ಪ್ರವಾಸಿಗರ ಆಕರ್ಷಿಸುವ ವಿಜಯ ವಿಠ್ಠಲ ಆಶ್ರಮ


Team Udayavani, May 4, 2019, 3:00 AM IST

pravasigar

ನೆಲಮಂಗಲ: ಪಟ್ಟಣಕ್ಕೆ ಹೊಂದಿಕೊಂಡಂತಿರುವ ಅರಿಶಿನಕುಂಟೆಯಲ್ಲಿರುವ ಶ್ರೀ ವಿಜಯ ವಿಠ್ಠಲ ಆಶ್ರಮ ಪ್ರವಾಸಿಗರನ್ನು ಆಕರ್ಷಿಸುತ್ತಿದೆ.

1988ರಲ್ಲಿ ಉಡುಪಿ ಜಿಲ್ಲೆಯ ಭದ್ರಗಿರಿ ಸದ್ಗುರು ಸಂತ ಶ್ರೀ ಕೇಶವದಾಸರಿಂದ ಪ್ರಾರಂಭವಾದ ವಿಶ್ವಶಾಂತಿ ಆಶ್ರಮದಲ್ಲಿರುವ 36ಅಡಿ ಎತ್ತರದ ಶ್ರೀ ವಿಜಯ ವಿಠ್ಠಲ ಪಾಂಡುರಂಗಸ್ವಾಮಿ ಏಕಶಿಲಾ ಮೂರ್ತಿ ವಿಶ್ವಕ್ಕೆ ಶಾಂತಿಯನ್ನು ಸಾರುವಂತೆ ಕಂಗೊಳಿಸುತ್ತಿರುವುದು ಇಲ್ಲಿನ ವಿಶೇಷವಾಗಿದೆ.

ಪ್ರಸನ್ನ ದುರ್ಗಾದೇವಿ: ಪಾಂಡುರಂಗಸ್ವಾಮಿ ಅಕ್ಕಪಕ್ಕದಲ್ಲಿ ಅಷ್ಟಲಕ್ಷ್ಮೀಯರ ದೇವಾಲಯಗಳನ್ನು ನಿರ್ಮಾಣ ಮಾಡಲಾಗಿದ್ದು, ಸುಮಾರು 14ಎಕರೆ ವಿಸ್ತೀರ್ಣದಲ್ಲಿರುವ ಶ್ರೀ ಕ್ಷೇತ್ರಕ್ಕೆ ಪ್ರವೇಶಿಸುತ್ತಿದ್ದಂತೆ ಪ್ರಾರಂಭದಲ್ಲಿಯೇ ಶ್ರೀ ವೀರಾಂಜನೇಯ ಸ್ವಾಮಿ ದರ್ಶನವಾಗುತ್ತದೆ.

ನಂತರ ಶ್ರೀ ವಿಶ್ವಂಭರ ಗಣಪತಿ, ರಾಮದೇವರ ಪರಿಹಾರ, ದತ್ತಾತ್ರೇಯ, ಸುಬ್ರಹ್ಮಣ್ಯ, ರಾಧಾಕೃಷ್ಣ ಮತ್ತು ನವಗ್ರಹಗಳ ದೇವಾಲಯದ ಮೂಲಕ ಮುಂದೆ ಸಾಗಿದರೆ ಬಲ ಭಾಗಕ್ಕೆ ಪ್ರಸನ್ನ ದುರ್ಗಾದೇವಿ ಭಕ್ತರನ್ನು ಆಶೀರ್ವದಿಸಿ, ಅವರ ಇಷ್ಟಾರ್ಥಗಳನ್ನು ಈಡೇರಿಸುವ ಶಕ್ತಿ ದೇವತೆಯಾಗಿದ್ದಾಳೆ.

ವಿಠ್ಠಲನ ಏಕಶಿಲಾ ಮೂರ್ತಿ: ಆಶ್ರಮದ ಕೇಂದ್ರ ಬಿಂಧುವಿನಂತಿರುವ ಸುಮಾರು 36ಅಡಿ ಎತ್ತರದ ಪಾಂಡುರಂಗ ವಿಠ್ಠಲನ ಏಕಶಿಲಾ ಮೂರ್ತಿಯ ಕೆಳ ಭಾಗದಲ್ಲಿ ಸುಮಾರು 2ಅಡಿ ಎತ್ತರದ ಪಾಂಡುರಂಗಸ್ವಾಮಿ ಮತ್ತು ರುಕ್ಮಿಣಿ ದೇವಿ ವಿಗ್ರಹಗಳಿಗೆ ಪ್ರತಿನಿತ್ಯ ಪೂಜೆ ಮಾಡಲಾಗುತ್ತದೆ.

