ವಿದ್ಯೆ ಇದ್ದರೆ ಮಹಿಳೆ ಮತ್ತಷ್ಟು ಪ್ರಬುದ್ಧ: ಪೂಜಾ


Team Udayavani, Mar 15, 2021, 12:07 PM IST

ವಿದ್ಯೆ ಇದ್ದರೆ ಮಹಿಳೆ ಮತ್ತಷ್ಟು ಪ್ರಬುದ್ಧ: ಪೂಜಾ

ವಿಜಯಪುರ: ವಿದ್ಯಾಭ್ಯಾಸ ಇಲ್ಲದ ಹೆಣ್ಣು ಮಕ್ಕಳು ಸಹ ತನ್ನ ಜಾಣ್ಮೆಯಿಂದ ಸಂಸಾರ ನಿಭಾಯಿಸಬಲ್ಲಳು. ಸಮಸ್ಯೆಗಳನ್ನು ಎದುರಿಸಬಲ್ಲಳು. ಆದರೆ ಹೆಣ್ಣಿಗೆ ವಿದ್ಯೆ ಸಿಕ್ಕರೆ ಅವಳು ಮತ್ತಷ್ಟು ಪ್ರಬುದ್ಧಳಾ ಗುತ್ತಾಳೆ ಎಂದು ಗಾಯಕಿ, ರಂಗಭೂಮಿ ಹಾಗೂ ಕಿರುತೆರೆ ಕಲಾವಿದೆ ಪೂಜಾ ಭಾರಿತ್ತಾಯ ಹೇಳಿದರು.

ಪಟ್ಟಣದ ಸುಬ್ಬಮ್ಮ ಚನ್ನಪ್ಪ ಸಮುದಾಯ ಭವನದಲ್ಲಿ ಇನ್ನರ್‌ವ್ಹೀಲ್‌ ಕ್ಲಬ್‌ ಆಫ್ ವಿಜಯಪುರದ ವತಿಯಿಂದ ಏರ್ಪಡಿಸಿದ್ದ ಅಂತಾ ರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಭೇದಭಾವ ಮಾಡದೇ ಬೆಳೆಸಿ: ಅಡುಗೆ ಮಾಡುವುದು ಕೇವಲ ಹೆಣ್ಣಿನ ಕೆಲಸವಲ್ಲ, ವಾಹನ ಚಾಲನೆ ಗಂಡು ಮಕ್ಕಳ ಹಕ್ಕಲ್ಲ. ಪೋಷಕರು ಮನೆಯಲ್ಲಿ ಮಕ್ಕಳಿಗೆ ಹೆಣ್ಣು ಗಂಡು ಮಕ್ಕಳೆಂಬ ಭೇದ ಭಾವ ಮಾಡದೆ ಬೆಳೆಸಬೇಕು ಎಂದು ತಿಳಿಸಿದರು.

ಪರಿಗಣಿಸುವುದು ಮುಖ್ಯ: ಇನ್ನರ್‌ವೀಲ್‌ ಅಧ್ಯಕ್ಷೆ ಗಾಯತ್ರಿ ಮಂಜುನಾಥ್‌ ಮಾತನಾಡಿ, ಹೆಣ್ಣಿನ ಹಕ್ಕು, ಸ್ವಾತಂತ್ರ್ಯ, ಅಭಿಪ್ರಾಯಗಳನ್ನು ಗೌರವಿಸು ವುದುಮುಖ್ಯ. ಹೆಣ್ಣಿನ ಜೀವನ ಮೌಲ್ಯವನ್ನು ಪರಿಗಣಿಸುವುದು ಬಹಳ ಮುಖ್ಯ. ಮಹಿಳೆಯರನ್ನು ಸಬಲೆಯ ನ್ನಾಗಿ ಮಾಡುವುದು ಇದರ ಉದ್ದೇಶ. ಪುರುಷರೂ ಇದಕ್ಕೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ ಎಂದರು.

