ವೀರಪ್ಪ ಮೊಯ್ಲಿ ಸಾಧನೆ ಶೂನ್ಯ: ದ್ವಾರಕನಾಥ್‌


Team Udayavani, Apr 2, 2019, 5:00 AM IST

veerappa

ದೇವನಹಳ್ಳಿ: 2 ಬಾರಿ ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದ ಎಂ.ವೀರಪ್ಪಮೊಯ್ಲಿ ಅವರ ಸಾಧನೆ ಶೂನ್ಯ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಎಸ್‌ಪಿ ಅಭ್ಯರ್ಥಿ ದ್ವಾರಕಾನಾಥ್‌ ದೂರಿದರು.

ನಗರದ ಬಿಬಿ ರಸ್ತೆಯ ಪ್ರತ್ರಿಕಾ ಭವನದಲ್ಲಿ ನಡೆದ ಬಿಎಸ್‌ಪಿ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ದೇವನಹಳ್ಳಿ ಸಮೀಪ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಂದಿದ್ದು, ಭೂಮಿ ಕಳೆದುಕೊಂಡ ಸ್ಥಳೀಯ ರೈತರ ಮಕ್ಕಳಿಗೆ ಯಾವುದೇ ಉದ್ಯೋಗ ಸಿಗುತ್ತಿಲ್ಲ.

ಇರುವ ಅಲ್ಪ ಭೂಮಿಯಲ್ಲಿ ನೀರಿನ ಕೊರತೆಯಿಂದ ವ್ಯವಸಾಯ ಮಾಡಲಾಗದೆ ಉದ್ಯೋಗಕ್ಕಾಗಿ ವಲಸೆ ಹೋಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬೇಸರಿಸಿದರು. ಇಷ್ಟು ವರ್ಷ ರಾಜ್ಯದ ಚುಕ್ಕಾಣಿ ಹಿಡಿದ ಪಕ್ಷಗಳು ತಮ್ಮ ಸ್ವಾರ್ಥದಿಂದ ರೈತರನ್ನು ಮರೆತಿದ್ದಾರೆ.

ಕಾಂಗ್ರೆಸ್‌, ಜೆಡಿಎಸ್‌ ಮತ್ತು ಬಿಜೆಪಿಯ ದುರಾಡಳಿತ ತನ್ನ ಗೆಲುವಿಗೆ ವರವಾಗಲಿದೆ. ಎತ್ತಿನ ಹೊಳೆ ಯೋಜನೆಯಿಂದ ಯಾವುದೇ ನೀರು ಬಯಲು ಸೀಮೆ ಪ್ರದೇಶಗಳಿಗೆ ಹರಿಯುವುದು ಕಷ್ಟ. ಡಾ.ಪರಮಶಿವಯ್ಯ ವರದಿ ಪ್ರಕಾರ ಕೃಷ್ಣ ಮತ್ತು ಕಾವೇರಿ ನದಿ ನೀರು ಸಮರ್ಪಕವಾಗಿ ಈ ಭಾಗಕ್ಕೆ ಹರಿದು ಬರುವಂತೆ ಮಾಡಬೇಕಾಗಿದೆ.

ಕೆ.ಸಿ.ವ್ಯಾಲಿ, ಎನ್‌.ಸಿ. ವ್ಯಾಲಿ ನೀರು ವಿಷಯುಕ್ತವಾಗಿದೆ. ಹೀಗಾಗಿ ನದಿ ನೀರಿನ ಜೋಡಣೆ ಅವಶ್ಯಕ ಎಂದು ಹೇಳಿದರು. ದಲಿತ ಚಳವಳಿಯಿಂದ ತನ್ನ ಸಾಮಾಜಿಕ ಜೀವನ ಪ್ರಾರಂಭವಾಯಿತು. ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್‌ರ ಅಭಿಲಾಷೆ, ಬಿಎಸ್‌ಪಿ ಸಂಸ್ಥಾಪಕರಾದ ದಿ.ಕಾನ್ಶಿರಾಮ್‌ರ ದೀನದಲಿತರ ಪರವಾದ ವಿಚಾರಗಳು ತನಗೆ ಇಷ್ಟವಾಗಿ ಬಿಎಸ್‌ಪಿ ಸೇರಿದ್ದೇನೆ. ಈ ಮೂಲಕ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದೇನೆಂದರು.

ಈಗಿನ ರಾಜಕಾರಣ ಏಕೆ ಕೆಟ್ಟದ್ದಾಗಿದೆ. ಅಂದರೆ ರಾಜಕೀಯಕ್ಕೆ ಒಳ್ಳೆಯ ಮನೋಭಾವನೆ ಇರುವ ಮುಖಂಡರು ಬರುತ್ತಿಲ್ಲ. ಮಾನವ ಹಕ್ಕುಗಳ ಬಗ್ಗೆ ಹೋರಾಟ ಮಾಡಿರುವ ತನಗೆ ಸೈನಿಕರ ಸ್ಥಿತಿಗತಿ ನೋಡಿ ಮರುಕ ವ್ಯಕ್ತವಾಗುತ್ತಿದೆ. ದೇಶ ಕಾಯುವ ರೈತರಿಗೆ ಸರಿಯಾದ ಊಟವಿಲ್ಲ, ಇದರ ಬಗ್ಗೆ ಚಿಂತನೆ, ಈ ಭಾಗದ ರೈತರಿಗೆ ನೀರಿನ ಕೊರತೆ, ಕುಡಿಯುವ ನೀರಿಗೆ ತತ್ವಾರವಿದೆ ಎಂದು ಹೇಳಿದರು.

ಬಿಎಸ್‌ಪಿ ಕೇವಲ ಒಂದು ಜಾತಿಯನ್ನು ಓಲೈಸುತ್ತಿದೆ ಎಂಬ ಪ್ರಶ್ನೆಗೆ, ಇದು ಸುಳ್ಳಿನ ಕಂತೆ, ಬಿಎಸ್‌ಪಿಯಲ್ಲಿ ಎಲ್ಲಾ ಜಾತಿಯ ಮುಖಂಡರು, ಕಾರ್ಯಕರ್ತರು ಇದ್ದಾರೆ. ಆದರೆ ರಾಜ್ಯದಲ್ಲಿ ಜಾತಿ ರಾಜಕಾರಣ ನಡೆಯುತ್ತಿದೆ. ಆಂಧ್ರದ ಪವನ್‌ಕಲ್ಯಾಣ್‌ ಕರ್ನಾಟಕದ ಗಡಿ ಭಾಗಗಳಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ. ಮತದಾರರು ಕ್ರಮಸಂಖ್ಯೆ 1ರ ಆನೆ ಗುರುತಿಗೆ ಮತ ನೀಡಿ ಎಂದು ಹೇಳಿದರು.

ಈ ವೇಳೆ ಸಂಘಟನೆಯ ಹೂಡಿ ವೆಂಕಟೇಶ್‌, ಹೈಕೋರ್ಟ್‌ ವಕೀಲ ಶ್ರೀನಿವಾಸ್‌, ಸಾತನೂರು ಆನಂದ್‌, ಬೆಂ.ಗ್ರಾ ಬಿಎಸ್ಪಿ ಉಪಾಧ್ಯಕ್ಷ ಸಾವಕನಹಳ್ಳಿ ಶ್ರೀನಿವಾಸ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.