ವಿಷ್ಣುವಿನ ವಿಶ್ವರೂಪ ದರ್ಶನ: ಪಾಂಡುರಂಗನ ದರ್ಶನದ ಬಳಿಕ ಪ್ರವಾಸಿಗರನ್ನು ಆಕರ್ಷಿಸುವುದು ಸಪ್ತ ನದಿಗಳ ಸಂಗಮದ ದೃಶ್ಯ. ಇದಕ್ಕೆ ಹೊಂದಿಕೊಂಡಂತೆ ನಾಲ್ಕು ಕುದುರೆಗಳುಳ್ಳ ಬೃಹತ್‌ ರಥದಲ್ಲಿ ಶ್ರೀಕೃಷ್ಣ ಅರ್ಜುನನಿಗೆ ಗೀತೋಪದೇಶ ಮಾಡುವಂತಹ ರಮಣೀಯ ದೃಶ್ಯ ಪ್ರತಿಯೊಬ್ಬರನ್ನೂ ಮಂತ್ರಮುಗರನ್ನಾಗಿಸುತ್ತದೆ.

ಶ್ರೀ ಕೃಷ್ಣಾರ್ಜುನರ ಸಂಭಾಷಣೆ ಅತ್ಯಂತರ ಸುಂದರವಾಗಿ ಚಿತ್ರಣಗೊಂಡಿದ್ದು, ರಥದ ಹಿಂದೆ ಬೃಹತ್‌ ಕಟ್ಟಡದಲ್ಲಿ ನಿರ್ಮಾಣವಾಗಿರುವ ಸುಮಾರು 48ಅಡಿ ಎತ್ತರದ ಶ್ರೀ ವಿಷ್ಣುವಿನ ವಿಶ್ವರೂಪ ದರ್ಶನದ ಮೂರ್ತಿ ರಮಣೀಯವಾಗಿದೆ. ವಿಷ್ಣುವಿನ ವಿಶ್ವರೂಪ ದರ್ಶನ ಮಂದಿರದ ಒಳಗೆ ಮತ್ತು ಹೊರಭಾಗದಲ್ಲಿ ಭಗವದ್ಗೀತೆಯ ಸುಮಾರು 700ಶ್ಲೋಕಗಳನ್ನು ಸಂಸ್ಕೃತ, ಕನ್ನಡ, ಹಿಂದಿ, ಆಂಗ್ಲ ಭಾಷೆಗಳಲ್ಲಿ ಗ್ರಾನೈಟ್‌ ಕಲ್ಲುಗಳಲ್ಲಿ ಕೆತ್ತನೆ ಮಾಡಿಸಿ ಗೋಡೆಗಳಿಗೆ ಅಂಟಿಸಲಾಗಿದೆ.

ಸಪ್ತ ಮಹರ್ಷಿಗಳ ವಿಗ್ರಹ: ವಿಶ್ವರೂಪ ದರ್ಶನ ಮಂದಿರಲ್ಲಿರುವ 48ಅಡಿ ಎತ್ತರದ ಮೂರ್ತಿಯ ಮುಂಭಾಗದಲ್ಲಿ ಅಮೃತಶಿಲೆಯಲ್ಲಿ ನಿರ್ಮಾಣ ಮಾಡಲಾಗಿರುವ ಶ್ರೀ ಕೃಷ್ಣಾರ್ಜುನರ ಮೂರ್ತಿಗಳಿದ್ದು, ವಿಶ್ವರೂಪ ದರ್ಶನದ ಮೂರ್ತಿಯ ಸುತ್ತಲಿನಲ್ಲಿರುವ ಕಂಬಗಳಲ್ಲಿ ವಸಿಷ್ಠ, ಕಶ್ಯಪ, ಹತ್ರಿ ಮಹರ್ಷಿ, ಭಾರದ್ವಾಜ, ವಿಶ್ವಾಮಿತ್ರ, ಗೌತಮ ಮತ್ತು ಜಮದಗ್ನಿ ಮಹರ್ಷಿಗಳ ವಿಗ್ರಹಗಳನ್ನು ನಿರ್ಮಾಣ ಮಾಡಲಾಗಿದೆ. ನೆಲಮಹಡಿಯಲ್ಲಿ ಶ್ರೀ ಗಾಯತ್ರಿದೇವಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ.

