ಯೋಗ ಮಾಡಿ ಆರೋಗ್ಯ ವೃದ್ಧಿಸಿಕೊಳ್ಳಿ


Team Udayavani, Feb 11, 2022, 12:13 PM IST

ಯೋಗ ಮಾಡಿ ಆರೋಗ್ಯ ವೃದ್ಧಿಸಿಕೊಳ್ಳಿ

ದೇವನಹಳ್ಳಿ: ರಥಸಪ್ತಮಿ ಅಂಗವಾಗಿ ಪತಾಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಪಟ್ಟಣದ ಹಳೇತಾಲೂಕು ಕಚೇರಿ ರಸ್ತೆಯ ತರಗು ಆಂಜನೇಯ ಸ್ವಾಮಿಸಮುದಾಯ ಭವನದಲ್ಲಿ ಸಾಮೂಹಿಕ 108 ಸೂರ್ಯ ನಮಸ್ಕಾರ ಮಾಡಲಾಯಿತು.

ರಥಸಪ್ತಮಿಯಂದು ಸೂರ್ಯ ಪಥ ಬದ ಲಾವಣೆ ಮಾಡಿ ಭೂಮಿಯ ಸಮೀಪಕ್ಕೆ ಬರುತ್ತಾನೆ. ಅದಕ್ಕಾಗಿ ಸೂರ್ಯ ನನ್ನು ಸ್ವಾಗತಿಸುವ ಸಲುವಾಗಿ ಈ ಕಾರ್ಯಕ್ರಮ ವನ್ನು ಆಯೋಜಿಸಲಾಗಿದೆ. ಸಾಮೂಹಿಕವಾಗಿ ಸೂರ್ಯ ನಮಸ್ಕಾರ, ಅಗ್ನಿ ಹೋತ್ರ, ಆದಿತ್ಯ ಸೂತ್ರ, ಪಠಣ ಸೇರಿದಂತೆ ಹಲವು ರೀತಿಯ ನಮಸ್ಕಾರ ಮಾಡಲಾಯಿತು. ಸುಮಾರು 100ಕ್ಕೂ ಹೆಚ್ಚಿನ ಜನರು108 ಸಾರಿ 22 ಸಾವಿರ ಸೂರ್ಯ ನಮಸ್ಕಾರವನ್ನು ಮಾಡಲಾಯಿತು.

ಪತಂಜಲಿ ಯೋಗ ಸಮಿತಿಯ ಅಧ್ಯಕ್ಷ ಮುನಿವೆಂಕಟಪ್ಪ ಮಾತನಾಡಿ, ಪ್ರತಿ ವರ್ಷವೂ ರಥ ಸಪ್ತಮಿದಿನ 108 ಸೂರ್ಯ ನಮಸ್ಕಾರವನ್ನು ಸಾಮೂಹಿಕವಾಗಿ ಮಾಡಲಾಗು ತ್ತದೆ. ನಿತ್ಯ ಸೂರ್ಯ ನಮಸ್ಕಾರ ಮಾಡುವುದರಿಂದ ನರಮಂಡಲ ಚೇತನಗೊಳ್ಳುತ್ತದೆ. ಜೀರ್ಣ ಶಕ್ತಿ ಹೆಚ್ಚುತ್ತದೆ. ರಕ್ತ ಪರಿಚಲನೆ ಕ್ರಮಬದ್ಧವಾಗುತ್ತದೆ. ಚರ್ಮದ ಕಾಂತಿ ಹೆಚ್ಚುತ್ತದೆ ಎಂದರು.

ಮೈ ಮನಸ್ಸುಗಳ ಆರೋಗ್ಯ ಪ್ರತೀಕವಾದ ಸೂರ್ಯಸ್ಥಾನವನ್ನು ಆಬಾಲ ವೃದ್ಧರೆಲ್ಲರೂ ಮಾಡ ಬಹುದು. ರೋಗ ನಿರೋಧಕ ಶಕ್ತಿ ಹೆಚ್ಚುವುದರ ಜೊತೆಗೆ ಇದರಿಂದ ದೊರೆಯುವ ಪ್ರಯೋಜನಗಳು ಒಂದಲ್ಲ ಎರಡಲ್ಲ ಸೂರ್ಯನ ಕಿರಣಗಳಲ್ಲಿರುವ ವಿವಿಧ ಬಣ್ಣಗಳುಮನುಷ್ಯನ ಮೇಲೆ ವೈಶಿಷ್ಟ ಪರಿಣಾಮ ಬೀರುತ್ತದೆ ಎಂದು ಹೇಳಿದರು.

