ಜನರ ಸಹ ಭಾಗಿತ್ವದಲ್ಲಿ ಜಲ ಆಂದೋಲನ


Team Udayavani, May 14, 2019, 3:00 AM IST

janara

ದೇವನಹಳ್ಳಿ: ಜನರ ಸಹ ಭಾಗಿತ್ವದಲ್ಲಿ ಜಲ ಆಂದೋಲನವೇ ನಡೆಯುತ್ತಿದೆ ಜನರ ಬದುಕು ಹಸನಾಗಲಿದೆ ಎಂದು ಜಿಲ್ಲಾಧಿಕಾರಿ ಸಿ ಎಸ್‌ ಕರೀಗೌಡ ಹೇಳಿದರು.

ತಾಲೂಕಿನ ಕೊಯಿರಾ ಗ್ರಾಮದಲ್ಲಿ ಸಾರ್ವಜನಿಕರ ಸಹಕಾರದಿಂದ 19.05 ಎಕರೆ ಪ್ರದೇಶದಲ್ಲಿ ಕೆರೆ ಹೂಳೆತ್ತುವ ಕಾಮಗಾರಿ ವೀಕ್ಷಿಸಿ ಮಾತನಾಡಿ, ಕೆರೆಯ ನೀರು ಮತ್ತು ಕುಡಿಯುವ ನೀರಿಗಾಗಿ ಮಾತ್ರ ಬಳಸಲಾಗುತ್ತಿತ್ತು, ಆದರೆ ಈಗ ಜಿಲ್ಲೆಯಲ್ಲಿ ಸ್ಥಾಪನೆ ಆಗಿರುವ ಕಂಪನಿಗಳು, ಕೈಗಾರಿಗಳಿಗೂ ಸಹ ಎಲ್ಲಾ ರೀತಿಯ ಬಳಕೆಗೆ ಅಂರ್ತ ಜಲ ನೀರನ್ನೇ ಅವಲಂಭಿಸಿದೆ ಎಂದರು.

ಮಳೆ ನೀರು ಸಂಗ್ರಹಕ್ಕೆ ನೋಟಿಸ್‌: ಅಂತರ್ಜಲದ ಮೇಲಿನ ಅವಲಂಬನೆ ಕಡಿಮೆ ಮಾಡಲು ಜಿಲ್ಲೆಯಲ್ಲಿನ ಎಲ್ಲಾ ಕೈಗಾರಿಕೆಗಳು , ವಾಣಿಜ್ಯ ಪ್ರದೇಶಗಳು ಸೇರಿದಂತ ಮನೆಗಳು ಸಹ ಮಳೆ ನೀರು ಸಂಗ್ರಹ ಮಾಡುವಂತೆ ನೋಟಿಸ್‌ ಮಾಡಲಾಗಿದೆ.

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಪುರವರ ಗ್ರಾಮದಲ್ಲಿ ಕುಟುಂಬದ ಅಗತ್ಯಕ್ಕೆ ತಕ್ಕಂತೆ ಮಳೆ ನೀರನ್ನು ಸಂಗ್ರಹಿಸಿ ಇಡೀ ವರ್ಷ ಬಳಸುವ ನಿವೇಶನ ವಿದೆ. ಇದರಿಂದ ಆರೋಗ್ಯ ಸುಧಾರಣೆ ಜೊತೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹರಿಯಲಿದೆ. ಜಿಲ್ಲೆಯಲ್ಲಿ 25 ಕೆರೆಗಳ ಅಭಿವೃದ್ಧಿ ಪ್ರಗತಿಯಲ್ಲಿದೆ ಎಂದರು.

ನೀರಿನ ಮೂಲಗಳ ಹೆಚ್ಚಿಸಿ: ಕೊಯಿರಾ ಗ್ರಾಮದಲ್ಲಿರುವ 19.05 ಎಕರೆ ಪ್ರದೇಶದಲ್ಲಿ ಕೆರೆ ಯನ್ನು ಸರ್ವೇ ಹಾಗೂ ಸ್ಮಶಾನವನ್ನು ಸಹ ಸರ್ವೇ ಕಾರ್ಯ ಮಾಡಿಸಲಾಗುವುದು. ನೀರಿನ ಮೂಲಗಳು ಹೆಚ್ಚಿಸಲು, ಮನುಷ್ಯರಿಗೆ, ರೈತಾಪಿ ವರ್ಗಕ್ಕೆ ಪ್ರಾಣಿ ಸಂಕುಲಗಳಿಗೆ ನೀರು ಉಪಯುಕ್ತವಾಗಲು ಅನುಕೂಲವಾಗುತ್ತದೆ.

ಕೆರೆಗಳ ಹೂಳೆತ್ತುವ ಕಾರ್ಯಕ್ಕೆ ಸಾರ್ವಜನಿಕರೇ ಮುಂದೆ ಬಂದಿದ್ದರಿಂದ ಸಾರ್ವಜನಿಕರ ಸಹಕಾರ ಪಡೆದು ಹೂಳೆತ್ತುವ ಕಾರ್ಯವನ್ನು ಮಾಡುತ್ತಿದ್ದೇವೆ. ಸಾರ್ವಜನಿಕ ಸಹಕಾರ ಇರುವುದರಿಂದ ಹಲವಾರು ವರ್ಷಗಳಿಂದ ಹೂಳೆತ್ತದೇ ಇರುವ ಕೆರೆಗಳನ್ನು ಹೂಳೆತ್ತುವಂತೆ ಆಗಿದೆ.

