ಕಾಂಗ್ರೆಸ್‌ ನಾಯಕರಿಲ್ಲದ ಪಕ್ಷ: ಬಿಜೆಪಿ ಲೇವಡಿ

ಯಾವ ರೀತಿ ಚುನಾವಣೆಯನ್ನು ಗೆಲ್ಲುವ ಬಗ್ಗೆ ರೂಪುರೇಷೆಗಳ ಬಗ್ಗೆ ಚರ್ಚೆ ಮಾಡಲಾಗುತ್ತಿದೆ

Team Udayavani, Apr 22, 2022, 5:59 PM IST

ಕಾಂಗ್ರೆಸ್‌ ನಾಯಕರಿಲ್ಲದ ಪಕ್ಷ: ಬಿಜೆಪಿ ಲೇವಡಿ

ದೇವನಹಳ್ಳಿ: ದೇಶದಲ್ಲಿ ಕಾಂಗ್ರೆಸ್‌ ಪಕ್ಷದಲ್ಲಿ ಯಾವುದೇ ನಾಯಕನಿಲ್ಲ. ನಾಯಕನಿಲ್ಲದ ಪಕ್ಷ ಕಾಂಗ್ರೆಸ್‌. ರಾಹುಲ್‌ ಗಾಂಧಿ ಪಕ್ಷದ ಅಧ್ಯಕ್ಷನಾಗಲು ಇಷ್ಟಪಡುತ್ತಿಲ್ಲ. ಕಾಂಗ್ರೆಸ್‌ ಪಕ್ಷದಲ್ಲಿ ಪ್ರಜಾಪ್ರಭುತ್ವ ಇಲ್ಲ. ಕಾಂಗ್ರೆಸ್‌ ಪಕ್ಷ ನಶಿಸಿ ಹೋಗುತ್ತಿದೆ. ಕರ್ನಾಟಕದ ಜನರಿಗೂ ಕಾಂಗ್ರೆಸ್‌ ಬಗ್ಗೆ ನಿರಾಶಾಭಾವ ಇದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ತಿಳಿಸಿದರು.

ತಾಲೂಕಿನ ಐವಿಸಿ ರಸ್ತೆಯಲ್ಲಿರುವ ದ ಸ್ಕೂಲ್‌ ಆಪ್‌ ಎನ್ಸಿಯಂಟ್‌ ವಿಸ್ಡಮ್‌ನ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್‌ ಪಕ್ಷ ಸದಾ ಗೊಂದಲದ ಪಕ್ಷ. ಆರ್ಟಿಕಲ್‌ 370, ರಾಮಮಂದಿರ ವಿವಾದ, ಸರ್ಜಿಕಲ್‌ ಸ್ಟ್ರೈಕ್‌ ಸೇರಿ ಎಲ್ಲ ಕಡೆ ದ್ವಂದ್ವ ನಿಲುವುಗಳ ಮೂಲಕ ಗೊಂದಲ ಸೃಷ್ಟಿ ಮಾಡಿಕೊಂಡಿದೆ.ಚುನಾವಣೆ ಸಮಯದಲ್ಲೂ ಸಹ ಗೊಂದಲದಲ್ಲಿದೆ ಎಂದರು.

ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ 23ಮಂದಿ ಹಿಂದೂ ಕಾರ್ಯಕರ್ತರ ಹತ್ಯೆಯಾಯಿತು. ನಾವು ರಾಜ್ಯದಲ್ಲಿ ಪ್ರವಾಸ ಮಾಡುತ್ತಿದ್ದು, ಮುಂದಿನ ಬಾರಿ ಬಿಜೆಪಿ ಸರ್ಕಾರ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರಲಿದೆ. ಎಲ್ಲ ಕೇಂದ್ರ ರಾಜ್ಯದ ಯೋಜನೆಗಳು ಹಿಂದುಳಿದ, ಅಲ್ಪಸಂಖ್ಯಾತರು, ಸೇರಿ ಫ‌ಲಾನುಭವಿಗಳಿಗೆ ಸೇರಿದೆ. ನಾವು ಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್‌ ತತ್ವದ ಅಡಿಯಲ್ಲಿ ದೇಶ ಕಟ್ಟುವ ಕೆಲಸ ಮಾಡತ್ತಿದ್ದೇವೆ ಎಂದು ಹೇಳಿದರು.

