ವಿವೇಕಾನಂದರ ಆದರ್ಶ ಎಲ್ಲರಿಗೂ ಸ್ಪೂರ್ತಿದಾಯಕ
Team Udayavani, Jan 14, 2022, 8:47 PM IST
ದೇವನಹಳ್ಳಿ: ಸ್ವಾಮಿ ವಿವೇಕಾನಂದರ ತತ್ವಾದರ್ಶಗಳನ್ನು ಯುವಜನತೆ ಮೈಗೂಡಿಸಿಕೊಳ್ಳಬೇಕು. ಸ್ವಾಮಿ ವಿವೇಕಾನಂದರ ಆದರ್ಶ ಯುವಪೀಳಿಗೆಗೆ ಸ್ಫೂರ್ತಿ ತರುವಂತಹದ್ದು ಎಂದು ಮಾತೃ ವಿದ್ಯಾನಿಕೇತನ ಶಾಲೆಯ ಕಾರ್ಯದರ್ಶಿ ಮೋಹನ್ ತಿಳಿಸಿದರು.
ತಾಲೂಕಿನ ಇಲ್ಲತೊರೆ ಬಳಿಯ ಐವಿಸಿ ರಸ್ತೆಯಲ್ಲಿರುವ ಮಾತೃ ವಿದ್ಯಾನಿಕೇತನ ಶಾಲೆಯಲ್ಲಿ ನಡೆದ ಸ್ವಾಮಿ ವಿವೇಕಾನಂದರ ಜಯಂತಿಯಲ್ಲಿ ಮಾತನಾಡಿದ ಅವರು, ವಿಶ್ವದ ಅತ್ಯುತ್ತಮ ವ್ಯಕ್ತಿಯನ್ನು ಭೇಟಿಯಾಗಬೇಕಾದರೆ ದಿನದಲ್ಲಿ ಒಮ್ಮೆಯಾದರೂ ನಿಮ್ಮೊಂದಿಗೆ ಮಾತನಾಡಿ ಎಂದು ತಿಳಿಸುವುದರ ಮೂಲಕ ತಮ್ಮನ್ನು ತಾವೇ ಅತ್ಯುತ್ತಮ ವ್ಯಕ್ತಿಯೆಂದು ತೋರಿಸಿ ಕೊಟ್ಟಿದ್ದಾರೆ.
ಮಾನವೀಯತೆಯ ವಿಕಾಸವಾಗುವುದೇ ನಿಜವಾದ ಶಿಕ್ಷಣವಾಗಿದೆ ಎಂದರು. ನಾವು ಬಲಿಷ್ಠರಾಗಬೇಕಾದರೆ ಕಷ್ಟಗಳನ್ನು ಎದುರಿಸಬೇಕು. ಅವರ ಒಂದೊಂದು ನುಡಿ ಯುವ ಪೀಳಿಗೆಗೆ ದಾರಿದೀಪವಾಗಿದೆ. ಪ್ರತಿಯೊಬ್ಬರೂ ಇಂತಹ ಮಹಾನ್ ವ್ಯಕ್ತಿಗಳನ್ನು ಸ್ಮರಿಸುವುದರ ಮೂಲಕ ಅವರ ಆದರ್ಶ ತತ್ವಗಳನ್ನು ಪಾಲಿಸಬೇಕು ಎಂದು ಹೇಳಿದರು. ಶಾಲಾ ಮಕ್ಕಳು ಸ್ವಾಮಿ ವಿವೇಕಾನಂದರ ಸಮವಸ್ತ್ರ ಧರಿಸಿ ಗಮನ ಸೆಳೆದರು. ಆಡಳಿತ ಮಂಡಳಿಯ ರಾಮು, ಶಾಲಾ ಪ್ರಾಂಶುಪಾಲ ಸುರೇಶ್, ಮುಖ್ಯಶಿಕ್ಷಕಿ ಸೌಮ್ಯ, ಶಾಲಾ ಸಿಬ್ಬಂದಿ ಸೌಮ್ಯ, ಮಮತಾ, ನಿರ್ಮಲ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್ ಸಮಸ್ಯೆ
Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ
Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್ ಸ್ಪರ್ಧೆ
Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ
Road Dispute: ರಸ್ತೆ ವಿವಾದ; ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