ಸಹಕಾರಕ್ಕೆ ಶ್ಲಾಘನೀಯ: ಪ್ರತಿ ದಿನ ಜೆಸಿಬಿ, ಲಾರಿ, ಹಿಟಾಚಿ, ಟ್ರ್ಯಾಕ್ಟರ್‌ ನಿರ್ವಹಿಸಿದೆ ಹಾಗೂ ದಾನಿಗಳು ಎಷ್ಟು ಹಣ ನೀಡಿದ್ದಾರೆ ಮತ್ತು ಎಷ್ಟು ಖರ್ಚಾಗಿದೆ ಎಂಬ ಲೆಕ್ಕ ಪುಸ್ತಕವನ್ನು ಇಟ್ಟು ಅದರ ನಿರ್ವಹಣೆ ಮಾಡುತ್ತಿದ್ದೇವೆ. ಕೆರೆ ಹೂಳೆತ್ತುವ ಕಾರ್ಯಕ್ಕೆ ಸಾರ್ವಜನಿಕರು ಮುಂದಾಗಿದ್ದಾರೆ. ಜನಪ್ರತಿನಿಧಿಗಳ ಸಹಕಾರದಿಂದ ಲಾರಿ, ಜೆಸಿಬಿ ತರಿಸಿ ಸರ್ಕಾರದ ಒಂದು ರೂ ಹಣವಿಲ್ಲದೆ. ಜನರೇ ಸ್ವಂತ ಖರ್ಚಿನಲ್ಲಿ ಕೆರೆ ಹೂಳೆತ್ತುವ ಕಾರ್ಯ ಮಾಡುವ ಸಹಕಾರ ನೀಡುತ್ತಿದ್ದಾರೆ ಎಂದ‌ು ಶ್ಲಾಘಿಸಿದರು.

ಹೊಳೆತ್ತುವ ಕೆಲಸ ಅಷ್ಟು ಸುಲಭದಲ್ಲ: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಾಮ್‌ ನಿವಾಸ್‌ ಸಫೇಟ್‌ ಮಾತನಾಡಿ, ಗ್ರಾಮಗಳಲ್ಲಿ ಸಾರ್ವಜನಿಕರ ಸಹಕಾರದಿಂದ ಕೆರೆ ಹೂಳೆತ್ತುವ ಕಾರ್ಯ ಮಾಡುತ್ತಿರುವುದು ಪುಣ್ಯದ ಕೆಲಸವಾಗಿದೆ. ಇವತ್ತಿನ ಪರಿಸ್ಥಿತಿಯಲ್ಲಿ ಮಳೆಯಿಲ್ಲದೆ ಬರಗಾಲದ ಸ್ಥಿತಿಯಲ್ಲಿ ನೀರಿಗೆ ಪರದಾಡುವ ಸ್ಥಿತಿ ಇದೆ.

ಸರ್ಕಾರದಿಂದ ಬಿಡಿಗಾಸು ನಿರೀಕ್ಷೆ ಮಾಡದೆ ಕೆರೆಯಲ್ಲಿ ಹೂಳೆತ್ತುವ ಕಾಮಗಾರಿ ಎತ್ತಿಸುವುದು ಅಷ್ಟು ಸುಲಭ‌ವಲ್ಲ. ಕೆರೆಗಳ ಅಭಿವೃದ್ಧಿ ಕಾಮಗಾರಿಗೆ ಸ್ಥಳೀಯರ ಸಹಕಾರದೊಂದಿಗೆ ನೆರವು ಅತಿ ಮುಖ್ಯ ವಾಗಿದೆ ಜಿಲ್ಲಾಧಿಕಾರಿಗಳು ಕೆರೆ ಹೂಳೆತ್ತುವ ಕಾರ್ಯ ಮಾಡಿ ಸಾರ್ವಜನಿಕರ ಅನುಲಕೂಲ ವಾಗುವಂತೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿಗೆ ಮನವಿ: ಗ್ರಾಮದ ಮುಖಂಡ ಚಿಕ್ಕೇಗೌಡ ಮಾತನಾಡಿ, ಸರ್ವೇ ನಂ 67/ಪಿ 3 ನಲ್ಲಿ 4.33 ಗುಂಟೆ ಸ್ಮಶಾನ ಜಾಗವಿದ್ದು ಆ ಜಾಗ ಒತ್ತುವರಿ ಯಾಗಿದೆ. ಸರ್ಕಾರ ಈ ಕೂಡಲೇ ಸರ್ವೇ ಕಾರ್ಯ ಮಾಡಿ ಒತ್ತುವರಿ ಯಾಗಿರುವ ಸ್ಮಶಾನ ಜಾಗವನ್ನು ತೆರವು ಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದರು.

ಡಿವೈಎಸ್‌ಪಿ ಮೋಹನ್‌ ಕುಮಾರ್‌, ವೃತ್ತ ನಿರೀಕ್ಷಕ ಪ್ರಕಾಶ್‌, ವಿಶ್ವನಾಥ ಪುರ ಸಬ್‌ ಇನ್ಸ್‌ಪೆಕ್ಟರ್‌ ಮಂಜುನಾಥ್‌, ಕಾರ್ಮಿಕ ಇಲಾಖೆ ನಿರೀಕ್ಷಕ ರವಿಕುಮಾರ್‌, ಹಾಗೂ ಗ್ರಾಮಸ್ಥರು ಇದ್ದರು.

ಟಾಪ್ ನ್ಯೂಸ್

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.