ಚಿತ್ರಗೀತೆ ಸ್ಪರ್ಧೆ: ಮಹಿಳಾ ದಿನಾಚರಣೆ ಅಂಗವಾಗಿ ಪಟ್ಟಣದ ಗೃಹಿಣಿಯರಿಗೆ ಕನ್ನಡ ಚಲನಚಿತ್ರ ಗೀತೆಯ ನೃತ್ಯ ಸ್ಪರ್ಧೆ ಏರ್ಪಡಿಸಿದ್ದು, ತಾಯಿ ಹಾಗೂ ಮಗಳು/ಮಗ ನೃತ್ಯದಲ್ಲಿ ಭಾಗವಹಿಸಲು ಅವಕಾಶವಿತ್ತು. ನೃತ್ಯದಲ್ಲಿ 5 ವರ್ಷದಿಂದ10 ವರ್ಷದ ಮಕ್ಕಳ ವಿಭಾಗದಲ್ಲಿ ಅಕ್ಷತಾ ಲಿಂಗರಾಜು ಮತ್ತು ಮಗಳು ಪ್ರಜ್ಞಾ ಜೋಡಿಗೆ ಪ್ರಥಮಬಹುಮಾನ, ಅಂಬಿಕಾ ಮಂಜುನಾಥ್‌ ಮತ್ತುಅವರ ಮಗನ ಜೋಡಿಗೆ ದ್ವಿತೀಯ ಬಹುಮಾನ ಸಿಕ್ಕರೆ, 11 ರಿಂದ 15 ವರ್ಷದ ಮಕ್ಕಳ ವಿಭಾಗದಲ್ಲಿರೂಪಾರಾಜ್‌ ಮತ್ತು ಮಗಳು ಮೌಲ್ಯಾ ಜೋಡಿ ಪ್ರಥಮ ಬಹುಮಾನ ಗಳಿಸಿದರು.

ಮಿಮಿಕ್ರಿ, ನೃತ್ಯ, ಇತರೆ ಮನರಂಜನಾ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭದಲ್ಲಿಅಂಧ ಶಾಲೆಯ ಮಕ್ಕಳಿಗೆ ಬ್ರೈಲ್‌ ಲಿಪಿ ಬರೆಯುವ ಬ್ರೈಲ್‌ ಪೇಪರ್‌ ನೀಡಿದರು.

ಇನ್ನರ್‌ವೀಲ್‌ ಸಂಘದಿಂದ ಮುಖ್ಯ ಅತಿಥಿಯಾಗಿ ಆಗಮಿಸಿದ ಪೂಜಾ ಭಾರಿತ್ತಾಯ ಅವರನ್ನು ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಇನ್ನರ್‌ವೀಲ್‌ ಕಾರ್ಯದರ್ಶಿ ಚಂದ್ರಕಲಾ ರುದ್ರಮೂರ್ತಿ, ಸಂಘದ ಇತರೆ ಸದಸ್ಯರು ಉಪಸ್ಥಿತರಿದ್ದರು.

ಇಂದು ಸ್ತ್ರೀ ವಾದ ಎನ್ನುವುದು ಸರಿಯಾದ ಅರ್ಥದಲ್ಲಿ, ಸರಿಯಾದಕಾರಣಕ್ಕೆ ಬಳಕೆಯಾಗದೆ ಸಣ್ಣಪುಟ್ಟ ವಾದವಿವಾದಗಳನ್ನು ಸೃಷ್ಟಿಸುತ್ತದೆ. ಆದರೆಸ್ತ್ರೀವಾದ, ಮಹಿಳಾ ಸಬಲೀಕರಣ ಉತ್ತಮ ಕಾರಣಕ್ಕೆ ಬಳಕೆಯಾಗಬೇಕು.- ಪೂಜಾ ಭಾರಿತ್ತಾಯ, ಗಾಯಕಿ, ರಂಗಭೂಮಿ ಹಾಗೂ ಕಿರುತೆರೆ ಕಲಾವಿದೆ

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.