ಲಸಿಕೆ ಪಡೆಯಲು ಹಳ್ಳಿಗಳಿಗೆ ಬಂದ ಬೆಂಗಳೂರಿಗರು!
ಕಾರುಗಳಲ್ಲಿ ಮುಂಜಾನೆಯೇ ಆಗಮನ ನೋಂದಣಿ ಅರಿವಿಲ್ಲದ ಗ್ರಾಮೀಣರಿಗೆ ಸಮಸ್ಯೆ: ಆರೋಪ
Team Udayavani, May 13, 2021, 4:56 PM IST
ದೇವನಹಳ್ಳಿ: ಬೆಂಗಳೂರಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಲಸಿಕೆ ಹಾಕಿಸಿಕೊಂಡು ಹೋಗುತ್ತಿರುವುದ ರಿಂದ ಸ್ಥಳೀಯರು ಲಸಿಕೆಯಿಂದ ವಂಚಿತರಾಗುತ್ತಿದ್ದಾರೆಂದು ನಾಗರಿಕರು ಆರೋಪಿಸಿದ್ದಾರೆ.
ಲಸಿಕೆಗೆ ನಿತ್ಯ 150 ಮಂದಿಗೆ ನಿಗದಿಪಡಿಸಲಾಗಿದೆ. ಆದರೆ, ಬೆಂಗಳೂರಿನಿಂದ ಬೆಳಗ್ಗೆಯೇ ಕಾರುಗಳಲ್ಲಿ ಆಗಮಿಸಿ ಲಸಿಕಾ ಕೇಂದ್ರಗಳಲ್ಲಿ ಸರತಿಯಲ್ಲಿ ನಿಂತು ಪಡೆಯುತ್ತಿದ್ದಾರೆ. ರೈತಾಪಿ ವರ್ಗದ ಜನ ಹಾಗೂ ಕೂಲಿ ಕಾರ್ಮಿಕರು ನಿತ್ಯ ಕೆಲಸ ಮುಗಿಸಿ ಲಸಿಕೆ ಹಾಕಿಸಿಕೊಳ್ಳಲು ಬರುತ್ತಾರೆ. ಬರುವ ವೇಳೆಗೆ ಬೆಂಗಳೂರಿಗರೇ ಸೇರಿಕೊಂಡರೆ ಸ್ಥಳೀಯರಿಗೆ ಎಲ್ಲಿ ಲಸಿಕೆ ಸಿಗುತ್ತದೆ. ಈಗಾಗಲೇ ಬೆಂಗಳೂರಿಗರು ಲಸಿಕೆಗೆ ಎಲ್ಲಾ ದಿನಾಂಕ ನಿಗದಿಪಡಿಸಿಕೊಂಡಿದ್ದಾರೆ. ಸ್ಥಳೀಯ ರಿಗೆ ಲಸಿಕೆ ಪಡೆಯಲು ಸಾಧ್ಯವಾಗುತ್ತಿಲ್ಲ. ಗ್ರಾಮೀಣ ಪ್ರದೇಶಗಳಲ್ಲಿ ಕೆಲವೇ ಕೆಲವರಿಗೆ ಅಂತರ್ಜಾಲ ಮತ್ತು ತಾಂತ್ರಿಕತೆ ಬಗ್ಗೆ ತಿಳಿದಿರುತ್ತದೆ. ಗ್ರಾಮೀಣ ಪ್ರದೇಶದ ಜನರಿಗೆ ಸ್ಮಾರ್ಟ್ ಫೋನ್ಗಳ ಬಗ್ಗೆ ಸಾಕಷ್ಟು ಅರಿವಿಲ್ಲದೆ ವಂಚಿತರಾಗುತ್ತಿದ್ದಾರೆ. ಮುಖ್ಯವಾಗಿ ಲಸಿಕಾ ಕೇಂದ್ರ ಗಳಲ್ಲಿ ಸಾಮಾಜಿಕ ಅಂತರವೇ ಕಂಡು ಬರುತ್ತಿಲ್ಲ. ಸರ್ಕಾರ ಇನ್ನಾದರೂ ಲಸಿಕಾ ಕೇಂದ್ರಗಳ ಬಳಿ ಮೂಲಭೂತ ಸೌಕರ್ಯ ವ್ಯವಸ್ಥೆಗೆ ಮುಂದಾಗಬೇಕು.
ಲಸಿಕೆ ಹಾಕುವ ತನಕ ಲಸಿಕೆ ಹಾಕಿಸಿಕೊಳ್ಳುವವರಿಗೆ ಚೇರ್ ವ್ಯವಸ್ಥೆ ಮಾಡಬೇಕು. ಅಧಿಕಾರಿಗಳು ಹೇಳುವ ಪ್ರಕಾರ ಸರ್ಕಾರದ ಆದೇಶ ಬರುವವರೆಗೂ ನಾವು ಆನ್ಲೈನ್ನಲ್ಲಿ ನೋಂದಾಯಿಸಿಕೊಂಡವರಿಗೆ ಮಾತ್ರ ಲಸಿಕೆ ಹಾಕಬಹುದು, ಬೆಂಗಳೂರಿನವರು ಮೊದಲೇ ಆನ್ಲೈನ್ನಲ್ಲಿ ನೋಂದಾಯಿಸಿ ದಿನಾಂಕ ನಿಗದಿಪಡಿಸಿ ಕೊಂಡಿದ್ದು ಆನ್ಲೈನ್ ಮುಖಾಂತರ ಸರ್ಟಿಫಿಕೇಟ್ ಪಡೆದಿದ್ದಾರೆ. ಈ ರೀತಿ ಇರುವಾಗ ಸಮಸ್ಯೆ ಹೆಚ್ಚು ಕಾಣಿಸುತ್ತಿದೆ. ಈ ಕುರಿತು ಸರ್ಕಾರದ ಗಮನಕ್ಕೂ ತಂದಿದ್ದೇವೆ ಎಂದು ಅಧಿಕಾರಿಗಳು ಹೇಳುತ್ತಾರೆ. 18-44 ವರ್ಷ ವಯಸ್ಸಿನವರಿಗೆ ಲಸಿಕೆ ಸಮಸ್ಯೆ ಕಾಡ ತೊಡಗುತ್ತಿದೆ.
