ಗಗನಕ್ಕೇರಿದ ತರಕಾರಿ ಬೆಲೆ: ಸುಸ್ತಾದ ಗ್ರಾಹಕ


Team Udayavani, Apr 30, 2019, 3:00 AM IST

gagana

ದೇವನಹಳ್ಳಿ: ಬಿಸಿಲಿನ ಝಳಕ್ಕೆ ಮಾರುಕಟ್ಟೆಯಲ್ಲಿ ತರಕಾರಿಗಳ ಬೆಲೆ ಗಗನಕ್ಕೇರಿದೆ. ತೋಟಗಳಲ್ಲಿ ತರಕಾರಿ ಬೆಳೆ ಸರಿಯಾಗಿ ಬಾರದ ಕಾರಣ ತರಕಾರಿ ಮತ್ತು ಸೊಪ್ಪುಗಳ ಬೆಲೆ ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಬಿಸಿ ತಟ್ಟುವಂತಾಗಿದೆ.

ದಿನೇ ದಿನೆ ಬಿಸಿಲಿನ ಧಗೆ ಹೆಚ್ಚಾಗುತ್ತಿದ್ದು, ಮಾರುಕಟ್ಟೆಯಲ್ಲಿ ತಾಜಾ ತರಕಾರಿಗಳು ಬರುತ್ತಿಲ್ಲ. ಬೆಲೆ ಏರುತ್ತಿರುವುದರಿಂದ ಗ್ರಾಹಕರಲ್ಲಿ ಖರೀದಿ ಆತಂಕ ಉಂಟಾಗಿದೆ. ತರಕಾರಿ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಗ್ರಾಹಕರು ಕೆ.ಜಿ.ಗಟ್ಟಲೇ ಖರೀದಿಸುವ ಬದಲಿಗೆ ಅರ್ಧ, ಕಾಲು ಕೆ.ಜಿ.ಗೆ ಇಳಿದಿದ್ದಾರೆ. ಕೆಲವರಂತೂ ಸೊಪ್ಪುಗಳ ಖರೀದಿಯತ್ತ ಮುಖ ಮಾಡಿದ್ದಾರೆ. ಜನರು ಗಗನಕ್ಕೇರಿರುವ ಬೆಲೆಯ ಬಗ್ಗೆ ಲೆಕ್ಕಾಚಾರ ಹಾಕತೊಡಗಿದ್ದಾರೆ.

ಸಾಂಬರ್‌ಗೆ ತರಕಾರಿ ಬಳಕೆ ಕಡಿಮೆ: ತರಕಾರಿ ಬೆಲೆ ಏರಿಕೆಯಿಂದ ಮಹಿಳೆಯರಂತೂ ದಿನನಿತ್ಯ ಯಾವ ಅಡುಗೆ ಮಾಡುವುದು ಎಂಬ ಚಿಂತೆಗೀಡಾಗಿದ್ದಾರೆ. ತರಕಾರಿ ಬೆಲೆ ಎಷ್ಟೇ ಗಗನಕ್ಕೇರಿದರೂ ತಿನ್ನುವುದು ತಪ್ಪುವುದಿಲ್ಲ ಎಂದು ಮಹಿಳಾ ಗ್ರಾಹಕರ ವಾದವಾಗಿದೆ. ಕಾಯಿಪಲ್ಯ ಸವಿಯುತ್ತಿದ್ದವರು ಸೊಪ್ಪಿನ ಸಾರು ಮಾಡಲು ಮುಂದಾಗುತ್ತಿದ್ದಾರೆ.