ಕಾಂಗ್ರೆಸ್‌ ಮುಖಂಡರಿಗೆ ತಿರುಗೇಟು: ಶೇ.40% ಕಮಿಷನ್‌ ವಿಚಾರವಾಗಿ ಮಾತನಾಡಿದ ಅವರು, ಯಾವುದೇ ಲಿಖೀತ ದೂರು ಇಲ್ಲದೇ, ಸಾಕ್ಷಿ ಇಲ್ಲದೇ ಕೇವಲ ವಾಟ್ಸಾಪ್‌ ಸಂದೇಶವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್‌ ಪ್ರತಿಭಟನೆ ನಡೆಸಿದೆ. ಆದರೂ, ನೈತಿಕ ಹೊಣೆಗಾರಿಕೆಯಿಂದ ಈಶ್ವರಪ್ಪ ರಾಜೀನಾಮೆ ಸಲ್ಲಿಸಿದ್ದಾರೆ. ಈ ರೀತಿಯ ಪರ್ಸೆಂಟೇಜ್‌ ಭ್ರಷ್ಟಾಚಾರದ ಮೂಲ ಜನಕರೇ ಕಾಂಗ್ರೆಸ್‌ ಮುಖಂಡರು ಎಂದು ತಿರುಗೇಟು ನೀಡಿದರು.

ವಿಭಾಗಾವಾರು ಕಾರ್ಯಕಾರಿಣಿ ಸಭೆ: ರಾಜ್ಯದ ಪ್ರತಿಯೊಂದು ವಿಧಾನಸಭಾ ಕ್ಷೇತ್ರಗಳ ಬಗ್ಗೆ ವಿಭಾಗಾವಾರು ಕಾರ್ಯಕಾರಿಣಿ ಸಭೆ ನಡೆಸಲಾಗುತ್ತಿದ್ದು, ಒಂದೊಂದು ವಿಧಾನಸಭೆಯ ಕ್ಷೇತ್ರದಲ್ಲಿ ಯಾವ ರೀತಿ ಚುನಾವಣೆಯನ್ನು ಗೆಲ್ಲುವ ಬಗ್ಗೆ ರೂಪುರೇಷೆಗಳ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಮೂರು ತಂಡಗಳಾಗಿ ಪ್ರವಾಸ ಮಾಡಲಾಗುತ್ತಿದೆ ಎಂದರು.

ಹಲವಾರು ಯೋಜನೆ ಅನುಷ್ಠಾನ: ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮಾತನಾಡಿ, ನರೇಂದ್ರ ಮೋದಿ ಸರ್ಕಾರದಲ್ಲಿ ಆರ್ಥಿಕ, ರಕ್ಷಣಾ, ಆರೋಗ್ಯ, ಕೃಷಿ ,ಮಹಿಳಾ ಸಬಲೀಕರಣ, ಹಲವಾರು ಯೋಜನೆ ಅನುಷ್ಠಾನಗೊಂಡಿದೆ. ಕಾಂಗ್ರೆಸ್‌ 397 ಜನ ಠೇವಣಿ ಕಳೆದುಕೊಂಡಿದ್ದು, ದೇಶದಲ್ಲಿ ನಾಯಕತ್ವ ಇಲ್ಲದ ಪಕ್ಷ, ಮುಂದಿನ ವಿಧಾನ ಸಭಾ ಚುನಾವಣೆ ನಂತರ ಹೆಚ್ಚು ಸಂಖ್ಯೆಯಲ್ಲಿ ಗೆದ್ದು ಕಾಂಗ್ರೆಸ್‌ ಮುಳುಗಲಿದೆ ಎಂದರು.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಚಿವ ಡಾ.ಕೆ.ಸುಧಾಕರ್‌, ಎಂಟಿಬಿ ನಾಗರಾಜ್‌, ರಾಜ್ಯ ಬಿಜೆಪಿ ಉಪಾಧ್ಯಕ್ಷ ಶಂಕರಪ್ಪ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಸಂಘಟನಾ ಕಾರ್ಯದರ್ಶಿ ಕೇಶವಪ್ರಸಾದ್‌, ಜಿಲ್ಲಾ ಬಿಜೆಪಿ ಅಧ್ಯಕ್ಷ ಎ.ವಿ.ನಾರಾಯಣಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್‌, ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ, ಜಿ.ಚಂದ್ರಣ್ಣ, ಬಿಜೆಪಿ ತಾಲೂಕು ಅಧ್ಯಕ್ಷ ಸುನಿಲ್‌, ಎಚ್‌. ಎಂ. ರವಿಕುಮಾರ್‌, ಪ್ರಧಾನ ಕಾರ್ಯದರ್ಶಿ ನೀಲೇರಿ ಮಂಜುನಾಥ್‌, ಸಿ. ಅಶ್ವಥನಾರಾಯಣ್‌, ಕೆ.ನಾಗೇಶ್‌, ಎಸ್‌.ರಮೇಶ್‌ ಕುಮಾರ್‌, ನಾರಾಯಣಸ್ವಾಮಿ, ತಾಪಂ ಮಾಜಿ ಅಧ್ಯಕ್ಷ ಓಬ್‌ದೇನಹಳ್ಳಿ ಮುನಿಯಪ್ಪ ಮತ್ತಿತರರು ಇದ್ದರು.

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.