ಯುವಕರೇ ಕ್ರೀಡಾ ಚಟುವಟಿಕೆಯಲ್ಲಿ ಹೆಚ್ಚು ಪಾಲ್ಗೊಳ್ಳಿ


Team Udayavani, Nov 20, 2022, 3:03 PM IST

TDY-9

ದೇವನಹಳ್ಳಿ: ಯುವಕರು ದೃಢಸಂಕಲ್ಪ ಮಾಡಿ ನಿರಂತರ ಅಭ್ಯಾಸ, ಕಠಿಣ ಪರಿಶ್ರಮವಿದ್ದರೆ ಕ್ರೀಡೆಯಲ್ಲಿ ಸಾಧನೆ ಮಾಡಬಹುದು ಎಂದು ಶಾಸಕ ಎಲ್‌.ಎನ್‌.ನಾರಾಯಣಸ್ವಾಮಿ ತಿಳಿಸಿದರು.

ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಆಟದ ಮೈದಾನದಲ್ಲಿ ವಹ್ನಿಕುಲ ತಿಗಳ ಪ್ರಿಮಿಯರ್‌ ಲೀಗ್‌ ಕ್ರಿಕೆಟ್‌ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ದುಶ್ಚಟಗಳಿಗೆ ಯುವಕರು ಒಳಗಾಗುತ್ತಿದ್ದು, ಕ್ರೀಡಾ ಚಟುವಟಿಕೆಗಳಲ್ಲಿ ಯುವಕರು ಹೆಚ್ಚು ಪಾಲ್ಗೊಳ್ಳಬೇಕು. ಕ್ರೀಡೆಯನ್ನು ಆರೋಗ್ಯದ ಹಿತಕ್ಕಾಗಿ ಇಲ್ಲವೇ ದೇಹ ದಂಡಿಸಲು ಆಯ್ಕೆ ಮಾಡಿಕೊಳ್ಳುವ ಬದಲು ಸಾಧನೆಗೆ ರಹದಾರಿಯಾಗಿ ಆಯ್ಕೆ ಮಾಡಿಕೊಳ್ಳಬಹುದು ಎಂದರು.

ಕ್ರೀಡಾರಂಗದಲ್ಲಿ ಸಾಧನೆ ಮಾಡಿರುವ ಸಾಧಕರು ಯುವಕರಿಗೆ ಸ್ಫೂರ್ತಿಯಾಗಬೇಕು. ಆಟವಾಡುವಾಗ ಗೆಲುವಿನ ತುಡಿತದ ಜೊತೆಗೆ ಕ್ರೀಡಾಸ್ಫೂರ್ತಿ ಮೆರೆಯ ಬೇಕು. ತಿಗಳ ಸಮುದಾಯದ ಯುವಕರು ಕ್ರಿಕೆಟ್‌ ಪಂದ್ಯಾವಳಿಯನ್ನು ರೂಪಿಸಿ ಕ್ರೀಡಾಸ್ಪೂರ್ತಿ ಮೆರೆಯುತ್ತಿರುವುದು ಉತ್ತಮ ಕಾರ್ಯವಾಗಿದೆ ಎಂದರು.

ಯುವಕರನ್ನು ಸಂಘಟಿಸಲು ಅನುಕೂಲ: ಕಳೆದ ಎರಡು ವರ್ಷಗಳಿಂದ ಕೊರೊನಾದಿಂದ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಜನರನ್ನು ಒಗ್ಗೂಡಿಸಿ ಆಚರಿಸಲು ಅನುಮತಿ ದೊರೆಯುತ್ತಿರಲಿಲ್ಲ. ಇದೀಗ ಕೊರೊನಾ ಇಳಿಮುಖ ಆಗಿರುವುದರಿಂದ ಕ್ರೀಡೆಗಳ ಕಡೆ ಯುವಕರು ಹೆಚ್ಚಿನ ಒಲವನ್ನು ಹೊಂದಿದ್ದು, ಕ್ರಿಕೆಟ್‌ ಟೂರ್ನಿಮೆಂಟ್‌ ಯುವಕರನ್ನು ಸಂಘಟಿಸಲು ಅನುಕೂಲ ಆಗುತ್ತದೆ. ಆರೋಗ್ಯ ಹೆಚ್ಚಿಸಿಕೊಳ್ಳಲು ಕ್ರೀಡೆಗಳ ಕಡೆ ಯುವಕರು ಮುಖ ಮಾಡಬೇಕು ಎಂದರು.