ಕಲಾವಿದರು: ಗೀತಾ ಮಂದಿರದಲ್ಲಿರುವ ಕೃಷ್ಣಾರ್ಜುನರ ರಥ ಸೇರಿದಂತೆ ಮತ್ತಿತರ ಎಲ್ಲಾ ರೀತಿಯ ವಿಗ್ರಹಗಳು ಶಿವಮೊಗ್ಗದ ಕಾಶಿನಾಥ್‌ ಎಂಬುವರ ಕೈಚಳಕದಲ್ಲಿ ನಿರ್ಮಾಣವಾಗಿವೆ. ಗೀತಾ ಮಂದಿರದ ಗೋಡೆಗಳಲ್ಲಿರುವ ಭಗವದ್ಗೀತೆಯ 700ಶ್ಲೋಕಗಳನ್ನು ಕೆತ್ತನೆ ಮಾಡಿರುವುದು ಆಂಧ್ರಪ್ರದೇಶ ವಿಶಾಖ ಪಟ್ಟಣಂನ ಹಬೀಬ್‌ ಮತ್ತು ಹಂಸ ಎಂಬ ಮುಸ್ಲಿಂ ಸಹೋದರರು.

ದಾಸೋಹ: ವಾರಾಂತ್ಯದಲ್ಲಿ ವಿಹಾರಕ್ಕೆ ಬಂದು ಹೋಗುವವರು ಮತ್ತು ಪಾಂಡುರಂಗನ ಭಕ್ತರ ಸಂಖ್ಯೆ ಹೆಚ್ಚಾಗಿರುವ ಕಾರಣಕ್ಕೆ ಹಾಗೂ ಆಶ್ರಮದ ಆಸುಪಾಸಿನಲ್ಲಿ ಸಾಮಾನ್ಯ ಜನರಿಗೆ ಕೈಗೆಟುಕುವ ದರದಲ್ಲಿ ಊಟೋಪಚಾರಕ್ಕೆ ಅನುಕೂಲವಾಗಲಿ ಅಥವಾ ಹೊಟೇಲ್‌ಗ‌ಳಿಲ್ಲದ ಕಾರಣ ಆಶ್ರಮದಲ್ಲಿಯೇ ಭಾನುವಾರ ಮಧ್ಯಾಹ್ನ 12.30ರಿಂದ 3ಗಂಟೆವರೆಗೂ ಅನ್ನಸಂತರ್ಪಣೆ ನಡೆಸಲಾಗುತ್ತಿದೆ. ಆಶ್ರಮದ ಉಸ್ತುವಾರಿ ಮತ್ತು ಮೇಲ್ವಿಚಾರಣೆಯನ್ನು ಶ್ರೀ ಕೇಶವದಾಸರ ಪತ್ನಿ ರಮಾ ಅವರು ನಿರ್ವಹಿಸುತ್ತಿದ್ದಾರೆ.

ಬಸ್‌ ಮಾರ್ಗ: ಬೆಂಗಳೂರು ತುಮಕೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿರುವ ಪಟ್ಟಣ ಮತ್ತು ಅರಿಶಿನಕುಂಟೆ ಸರ್ವಿಸ್‌ ರಸ್ತೆ ಮೂಲಕ ಆಶ್ರಮಕ್ಕೆ ಹೋಗಬಹುದಾಗಿದೆ. ಬೆಂಗಳೂರು ನೆಲಮಂಗಲ ಮಾರ್ಗವಾಗಿ ಸಂಚರಿಸುವ ಬಿಎಂಟಿಸಿ, ಕೆಸ್‌ಆರ್‌ಟಿಸಿ ಬಸ್‌ ಸೇರಿದಂತೆ ಖಾಸಗಿ ಬಸ್‌ಗಳ ಮೂಲಕ ಪ್ರಯಾಣಿಸಬಹುದಾಗಿದೆ.

* ಕೊಟ್ರೇಶ್‌ ಆರ್‌.

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಕಾಂಗ್ರೆಸ್‌ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್‌ನಲ್ಲಿ ಉದ್ವಿಗ್ನ ಸ್ಥಿತಿ

Crime: ಕಾಂಗ್ರೆಸ್‌ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್‌ನಲ್ಲಿ ಉದ್ವಿಗ್ನ ಸ್ಥಿತಿ

Ganja peddler: ಪೊಲೀಸರ ಮೇಲೆಯೇ  ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್‌ಗೆ ಗುಂಡೇಟು; ಸೆರೆ

Ganja peddler: ಪೊಲೀಸರ ಮೇಲೆಯೇ  ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್‌ಗೆ ಗುಂಡೇಟು; ಸೆರೆ

R.Ashok

Assembly Electionನಲ್ಲಿ ಮೈತ್ರಿಗೆ ದೇವೇಗೌಡರು ಒಪ್ಪಲಿಲ್ಲ: ಅಶೋಕ್‌

BRural

Devanahalli: ಗ್ರಾಮ ಪಂಚಾಯಿತಿಗಳಲ್ಲಿ ಇ- ಜನ್ಮ ದಾಖಲೆ

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.