ವೇಣುಗೋಪಾಲಸ್ವಾಮಿ ಬ್ರಹ್ಮರಥೋತ್ಸವ


Team Udayavani, Feb 21, 2019, 9:03 AM IST

blore-8.jpg

ದೇವನಹಳ್ಳಿ: ನಗರದ ಇತಿಹಾಸ ಪ್ರಸಿದ್ಧ ವೇಣುಗೋಪಾಲಸ್ವಾಮಿ ಬ್ರಹ್ಮರಥೋತ್ಸವ ಅಪಾರ ಭಕ್ತರ ನಡುವೆ ವಿಜೃಂಭಣೆಯಿಂದ ನಡೆಯಿತು. ನಗರದ ಕೋಟೆ ವೇಣುಗೋಪಾಲಸ್ವಾಮಿಗೆ ಮೊದಲು ತಾಲೂಕು ಕಚೇರಿಯ ಖಜಾನೆಯಲ್ಲಿರುವ ರಾಜಮಹಾರಾಜರ ಕಾಲದ ಚಿನ್ನದ ಆಭರಣಗಳನ್ನು ತಂದು ಅಲಂಕಾರ ಮಾಡಲಾಯಿತು.  ನವರತ್ನಖಚಿತ ಆಭರಣಗಳ ವಿನ್ಯಾಸ ಪೂರ್ವಕ ನೂತನ ವಸ್ತ್ರಾಲಂಕಾರ, ವಿಶೇಷ ಹೂವಿನ ಅಲಂಕಾರ, ಸುಮಂಗಲಿಯರ ಭಕ್ತಿ ಗೀತಾ ಗಾಯನ, ಭಕ್ತ ಸಮೂಹ ಜಯಘೋಷದೊಂದಿಗೆ ಬ್ರಹ್ಮ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಸಾವಿರಾರು ಭಕ್ತರಿಂದ ರಾಧ ಕೃಷ್ಣ, ಗೋಪಾಲ ಕೃಷ್ಣ, ಗೋವಿಂದಾ, ಗೋವಿಂದಾ ಎಂದು ನಾಮಸ್ಮರಣೆ ಮಾಡಿದರು.

ವೇಣುಗೋಪಾಲಸ್ವಾಮಿ ಬ್ರಹ್ಮರಥೋತ್ಸವಕ್ಕೆ ಚಾಲನೆ ನೀಡುವ ಮೊದಲು ತಹಸೀಲ್ದಾರ್‌ ಕೇಶವ ಮೂರ್ತಿ ಹಾಗೂ ಶಾಸಕ ನಿಸರ್ಗ ಎಲ್‌ ಎನ್‌ ನಾರಾಯಣಸ್ವಾಮಿ ದಂಪತಿಗಳು ವಿಶೇಷ ಪೂಜೆ ನೆರವೇರಿಸಿದರು. ಬಾನಿನಲ್ಲಿ ಗರುಡ ಕಾಣಿಸಿಕೊಂಡು ದೇವಾಲಯ ಮತ್ತು ರಥದ ಸುತ್ತ ಪ್ರದಕ್ಷಿಣೆಯ ನಂತರ ದಾರಿಯುದ್ದಕ್ಕೂ ನೆರದಿದ್ದ ಭಕ್ತರು ರಥದ ಕಲಶಕ್ಕೆ ಬಾಳೆಹಣ್ಣು ಮತ್ತು ದವನ ಎಸೆದು ಭಕ್ತಿ ಸಮರ್ಪಿಸಿದರು.

ತಹಶೀಲ್ದಾರ್‌ ಕೇಶವ ಮೂರ್ತಿ ಮಾತನಾಡಿ, ಪ್ರತಿವರ್ಷದಂತೆ ಶ್ರೀವೇಣುಗೋಪಾಲಸ್ವಾಮಿ ಬ್ರಹ್ಮರಥೋತ್ಸವದಲ್ಲಿ ಅಪಾರ ಭಕ್ತರು ಸ್ವಾಮಿ ದರ್ಶನ ಪಡೆದಿದ್ದಾರೆ. ಧಾರ್ಮಿಕ ಕಾರ್ಯಕ್ರಮಗಳು ಹೆಚ್ಚು ನಡೆದಾಗ ಮಾತ್ರ, ಸಮಾಜದಲ್ಲಿ ಶಾಂತಿ, ನೆಮ್ಮದಿ ಸಾಧ್ಯವಾಗುತ್ತದೆ. 

