ಜಿಲ್ಲಾದ್ಯಂತ ಯುಗಾದಿ ಹಬ್ಬದ ಸಂಭ್ರಮ


Team Udayavani, Apr 8, 2019, 3:00 AM IST

jilladya

ದೊಡ್ಡಬಳ್ಳಾಪುರ: ಚೈತ್ರ ಮಾಸ ವಿಕಾರಿ ನಾಮ ಸಂವತ್ಸರದ ಯುಗಾದಿ ಹಬ್ಬವನ್ನು ತಾಲೂಕು ಸೇರಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾದ್ಯಂತ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

ಜನತೆ ಮನೆ ಮುಂದೆ ರಂಗೋಲಿ ಚಿತ್ತಾರ ಬಿಡಿಸಿ, ಬಾಗಿಲುಗಳನ್ನು ತಳಿರು, ತೋರಣಗಳಿಂದ ಶೃಂಗರಿಸಿ ಮನೆಯಲ್ಲಿ ಪೂಜೆ ಮತ್ತಿತರ ಧಾರ್ಮಿಕ ಕಾರ್ಯಗಳನ್ನು ನಡೆಸಿದರು. ನಂತರ ಹೊಸ ಬಟ್ಟೆಗಳನ್ನು ಧರಿಸಿ, ಬೇವು, ಬೆಲ್ಲ ಹಂಚುವುದರೊಂದಿಗೆ ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಹೊಸ ಪಂಚಾಂಗಕ್ಕೆ ಪೂಜೆ ಸಲ್ಲಿಸಲಾಯಿತು.

ಚುನಾವಣಾ ಪ್ರಚಾರಕ್ಕೆ ಸ್ವಲ್ಪ ವಿರಾಮ ನೀಡಿದ್ದ ವಿವಿಧ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಸಹ ಹಬ್ಬದ ಸಂಭ್ರಮದಲ್ಲಿ ತೊಡಗಿದ್ದರು. ದೇವಾಲಯಗಳಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆಗಳು ನಡೆದವು.

ಮಾಂಸ ಮಾರಾಟ ಜೋರು: ಯುಗಾದಿ ಹಬ್ಬದ ಪ್ರಯುಕ್ತ ಸಿಹಿ ಊಟ ಮಾಡಿದ ನಾಗರಿಕರು, ಹಬ್ಬದ ರಜೆಯಲ್ಲಿ ಅಂದರೆ ಯುಗಾದಿ ಮರುದಿನ ಮಾಂಸದ ಅಡುಗೆ ಮಾಡಿಕೊಂಡು ಬಂಧು-ಬಾಂಧವರೊಂದಿಗೆ ಭೋಜನ ಮಾಡುವುದು ಈ ಭಾಗದ ಸಂಪ್ರದಾಯ ಹಿಂದಿನಿಂದಲೂ ಬೆಳೆದುಕೊಂಡು ಬಂದಿದೆ.

ಹೊಸ ತೊಡಕು ಎಂದು ಕರೆಯುವ ಈ ದಿನ ಮಾಂಸದ ಅಂಗಡಿಗಳಲ್ಲಿ ಸಾಲುಗಟ್ಟಿ ನಿಂತು ಮಾಂಸ ಕೊಂಡೊಯತ್ತಿದ್ದ ದೃಶ್ಯವೂ ಸಾಮಾನ್ಯವಾಗಿತ್ತು. ಹಾಗಾಗಿ, ಒಂದು ಕೆ.ಜಿ. ಮಟನ್‌ 550 ರೂ. ಬೆಲೆ ಪಡೆದುಕೊಂಡಿತ್ತು.

