ಸರ್ಕಾರಿ ಸ್ಮಶಾನ ಕಬಳಿಕೆಗೆ ನಕಲಿ ದಾಖಲೆ ಸೃಷ್ಟಿ


Team Udayavani, Oct 30, 2022, 11:38 AM IST

ಸರ್ಕಾರಿ ಸ್ಮಶಾನ ಕಬಳಿಕೆಗೆ ನಕಲಿ ದಾಖಲೆ ಸೃಷ್ಟಿ

ನೆಲಮಂಗಲ: ನಕಲಿ ದಾಖಲೆ ಸೃಷ್ಟಿಸಿ ಮೂರ್‍ನಾಲ್ಕು ಕೋಟಿ ಬೆಲೆ ಬಾಳುವ ಸ್ಮಶಾನ ಜಾಗವನ್ನು ಕಬಳಿಕೆ ಮಾಡಿದ್ದಾರೆ ಎಂದು ಟಿ.ಬೇಗೂರು ಗ್ರಾಪಂ ಕಚೇರಿ ಎದುರು ಅಣಕು ಶವಯಾತ್ರೆ ಮಾಡಿ ಗ್ರಾಮಸ್ಥರು ಪ್ರತಿಭಟನೆ ಮಾಡಿದರು.

ತಾಲೂಕಿನ ಟಿ.ಬೇಗೂರು ಗ್ರಾಮದಲ್ಲಿ ಮಾತ್ರ ಜಿಲ್ಲಾಧಿಕಾರಿ ಗ್ರಾಮಕ್ಕೆ ನೀಡಿದ್ದ ಸರ್ವೆ ನಂ. 247ರ 2.20 ಎಕರೆ ಜಮೀನುನಲ್ಲಿ 1.10 ಎಕರೆ ಜಾಗವನ್ನು 307, 308, 309ರ ಸರ್ವೆ ನಂಬರ್‌ಗೆ ಸೇರಿಸಿ ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳಿಗೆ ಖಾತೆ ಮಾಡಿದ್ದಾರೆ. ಟಿ.ಬೇಗೂರಿನ ಪಿಡಿಒ ಈ ಜಾಗಕ್ಕೆ ಇ-ಖಾತೆ ನೀಡಿದ್ದು, ಅಧಿಕಾರಿಗಳ ವೈಫ‌ಲ್ಯ ಹಾಗೂ ಭ್ರಷ್ಟಾಚಾರಕ್ಕೆ ಸ್ಮಶಾನ ಜಾಗ ಬಲಿಯಾಗಿದೆ. ನಮಗೆ ನ್ಯಾಯ ಸಿಗುವವರೆಗೂ ಗ್ರಾಪಂ ಕಚೇರಿ ಬಿಟ್ಟು ಹೋಗುವುದಿಲ್ಲ ಎಂದುಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪಿಡಿಒ ಹಣ ಪಡೆದ ಆರೋಪ: ಟಿ.ಬೇಗೂರು ಗ್ರಾಪಂನ ಪಿಡಿಒ ಉಷಾ ಅವರು ಆರ್‌ಎಸ್‌ಎಸ್‌ ಮುಖ್ಯಸ್ಥ ಪ್ರಭಾಕರ್‌ ಭಟ್‌ ಹೆಸರು ಹೇಳಿಕೊಂಡು ಧಮ್ಕಿ ಹಾಕುತ್ತಿದ್ದಾರೆ. ಸಮಯಕ್ಕೆ ಸರಿ ಯಾಗಿ ಕಚೇರಿಗೆ ಬರುತ್ತಿಲ್ಲ ಎಂಬ ಆರೋಪದ ಬೆನ್ನಲ್ಲೆ, ಹಣ ಪಡೆದು ಸ್ಮಶಾನದ ಜಾಗಕ್ಕೆ ಇ-ಖಾತೆ ಮಾಡಿದ್ದು, ಪ್ರಶ್ನೆ ಮಾಡಿದರೆ ಪ್ರಭಾವಿಗಳ ಒತ್ತಡವಿತ್ತು ಮಾಡಿದ್ದೇನೆ ಎಂದು ಬೇಜಾವಬ್ದಾರಿ ಉತ್ತರ ನೀಡುತ್ತಿದ್ದಾರೆ. ಇಂತಹ ಪಿಡಿಒ ಅವರನ್ನು ಅಮಾ ನತು ಮಾಡಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಅಣುಕು ಶವಯಾತ್ರೆ: ಸ್ಮಶಾನ ಜಾಗವನ್ನು ಕಬಳಿಕೆ ಮಾಡಲು ಕೆಲ ಗ್ರಾಪಂ ಸದಸ್ಯರು, ತಾಪಂ ಮಾಜಿ ಸದಸ್ಯರು, ಪಿಡಿಒ, ಕಂದಾಯ ಇಲಾಖೆ ಅಧಿಕಾರಿಗಳು, ಭೂಮಾಪನ ಇಲಾಖೆಯ ಅಧಿಕಾರಿಗಳು ಶಾಮೀಲಾಗಿದ್ದು, ಇವರು ನಮ್ಮ ಗ್ರಾಮದ ಪಾಲಿಗೆ ಸತ್ತಿದ್ದಾರೆ. ಮೇಲಾಧಿಕಾರಿಗಳು ನ್ಯಾಯ ನೀಡ ಬೇಕು ಎಂದು ಗ್ರಾಮಸ್ಥರು ಹಾಗೂ ಕಾಂಗ್ರೆಸ್‌ ಮುಖಂಡರು ಅಣುಕು ಶವಯಾತ್ರೆ ಮಾಡಿದರು.