ತಾಲೂಕು ಈ ಬಾರಿ ಬರಗಾಲಕ್ಕೆ ತುತ್ತಾಗಿದ್ದು ವೇಣುಗೋಪಾಲಸ್ವಾಮಿ ಯು ಮುಂದಿನ ದಿನಗಳಲ್ಲಿ ಉತ್ತಮ ಮಳೆಯನ್ನು ಕರುಣಿಸಿ ರೈತರು ಜೀವನವನ್ನು ಅಸುನು ಮಾಡಲಿ ಎಂದು ಪ್ರಾರ್ಥಿಸಿದರು.

ಶಾಸಕ ನಿಸರ್ಗ ಎಲ್‌ ಎನ್‌ ನಾರಾಯಣಸ್ವಾಮಿ ಮಾತನಾಡಿ, ವೇಣುಗೋಪಾಲಸ್ವಾಮಿ ದೇಗುಲ ನೂರಾರು ವರ್ಷಗಳ ಇತಿಹಾಸ ಹೊಂದಿದೆ. ರಾಜ ಮಹಾರಾಜರ ಕಾಲದಿಂದಲೂ ದೇಗುಲದಲ್ಲಿ ರಥೋತ್ಸವ ಆಚರಣೆ ನಿರಂತರವಾಗಿ ನಡೆದುಕೊಂಡು ಬಂದಿದ್ದು, ಅಪಾರ ಭಕ್ತರನ್ನು ದೇಗುಲ ಹೊಂದಿದೆ. ದೇವರ ಕೃಪೆಯಿಂದ ಮಳೆ,ಬೆಳೆ ಸಮಯಕ್ಕೆ ಸರಿಯಾಗಿ ಆಗಿ ದೇಶ ಸುಭಿಕ್ಷವಾಗಬೇಕಿದೆ ಎಂದು ಹೇಳಿದರು.

ಈ ವೇಳೆಯಲ್ಲಿ ಮಾಜಿ ಶಾಸಕ ಜಿ.ಚಂದ್ರಣ್ಣ, ಮಾಜಿ ಪುರಸಭಾಧ್ಯಕ್ಷ ಸಿ.ಜಗನ್ನಾಥ್‌, ನರಸಿಂಹಮೂರ್ತಿ, ಎ.ಎನ್‌.ವಂಸತ್‌ ಬಾಬು, ಹಾಪ್‌ ಕಾಮ್ಸ್‌ ಉಪಾಧ್ಯಕ್ಷ ಮುನೇಗೌಡ, ಪುರಸಭಾಧ್ಯಕ್ಷ ಎಂ.ಮೂರ್ತಿ, ಉಪಾಧ್ಯಕ್ಷೆ ಆಶಾರಾಣಿ, ಪುರಸಭಾ ಸ್ಥಾಯಿಸಮಿತಿ ಅಧ್ಯಕ್ಷ ಗೋಪಾಲಕೃಷ್ಣ , ಸದಸ್ಯರಾದ ವೈಸಿ ಸತೀಶ್‌ ಕುಮಾರ್‌, ಎನ್‌.ರಘು, ಜಿ.ಎ.ರವೀಂದ್ರ, ವಿ.ಗೋಪಾಲ್‌, ಜಿ.ಎನ್‌.ವೇಣುಗೋಪಾಲ್‌, ಎಂ.ಕುಮಾರ್‌, ನಾರಾಯಣಸ್ವಾಮಿ, ಪದ್ಮಾವತಿ, ಶಾರದಮ್ಮ, ರತ್ನಮ್ಮ, ಬೇಕರಿ ಮಂಜುನಾಥ್‌ ಮತ್ತಿತರರು ಇದ್ದರು.

