಿದ್ದು, ಮಳೆ ಗಾಳಿಗೆ ಅರ್ಧಕ್ಕೆ ಮುರಿದು ಧರೆಗುರುಳಿವೆ. ಇದರಿಂದ ಸುಮಾರು ಲಕ್ಷಾಂತರ ರೂ. ಬಂಡವಾಳ ನಷ್ಟವಾಗಿದೆ. ದ್ರಾಕ್ಷಿ ಬೆಳೆ ಆಲಿಕಲ್ಲಿ ಮಳೆಯಿಂದ ದ್ರಾಕ್ಷಿ ಹಣ್ಣುಗೆ ಹಾನಿಯಾಗಿದೆ.

ಗಾಳಿಗೆ ಕಾಯಿಗಳು ನೆಲಕ್ಕೆ ಬಿದ್ದಿದೆ. ಇದಕ್ಕೆ ಲಕ್ಷಾಂತರ ರೂ. ಬಂಡವಾಳ ಹಾಕಲಾಗಿದೆ. ರೈತರು ಹಲವಾರು ಆಸೆಗಳನ್ನು ಇಟ್ಟುಕೊಂಡು ಬೆಳೆ ಬೆಳೆಯಲು ಮುಂದಾಗುತ್ತಾರೆ. ಭರಣಿ ಮಳೆಯಿಂದ ರೈತರಿಗೆ ಅವಾಂತರ ಸೃಷ್ಟಿಯಾಗಿದೆ. ಒಂದು ರೀತಿಯಲ್ಲಿ ಭರಣಿ ಮಳೆ ಆಗಿದೆ ಎಂದು ಖುಷಿಪಟ್ಟರೆ ಇನ್ನೊಂದು ಕಡೆ ಬೆಳೆ ನಷ್ಟವಾಯಿತು ಎಂದು ಬೇಸರ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.