ವಿಷ್ಣು ಸ್ಮಾರಕ ಬೆಂಗಳೂರಲ್ಲೇ ನಿರ್ಮಿಸಿ


Team Udayavani, Nov 29, 2018, 12:56 PM IST

blore-10.jpg

ನೆಲಮಂಗಲ: ಸಾಹಸಸಿಂಹ ಡಾ.ವಿಷ್ಣು ವರ್ಧನ್‌ ಸ್ಮಾರಕವನ್ನು ಬೆಂಗಳೂರಿನಲ್ಲಿಯೇ ನಿರ್ಮಾಣ ಮಾಡಬೇಕೆಂದು ಆಗ್ರಹಿಸಿ ವಿಷ್ಣು ವರ್ಧನ್‌ ಸೇವಾ ಸಮಿತಿ ಕಾರ್ಯಕರ್ತರು ಬೃಹತ್‌ ಪ್ರತಿಭಟನೆ ನಡೆಸಿದರು.

ಪಟ್ಟಣ ಸೊಂಡೆಕೊಪ್ಪ ರಸ್ತೆಯಲ್ಲಿರುವ ಹೊನ್ನಗಂಗಯ್ಯನ ಪಾಳ್ಯದಲ್ಲಿರುವ ಡಾ. ವಿಷ್ಣುವರ್ಧನ್‌ ಮಂದಿರದ ಎದುರು ಡಾ.
ವಿಷ್ಣು ಸೇವಾ ಸಮಿತಿ ಪದಾಧಿಕಾರಿಗಳು ಮತ್ತು ವಿಷ್ಣು ಅಭಿಮಾನಿಗಳು ಬೃಹತ್‌ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರ ಕೂಡಲೆ ಸ್ಮಾರಕ ನಿರ್ಮಿಸಬೇಕೆಂದು ಒತ್ತಾಯಿಸಿದರು.

ಮೂವರೂ ದಿಗ್ಗಜರು ಒಂದೇ ಕಡೆ: ಈ ವೇಳೆ ಮಾತನಾಡಿದ ಡಾ.ವಿಷ್ಣು ಸೇವಾ ಸಮಿತಿ ರಾಜ್ಯಾಧ್ಯಕ್ಷ ವಿ.ಕುಮಾರ್‌, ಕಳೆದ 9 ವರ್ಷಗಳಿಂದ ವಿಷ್ಣು ಸ್ಮಾರಕ ನಿರ್ಮಾಣ ವಾಗುತ್ತದೆ ಎಂದು ಕಾತರದಿಂದ ಕಾಯುತ್ತಿದ್ದೇವೆ. ಆದರೆ, ವಿಷ್ಣು ಅಣ್ಣನಿಗೆ ಸ್ಮಾರಕ ನಿರ್ಮಾಣ ಮಾಡಲು ಸರ್ಕಾರ ಮುಂದಾಗದೇ ಅಭಿಮಾನಿಗಳಿಗೆ ಮೋಸ ಮಾಡಿದೆ ಎಂದುಆಕ್ರೋಶ ವ್ಯಕ್ತಪಡಿಸಿದರು. 

ಕಂಠೀರವ ಸ್ಟುಡಿಯೋದಲ್ಲಿ ವಿಷ್ಣು ಸ್ಮಾರಕ ನಿರ್ಮಾಣ ಮಾಡಲಾಗುವುದು ಎಂಬ ಮುಖ್ಯಮಂತ್ರಿ ಕುಮಾರಸ್ವಾಮಿ
ಮಾತು ಕೇಳಿ ಬಹಳ ಸಂತೋಷವಾಗಿತ್ತು. ಆದರೆ, ನಟ ಅನಿರುದ್ಧ ಹೇಳಿಕೆ ಸರಿಯಲ್ಲ. ನಮಗೆ ವಿಷ್ಣು ಸ್ಮಾರಕ ಎಲ್ಲಾದರೂ ಪರವಾಗಿಲ್ಲ. ಪ್ರಥಮ ಆದ್ಯತೆಯಾಗಿ ಕಠೀರವ ಸ್ಟುಡಿಯೊದಲ್ಲೇ ಸ್ಮಾರಕ ನಿರ್ಮಾಣವಾದರೆ ಕನ್ನಡ ಚಲನ ಚಿತ್ರ ರಂಗದ ಮೂವರೂ ದಿಗ್ಗಜರನ್ನು ಒಂದೇ ಕಡೆ ನೋಡುವ ಭಾಗ್ಯ ನಮ್ಮದಾಗುತ್ತದೆ ಎಂದು ಹೇಳಿದರು.

