ಹೊಸಕೋಟೆಯಲ್ಲಿ ಗೆಲುವು ಯಾರಿಗೆ?


Team Udayavani, Apr 12, 2018, 4:07 PM IST

blore-g-1.jpg

ಹೊಸಕೋಟೆ: ತಾಲೂಕಿನಲ್ಲಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ತೀವ್ರ ಸ್ಪರ್ಧೆ ಉಂಟಾಗುವ ಸಾಧ್ಯತೆಗಳು ಹೆಚ್ಚಾಗಿದ್ದು, ಕಮಲ ಅರಳುವುದೇ, ಕೈ ಮುದುಡುವುದೋ ಎಂಬುದನ್ನು ಕಾದುನೋಡಬೇಕಾಗಿದೆ. ಜೆಡಿಎಸ್‌ ಸ್ಪರ್ಧೆಯಲ್ಲಿದ್ದರೂ ಕೇವಲ ಮತ ವಿಭಜನೆಗಷ್ಟೇ ಸೀಮಿತಗೊಂಡಿದೆ.

ತಾಲೂಕಿನಲ್ಲಿ ಒಟ್ಟು 1,06,795 ಪುರುಷರು, 1,03,811 ಮಹಿಳೆಯರು ಒಟ್ಟು 2,10,606 ಮತದಾರರಿದ್ದಾರೆ. 2013ರಲ್ಲಿ 1,82911 ಒಟ್ಟು ಮತದಾರರಿದ್ದು ಈ ಬಾರಿ ಶೇ.15.15ರಷ್ಟು ಏರಿಕೆಯಾಗಿದೆ. ಕಳೆದ ಚುನಾವಣೆಗಿಂತಲೂ ಮತದಾರರ ಆಧಾರದ ಮೇಲೆ 40 ಮತಗಟ್ಟೆಗಳನ್ನು ಹೆಚ್ಚಾಗಿ ಸ್ಥಾಪಿಸಲಾಗಿದ್ದು 142 ಸೂಕ್ಷ್ಮ, 58 ಅತಿಸೂಕ್ಷ್ಮ, 86 ಸಾಮಾನ್ಯ ಸೇರಿ ಒಟ್ಟು 286 ಮತಕೇಂದ್ರ ಹೊಂದಿದೆ. 

2013ರ ಚುನಾವಣೆಯಲ್ಲಿ ಶೇ.90.91 ರಷ್ಟು ಮತದಾನವಾಗಿದ್ದು ಕಾಂಗ್ರೆಸ್‌ನ ಎನ್‌. ನಾಗರಾಜ್‌ 85,238, ಬಿಜೆಪಿಯ ಬಿ.ಎನ್‌. ಬಚ್ಚೇಗೌಡ 78,099 ಮತಗಳನ್ನು ಪಡೆದು 7139 ಮತಗಳ ಅಂತರದಿಂದ ಕಾಂಗ್ರೆಸ್‌ ಜಯ ಸಾಧಿಸಿತ್ತು. ಜೆಡಿಎಸ್‌ನ ಶ್ರೀಧರ್‌ ಕೇವಲ 1,304 ಮತ ಗಳಿಸಿದ್ದರು. 

ವರ್ಷದಿಂದಲೇ ಪ್ರಚಾರ:ಈಗಾಗಲೇ ರಾಜಕೀಯ ಪಕ್ಷಗಳು ಮತದಾರರ ಪಟ್ಟಿಗಳನ್ನು ಪಡೆದು ಜಾತಿವಾರು ಹಾಗೂ ತಮಗೆ ಮತ ನೀಡುವಂತಹ ವ್ಯಕ್ತಿಗಳ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ಕಳೆದ ಒಂದು ವರ್ಷ ದಿಂದಲೂ ಬಿಜೆಪಿ, ಕಾಂಗ್ರೆಸ್‌ ಎರಡೂ ಪಕ್ಷಗಳು ಚುನಾವಣಾ ಪ್ರಚಾರ ಕಾರ್ಯ ಪ್ರಾರಂಭಿಸಿದ್ದು ಆರೋಪ ಪ್ರತ್ಯಾರೋಪಗಳನ್ನು ಮಾಡುವುದು ಸಾಮಾನ್ಯವಾಗುತ್ತಿದೆ.

