ವಾಹನ ಎಳೆದಾಡಿದ ಹುಲಿ ವಿಡಿಯೋ ವೈರಲ್


Team Udayavani, Jan 16, 2021, 12:13 PM IST

tiger

ಆನೇಕಲ್‌: ಬೆಂಗಳೂರು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಹುಲಿ ಸಿಂಹ ಸಫಾರಿ ಆವರಣದಲ್ಲಿ ಹುಲಿ ಒಂದು ಪ್ರವಾಸಿಗರನ್ನು ಕರೆದೊಯ್ದಿದ್ದ ವಾಹನವನ್ನು ಎಳೆದಾಡಿದ ಹಳೆ ವಿಡಿಯೋ ಒಂದು ಈಗ ವೈರಲ್‌ ಆಗಿದೆ.

ಕಳೆದ ವರ್ಷದ ಕೊನೆಯ ನ.22 ರಂದು ಈ ದೃಶ್ಯವನ್ನು ಜೆಸ್ವಿನ್‌.ಸಿ ಹೆಸರಿನಲ್ಲಿ ಯೂಟ್ಯೂಬ್‌ಗ ಅಪ್‌ಲೋಡ್‌ ಆಗಿದೆ. ಕಳೆದ ಹತ್ತು ದಿನಗಳ ಹಿಂದೆಯೂ ಸಾಮಾಜಿಕ ಜಾಲತಾಣದಲ್ಲಿ ಇದೇ ವಿಡಿಯೋ ಹರಿದಾಡುತ್ತಿತ್ತು. ಆದರೆ ಶುಕ್ರವಾರ ಈ ವಿಡಿಯೋ ದೃಶ್ಯ ಮಾಧ್ಯಮಗಳಲ್ಲಿ ಇತ್ತೀಚೆಗೆ ನಡೆದ ಘಟನೆ ಎಂದು ಪ್ರಸಾರ ಮಾಡಲಾಗಿದೆ.

ಇಂಜಿನ್‌ ಆಫ್ ಆಗಿತ್ತು: ಉದ್ಯಾನ ವನದಲ್ಲಿನ ಸಫಾರಿಯ ಹುಲಿ ಆವರಣದಲ್ಲಿ ಗಂಡು ಹುಲಿ ರಂಜನ್‌ ಇದಾಗಿದ್ದು, ಕೆಲ ವರ್ಷಗಳಿಂದ ಈ ರೀತಿ ವರ್ತಿಸುತ್ತಿದೆ. ಈ ವಿಡಿಯೋದಲ್ಲಿ ಸೆರೆಯಾಗಿರುವ ದಿನ ಸಹ ಸಫಾರಿ ವಾಹನ ಸೈಲೋ (ವಾಹನ) ಪ್ರವಾಸಿಗರನ್ನು ಕರೆದೊಯ್ದಿತ್ತು. ಆ ಸಮಯದಲ್ಲಿ ವಾಹನದ ಇಂಜಿನ್‌ ಆಫ್ ಆಗಿದೆ. ಮತ್ತೆ ಸ್ಟಾರ್ಟ್ ಮಾಡಲು ಚಾಲಕ ಮುಂದಾದರೂ ಬ್ಯಾಟರಿ ಸಮಸ್ಯೆಯಿಂದ ಸಾಧ್ಯವಾಗಿರಲಿಲ್ಲ. ಆಗ ಹುಲಿ ರಂಜನ್‌ ವಾಹನ ಹಿಂಭಾಗದಿಂದ ಬಂಪರ್‌ನ್ನು ಕಚ್ಚಿ ಎಳೆದು ಹೋಗಲು ಯತ್ನಿಸಿದೆ. ಇದನ್ನು ಮತ್ತೂಂದು ಪ್ರವಾಸಿ ವಾಹನದಲ್ಲಿದ್ದ ಪ್ರವಾಸಿಗರು ಸೆರೆ ಹಿಡಿದು ನ.22 ರಂದು ಯೂಟ್ಯೂಬ್‌ಗ ಅಪ್‌ಲೋಡ್‌ ಮಾಡಿದ್ದಾರೆ.= ಇದೇ ರೀತಿ ಸಿಂಹ ಒಂದು ಸಫಾರಿ ವಾಹನದ ಚಕ್ರ ಕಚ್ಚಲು ಹೋಗಿದ್ದ ವಿಡಿಯೋ ಸಹ ಸೆರೆಯಾಗಿ ವೈರಲ್‌ ಆಗಿತ್ತು. ಕರಡಿ ಸಫಾರಿ ವಾಹನದ ಕಿಟಕಿ ಹಿಡಿದು ನಿಂತಿರುವ ವಿಡಿಯೋ ಸಹ ಸೆರೆಯಾಗಿತ್ತು. ಇಂತಹ ಘಟನೆಗಳು ಸಫಾರಿಯಲ್ಲಿ ಆಗಿಂದಾಗ್ಗೆ ನಡೆಯುತ್ತಿರುವುದು ಸಾಮಾನ್ಯವಾಗಿದೆ.

ಇದನ್ನೂ ಓದಿ:ಭಾರತದಲ್ಲಿ ಬಡವರಿಗೂ ಕೈಗೆಟುಕುವ ದರದಲ್ಲಿ ವ್ಯಾಕ್ಸಿನ್ ಲಭ್ಯ: ಕೆ.ಎಸ್.ಈಶ್ವರಪ್ಪ

ಹಳೆ ವಿಡಿಯೋ ಈಗ ವೈರಲ್‌: ಇಂತಹ ಘಟನೆ ಸಾಮಾನ್ಯ

ಈ ವಿಡಿಯೋ ಕುರಿತು ಉದ್ಯಾನವನದ ಕಾರ್ಯನಿರ್ವಾಹಕ ನಿರ್ದೇಶಕರಾದ ವನಶ್ರೀ ವಿಪಿನ್‌ ಸಿಂಗ್‌ ಮಾತನಾಡಿ, ಈ ವಿಡಿಯೋ ತುಂಬಾ ಹಳೆಯದು. ಯಾರೋ ಪ್ರವಾಸಿಗರು ಈಗ ವಿಡಿಯೋವನ್ನು ವೈರಲ್‌ ಮಾಡಿದ್ದಾರೆ. ಅಂದು ಸಫಾರಿ ವಾಹನದ ಬ್ಯಾಟರಿ ಸಮಸ್ಯೆಯಾಗಿತ್ತು. ನಮ್ಮ ರೆಸ್ಕ್ಯೂ ಟೀಮ್‌ ಕೂಡಲೇ ಹೋಗಿ ವಾಹನವನ್ನು ಅಲ್ಲಿಂದ ಹೊರ ತಂದಿದ್ದಾರೆ. ಹುಲಿ ಹಾಗೂ ಪ್ರವಾಸಿಗರಿಗೆ ಯಾವುದೇ ತೊಂದರೆ ಆಗಿಲ್ಲ ಎಂದು ಅವರು ಹೇಳಿದರು. ಸಫಾರಿಯಲ್ಲಿ ಇಂತಹ ಘಟನೆಗಳು ಸಾಮಾನ್ಯವಾಗಿರುತ್ತವೆ. ಆದರೆ ಸಾರ್ವಜನಿಕರು ಆ ವಿಡಿಯೋಗಳನ್ನು ವೈರಲ್‌ ಮಾಡಿದರೆ ನಾವು ಏನು ಹೇಳಲು ಸಾಧ್ಯವಿಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.