ಬೇ ಡಿ ಕೆ ಹೆಚ್ಚಾದಂತೆ ವಸ್ತುಗಳ ಬೆಲೆ ಹೆಚ್ಚಾಗುವುದು ಸಹಜ. ಅದು ಮಾಂಸಕ್ಕೂ ಅನ್ವಯಿಸಿತ್ತು. ಸಾಮಾನ್ಯವಾಗಿ 450 ರೂ.ಗೆ ಮಾರಾಟವಾಗುತ್ತಿದ್ದ ಮಾಂಸ ಹಬ್ಬದ ಪ್ರಯುಕ್ತ 100 ರೂ. ಹೆಚ್ಚಿಸಿಕೊಂಡಿತ್ತು. ಬೇಡಿಕೆ ಪೂರೈಸಲು ಬೆಳಗಿನ ಜಾವ 4 ಗಂಟೆಗೇ ಮಾಂಸದ ಅಂಗಡಿಗಳು ತೆರೆದಿದ್ದವು.

ಕ್ರೈಸ್ತ ವರ್ಷಾಚರಣೆ ಸಂದರ್ಭದಲ್ಲಿ ಗುಂಡು, ತುಂಡು ಪಾರ್ಟಿಗಳು ಜೋರು. ಅಂತೆಯೇ ಹಿಂದುಗಳ ಹೊಸ ವರ್ಷಾಚರಣೆ ಯುಗಾದಿ ಹಬ್ಬದಂದು ಹೋಳಿಗೆ ಸಿಹಿ ತಿಂದ ಮೇಲೆ ಬಾಯಿ ಖಾರ ಮಾಡಿಕೊಳ್ಳುವುದು ಪದ್ಧತಿಯಾಗಿ ಬೆಳೆದುಬಂದಿದೆ.

ಅದರಲ್ಲೂ ನೇಕಾರಿಕೆಯೇ ಪ್ರಧಾನವಾಗಿರುವ ದೊಡ್ಡಬಳ್ಳಾಪುರದಲ್ಲಿ, ನೇಕಾರರು, ಕೃಷಿಕರು ಯುಗಾದಿ ಸಂದರ್ಭದಲ್ಲಿ ಮಾಂಸದ ಅಡುಗೆ ಮಾಡುವ ಪದ್ಧತಿಯನ್ನು ತಲೆತಲಾಂತರಗಳಿಂದ ಬೆಳೆಸಿಕೊಂಡುಬಂದಿದ್ದಾರೆ.

ಹಾಗಾಗಿ, ಹೊಸ ತೊಡಕು ಈ ಬಾರಿ ಭಾನುವಾರ ಬಂದಿದ್ದರಿಂದ ನಗರದಲ್ಲಿ ಮಾಂಸ ಹಾಗೂ ಮದ್ಯದ ವ್ಯಾಪಾರ ಜೋರಾಗಿಯೇ ಸಾಗಿತ್ತು. ಮಾಂಸಕ್ಕೆ ಬಳಸುವ ಮಸಾಲೆ, ಸೊಪ್ಪುಗಳ ಮಾರಾಟವೂ ಭರ್ಜರಿಯಾಗಿ ನಡೆದಿತ್ತು. ಅದೇ ರೀತಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲೂ ಯುಗಾದಿ ಹಬ್ಬವನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು.

ಕಾಮನ ಮೂರ್ತಿಗೆ ವಿಶೇಷ ಪೂಜೆ
ದೊಡ್ಡಬಳ್ಳಾಪುರ: ಯುಗಾದಿ ವೇಳೆ ಬಯಲುಸೀಮೆಯಲ್ಲಿ ವಿಶಿಷ್ಟವಾಗಿ ಆಚರಿಸುವ ಕಾಮಣ್ಣನ ಮೂರ್ತಿಯನ್ನು ತಣ್ಣಗೆ ಮಾಡುವ ಆಚರಣೆ ನಗರದ ವಿವಿಧೆಡೆ ಶ್ರದ್ಧಾಭಕ್ತಿ, ಸಂಭ್ರಮಗಳಿಂದ ನೆರವೇರಿತು. ಜೇಡಿ ಮಣ್ಣಿನಿಂದ ತಯಾರಿಸಿದ್ದ ಸುಂದರ ಕಾಮನ ಮೂರ್ತಿಗೆ ವಿದ್ಯುತ್‌ ದೀಪಾಲಂಕಾರ ಮಾಡಲಾಗಿತ್ತು.