ಅದರಲ್ಲೂ ಮದುವೆ ಸೀಜನ್‌ ಇರುವುದರಿಂದ ತರಕಾರಿ ಬೆಲೆ ಗಗನಕ್ಕೇರಿದ ಪರಿಣಾಮ ಬಡವರು ಹಾಗೂ ಮಧ್ಯಮ ವರ್ಗದವರು ಪಲ್ಯಗಳ ಬಗ್ಗೆ ಚಿಂತನೆ ಮಾಡುವಂತಾಗಿದೆ. ಹೀಗೆಯೇ ಬೆಲೆ ಹೆಚ್ಚಾಗುತ್ತಿದ್ದರೆ ಮದುವೆ ಊಟದ ಸಾಂಬರ್‌ಗೆ ತರಕಾರಿ ಬಳಕೆ ಕಡಿಮೆಯಾಗುವ ಸಾಧ್ಯತೆಯೂ ಇಲ್ಲದಿಲ್ಲ. ಅದರ ಬದಲಿಗೆ ತಿಳಿಸಾರು, ಅನ್ನ ಮಾಡಿ ಬಡಿಸುವುದು ಸೂಕ್ತ ಎಂದು ಅಡುಗೆ ಭಟ್ಟರ ಅಭಿಪ್ರಾಯವಾಗಿದೆ.

ಗ್ರಾಹಕರು ತರಕಾರಿ ಮತ್ತು ಸೊಪ್ಪು ಖರೀದಿ ಮಾಡಲು ಹೊರಟ ಸಂದರ್ಭದಲ್ಲಿ ಬೆಲೆ ಗಗನಕ್ಕೇರಿದೆ. ಬೇಸಿಗೆ ಮತ್ತು ಇತ್ತೀಚಿನ ದಿನಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಯಾವುದೇ ಬೆಳೆ ಕೊಯ್ಲು ಹಾಗೂ ಇಳುವರಿಯಲ್ಲಿ ವ್ಯತ್ಯಯವಾಗಿದೆ. ಹಾಗಾಗಿ, ಮಾರುಕಟ್ಟೆಗೆ ತರಕಾರಿ ಸರಿಯಾದ ರೀತಿಯಲ್ಲಿ ಸರಬರಾಜು ಆಗುವಲ್ಲಿ ಅನಾನುಕೂಲವಾಗುತ್ತಿದೆ.

ಮಾರುಕಟ್ಟೆಯಲ್ಲಿ ಗ್ರಾಹಕರು ಈರುಳ್ಳಿ ಎಷ್ಟು ಬೆಲೆ, ಹುರುಳಿಕಾಯಿ ಎಷ್ಟು ದರ, ಹೀರೇಕಾಯಿ ಎಷ್ಟು ಬೆಲೆ, ಕ್ಯಾರೆಟ್‌ ಹೇಗೆ ಎಂದು ಕೇಳುತ್ತಿರುವುದು ಮಾರುಕಟ್ಟೆಯಲ್ಲಿ ಕಂಡುಬಂದಿತು. ಸೊಪ್ಪು, ತರಕಾರಿಗಳ ಬೆಲೆ ಕೇಳಿ ಗ್ರಾಹಕರಿಗೆ ಶಾಕ್‌ ಆಗಿದೆ. ಈಗಿನ ಮಾರುಕಟ್ಟೆಯಲ್ಲಿ ಈರುಳ್ಳಿ ಒಂದು ಕೆ.ಜಿ.ಗೆ 20ರೂ., ಆಲೂಗೆಡ್ಡೆ 20ರೂ., ಹುರುಳಿಕಾಯಿ ಕೆ.ಜಿ.ಗೆ ರೂ.120, ಕ್ಯಾರೆಟ್‌ 50ರೂ., ಟೊಮೆಟೋ 40ರೂ., ಕೊತ್ತುಂಬರಿ ಕೆ.ಜಿ.ಗೆ 100ರೂ., ಪುದೀನ ಕಟ್ಟು 20ರೂ., ಮೆಂತ್ಯೆ ಸೊಪ್ಪು 20ರೂ., ಸಬ್ಬಕ್ಕಿ 30ರೂ. ಮತ್ತು ದಂಟು, ಪಾಲಕ್‌, ಹರಿವೆ,

