ನೀರಿನ ಸಂಪು ನಿರ್ಮಾಣಕ್ಕೆ ತುಕ್ಕು ಹಿಡಿದ ಕಬ್ಬಿಣ ಬಳಕೆ


Team Udayavani, Apr 4, 2019, 3:00 AM IST

neerina

ದೇವನಹಳ್ಳಿ: ನಗರದ ಸರ್ಕಾರಿ ಕಾಲೇಜು ಆಟದ ಮೈದಾನದ ಆವರಣದಲ್ಲಿ ನಿರ್ಮಿಸುತ್ತಿರುವ ನೀರಿನ ಸಂಪು ನಿರ್ಮಾಣ ಕಾಮಗಾರಿಗೆ ತುಕ್ಕು ಹಿಡಿದ ಕಬ್ಬಿಣವನ್ನು ಬಳಕೆ ಮಾಡುತ್ತಿದ್ದಾರೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

ನಗರದ ಸರ್ಕಾರಿ ಆಟದ ಮೈದಾನದಲ್ಲಿ ಇತ್ತೀಚೆಗಷ್ಟೇ 200 ಮೀಟರ್‌ ಟ್ರ್ಯಾಕ್‌ ಕಳಪೆ ಕಾಮಗಾರಿಯಾಗಿತ್ತು. ಅದರ ಬೆನ್ನಲ್ಲೇ ಮತ್ತೂಂದು ಸಂಪು ನಿರ್ಮಾಣಕ್ಕೆ ಗುಜರಿ ಕಬ್ಬಿಣದ ಕಂಬಿಗಳನ್ನು ಅಳವಡಿಸುತ್ತಿದ್ದಾರೆಂದು ನಾಗರಿಕರು ಆರೋಪಿಸುತ್ತಿದ್ದಾರೆ.

ಅವೈಜ್ಞಾನಿಕ ಕಾಮಗಾರಿ: ಈ ಬಗ್ಗೆ ಮಾತನಾಡಿದ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಮಾಜಿ ಅಧ್ಯಕ್ಷ ಶಶಿಧರ್‌, ಸಂಪು ನಿರ್ಮಾಣ ಕಾಮಗಾರಿಯನ್ನು ತಗ್ಗು ಪ್ರದೇಶದಲ್ಲಿ ನಡೆಸುವುದು ಸರಿಯಲ್ಲ. ಮಳೆಗಾಲದಲ್ಲಿ ನೀರು ಹರಿದು ಬರುವುದರಿಂದ ಸಂಪು ಸಂಪೂರ್ಣವಾಗಿ ಮುಳುಗಡೆಯಾಗಲಿದೆ.

ಈ ಕಾಮಗಾರಿ ಅವೈಜ್ಞಾನಿಕವಾಗಿದೆ. ಒಬ್ಬ ಇಂಜಿನಿಯರ್‌ ಆಗಿ ಗುತ್ತಿಗೆದಾರರನ್ನು ಬೆಂಬಲಿಸಿದರೆ ಹೇಗೆ ಎಂದು ಸ್ಥಳದಲ್ಲಿದ್ದ ಇಂಜಿನಿಯರ್‌ರನ್ನು ಸಾರ್ವಜನಿಕರು ತೀವ್ರ ತರಾಟೆಗೆ ತೆಗೆದುಕೊಂಡರು. ಕ್ರೀಡಾಪಟು ಪ್ರಸನ್ನಹಳ್ಳಿ ನಟರಾಜ್‌ ಮಾತನಾಡಿ, ಮೊದಲು ಡಾ.ಅಂಬೇಡ್ಕರ್‌ ಭವನ ನಿರ್ಮಾಣ ಮಾಡಲಾಗಿತ್ತು.

ಈ ಭವನವನ್ನು ಕ್ರೀಡಾ ಇಲಾಖೆಗೆ ಹಸ್ತಾಂತರಿಸಿದ ನಂತರ ಭವನದ ಒಳಭಾಗದಲ್ಲಿ ಆಸಕ್ತರಿಗೆ ಜಿಮ್‌ ಕಸರತ್ತು ನಡೆಸಲು ಜಿಮ್‌ ಪರಿಕರ ದಾಸ್ತಾನು ಮಾಡಲಾಗಿದೆ. ಈ ಕುರಿತು ತನಿಖೆ ನಡೆದಿಲ್ಲ. ಇಷ್ಟೆಲ್ಲಾ ದೂರುಗಳು ಇದ್ದರೂ ಮತ್ತೆ ಕಳಪೆ ಕಂಬಿಗಳನ್ನು ಗುಜರಿಯಿಂದ ತರಿಸಿ ಕಾಮಗಾರಿ ಮಾಡುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

ಎಸಿಬಿಗೆ ದೂರು, ಎಚ್ಚರಿಕೆ: ಇಲ್ಲಿ ಶಾಲಾ ಮಕ್ಕಳು, ಕಾಲೇಜು ವಿದ್ಯಾರ್ಥಿಗಳು ಆಟವಾಡಲು ಬರುತ್ತಾರೆ. ಏನಾದರೂ ಕುಸಿದು ಬಿದ್ದರೆ ಮುಂದೆ ಆಗುವ ಅನಾಹುತಕ್ಕೆ ಯಾರು ಹೊಣೆಗಾರರು ಎಂದು ಆಕ್ರೋಶ ವ್ಯಕ್ತಪಡಿಸಿದರು. ಮೂಲ ಸೌಲಭ್ಯದಲ್ಲಿ ಒಂದಾಗಿರುವ ನೀರನ್ನು ಶೌಚಾಲಯಕ್ಕೆ ಮತ್ತು ಸ್ನಾನಕ್ಕೆ ಬಳಸಿಕೊಳ್ಳಲು ಸಂಪು ನಿರ್ಮಾಣ ಕಾಮಗಾರಿ ನಡೆಯುತ್ತಿದೆ.

200 ಮೀಟರ್‌ ಟ್ರ್ಯಾಕ್‌ ಕಳಪೆಯಾಗಿದೆ. ಇದರ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಆಯುಕ್ತರಿಗೆ ದೂರು ಸಲ್ಲಿಸಲಾಗಿದೆ. ಇಲ್ಲಿ ನಡೆಯುತ್ತಿರುವ ಪ್ರತಿಯೊಂದು ಕಾಮಗಾರಿಯ ಸಂಪೂರ್ಣ ಮಾಹಿತಿಯೊಂದಿಗೆ ಭ್ರಷ್ಟಾಚಾರ ನಿಗ್ರಹ ದಳಕ್ಕೂ ದೂರು ನೀಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇಂಜಿನಿಯರ್‌ ಹೇಳಿಕೆ: ಕಳಪೆ ಕಬ್ಬಿಣದ ಕಂಬಿ ಬಗ್ಗೆ ನನ್ನ ಸಹಮತ ಇರುವುದಿಲ್ಲ. ಗುಣಮಟ್ಟದ ಕಂಬಿಗಳನ್ನು ಬಳಸಿಕೊಂಡು ಕಾಮಗಾರಿ ನಡೆಸಲಾಗುವುದು. ಇದನ್ನು ತೆಗೆದು ಹಾಕಿ ನೂತನ ಗುಣಮಟ್ಟದ ಕಂಬಿ ಬಳಕೆ ಮಾಡಲಾಗುತ್ತದೆ ಎಂದು ಜಿಪಂ ಇಂಜಿನಿಯರಿಂಗ್‌ ಇಲಾಖೆಯ ಸಹಾಯಕ ಇಂಜಿನಿಯರ್‌ ಪೂಜಿತಾ ತಿಳಿಸಿದರು.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.