ತಾಲೂಕಿನ 6 ಜಿಲ್ಲಾ ಪಂಚಾಯಿತಿ ಸದಸ್ಯರಲ್ಲಿ ಕಾಂಗ್ರೆಸ್‌ 4 ಸ್ಥಾನಗಳನ್ನು, ಬಿಜೆಪಿ 2 ಸ್ಥಾನಗಳನ್ನು ಪಡೆದಿದ್ದು, 22 ತಾಲೂಕು ಪಂಚಾಯಿತಿ ಸದಸ್ಯರಲ್ಲಿ 15 ಕಾಂಗ್ರೆಸ್‌, 7 ಬಿಜೆಪಿ, 28 ಗ್ರಾಮ ಪಂಚಾಯಿತಿಗಳಲ್ಲಿ 16ರಲ್ಲಿ ಕಾಂಗ್ರೆಸ್‌ 12ರಲ್ಲಿ ಬಿಜೆಪಿ ಅಧಿಕಾರ ಪಡೆದಿವೆ. ಪಟ್ಟಣದ ನಗರಸಭೆ 23ರಲ್ಲಿ 13 ಕಾಂಗ್ರೆಸ್‌, 10 ಬಿಜೆಪಿ ಸದಸ್ಯರಿದ್ದಾರೆ.

ಹಿಂದಿನ ಚುನಾವಣೆ ನಡೆದ ಸಂದರ್ಭಕ್ಕೂ ಪ್ರಸ್ತುತ ಸನ್ನಿವೇಶಕ್ಕೂ ಬಹಳಷ್ಟು ವ್ಯತ್ಯಾಸಗಳು ಕಂಡುಬರುತ್ತಿದೆ. ತಾಲೂಕಿನಲ್ಲಿ ಪ್ರತಿ ಹಂತದಲ್ಲೂ ರಾಜಕೀಯದ ವಾಸನೆ ಪರೋಕ್ಷವಾಗಿ ಕಾಣುತ್ತಿದೆ. ತಾಲೂಕಿನಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸುವುದು ಗ್ರಾಮಸ್ಥರಿಗೆ ಉಚಿತವಾಗಿ ತಮ್ಮ ಹೆಸರುಳ್ಳ ವಾಟರ್‌ ಕ್ಯಾನ್‌ಗಳನ್ನು ನೀಡುವುದು ಸಾಮಾನ್ಯವಾಗುತ್ತಿದೆ. ಮತ್ತೂಂದೆಡೆ ಬಹಳಷ್ಟು ಸಾರ್ವಜನಿಕ ಸಮಾರಂಭಗಳಲ್ಲಿ ಮಹಿಳೆಯರಿಗೆ ಉಚಿತವಾಗಿ ಸೀರೆಗಳನ್ನು ವಿತರಿಸಲಾಗುತ್ತಿದೆ.

ಪಕ್ಷಾಂತರ: ಕಳೆದ ಸುಮಾರು 6 ತಿಂಗಳುಗಳಿಂದಲೂ ಪಕ್ಷಾಂತರ ನಿರಂತರವಾಗಿ ನಡೆಯುತ್ತಿದ್ದು ಕೆಲವು ಸಂದರ್ಭಗಳಲ್ಲಿ ಹಣದ ಆಮಿಷಗಳಿಗೆ ಒಳಗಾಗಿರುವ ಸಂಶಯ ಬರುತ್ತಿದೆ. ಕಾಂಗ್ರೆಸ್‌ನಿಂದ ಬಿಜೆಪಿಗೆ ಜಿಗಿಯುತ್ತಿರುವವರೇ ಹೆಚ್ಚಾಗಿದ್ದು ಚುನಾವಣೆ ಘೋಷಣೆ ನಂತರ ಇನ್ನೂ ಹೆಚ್ಚಿನ ಪ್ರಭಾವಶಾಲಿ ಮುಖಂಡರು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.

ಹಾಲಿ ಶಾಸಕ ಕಾಂಗ್ರೆಸ್‌ನ ಎನ್‌. ನಾಗರಾಜ್‌ ಹಾಗೂ ಬಿಜೆಪಿಯ ಮಾಜಿ ಸಚಿವ ಬಿ.ಎನ್‌.ಬಚ್ಚೇಗೌಡ ನಡುವೆ ನೇರ ಸ್ಪರ್ಧೆ ಏರ್ಪಡಬಹುದೆಂದು ಊಹಿಸಲಾಗಿದೆ. ಇದೀಗ ಬಚ್ಚೇಗೌಡರ ಮಗ ಶರತ್‌ ಬಚ್ಚೇಗೌಡ ಅಭ್ಯರ್ಥಿಯೆಂದು ಘೋಷಣೆ ಯಾಗಿರುವುದು ಎರಡೂ ಪಕ್ಷಗಳಲ್ಲೂ ಸಂಚಲನ ಮೂಡಿಸಿದೆ. ಶರತ್‌ ಬಚ್ಚೇಗೌಡ ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಂಘಟನೆಯಲ್ಲಿ ನಿರತವಾಗಿ ದ್ದಾರೆ. ಈಗಾಗಲೇ ಬಿಜೆಪಿ ಹಾಗೂ ಕಾಂಗ್ರೆಸ್‌ ನ ಮುಖಂಡರು, ಕಾರ್ಯಕರ್ತರು ಬಹಳಷ್ಟು ಗ್ರಾಮಗಳಲ್ಲಿ, ಪಟ್ಟಣದ ಬಹುತೇಕ ವಾರ್ಡ್‌ಗಳಲ್ಲಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡುತ್ತಿದ್ದಾರೆ.