ಚೊಕ್ಕೊತ ಸೊಪ್ಪು ಕಟ್ಟಿಗೆ 10ರೂ., ಬೆಳುಳ್ಳಿ 80ರೂ., ಮೆಣಸಿನಕಾಯಿ 100ರೂ., ಬದನೆಕಾಯಿ 40ರೂ., ಬೆಂಡೆಕಾಯಿ 40ರೂ., ತೊಂಡೆಕಾಯಿ 40ರೂ., ನವಿಲುಕೋಸು 40ರೂ., ಹೂಕೋಸು 30ರೂ., ಎಲೆಕೋಸು 30ರೂ., ಸೌತೇಕಾಯಿ ಕೆ.ಜಿ.ಗೆ 40ರೂ., ಕ್ಯಾಪ್ಸಿಕಂ 60ರೂ., ಬಟಾಣಿ 120ರೂ., ಮೂಲಂಗಿ 40ರೂ., ಶುಂಟಿ 120ರೂ., ಬೀಟ್‌ರೂಟ್‌ 40ರೂ., ನುಗ್ಗೆಕಾಯಿ 50 ರೂ. ಹಾಗೂ ಬೇಸಿಗೆ ಇರುವುದರಿಂದ ಒಂದು ನಿಂಬೆಹಣ್ಣಿಗೆ 5ರೂ.ನಂತೆ ದರ ಹೆಚ್ಚಿಸಿಕೊಂಡಿವೆ.

ಬೆಲೆಗಳು ಏರುತ್ತಲೇ ಇವೆ: ಒಂದು ತಿಂಗಳಿನಿಂದ ತರಕಾರಿ ಹಾಗೂ ಆಹಾರ ಧಾನ್ಯಗಳ ಬೆಲೆ ಹೆಚ್ಚಾಗುತ್ತಿರುವುದರಿಂದ ಜನಸಾಮಾನ್ಯರಲ್ಲಿ ಆತಂಕ ಹೆಚ್ಚಾಗಲು ಕಾರಣವಾಗಿದೆ. ನಿನ್ನೆ ಇದ್ದ ಬೆಲೆ ಇಂದು ಇರುವುದಿಲ್ಲ, ಇಂದು ಇದ್ದ ಬಲೆ ನಾಳೆ ಇರುವುದಿಲ್ಲ. ನಿತ್ಯ ತರಕಾರಿ ಹಾಗೂ ಆಹಾರ ಪದಾರ್ಥಗಳ ಬೆಲೆಗಳು ಏರುತ್ತಲೇ ಇವೆ ಎಂದು ಗ್ರಾಹಕರ ಅಭಿಪ್ರಾಯವಾಗಿದೆ.

ಬೇಸಿಗೆ ಕಾಲದಲ್ಲಿ ನೀರಿನ ಅಭಾವ ಹೆಚ್ಚಾಗಿರುತ್ತದೆ. ತೋಟಗಳಲ್ಲಿ ನೀರಿನ ಕೊರತೆ ಇರುವುದರಿಂದ ಸರಿಯಾದ ರೀತಿ ತರಕಾರಿಗಳು ಮಾರುಕಟ್ಟೆಗೆ ಬರುವುದು ಕಷ್ಟವಾಗುತ್ತದೆ. ಮಳೆ ಇಲ್ಲ, ಬೆಳೆ ಇಲ್ಲ, ಕೂಲಿ ಸಿಗುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಬೆಳೆಗಳ ಬೆಲೆಗಳು ಜಾಸ್ತಿಯಾದರೂ ತರಕಾರಿ ಖರೀದಿಸಬೇಕು. ರೈತರು ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ತರಕಾರಿ ಬೆಲೆ ಹೆಚ್ಚಾಗಿರುವುದರಿಂದ ಎಷ್ಟೇ ಬೆಲೆ ಏರಿದರೂ ಖರೀದಿಸಲೇಬೇಕು.
-ಸೌಮ್ಯಾ, ಗೃಹಿಣಿ.