ಜೇಸಿಐ ಚಪ್ಪರದ ಕಲ್ಲು ಚಂದನ ಅಧ್ಯಕ್ಷ ಹಾಗೂ ಪತಂಜಲಿ ಯೋಗ ಸಮಿತಿ ಕಾರ್ಯದರ್ಶಿ ನೆರಗನ ಹಳ್ಳಿಶ್ರೀನಿವಾಸ್‌ ಮಾತನಾಡಿ, ದಿನದ ಕೆಲ ಸಮಯ ವನ್ನು ಯೋಗಕ್ಕೆ ಮೀಸಲಿಡುವುದರಿಂದ ಆರೋಗ್ಯ ವನ್ನು ಹೆಚ್ಚಿಸಿ ಕೊಳ್ಳಬಹುದು. ರಥಸಪ್ತಮಿ ದಿನ ಅತ್ಯಂತ ಶ್ರೇಷ್ಠವಾದದಿನವಾಗಿದೆ. ಪತಂಜಲಿ ಯೋಗ ಶಿಕ್ಷಣದಿಂದ ಪ್ರತಿಯೊಬ್ಬರು ಯೋಗವನ್ನು ಕಲಿಯು ತ್ತಾರೆ.ಯೋಗದಿಂದ ಆರೋಗ್ಯವನ್ನು ವೃದ್ಧಿಸಿಕೊಳ್ಳಬ ಹುದು. ಈ ದಿನ ಸೂರ್ಯ ನಮಸ್ಕಾರ ಮಾಡುವುದ ರಿಂದ ಆರೋಗ್ಯ ವೃದ್ಧಿಯಾಗುತ್ತದೆ ಎಂದರು.

ಪುರಸಭಾ ಅಧ್ಯಕ್ಷೆ ರೇಖಾವೇಣುಗೋಪಾಲ ಮಾತನಾಡಿ, ಸೂರ್ಯ ನಮಸ್ಕಾರ ಮಾಡುವುದ ರಿಂದ ಆರೋಗ್ಯ ವೃದ್ಧಿಯಾಗುತ್ತದೆ. ಪ್ರತಿಯೊಬ್ಬರೂ ಯೋಗಾಸನ ಮಾಡಬೇಕು. ನಮ್ಮ ಆರೋಗ್ಯ ಚನ್ನಾಗಿರಬೇಕಾದರೆ ಯೋಗ ಅತಿ ಮುಖ್ಯವಾಗಿದೆ ಎಂದು ಹೇಳಿದರು.

ಖಜಾಂಚಿ ವಿನಯ್‌ಕುಮಾರ್‌, ಶಿಕ್ಷಕ ಪ್ರಮುಖ್‌ ನಾಗೇಶ್‌, ಗಾಯತ್ರಿ, ಜಿಲ್ಲಾ ಸಹ ಸಂಚಾಲಕ ಸುರೇಶ್‌ಕುಮಾರ್‌, ಶಿಕ್ಷಣ ಪ್ರಮುಖ್‌ ಹೇಮಾವತಿ, ಅಂಬುಜಸುನಂದ, ಸಂಘಟನಾ ಪ್ರಮುಖ್‌ ಸತೀಶ್‌, ಸರಸ್ಪತಿ, ವರದಿ ಪ್ರಮುಖ್‌ ಮಹಾಲಕ್ಷ್ಮೀ, ಪ್ರಕಾಶ್‌, ಶಿಕ್ಷಕರಾದ ನವೀನ್‌, ಉಷಾ, ಶ್ಯಾಮಲಾ, ಕೋಮಲಾ ಇದ್ದರು.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.