ಬೆಂಗಳೂರಿನಲ್ಲೇ ವಿಷ್ಣು ಮಂದಿರ ನಿರ್ಮಿಸಿ: ಈ ವಿಚಾರದಲ್ಲಿ ನಟ ಅನಿರುದ್ಧ್ ವೈಯಕ್ತಿಕ ವಿಚಾರಗಳನ್ನು ಮುಂದೆ
ತರದೇ ಸಾಹಸಸಿಂಹ ವಿಷ್ಣುರ ಸ್ಮಾರಕ ನಿರ್ಮಾಣ ಮಾಡಬೇಕು. ಮುಖ್ಯ ಮಂತ್ರಿಗಳು ಯಾರ ಮಾತಿಗೂ ಗಮನ ಹರಿಸದೇ ಅಭಿಮಾನಿಗಳ ಆಸೆಯಂತೆ ಬೆಂಗಳೂರಿನಲ್ಲಿಯೇ ವಿಷ್ಣು ಮಂದಿರ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿದರು.

ರಾಜ್ಯಾದ್ಯಂತ ಪ್ರತಿಭಟನೆ ಎಚ್ಚರಿಕೆ: ಸ್ಮಾರಕ ನಿರ್ಮಾಣ ಮಾಡದಿದ್ದರೆ ನೆಲಮಂಗಲ ದಿಂದ ಬೆಂಗಳೂರಿನವರೆಗೂ ಬೃಹತ್‌ ಮೆರೆವಣಿಗೆ ಮತ್ತು ರಾಜ್ಯಾದ್ಯಂತ ಪ್ರತಿ ಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ವಿಷ್ಣು ಅಭಿಮಾನಿ ಯಶ್ವಂತ್‌ ಮಾತನಾಡಿ, ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಅಭಿಮಾನಿಗಳಿಂದ ಪೂರ್ಣ ಸಹಕಾರವಿದೆ. ಬೆಂಗಳೂರಿನಲ್ಲಿಯೇ ಸ್ಮಾರಕ ನಿರ್ಮಾಣ ಮಾಡಿದರೆ ಅಭಿಮಾನಿಗಳು ಅವರ ನೆರಳಲ್ಲಿ ಕುಳಿತು ಅವರ ಆಶ್ರಯ ಪಡೆದಷ್ಟು ಸಂತೋಷ ಪಡುತ್ತೇವೆ. ಸಮಾಜಕ್ಕೆ ವಿಷ್ಣುವರ್ಧನ್‌ರ ಕೊಡುಗೆ ಅಪಾರವಾಗಿದೆ. ಸರ್ಕಾರ 9 ವರ್ಷಗಳಿಂದ ಸತಾಯಿಸುತ್ತಿರುವುದು ವಿಷ್ಣು ಮತ್ತು ಅಭಿಮಾನಿಗಳಿಗೆ ಮಾಡಿದ ಮೋಸ ಎಂದರು.

 ಈ ಸಂದರ್ಭದಲ್ಲಿ ಡಾ.ವಿಷ್ಣು ಸೇವಾ ಸಮಿತಿ ಸದಸ್ಯ ಯಶ್ವಂತ್‌, ಉಮೇಶ್‌, ಮಂಜುನಾಥ್‌, ಸುರೇಶ್‌, ಪ್ರಮೋದ್‌,
ನಾಗರಾಜು, ಸ್ನೇಕ್‌ರಾಜು, ಕೃಷ್ಣಮೂರ್ತಿ, ಧನುಷ್‌, ಲಕ್ಷ್ಮೀಕಾಂತ್‌ ಹಾಗೂ ನೂರಾರು ವಿಷ್ಣು ಅಭಿಮಾನಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.