ರಾಸುಗಳಿಗೆ ತಪ್ಪದೇ ಕಾಲುಬಾಯಿ ಜ್ವರದ ಲಸಿಕೆ ಹಾಕಿಸಿ

ಕಾಲುಬಾಯಿ ಲಸಿಕೆ ಬಳಕೆಯನ್ನು ಸಂಘದ ವ್ಯಾಪ್ತಿಯಲ್ಲಿ ಪರಿಣಾಮಕಾರಿಯಾಗಿ ಜಾರಿಗೆ ತರುವುದು

Team Udayavani, Sep 22, 2022, 6:01 PM IST

ರಾಸುಗಳಿಗೆ ತಪ್ಪದೇ ಕಾಲುಬಾಯಿ ಜ್ವರದ ಲಸಿಕೆ ಹಾಕಿಸಿ

ದೇವನಹಳ್ಳಿ: ಹಾಲು ಉತ್ಪಾದಕ ರೈತರು ಕೆಚ್ಚಲು ಬಾವು ಬರದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ರೈತರು ರಾಸುಗಳಿಗೆ ತಪ್ಪದೇ ಕಾಲುಬಾಯಿ ಜ್ವರದ ಲಸಿಕೆ ಹಾಕಿಸಬೇಕು ಎಂದು ಬೆಂಗಳೂರು ಸಹಕಾರ ಹಾಲು ಒಕ್ಕೂಟದ ದೇವನಹಳ್ಳಿ ಶಿಬಿರದ ಉಪ ವ್ಯವಸ್ಥಾಪಕ ಡಾ.ಸಿ.ಎಂ. ಪೂರ್ಣಚಂದ್ರ ತೇಜಸ್ವಿ ತಿಳಿಸಿದರು.

ತಾಲೂಕಿನ ಆಲೂರು ಹಾಲು ಉತ್ಪಾದಕರ ಸಹಕಾರ ಸಂಘದ ಕಚೇರಿಯಲ್ಲಿ ನಡೆದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಲ್ಲಿ ಜನರು ಆರ್ಥಿಕವಾಗಿ ಸದೃಢವಾಗಲು ಸಹಕಾರ ಸಂಘಗಳು ಆಸರೆಯಾಗಿವೆ. ಸಹಕಾರ ತತ್ವಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು.ಕ್ರಮಬದ್ಧ ಆಹಾರದಿಂದ ಗುಣಮಟ್ಟದ ಹಾಲು ಉತ್ಪಾದನೆ ಆಗುತ್ತದೆ. ಕರುಗಳ ಸಾಕಾಣಿಕಾ ಕ್ರಮ ಗಳನ್ನು ಪ್ರತಿಯೊಬ್ಬರೂ ಅನುಸರಿಸಬೇಕು ಎಂದರು.

ರಾಸುಗಳಿಗೆ ಹುಳಿನೀರು, ಮುಸುರೆ ನೀರು ಇಡಬಾರದು. ಪೌಷ್ಟಿಕ ಆಹಾರ ನೀಡಬೇಕು. ಜಂತುಹುಳು ಔಷಧ ನೀಡಬೇಕು. ಕೆಚ್ಚಲು ಬಾವು ಬರದಂತೆ ನೋಡಿ ಕೊಳ್ಳಬೇಕು. ಕೊಟ್ಟಿಗೆಗಳನ್ನು ಸ್ವತ್ಛವಾಗಿಟ್ಟುಕೊಳ್ಳಬೇಕು. ರೈತರು ಆರ್ಥಿಕವಾಗಿ ಸದೃಢರಾಗಬೇಕಾದರೆ ಹೈನುಗಾರಿಕೆ ಅನುಕೂಲ ಆಗಿದೆ ಎಂದು ಹೇಳಿದರು.