ನಗರದ ರಂಗಪ್ಪ ಸರ್ಕಲ್‌ನಲ್ಲಿನ ಶ್ರೀ ಬಾಲಾಂಜನೇಯ ವ್ಯಾಯಾಮ ಕಲಾ ಯುವಕ ಸಂಘದ ವತಿಯಿಂದ ಬಿಡಿಸಲಾಗಿದ್ದ ಸುಮಾರು 22 ಅಡಿಗಳ ಬೃಹತ್‌ ಕಾಮನಮೂರ್ತಿಗೆ ಕಾಮನ ತಣ್ಣಗಿನ ಆಚರಣೆ ಮಾಡಲಾಯಿತು.

ಕಾಮಣ್ಣನ ಮೂರ್ತಿ ತಣ್ಣಗೆ ಮಾಡುವ ಆಚರಣೆ ಆರಂಭವಾಗಿ 105 ವರ್ಷ ಪೂರೈಸಿದ ನೆನಪಿಗಾಗಿ ವಿಶೇಷ ಮಂಟಪದಲ್ಲಿ ಪೂಜಾ ಕಾರ್ಯಗಳನ್ನು ನೆರವೇರಿಸಲಾಯಿತು. ಇದೇ ಜಾಗದಲ್ಲಿ ಕಾಮಣ್ಣನ ಮೂರ್ತಿ ನಿರ್ಮಿಸುತ್ತಿದ್ದ ದಿವಂಗತ ಯಲ್ಲಪ್ಪ ಅವರ ಸ್ಮರಣೆ ಮಾಡಿ ಪ್ರಸಾದ ವಿತರಿಸಲಾಯಿತು.

ನಗರದ ತೂಬಗೆರೆ ಪೇಟೆ, ಗಾಣಿಗರ ಪೇಟೆ, ವಿವೇಕಾನಂದ ನಗರ ಮೊದಲಾದೆಡೆ ವಿವಿಧ ಮಾದರಿಯ ಕಾಮಣ್ಣನ ಮೂರ್ತಿಗಳನ್ನು ಬಿಡಿಸಿ ಪೂಜೆ ಸಲ್ಲಿಸಲಾಯಿತು. ಕಾಮ ಪೌರ್ಣಮಿಯಂದು ಉರುವಲುಗಳನ್ನು ಸುಡುವ ಮೂಲಕ ಕಾಮ ದಹನದ ಕ್ರಿಯಾವಿಧಿಗಳನ್ನು ನೆರವೇರಿಸಿದರು.  ಶಿವನ ತಪಸ್ಸನ್ನು ಭಂಗ ಮಾಡಲು ಪ್ರಯತ್ನಿಸಿದ ಮನ್ಮಥನನ್ನು ಶಿವ ತನ್ನ ಮೂರನೇ ಕಣ್ಣಿನಿಂದ ದಹಿಸಿದ.

ಮನ್ಮಥನನ್ನು ಮನಿಸಿದ ಶಿವ ಶಾಂತ ಸ್ವರೂಪನಾಗಿ ಭಕ್ತರ ಇಷ್ಟಾರ್ಥಗಳನ್ನು ಈಡೇರಿಸಲು ಕಾಮನ ಮೂರ್ತಿಯಾಗಿ ಅವತಾರಗೊಂಡ ಪುರಾಣ ಕಥೆಯಂತೆ ಕಾಮಣ್ಣನ ಹಬ್ಬ ಆಚರಿಸಲಾಗುತ್ತಿದೆ. ಹೋಳಿ ಹುಣ್ಣಿಮೆಯಂದು ಕಾಮನನ್ನು ದಹನ ಮಾಡಿದ ಸ್ಥಳದಲ್ಲಿಯೇ ಯುಗಾದಿ ಅಮಾವಾಸ್ಯೆಯಂದು ಕಾಮನನ್ನು ತಣ್ಣಗೆ ಮಾಡುವ ಪ್ರಕ್ರಿಯೆ ನಡೆಯುತ್ತದೆ.

ಟಾಪ್ ನ್ಯೂಸ್

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.