ಕೊವ್ಯಾಕ್ಸಿನ್ ಲಸಿಕೆ 1 ಓಪನ್ ಮಾಡಲು 10 ಜನ ಇರಬೇಕು. ಇಲ್ಲದಿದ್ದರೆ ವ್ಯರ್ಥವಾಗುತ್ತದೆ. ಕೆಲವರು ಮೊದಲ ಡೋಸ್ ತೆಗೆದುಕೊಂಡವರು 2ನೇ ಡೋಸ್ಗೆ ಕಾಯುತ್ತಿದ್ದಾರೆ. ಲಸಿಕೆ ಪಡೆಯುವವರ ಸಂಖ್ಯೆ ಹೆಚ್ಚಿದೆ:ಇನ್ನು ಕೆಲವರು ಲಸಿಕೆ ಖಾಲಿ ಎಂದು ವಾಪಸ್ ಹೋಗುವವರ ಸಂಖ್ಯೆಯೂ ಹೆಚ್ಚಾಗಿದೆ. ಈ ಹಿಂದೆ ಲಸಿಕೆ ಹಾಕಿಸಿಕೊಳ್ಳಲು ಕರೆದು ಕರೆದು ಹಾಕಿಸಲಾಗುತ್ತಿತ್ತು. ಈಗ ಜನ ಬಂದರೂ ಲಸಿಕೆ ಇಲ್ಲದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿದ್ಯುತ್ ಕಂಬಕ್ಕೆ ಬಿಯರ್ ಸಾಗಿಸುತ್ತಿದ್ದ ಲಾರಿ ಡಿಕ್ಕಿ; ಚಾಲಕ ಸ್ಥಳದಲ್ಲೇ ಸಾವು
ಚೇತನಾ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯ, ಸಿದ್ದಾಪುರ (ಉ.ಕ.)
ಸುಳ್ಯ-ಸಂಪಾಜೆಯಲ್ಲಿ ಮತ್ತೆ ಕಂಪನ; ಒಂದೇ ವಾರದಲ್ಲಿ ನಾಲ್ಕನೇ ಬಾರಿ ನಡುಗಿದ ಭೂಮಿ!
ದ.ಕ., ಉಡುಪಿಯಲ್ಲಿ ಎಡೆಬಿಡದೆ ಸುರಿದ ಮಳೆ; ಹಲವೆಡೆ ಹಾನಿ
ಉಡುಪಿ: ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಸನ್ನದ್ಧರಾಗಿ: ಮನೋಜ್ ಜೈನ್
MUST WATCH
ಮಲ್ಲಾರು : ಗಾಳಿ ಮಳೆಗೆ ಹಾರಿ ಹೋದ ಶಾಲೆಯ ಮೇಲ್ಛಾವಣಿ, ವಿದ್ಯಾರ್ಥಿಗಳು ಕಂಗಾಲು
ಬಾಳೆ ಕೃಷಿ ಮಾಡಿ ಸೈ ಎನಿಸಿಕೊಂಡಿರುವ ಕಳಸದ ಪ್ರಕಾಶ್ ಕುಮಾರ್
ಕಾಪು ತಾಲೂಕಿನಾದ್ಯಂತ ಭಾರೀ ಮಳೆ ತಗ್ಗು ಪ್ರದೇಶಗಳಲ್ಲಿ ನೆರೆ ಭೀತಿ
ಮಹಾ ತಿರುವು ; ಏಕನಾಥ್ ಶಿಂಧೆಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟು ಕೊಟ್ಟ ಬಿಜೆಪಿ
ಸುರತ್ಕಲ್ ಸುತ್ತಮುತ್ತ 15 ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು
ಹೊಸ ಸೇರ್ಪಡೆ
ಶೀತಲ್ ಶೆಟ್ಟಿ ನಿರ್ದೇಶನದ ಮರ್ಡರ್ ಮಿಸ್ಟ್ರಿ ‘ವಿಂಡೋಸೀಟ್’ ಜರ್ನಿ ಶುರು
ಮಣಿಪುರ: ಧಾರಾಕಾರ ಮಳೆಗೆ ಭಾರೀ ಭೂಕುಸಿತ-14 ಮಂದಿ ಸಾವು, 60 ಜನರು ಜೀವಂತ ಸಮಾಧಿ?
ವಿದ್ಯುತ್ ಕಂಬಕ್ಕೆ ಬಿಯರ್ ಸಾಗಿಸುತ್ತಿದ್ದ ಲಾರಿ ಡಿಕ್ಕಿ; ಚಾಲಕ ಸ್ಥಳದಲ್ಲೇ ಸಾವು
ಸಾಮಾನ್ಯ ಮನುಷ್ಯನ ಅಸಾಮಾನ್ಯ ಶಕ್ತಿ: ಇಂದಿನಿಂದ ‘ಬೈರಾಗಿ’ ದರ್ಶನ
ಚೇತನಾ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯ, ಸಿದ್ದಾಪುರ (ಉ.ಕ.)