ಆಮಿಷಕ್ಕೆ ಒಳಗಾಗದೇ ನಿರ್ಭೀತಿಯಿಂದ ಮತದಾನ ಮಾಡಿ


Team Udayavani, Jan 26, 2019, 5:34 AM IST

prashast.jpg

ನೆಲಮಂಗಲ: ಜನರ ಕಷ್ಟಗಳಿಗೆ ಸ್ಪಂದಿಸುವ ಜನ ನಾಯಕರು ಆಯ್ಕೆಯಾಗಬೇಕಾದರೆ ಮತದಾರರು ಚುನಾವಣೆಯಲ್ಲಿ ಆಮಿಷಗಳಿಗೆ ಬಲಿಯಾಗಬಾರದು ಎಂದು ತಹಶೀಲ್ದಾರ್‌ ಕೆ.ಎನ್‌.ರಾಜಶೇಖರ್‌ ಸಲಹೆ ನೀಡಿದರು.

ಪಟ್ಟಣದ ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ಭಾರತ ಚುನಾವಣಾ ಆಯೋಗ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಯುವ ಮತ್ತು ಭಾವಿ ಮತದಾರರ ಸಬಲೀಕರಣ ಜಾಗೃತಿ ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಡ್ಡಾಯ ಮತದಾನ ಅಗತ್ಯ: ದೇಶ ಅಭಿವೃದ್ಧಿ ಹೊದಬೇಕಾದರೆ ಉತ್ತಮ ನಾಯಕರು ಸರ್ಕಾರದ ಪ್ರತಿನಿಧಿಗಳಾಗಬೇಕು. ಅಂತಹ ನಾಯಕರ ಆಯ್ಕೆ ಮಾಡಲು ಮತದಾರರುಯಾವುದೇ ಆಮಿಷಗಳಿಗೆ ಬಲಿಯಾಗದೇ ಕಡ್ಡಾಯ ಮತ ದಾನ ಮಾಡುವ ಮೂಲಕ ಒಳ್ಳೆಯ ಅಭ್ಯರ್ಥಿಗೆ ಮತ ನೀಡಬೇಕು. ಅಂದಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯವಾಗುತ್ತದೆ. ಪದವಿ ವಿದ್ಯಾರ್ಥಿಗಳು ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಸ್ವಾಗತಾರ್ಹ. ವಿದ್ಯಾವಂತರು ಚುನಾವಣೆಯಲ್ಲಿ ಕಡ್ಡಾಯ ಮತದಾನ ಮಾಡಿದರೆ ದೇಶ ಬಲಿಷ್ಠವಾಗಿ ನಿಲ್ಲುತ್ತದೆ. ಎಲ್ಲಾ 18 ವರ್ಷ ತುಂಬಿದ ಯುವಕ, ಯುವತಿಯರು ಕಡ್ಡಾಯವಾಗಿ ಮತದಾನದ ಗುರುತಿನ ಚೀಟಿ ಪಡೆ ಯಬೇಕು ಎಂದು ಹೇಳಿದರು.

ಉತ್ತಮರನ್ನು ಆಯ್ಕೆ ಮಾಡಿ: ಬಸವೇಶ್ವರ ಪ್ರಥಮ ದರ್ಜೆಕಾಲೇಜು ಪ್ರಾಂಶುಪಾಲೆ ಡಿ.ಜಿ.ರೇಖಾ ಮಾತನಾಡಿ, ಜನಪ್ರತಿನಿಧಿಗಳನ್ನು ಆಯ್ಕೆ ಮಾಡಲು ಜನತೆಗೆ ಮತದಾನದ ಹಕ್ಕ ನ್ನು ನೀಡಲಾಗಿದೆ. ಮತದಾರರು ಯಾವು ದೇ ಹಣ, ಹೆಂಡದಂತಹ ಆಮಿಷಗಳಿಗೆ ಬಲಿಯಾಗದೇ ಮತದಾನ ಮಾಡಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನತೆಗೆ ಮತದಾನದ ಉತ್ತಮ ಅವಕಾಶ ನೀಡಲಾಗಿದೆ. ವಿದ್ಯಾವಂತ ಯುವ ಜನತೆ ಆಲೋಚನೆ ಮಾಡಿ ಉತ್ತಮ ನಾಯಕರನ್ನು ಆಯ್ಕೆ ಮಾಡಲು ಮುಂದಾಗಬೇಕು ಎಂದು ಕಿವಿಮಾತು ಹೇಳಿದರು.

