
ಸ್ಮಶಾನ ಜಾಗಕ್ಕೆ ಆಗ್ರಹಿಸಿ ಗ್ರಾಮಸ್ಥರ ಮನವಿ
Team Udayavani, Nov 23, 2022, 1:09 PM IST

ಆನೇಕಲ್: ನೆರಳೂರು, ಗುಡ್ಡಹಟ್ಟಿ ಗ್ರಾಮಗಳಲ್ಲಿ ಸ್ಮಶಾನದ ಸಮಸ್ಯೆ ಇದ್ದು, ಜೀವನದ ನಂತರದ ಸಮಾಧಿಯನ್ನು ಕಟ್ಟಿಕೊಳ್ಳಲು ಸ್ಥಳ ಗುರುತಿಸಿ ಕೊಡಬೇಕೆಂದು ಆಗ್ರಹಿಸಿ, ತಹಶೀಲ್ದಾರ್ ಶಿವಪ್ಪ ಲಮಾಣಿಗೆ ಗ್ರಾಮಸ್ಥರು ಮನವಿ ಸಲ್ಲಿಸಿದರು.
ಆನೇಕಲ್ ತಾಲೂಕಿನ ಆದಿಗೊಂಡನಹಳ್ಳಿಯಲ್ಲಿ ನಡೆದ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆಕಾರ್ಯಕ್ರಮದಲ್ಲಿ ಸುತ್ತಮುತ್ತಲ ಹಳ್ಳಿಗಳಿಂದಆಗಮಿಸಿದ ಜನರು, ತಹಶೀಲ್ದಾರ್ ಶಿವಪ್ಪ ಲಮಾಣಿಅವರಲ್ಲಿ ಸಮಸ್ಯೆಗಳ ಸರಮಾಲೆ ಮುಂದಿಟ್ಟು ಕೂಡಲೇಪರಿಹಾರ ನೀಡಬೇಕೆಂದು ಒತ್ತಾಯಿಸಿದರು.
ಈ ವೇಳೆ ಮಾತನಾಡಿದ ಗ್ರಾಮಸ್ಥರು, ಮುತ್ತಾ ನಲ್ಲೂರು ಕೆರೆಗೆ ಕೈಗಾರಿಕೆಗಳ ತ್ಯಾಜ್ಯ ನೀರು ಹರಿಯುತ್ತಿದ್ದು, ಸುತ್ತಮುತ್ತಲಿನ ಕೆರೆಗಳು ಕಲುಷಿತವಾಗಿವೆ. ಆದ್ದರಿಂದ ಕೆರೆಗೆ ಸೇರುವ ತ್ಯಾಜ್ಯ ನೀರು ಹರಿಯುವುದನ್ನು ತಡೆಯಬೇಕು. ಬೆಂಡಿಗಾನಹಳ್ಳಿಯಲ್ಲಿ ಚರಂಡಿ ಹಾಗೂ ಬೀದಿದೀಪಗಳ ವ್ಯವಸ್ಥೆ ಶೀಘ್ರ ಮಾಡಿ ಕೊಡಬೇಕು. ಸಮೀಪದ ಅಂಬೇಡ್ಕರ್ನಗರದಲ್ಲಿ ಒಳಚರಂಡಿ ವ್ಯವಸ್ಥೆ ಅವಶ್ಯಕತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.
ಶಾಲಾ ವಿದ್ಯಾರ್ಥಿಗಳ ಮನವಿ: ವಿಶೇಷವೆಂದರೇ ಸಭೆಗೆ ಆಗಮಿಸಿದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು, ಇತ್ಛಂಗೂರು-ಮಂಚನಹಳ್ಳಿ ರಸ್ತೆ ಸರಿಪಡಿಸುವಂತೆ ಮನವಿ ಸಲ್ಲಿಸಿ ಮಾತನಾಡಿ, ಕಿರಿದಾದ ದಾರಿಯಲ್ಲಿ ನಡೆಯಬೇಕಾದರೇ ಕಿರಿಕಿರಿ ಆಗುತ್ತಿದ್ದು, ಮಳೆಗಾಲದಲ್ಲಿ ತುಂಬಾ ತೊಂದರೆ ಆಗುತ್ತಿದೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳಿಗೆ ಸ್ಥಳದಲ್ಲೇ ಆದೇಶ ನೀಡಿ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಿ ಕೊಡಿ ಎಂದು ಮನವಿ ಮಾಡಿದರು.
ಶೀಘ್ರ ಕ್ರಮ ಕೈಗೊಳ್ಳುವೆ: ತಹಶೀಲ್ದಾರ್ ಶಿವಪ್ಪ ಎಚ್. ಲಮಾಣಿ ಮಾತನಾಡಿ, ಪ್ರತಿ ಗ್ರಾಮಗಳಿಗೂ ಸ್ಮಶಾನವನ್ನು ಗುರುತಿಸಿ ಕೊಡುವುದು ಸರ್ಕಾರದ ಜವಾಬ್ದಾರಿಯಾಗಿದ್ದು, ಸರ್ಕಾರಿ ಜಾಗ ಗುರುತಿಸಲಾಗುವುದು.ಇಲ್ಲವಾದಲ್ಲಿ ಮಾರುಕಟ್ಟೆ ಬೆಲೆಯಲ್ಲಿ ಜಮೀನನ್ನುಖರೀದಿ ಮಾಡಿಯಾದರೂ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು. ಕೆರೆಗೆ ತ್ಯಾಜ್ಯ ಬರದಂತೆಸಂರಕ್ಷಿಸಲು ಉತ್ಛ ನ್ಯಾಯಾಲಯ ಆದೇಶ ನೀಡಿದ್ದು,ಶೀಘ್ರ ಕ್ರಮ ವಹಿಸಲಾಗುವುದು. ಶಾಲಾ-ವಿದ್ಯಾರ್ಥಿ ಗಳ ಮನವಿಯನ್ನು ಕೂಡಲೇ ಪರಿಶೀಲಿಸುವುದಾಗಿ ಹೇಳಿದರು.
ನೆರಳೂರು ಗ್ರಾಪಂ ಅಧ್ಯಕ್ಷೆ ಭಾರತಿ ನಾಗರಾಜು, ಉಪಾಧ್ಯಕ್ಷ ಶಶಿಕುಮಾರ್, ತಾಪಂ ಡಿಡಿಅನಿಲ್ ಕುಮಾರ್, ಟಿಎಚ್ಒ ಡಾ. ರವಿ, ಬಿಇಒ ಜೆ.ಎಂ. ಜಯಲಕ್ಷ್ಮೀ, ಕೃಷಿ ಅಧಿಕಾರಿ ಧನಂಜಯ, ಸಿಡಿಪಿಒ ಕವಿತಾ, ಪಿಡಿಒ ಶಶಿಕಿರಣ್ ಇದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