ತಹಶೀಲ್ದಾರ್‌ ಭೇಟಿ, ಭರವಸೆ: ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್‌ ಮಂಜು ನಾಥ್‌ ಸರ್ವೆ ಮಾಡಿ ಸ್ಮಶಾನ ಜಾಗವನ್ನು ಸರ್ಕಾರದ ವ್ಯಾಪ್ತಿಗೆ ತರುವುದು ನಮ್ಮ ಹೊಣೆ. ಮುಂದಿನ ತಿಂಗಳು ಸ್ಥಳದ ಸರ್ವೆ ನಡೆಸಿ ದಾಖಲಾತಿ ಪರಿಶೀಲನೆ ಮಾಡಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುತ್ತದೆ ಎಂದು ಗ್ರಾಮಸ್ಥರಿಗೆ ಭರವಸೆ ನೀಡಿ ಸ್ಮಶಾನ ಜಾಗದ ಸ್ಥಳ ಪರಿಶೀಲನೆ ಮಾಡಿದರು.

ಉಗ್ರ ಹೋರಾಟ: ಭರವಸೆಯಂತೆ ನಮ್ಮ ಗ್ರಾಮದ ಸ್ಮಶಾನ ಉಳಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರಹೋರಾಟ ಮಾಡಲಾಗುತ್ತದೆ. ಹೆದ್ದಾರಿಯಲ್ಲಿ ಕುಳಿತು ಅಹೋರಾತ್ರಿ ಧರಣಿ ಮಾಡಲು ಸಿದ್ದರಿದ್ದೇವೆ ಎಂದು ಯೂತ್‌ ಕಾಂಗ್ರೆಸ್‌ ಅಧ್ಯಕ್ಷ ನಾರಾಯಣಗೌಡ, ಮುಖಂಡ ಶ್ರೀನಿವಾಸ್‌, ಬಾಲಾಜಿಗೌಡ ಎಚ್ಚರಿಕೆ ನೀಡಿದ್ದಾರೆ.

ಇಒ ಮೋಹನ್‌ಕುಮಾರ್‌, ಪಿಡಿಒ ಉಷಾ, ಸ್ಥಳೀಯ ಮುಖಂಡ ಬಾಲಾಜಿಗೌಡ, ಮಲ್ಲಯ್ಯ, ನಾರಾಯಣಗೌಡ, ಕರಿವರ ದಯ್ಯ, ಪ್ರಕಾಶ್‌, ಸಿದ್ದಲಿಂಗಯ್ಯ, ರಮೇಶ್‌, ಪರಮೇಶ್‌, ಹನುಮಯ್ಯ, ಬೈರೇಗೌಡ, ನಾರಾಯಣಗೌಡ, ತಿಮ್ಮಾರಸಯ್ಯ, ಕೆಂಪರಾಜು ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.