ಸಿಬ್ಬಂದಿ ಪಿಕಪ್‌ಡ್ರಾಪ್‌ಗೆ ಆ್ಯಂಬುಲೆನ್ಸ್‌ ಬಳಕೆ


Team Udayavani, Feb 4, 2020, 4:16 PM IST

br-tdy-1

ನೆಲಮಂಗಲ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸುಂಕವಸೂಲಿ ಮಾಡುವ ಟೋಲ್‌ಗ‌ಳ ತುರ್ತು ಸೇವೆಗಾಗಿರುವ ಆ್ಯಂಬುಲೆನ್ಸ್‌ಗಳನ್ನು ಟೋಲ್‌ ಸಿಬ್ಬಂದಿಗಳ ಪಿಕಪ್‌ಡ್ರಾಪ್‌ಗೆ ಬಳಕೆಯಾಗುತ್ತಿವೆ.

ತಾಲೂಕಿನ ಮೂಲಕ 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಸಂಪರ್ಕ ಸೇತುವೆಯಾಗಿರುವ ಎರಡು ರಾಷ್ಟ್ರೀಯ ಹೆದ್ದಾರಿಯಲ್ಲಿ ನಾಲ್ಕು ಟೋಲ್‌ಗ‌ಳಿದ್ದು, ಬೆಂಗಳೂರಿಗೆ ಪ್ರವೇಶಿಸಲು ನವಯುಗ ಟೋಲ್‌ ದಾಟಬೇಕಾಗುತ್ತದೆ. ಈ ಹೆದ್ದಾರಿಯಲ್ಲಿ ಪ್ರತಿನಿತ್ಯ ಹಲವು ಅಪಘಾತ ಪ್ರಕರಣಗಳು ದಾಖಲಾಗುತಿದ್ದರೂ, ಈ ಟೋಲ್‌ನವರು ಮಾತ್ರ, ತುರ್ತುಸೇವೆಗಾಗಿ ನೀಡಿರುವ ಆ್ಯಂಬುಲೆನ್ಸ್‌ ಅನ್ನು ಗಾಯಾಳುಗಳ ರಕ್ಷಣೆ ಮಾಡುವುದನ್ನು ಬಿಟ್ಟು ಎಬಿಸಿ ಎಂಬ ಮೂರು ಪಾಳಿಯಾಗಿ 150ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ಮನೆಗೆ ತಲುಪಿಸುವ ಕೆಲಸ ಮಾಡುತ್ತಿದ್ದಾರೆ.

ಒಂದೇ ಆ್ಯಂಬುಲೆನ್ಸ್‌ : ಬೆಂಗಳೂರಿನಿಂದ ನೆಲಮಂಗಲದವರಗೂ 28 ಕಿ.ಮೀ ದೂರವಿರುವ ನವಯುಗ ಟೋಲ್‌ ವ್ಯಾಪ್ತಿಯಲ್ಲಿ ಪ್ರತಿನಿತ್ಯ ಅಪಘಾತಗಳು ಸಂಭವಿಸುವುದನ್ನು ಕಾಣ ಬಹುದಾಗಿದೆ. ಆದರೆ, ಟೋಲ್‌ನಿಂದ ತುರ್ತು ಸೇವೆಗಾಗಿ ನೀಡಿರುವ ಕೇವಲ ಒಂದು ಆಂಬುಲೆನ್ಸ್‌ ಕೂಡ ಸಿಬ್ಬಂದಿ ಪಿಕಪ್‌ಡ್ರಾಪ್‌ಗಾಗಿ ಬಳಕೆಯಾಗುತ್ತಿದೆ.ಅಪಘಾತವಾದರೆ ಖಾಸಗಿ ವಾಹನಗಳು ಅಥವಾ ಅದೃಷ್ಟವಿದ್ದರೆ 108 ಅಂಬುಲೆನ್ಸ್‌ ಮೂಲಕ ಆಸ್ಪತ್ರೆ ಸೇರುವ ಅನಿವಾರ್ಯತೆ ಎದುರಾಗಿದೆ.

ಅಪಘಾತಗಳ ಪ್ರಮಾಣ : ರಾಷ್ಟ್ರೀಯ ಹೆದ್ದಾರಿ 48 ಹಾಗೂ 75ರಲ್ಲಿ 2018ರಲ್ಲಿ 590 ಅಪಘಾತಗಳಾಗಿ, 132 ಜನ ಮೃತರಾಗಿದ್ದಾರೆ. ಇನ್ನೂ 2019ರಲ್ಲಿ 521 ಅಪಘಾತಗಳಿಂದ 133 ಜನ ಸಾವಿಗೀಡಾಗಿದ್ದು, 553 ಜನರು ಗಾಯಾಳುಗಳಾಗಿದ್ದಾರೆ. ಇದರ ಜೊತೆ ಹೊಸವರ್ಷದ ಆರಂಭದ ತಿಂಗಳಿನಲ್ಲಿ 56 ಅಪಘಾತಗಳಾಗಿದ್ದು , 11 ಜನರು ಪ್ರಾಣಬಿಟ್ಟಿದ್ದಾರೆ. ಈ ಪ್ರಮಾಣದ ಅಪಘಾತ ಸಂಭವಿಸುವ ರಸ್ತೆಗಳಲ್ಲಿ ಕೋಟಿಕೋಟಿ ಸುಂಕವಸೂಲಿ ಮಾಡುವ ಟೋಲ್‌ಗಳು ಆ್ಯಂಬುಲೆನ್ಸ್‌ ಸೇವೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದು ದುರಂತ.

ಅಧಿಕಾರಿಗಳ ಎಡವಟ್ಟು : ಕಚೇರಿಯಿಂದಲೇ ಸಿಬ್ಬಂದಿಗಳನ್ನು ಅಂಬುಲೆನ್ಸ್‌ ಮೂಲಕ ಡ್ರಾಪ್‌ ಮಾಡುವ ಪದ್ಧತಿಯನ್ನು ರೂಢಿ ಮಾಡಿಕೊಂಡಿರುವ ಅಧಿಕಾರಿಗಳ ಎಡವಟ್ಟಿಗೆ ಅಮಾಯಕ ಜೀವಗಳು ಬಲಿಯಾಗಿವೆ. ಈ ಬಗ್ಗೆ ಪ್ರಶ್ನಿಸಿದರೆ ಯಾವೊಬ್ಬ ಅಧಿಕಾರಿಯೂ ಉತ್ತರ ನೀಡುತ್ತಿಲ್ಲ.

ಪ್ರತಿಕ್ರಿಯಿಸಿ ಆ್ಯಂಬುಲೆನ್ಸ್‌ ಈ ರೀತಿ ಸಿಬ್ಬಂದಿಗಳ ಬಳಕೆಗಾಗಿ ಬಳಸಿಕೊಳ್ಳುತ್ತಿರುವುದು ಬೇಸರ ತಂದಿದೆ. ತಕ್ಷಣ ಪ್ರಕರಣದ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮಕೈಗೊಳ್ಳಲಾಗುತ್ತದೆ. ಮಾನವೀಯತೆಯಿಂದ ವರ್ತಿಸಬೇಕಾಗಿರುವುದು ಟೋಲ್‌ ಅಧಿಕಾರಿಗಳ ಕರ್ತವ್ಯ.  –ಸೋಮಶೇಖರ್‌ ,ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ

 

-ಕೊಟ್ರೇಶ್‌ ಆರ್‌

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.