“ಮಗುವನ್ನು ಉಳಿಸಲು ಆಗುವುದಿಲ್ಲ.. ಮಕ್ಕಳನ್ನು ಕೊಂದು ತಾವೂ ಆತ್ಮಹತ್ಯೆ ಮಾಡಿಕೊಂಡ ದಂಪತಿ

ಬಂಡಾಯಕ್ಕೇ ಸದ್ಯ ಬಿಸಿ: ಭಿನ್ನ ಧ್ವನಿಗಳ ಮೆತ್ತಗಾಗಿಸಲು ಅಖಾಡಕ್ಕೆ ಇಳಿದ ಬಿಜೆಪಿ ವರಿಷ್ಠರು

ಎಲ್ಲ ಕಾಲೇಜುಗಳಲ್ಲೂ ರಾಯಣ್ಣ, ನೇತಾಜಿ ಪ್ರತಿಮೆ ಸ್ಥಾಪನೆಗೆ ಆದೇಶ: ಸಿಎಂ ಬೊಮ್ಮಾಯಿ

ನಾರೀಶಕ್ತಿಗೆ ಜೈಕಾರ: ಮಿಲಿಟರಿಯಲ್ಲಿ ನಾರೀಶಕ್ತಿ, ಸ್ತಬ್ಧಚಿತ್ರಗಳಲ್ಲೂ “ನಾರಿ’

ಅ-19 ಮಹಿಳಾ ಟಿ20 ವಿಶ್ವಕಪ್: ಇಂದು ಭಾರತ-ನ್ಯೂಜಿಲೆಂಡ್ ಉಪಾಂತ್ಯ