ಊರ ಹಬ್ಬದಂತೆ ಅನ್ನಸಂತರ್ಪಣೆ ರಥೋತ್ಸವ ಅಂಗವಾಗಿ ವೇಣುಗೋಪಾಲಸ್ವಾಮಿ ಅನ್ನದಾನ ಸಮಿತಿ ವತಿಯಿಂದ ನಗರದ ಪಾರ್ಕ್‌ ರಸ್ತೆಯಲ್ಲಿರುವ ಅಣ್ಣಯ್ಯಪ್ಪ ಛತ್ರದಲ್ಲಿ ಪ್ರತಿ ವರ್ಷದಂತೆ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ವೇಣುಗೋಪಾಲಸ್ವಾಮಿ ಅನ್ನದಾನ ಸಮಿತಿ ವತಿಯಿಂದ 1993-94ನೇ ಸಾಲಿನಲ್ಲಿ ದಾನಿಗಳ ನೆರವಿನಿಂದ ಅನ್ನಸಂತರ್ಪಣೆ ಪ್ರಾರಂಭವಾಗಿ 2018ನೇ ಸಾಲಿಗೆ 26 ವರ್ಷಗಳನ್ನು ಪೂರೈಸಿದೆ. ಸದಸ್ಯರು ಹಾಗೂ ಹಿರಿಯರ ಅಪೇಕ್ಷೆಯಂತೆ ಈ ವರ್ಷ ಸಮಿತಿ ಬಡ್ಡಿ ಹಣವನ್ನು ತೆಗೆಯದೆ ಧನ, ದಾನ್ಯಗಳನ್ನು ಸಂಗ್ರಹಿಸಿ ಊರಿನ ಹಬ್ಬದಂತೆ ಅನ್ನಸಂತರ್ಪಣೆಯನ್ನು ನಡೆಸಲಾಯಿತು ಎಂದು ಬ್ರಹ್ಮ ರಥೋತ್ಸವ ಅನ್ನದಾನ ಸಮಿತಿ ತಿಳಿಸಿದೆ.

ವೇಣುಗೋಪಾಲಸ್ವಾಮಿ ಬ್ರಹ್ಮ ರಥೋತ್ಸವಕ್ಕೆ ಆಗಮಿಸಿದ್ದ 8 ಸಾವಿರ ಜನರಿಗೆ ಅನ್ನಸಂತರ್ಪಣೆಯನ್ನು ಮಾಡಿದರು. 25ನೇ ವರ್ಷದ ಅಂಗವಾಗಿ ಭಕ್ತರಿಗೆ ಅವರೇ ಕಾಳು ಸಾರು, ಮುದ್ದೆ, ಹೋಳಿಗೆ, ಪಕೋಡ, ಅನ್ನರಸ, ಎರಡು ತರದ ಪಲ್ಯ, ಪಾಯಿಸ, ಬೂಂದಿಯನ್ನು ಭಕ್ತರು ಸವಿದರು. ಈ ವೇಳೆಯಲ್ಲಿ ಶಾಸಕ ನಿಸರ್ಗ ಎಲ್‌ ಎನ್‌ ನಾರಾಯಣಸ್ವಾಮಿ , ಮಾಜಿ ಶಾಸಕ ಜಿ.ಚಂದ್ರಣ್ಣ, ಕೆಪಿಸಿಸಿ ರಾಜ್ಯ ಹಿಂದುಳಿದ ವರ್ಗದ ರಾಜ್ಯ ಉಪಾಧ್ಯಕ್ಷ ಸಿ.ಜಗನ್ನಾಥ್‌, ತಹಶೀಲ್ದಾರ್‌ ಕೇಶವ ಮೂರ್ತಿ, ಹಾಪ್‌ ಕಾಮ್ಸ್‌ ಉಪಾಧ್ಯಕ್ಷ ಮುನೇಗೌಡ, ಉಪತಹಸೀಲ್ದಾರ್‌ ಪಿ.ಗಂಗಾಧರ್‌, ಪುರಸಭಾ ಅಧ್ಯಕ್ಷ
ಎಂ.ಮೂರ್ತಿ ಇತರರು ಹಾಜರಿದ್ದರು.

ಟಾಪ್ ನ್ಯೂಸ್

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.