ಬಹುಮಾನ ವಿತರಣೆ: ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಜಾಗೃತಿ ಮೂಡಿ ಸಲು ಆಯೋಜಿಸಿದ್ದ ಮ್ಯಾರಥಾನ್‌, ಪ್ರಬಂಧ‌, ಚರ್ಚಾ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ನೀಡಲಾಯಿತು. ಮ್ಯಾರಥಾನ್‌ನಲ್ಲಿ ನವ ಭಾರತ್‌ಯೂತ್‌ ಖೊಖೊ ಕ್ಲಬ್‌ನ ಎಂ.ಕುಮಾರ್‌, ಅಂಬಿಕಾ ಪ್ರಥಮ ಸ್ಥಾನ, ಜಿಜಿಎಂ ಶಾಲೆಯ ಆರ್‌.ಬಾದ್‌ಪಾಷ್‌, ನವ ಭಾರತ್‌ ಯೂತ್‌ ಖೊಖೊ ಕ್ಲಬ್‌ನ ಚಂದನ್‌ ದ್ವಿತೀಯ, ಬರದಿ ಮಂಡಿಗೆರೆಯ ತಿಮ್ಮಪ್ಪ, ನವ ಭಾರತ್‌ ಯೂತ್‌ ಖೊಖೊ ಕ್ಲಬ್‌ನ ವನಿತಾ ತೃತೀಯ ಸ್ಥಾನ ಪಡೆದರೆ, ಪ್ರಬಂಧ ಸ್ಪರ್ಧೆಯಲ್ಲಿ ಬಸ ವೇಶ್ವರ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಸಿಂಧು ಪ್ರಥಮ, ವರಲಕ್ಷ್ಮೀ ದ್ವಿತೀಯ, ಅನಿತಾ ತೃತೀಯಸ್ಥಾನ ಪಡೆದರು. ಚರ್ಚಾ ಸ್ಪರ್ಧೆಯಲ್ಲಿ ಶೀಲಾ ಪ್ರಥಮ, ವಾಣಿಶ್ರೀ ದ್ವಿತೀಯ ಸ್ಥಾನ ಪಡೆದಿದ್ದು, ವಿಜೇತರಿಗೆ ತಹಶೀಲ್ದಾರ್‌ ಕೆ.ಎನ್‌.ರಾಜಶೇಖರ್‌ ಬಹುಮಾನ ವಿತರಿಸಿದರು.

ಗುರುತಿನ ಚೀಟಿ ವಿತರಣೆ: ಕಾರ್ಯಕ್ರಮದಲ್ಲಿ ಹೊಸ ಯುವ ಮತದಾರರಿಗೆ ಮತದಾರರ ಗುರುತಿನ ಚೀಟಿ ನೀಡುವ ಮೂಲಕ ಮತ ದಾನದ ಬಗ್ಗೆ ಜಾಗೃತಿ ಮೂಡಿಸಲಾಯಿತು.ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಣಾಧಿಕಾರಿ ಎಚ್.ಆರ್‌.ಹನುಮಂತರಾಯಪ್ಪ, ಪುರಸಭೆ ಮುಖ್ಯಾಧಿ ಕಾರಿ ಶಿವಪ್ರಸಾದ್‌, ಹಿರಿಯ ವಕೀಲ ಮುನಿರಾಜು, ತಾಪಂ ಸಹಾಯಕ ನಿರ್ದೇಶಕ ಲಕ್ಷ್ಮೀ ನಾರಾಯಣ್‌, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಪ್ರಕಾಶ್‌, ಪ್ರಾಂಶುಪಾಲ ನಾಗರಾಜು, ಬಾಲಕೃಷ್ಣಯ್ಯ, ಅಧ್ಯಾಪಕ ಗಂಗರಾಜು, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಮಂಜುನಾಥ್‌, ಗಂಗರಾಜು, ಮುನಿ ರಾಮೇ ಗೌಡ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.