ಧರ್ಮಸ್ಥಳಕ್ಕೆ ಕರವೇಯಿಂದ ನೀರು ಪೂರೈಕೆ

ಮಳೆ ಅಭಾವದಿಂದ ನೀರು ಮಿತವಾಗಿ ಬಳಸಿ: ತಹಶೀಲ್ದಾರ್‌ ಮಂಜುನಾಥ್‌

Team Udayavani, May 27, 2019, 7:32 AM IST

br-tdy-2..

ದೇವನಹಳ್ಳಿ ಮಿನಿ ವಿಧಾನಸೌಧದ ಆವರಣದಲ್ಲಿ ತಾಲೂಕು ಕರ್ನಾಟಕ ರಕ್ಷಣಾ ವೇದಿಕೆ ಯಿಂದ ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿಗೆ ಕುಡಿಯುವ ನೀರಿನ ಸರಬರಾಜು ವಾಹನಕ್ಕೆ ತಹಶೀಲ್ದಾರ್‌ ಮಂಜುನಾಥ್‌ ಚಾಲನೆ ನೀಡಿದರು.

ದೇವನಹಳ್ಳಿ: ಹಿಂದಿನ ಕಾಲದಲ್ಲಿ ಮಳೆ ಪ್ರಮಾಣ ಹೇಗಿತ್ತು ಎಂಬುದರ ಬಗ್ಗೆ ತಿಳಿದಿದೆ. ಆದರೆ, ಈಗ ಮಳೆಯ ಅಭಾವ ಹೆಚ್ಚಾಗಿರು ವುದರಿಂದ ನೀರನ್ನು ಮಿತವಾಗಿ ಬಳಸಬೇಕೆಂದು ತಹಶೀಲ್ದಾರ್‌ ಮಂಜುನಾಥ್‌ ತಿಳಿಸಿದರು.

ನಗರದ ಮಿನಿ ವಿಧಾನಸೌಧದ ಆವರಣದಲ್ಲಿ ತಾಲೂಕು ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್‌ ಶೆಟ್ಟಿ ಬಣ)ಯಿಂದ ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿಗೆ ಕುಡಿಯುವ ನೀರಿನ ಸರಬರಾಜು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕರವೇ ಸಾಮಾಜಿಕ ಕಾರ್ಯ ಅಭಿನಂದನೀಯ: ಧರ್ಮಸ್ಥಳಕ್ಕೆ 10ಸಾವಿರ ಲೀಟರ್‌ ನೀರು ಕಳುಹಿಸಿ ಕೊಡುತ್ತಿರುವ ಕರವೇಗೆ ತಾಲೂಕು ಆಡಳಿತದ ವತಿಯಿಂದ ಅಭಿನಂದಿಸುತ್ತೇನೆ. ಇಂತಹ ಸಾಮಾಜಿಕ ಕಾರ್ಯಗಳು ಹೆಚ್ಚಾಗ ಬೇಕು ಎಂದು ತಿಳಿಸಿದರು.