ಹಾಲಿಗೆ 5 ರೂ. ಪ್ರೋತ್ಸಾಹಧನ: ಶಿಬಿರದ ಸಹಾಯಕ ವ್ಯವಸ್ಥಾಪಕ ಡಿ.ಕೆ.ಮಂಜುನಾಥ್‌ ಮಾತನಾಡಿ, ರೈತರಿಗೆ ಬೆಂಗಳೂರು ಹಾಲು ಒಕ್ಕೂಟ ಸಾಕಷ್ಟು ಸೌಲಭ್ಯ ನೀಡಿದೆ. ಹಾಲು ಕರೆಯುವ ಯಂತ್ರ, ಮೇವು ಕತ್ತರಿಸುವ ಮಿಷನ್‌, ಮ್ಯಾಟ್‌ ನೀಡುತ್ತಿದೆ. ಅತಿ ಹೆಚ್ಚು ಅಂಕ ಪಡೆದ ಹಾಲು ಉತ್ಪಾದಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗು ತ್ತಿದೆ. ಸಂಘಗಳಿಗೆ ಗುಣಮಟ್ಟದ ಹಾಲನ್ನು ನೀಡ ಬೇಕು. ಸರ್ಕಾರದಿಂದ ಗುಣಮಟ್ಟ ಆಧಾರಿತ ಮೇಲೆ ಹಾಲಿಗೆ 5 ರೂ. ಪ್ರೋತ್ಸಾಹಧನ ನೀಡುತ್ತಿದೆ ಎಂದರು.

ಸಂಘಕ್ಕೆ 2.36 ಲಕ್ಷ ರೂ. ನಿವ್ವಳ ಲಾಭ: ಆಲೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎಂ. ಮುನಿರಾಜು ಮಾತನಾಡಿ, ಹಾಲು ಸರಬರಾಜು ಮಾಡುವ ಸದಸ್ಯರ ಸಂಖ್ಯೆ ಹೆಚ್ಚಿಸುವುದು. ಹಾಲು ಶೇಖರಣೆ ಪ್ರಮಾಣವನ್ನು 915.0 ಲೀಟರ್‌ ನಿಂದ 1,200 ಲೀಟರ್‌ ಗೆ ಹೆಚ್ಚಿಸುವುದು. ಉತ್ಪಾದಕರಿಗೆ ಬೇಕಾಗುವ ಲಭ್ಯವಿರುವ ಎಲ್ಲಾ ತಾಂತ್ರಿಕ ಸೌಲಭ್ಯಗಳನ್ನು ಒದಗಿಸುವುದು. ರಾಸುಗಳ ಗುಂಪು ವಿಮಾಯೋಜನೆ ಮತ್ತು ರಾಸುಗಳಿಗೆ ಕಾಲುಬಾಯಿ
ಲಸಿಕೆ ಬಳಕೆಯನ್ನು ಸಂಘದ ವ್ಯಾಪ್ತಿಯಲ್ಲಿ ಪರಿಣಾಮಕಾರಿಯಾಗಿ ಜಾರಿಗೆ ತರುವುದು. ಹೆಚ್ಚು ಹಾಲು ಸರಬರಾಜು ಮಾಡಿದ ಒಬ್ಬ ಸದಸ್ಯರಿಗೆ ಕೊಡುಗೆ ನೀಡಲಾಗುವುದು. 2.36 ಲಕ್ಷ ರೂ. ನಿವ್ವಳ ಲಾಭ ಗಳಿಸಲಾಗಿದೆ ಎಂದರು.

ವಿಸ್ತರಣಾಧಿಕಾರಿ ಕೆ. ವಿಜಯಕುಮಾರ್‌, ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಪಟಾಲಪ್ಪ, ಹಾಲು ಉತ್ಪಾದಕರ ಸಹಕಾರ ಸಂಘದ ಮುಖ್ಯ ಕಾರ್ಯ ನಿರ್ವಾಹಕ ಎಚ್‌.ಮಂಜುನಾಥ್‌, ಉಪಾಧ್ಯಕ್ಷ ಆರ್‌.ಜೋಗಪ್ಪ, ನಿರ್ದೇಶಕ ಎಸ್‌.ಪುಟ್ಟಣ್ಣ, ಎಸ್‌.ಚಂದ್ರಶೇಖರ್‌, ಎಚ್‌. ಮಾರುತಿ, ಗೋಪಾಲ್‌, ಶ್ರೀನಿವಾಸಾಚಾರಿ, ಎ.ಎಂ. ಮುನಿಆಂಜಿನಪ್ಪ, ಮುನಿ ತಾಯಮ್ಮ, ಪಿಳ್ಳಮ್ಮ, ಮುಖಂಡ ಮುನೇಗೌಡ, ಬಸವರಾಜು, ಈರಣ್ಣ, ಕೆಂಪಣ್ಣ, ಆನಂದಮೂರ್ತಿ, ಹಾಲು ಪರೀಕ್ಷಕ ಜೆ. ಆಂಜನೇಯ, ಗುಮಾಸ್ತ ಎ. ಮಂಜುನಾಥ್‌, ಸಹಾಯ ಎಂ.ಮುನಿರಾಜು ಹಾಗೂ ಮತ್ತಿತರರು ಇದ್ದರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.