ಜೆಡಿಎಸ್‌ನಲ್ಲಿ ಗೊಂದಲ: ಹಿಂದಿನ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಭವಗೊಂಡಿದ್ದ ತಾಲೂಕಿನ ವಿ.ಶ್ರೀಧರ್‌ ಈ ಬಾರಿಯೂ ಅಭ್ಯರ್ಥಿಯೆಂದು ಘೋಷಿಸಿಲ್ಲವಾದರೂ ಪಟ್ಟಣ ಸಮೀಪದ ಬಿದರಹಳ್ಳಿ ಹೋಬಳಿಯ ಜಿಂಕತಿಮ್ಮನ ಹಳ್ಳಿಯ ಕೃಷಮೂರ್ತಿ ಪಟೇಲ್‌ ಈಗಾಗಲೇ ತಾನೇ ಅಭ್ಯರ್ಥಿಯೆಂದು ಪ್ರಚಾರ ಕಾರ್ಯ ಕೈಗೊಂಡಿರುವ ಕಾರಣ ಗೊಂದಲ ನಿರ್ಮಾಣಗೊಂಡಿದೆ. ಈ ಬಾರಿ ಗರಿಷ್ಠ 5 ಅಭ್ಯರ್ಥಿಗಳು ಸ್ಪರ್ಧಿಸಬಹುದೆಂದು ನಿರೀಕ್ಷಿಸಲಾಗಿದೆ.

ಸಾಲ ತೀರಿಸಿದರೆ ಮತ!
ತಾಲೂಕಿನಲ್ಲಿ ಬಹಳಷ್ಟು ರೈತರು ಮಾಡಿಕೊಂಡಿರುವ ಸಾಲವನ್ನು ಯಾವ ಪಕ್ಷದವರು ತೀರಿಸುತ್ತಾರೋ ಅವರಿಗೆ ಮತ ಎಂದು ಷರತ್ತು ವಿಧಿಸುತ್ತಿದ್ದಾರೆ. ಇದರಿಂದ ರಾಜಕೀಯ ಪಕ್ಷದ ಮುಖಂಡರಿಗೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಮತ್ತೂಂದೆಡೆ ಅಕ್ರಮ ಸಕ್ರಮಕ್ಕಾಗಿ ಅರ್ಜಿ ಸಲ್ಲಿಸಿರುವವರು ಇದೇ ರಾಗ ಹಾಡುತ್ತಿದ್ದು, ಈಗಾಗಲೇ ಒಂದು ರಾಜಕೀಯ ಪಕ್ಷದ ಮುಖಂಡ ರೊಬ್ಬರು ನಂದಗುಡಿ ಹೋಬಳಿ ಯಲ್ಲಿ ಸುಮಾರು 2.58 ಲಕ್ಷ ರೂ.ಗಳ ಶುಲ್ಕ ಪಾವತಿಸಿರುವುದನ್ನು ಅರಿತುಕೊಂಡಿ ರುವ ಇತರೆ ಹೋಬಳಿಗಳವರು ಇದೇ ರೀತಿ ಆಗಬಹುದೆಂದು ನಿರೀಕ್ಷಿಸಿ ಶುಲ್ಕ ಪಾವತಿಸಲು ನಿರಾಸಕ್ತಿ ತೋರುತ್ತಿದ್ದಾರೆ. 

ರಾಜಕಾರಣಿಗಳು ಮತ ಪಡೆಯಲು ಚಾಪೆ ಕೆಳಗೆ ನುಸುಳಿದರೆ ಮತದಾರರು ಇವರನ್ನೂ ಮೀರಿ ತಮ್ಮ ಆಕಾಂಕ್ಷೆಗಳನ್ನು ಈಡೇರಿಸುವ ಷರತ್ತುಗಳನ್ನು ಹಾಕುವ ಮೂಲಕ ರಂಗೋಲಿ ಕೆಳಗೆ ಹೋಗಲು ಪ್ರಯತ್ನಿಸುತ್ತಿದ್ದಾರೆ. 

ಟಾಪ್ ನ್ಯೂಸ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.