ಜಲ ಮೂಲ ಉಳಿಸಿ: ಧರ್ಮಸ್ಥಳದಲ್ಲಿ ನೀರಿನ ಅಭಾವ ಇರುವುದರಿಂದ ಹೆಚ್ಚಿನ ಭಕ್ತಾದಿಗಳು ಬರದಂತೆ ಧರ್ಮಾಧಿಕಾರಿಗಳು ಮನವಿ ಮಾಡಿರುವುದು ಅಲ್ಲಿನ ನೀರಿನ ಸಮಸ್ಯೆಗೆ ನಿದರ್ಶನವಾಗಿದೆ. ಇದು ಜನರಿಗೆ ತಿಳಿದ ವಿಚಾರವೂ ಆಗಿದೆ. ಪ್ರವಾಸಿಗರು ಹೆಚ್ಚು ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುತ್ತಾರೆ. ಅಲ್ಲಿಯೇ ನೀರಿನ ಸಮಸ್ಯೆ ಉದ್ಭವಿಸಿದೆ. ಜಲ ಮೂಲಗಳನ್ನು ಉಳಿಸದಿದ್ದರೆ ಮುಂದೆ ಹೆಚ್ಚಿನ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಮಳೆ ಕೊಯ್ಲು ಪದ್ಧತಿ ಅಗತ್ಯ: ಜಿಲ್ಲಾಧಿ ಕಾರಿಗಳು ಜಿಲ್ಲೆಯಲ್ಲಿ ಈಗಾಗಲೇ ಮಳೆ ಕೊಯ್ಲು ಪದ್ಧತಿಯನ್ನು ಅಳವಡಿಸಿಕೊಳ್ಳಲು ಸೂಚಿಸಿದ್ದು, ಕೈಗಾರಿಕಾ ಪ್ರದೇಶ, ವಾಣಿಜ್ಯ ಮಳಿಗೆಗಳು, ಹೋಟೆಲ್, ಕಲ್ಯಾಣ ಮಂಟಪ, ಚಿತ್ರಮಂದಿರ ಇನ್ನಿತರೆ ಕಡೆಗಳಲ್ಲಿ ಮಳೆ ಕೊಯ್ಲು ಪದ್ಧತಿಯನ್ನು ಅಳವಡಿಸಿಕೊಳ್ಳಲು ನೋಟಿಸ್‌ ನೀಡಲಾಗಿದೆ. 49 ಲಕ್ಷ ಲೀಟರ್‌ ಮಳೆ ನೀರು ಸಂಗ್ರಹಿಸಿದರೆ ನೀರಿನ ಬವಣೆ ಸ್ವಲ್ಪ ಮಟ್ಟಿಗೆ ಕಡಿಮೆ ಆಗುತ್ತದೆ. ದೇವನಹಳ್ಳಿಯಲ್ಲೂ ಮಳೆ ಕೊಯ್ಲು ಪದ್ಧತಿಯನ್ನು ಅಳವಡಿಸಿ ಕೊಳ್ಳಲು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕರವೇ ರಾಜ್ಯ ಕಾರ್ಯದರ್ಶಿ ರಾಜಘಟಕ ರವಿ ಮಾತನಾಡಿ, ಕರವೇ ಸಾಕಷ್ಟು ಹೋರಾಟ ಗಳನ್ನು ಮಾಡಿಕೊಂಡು ಬಂದಿದೆ. ಧಾರ್ಮಿಕ ಕಾರ್ಯಕ್ರಮಗಳನ್ನು ಪ್ರೋತ್ಸಾಹಿಸಿಕೊಂಡು ಬಂದಿದೆ. ಧರ್ಮಸ್ಥಳದಲ್ಲಿ ಜನರಿಗೆ ನೀರಿನ ಅಭಾವ ಇರುವುದರಿಂದ ಆಡಳಿತ ಮಂಡಳಿಗೆ ದೂರವಾಣಿ ಮಾಡಿ ವಿಚಾರಿಸಿದಾಗ ನೀರು ಕಳುಹಿಸಿ ಕೊಡಿ ಎಂದಿದ್ದಾರೆ. ದಾನಿಗಳ ಸಹಕಾರದಿಂದ 10ಸಾವಿರ ಲೀಟರ್‌ ನೀರು ಕಳುಹಿಸುತ್ತಿದ್ದೇವೆ ಎಂದರು.

ಈ ವೇಳೆ ತಾಲೂಕು ಕರವೇ ಅಧ್ಯಕ್ಷ ಗಜೇಂದ್ರ, ಯಲಹಂಕ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ಜಯಂತ್‌, ಸಾಂಸ್ಕೃತಿಕ ಘಟಕದ ಅಧ್ಯಕ್ಷ ಉದಯ್‌, ತಾಲೂಕು ಪ್ರಧಾನ ಸಂಚಾಲಕ ಧನೇಶ್‌ ಕುಮಾರ್‌, ಕಾರ್ಮಿಕ ಘಟಕದ ಉಪಾಧ್ಯಕ್ಷ ಕೆಂಪೇಗೌಡ, ತಾಲೂಕು ಉಪಾಧ್ಯಕ್ಷ ಸತೀಶ್‌ ಗೋಖರೆ, ಬಾಬು, ಜಂಟಿ ಕಾರ್ಯದರ್ಶಿ ಮುನಿಕೃಷ್ಣ, ಕರವೇ ಮುಖಂಡ ಮೈಲನಹಳ್ಳಿ ಪ್ರಕಾಶ್‌ ಇತರರಿದ್ದರು.

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.