
ದುಬೈನಲ್ಲಿ ವಿಶ್ವ ಕನ್ನಡ ಹಬ್ಬ: “ಭೂಮ್ತಾಯಿ’ ಗಾಯನ
Team Udayavani, Nov 16, 2022, 3:23 PM IST

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಮೂಲದ ಡಿ.ಆರ್. ನಿರ್ಮಲಾ ಅವರು ತಮ್ಮ ಭೂಮ್ತಾಯಿ ಬಳಗದ ತಂಡದೊಂದಿಗೆ ನ.19 ರಂದು ದುಬೈನಲ್ಲಿ ನಡೆಯಲಿರುವ ವಿಶ್ವ ಕನ್ನಡ ಹಬ್ಬ ಕಾರ್ಯಕ್ರಮದಲ್ಲಿ ತಮ್ಮ ಗಾಯನ ಕಾರ್ಯಕ್ರಮ ನೀಡಲಿದ್ದಾರೆ.
ಕರ್ನಾಟಕ ಪ್ರಸ್ ಕ್ಲಬ್ ಕೌನ್ಸಿಲ್ ವಿಶ್ವ ಕನ್ನಡ ಹಬ್ಬ ಈ ಬಗ್ಗೆ ಆದೇಶ ಪತ್ರ ನೀಡಿದ್ದು, ಡಿ.ಆರ್. ನಿರ್ಮಲಾ ಅವರನ್ನು ಆಯ್ಕೆ ಮಾಡುವುದ ರೊಂದಿಗೆ ಜಾನಪದ ಸಂಗೀತ ಕಾರ್ಯಕ್ರಮದ ಮೇಲ್ವಿಚಾರಕರಾಗಿಯೂ ಆಯ್ಕೆ ಮಾಡಲಾಗಿದೆ.
ನಿರ್ಮಲಾ ಅವರು ದೊಡ್ಡಬಳ್ಳಾ ಪುರದ ಮಾರುಕಟ್ಟೆ ಚೌಕದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವಾಗ ದೇಶಭಕ್ತಿ ಗೀತೆ, ಭಾವಗೀತೆ ಹಾಡುವ ಮೂಲಕ ಗಾಯ ನದಲ್ಲಿ ಆಸಕ್ತಿ ಬೆಳೆಸಿಕೊಂಡರು. ನಂತರ ಪ್ರೌಢಶಾಲೆಯಲ್ಲಿ ಗಂಗಮ್ಮನ ಒಕ್ಕಲು ತಂಡ ಗಾಯನ ಕಾರ್ಯಕ್ರಮ ಆಯೋ ಜನೆ ಮಾಡುತ್ತಿದ್ದರು. ಪರಿಸರ ಜಾಗೃತಿ ಗೀತೆಗಳ ತಂಡವನ್ನು ಸೇರಿದ ನಿರ್ಮಲಾ ಅನೇಕ ಕಾರ್ಯಕ್ರಮ ನೀಡುತ್ತಾ ಬಂದಿದ್ದಾರೆ.
ನಂತರ ಭೂಮ್ತಾಯಿ ಬಳಗ ತಂಡ ಕಟ್ಟಿಕೊಂಡು ಇಡೀ ರಾಜ್ಯಾದ್ಯಂತ ಸಂಚ ರಿಸಿ ಹಲವಾರು ಕಾರ್ಯಕ್ರಮ ನೀಡಿದ್ದಾರೆ. ಜಾನಪದ ಹಾಗೂ ನೀರಿನ ರಕ್ಷಣೆ, ಸಾಂಕ್ರಾಮಿಕ ರೋಗಗಳ ತಡೆಗಟ್ಟುವುದು ಮೊದಲಾದ ಜಾಗೃತಿ ಗೀತೆ ಈ ತಂಡದಿಂದ ಹೆಚ್ಚಾಗಿ ಮೂಡಿ ಬರು ವುದು ವಿಶೇಷ. ಕರ್ನಾಟಕ ಜಾನ ಪದ ಅಕಾಡೆಮಿಯ ಸದಸ್ಯರಾಗಿ ಅವರು ಸೇವೆ ಸಲ್ಲಿಸಿದ್ದಾರೆ.
ಕಲರ್ ಕನ್ನಡದ ಕನ್ನಡ ಕೋಗಿಲೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮೆಚ್ಚುಗೆ ಗಳಿಸಿದ್ದಾರೆ. ಉತ್ಛ ಸ್ಥಾಯಿಯಲ್ಲಿ ಹಾಡುವ ಮೂಲಕ ತಮ್ಮದೇ ಆದ ವರ್ಚ ಸ್ಸು ಗಳಿಸಿರುವ ನಿರ್ಮಲಾ ಅವರ ಇದೇ ಮೊದಲ ಬಾರಿ ವಿದೇಶಿ ನೆಲದಲ್ಲಿ ವಿಶ್ವ ಕನ್ನಡ ಹಬ್ಬ ಕಾರ್ಯಕ್ರಮದಲ್ಲಿ ತಮ್ಮ ಗಾಯನ ಕಾರ್ಯಕ್ರಮ ನೀಡ ಲಿದ್ದು, ದೊಡ್ಡಬಳ್ಳಾ ಪುರದ ಕಲಾಭಿಮಾನಿಗಳು ಶುಭ ಹಾರೈಸಿದ್ದಾರೆ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

ನೀರಿನಲ್ಲಿ ಮುಳುಗುತ್ತಿದ್ದ ಮೂವರ ಪ್ರಾಣ ಉಳಿಸಿದ ನಾಲ್ಕನೇ ತರಗತಿ ವಿದ್ಯಾರ್ಥಿ

ಐಸಿಸಿ ಏಕದಿನ ರ್ಯಾಂಕಿಂಗ್ : ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಪ್ರಗತಿ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ನಟಿ ತಾಪ್ಸಿ ಪನ್ನು ವಿರುದ್ಧ ದೂರು ದಾಖಲು