ಪ್ರತಿನಿತ್ಯ ಮಾರುಕಟ್ಟೆಯಲ್ಲಿ ಎಲ್ಲಾ ತರಕಾರಿಗಳನ್ನು ತಂದು ಮಾರುವುದೇ ನಮ್ಮ ಉದ್ಯೋಗ. ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಸರಿಯಾದ ರೀತಿ ತರಕಾರಿಗಳು ಮಾರುಕಟ್ಟೆಗೆ ಬರುತ್ತಿಲ್ಲ. ಹೆಚ್ಚು ಬೆಲೆ ಕೊಟ್ಟು ತರಕಾರಿ ತಂದು ಮಾರುತ್ತಿದ್ದೇವೆ. ಕೊತ್ತುಂಬರಿ ಸೊಪ್ಪನ್ನು ಕೇಳುವಹಾಗೇಯಿಲ್ಲ. ಸೊಪ್ಪಿನಲ್ಲಿ ಹೆಚ್ಚು ದುಬಾರಿ ಕೊತ್ತುಂಬರಿಯಾಗಿದೆ. ಬಟಾಣಿ ಒಂದು ಕೆ.ಜಿ.ಗೆ 120ರೂ., ಹುರುಳಿಕಾಯಿ ಕೆ.ಜಿ.ಗೆ 120ರೂ. ಇದೆ.
-ನೇತ್ರಾವತಿ, ತರಕಾರಿ ವ್ಯಾಪಾರಿ.

ಬಿಸಿಲು ಹೆಚ್ಚಾಗಿರುವುದರಿಂದ ಸೊಪ್ಪು³ಗಳು ಸರಿಯಾದ ಸಮಯಕ್ಕೆ ಬರುತ್ತಿಲ್ಲ. ದಂಟಿನ ಸೊಪ್ಪು ಕಟ್ಟಿಗೆ 10ರೂ. ಇದೆ. ಸಬ್ಬಕ್ಕಿ 30ರೂ., ಮೆಂತೆ ಸೊಪ್ಪು 20ರೂ.ನಂತೆ ಮಾರಾಟವಾಗುತ್ತಿದೆ. ಕೊತ್ತಂಬರಿ ಸೊಪ್ಪು ಒಂದು ಕೆ.ಜಿ.ಗೆ 100ರೂ. ಆಗಿದೆ. ಕರಬೇವಿನ ಸೊಪ್ಪು ಒಂದು ಕಟ್ಟಿಗೆ 10ರೂ. ಇತ್ತು, ಈಗ ಕೆ.ಜಿ.ಗೆ 50-60ರೂ.ಆಗಿದೆ. ಸೊಪ್ಪಿನ ಬೆಲೆ ಏರಿಕೆಯಿಂದ ಗ್ರಾಹಕರು ಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಬಿಸಿಲಿನ ತಾಪಕ್ಕೆ ಸೊಪ್ಪುಗಳು ಒಣಗಿ ಹೋಗುತ್ತಿವೆ.
-ಲಕ್ಷ್ಮಮ್ಮ, ಸೊಪ್ಪು ವ್ಯಾಪಾರಿ.

* ಎಸ್‌.ಮಹೇಶ್‌

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಕಾಂಗ್ರೆಸ್‌ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್‌ನಲ್ಲಿ ಉದ್ವಿಗ್ನ ಸ್ಥಿತಿ

Crime: ಕಾಂಗ್ರೆಸ್‌ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್‌ನಲ್ಲಿ ಉದ್ವಿಗ್ನ ಸ್ಥಿತಿ

Ganja peddler: ಪೊಲೀಸರ ಮೇಲೆಯೇ  ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್‌ಗೆ ಗುಂಡೇಟು; ಸೆರೆ

Ganja peddler: ಪೊಲೀಸರ ಮೇಲೆಯೇ  ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್‌ಗೆ ಗುಂಡೇಟು; ಸೆರೆ

R.Ashok

Assembly Electionನಲ್ಲಿ ಮೈತ್ರಿಗೆ ದೇವೇಗೌಡರು ಒಪ್ಪಲಿಲ್ಲ: ಅಶೋಕ್‌

BRural

Devanahalli: ಗ್ರಾಮ ಪಂಚಾಯಿತಿಗಳಲ್ಲಿ ಇ- ಜನ್ಮ ದಾಖಲೆ

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.