ಜ್ಞಾಪಕಶಕ್ತಿ ವೃದ್ಧಿ: ಕ್ರೀಡೆ ಯುವಕರ ಸರ್ವಾಂಗೀಣ ಅಭಿವೃದ್ಧಿಗೆ ಪೂರಕ ಆಗಲಿದೆ. ಕ್ರೀಡೆಯಲ್ಲಿ ಹೆಚ್ಚು ಹೆಚ್ಚು ಭಾಗವಹಿಸಬೇಕು.ಇತ್ತೀಚಿನ ದಿನಗಳಲ್ಲಿ ಮೊಬೈಲ್‌, ಗೇಮ್‌, ವಾಟ್ಸಾಪ್‌, ಪೇಸ್‌ಬುಕ್‌ನಲ್ಲಿ ಯುವಕರು ತಲ್ಲೀನರಾಗಿದ್ದಾರೆ. ಅದನ್ನು ಬಿಟ್ಟು ಕ್ರೀಡಾಚಟುವಟಿಕೆಗಳ ಕಡೆ ಹೆಚ್ಚು ಗಮನ ಕೊಡಬೇಕು. ಕ್ರೀಡಾಚಟುವಟಿಕೆಗಳು ಯುವಕರ ಸದೃಢ ಆರೋಗ್ಯದ ಜೊತೆಗೆ ಜ್ಞಾಪಕಶಕ್ತಿಯನ್ನು ವೃದ್ಧಿಸಲು ಸಹಕಾರಿ ಆಗುತ್ತದೆ ಎಂದರು.

ತಿಗಳ ಸಮುದಾಯ ಶ್ರಮಜೀವಿಗಳು: ಮೌಕ್ತಿಕಾಂಬ ದೇವಾಲಯದ ಅಧ್ಯಕ್ಷ ಶಿವನಾಪುರ ವಿಜಯಕುಮಾರ್‌ ಮಾತನಾಡಿ, ತಿಗಳ ಸಮಾಜದ ಯುವಕರು ವಹ್ನಿಕುಲ ತಿಗಳ ಪ್ರಿಮಿಯರ್‌ ಲೀಗ್‌ ಕ್ರಿಕೆಟ್‌ ಪಂದ್ಯಾವಳಿಗಳನ್ನು ಮಾಡಿ ಯುವಕರಿಗೆ ಪ್ರೋತ್ಸಾಹ ನೀಡುವ ಕೆಲಸವನ್ನು ಮಾಡುತ್ತಿದ್ದಾರೆ. ತಿಗಳ ಸಮುದಾಯ ಶ್ರಮಜೀವಿಗಳು. ಇರುವ ಭೂಮಿಯಲ್ಲಿ ತರಕಾರಿ ಹಣ್ಣು, ಹೂಗಳನ್ನು ನೀಡುತ್ತಿದೆ. ಸ್ಪರ್ಧಾತ್ಮಕ ಯುವಕರು ಕ್ರೀಡಾ ಚಟುವಟಿಕೆಗಳಲ್ಲಿ ಉತ್ಸಾಹದಿಂದ ಭಾಗವಹಿಸಬೇಕು. ಆದಾಗ ಮಾತ್ರ ನಿಮ್ಮ ಜೀವನದ ಸಮಗ್ರ ಸಾಧಿಸಬಹುದು ಎಂದು ಹೇಳಿದರು.

ತಾಲೂಕು ತಿಗಳ ಸಂಘದ ಅಧ್ಯಕ್ಷ ಗೋಪಾಲಕೃಷ್ಣ, ಕರವೇ(ಚಲಪತಿ ಬಣದ)ರಾಜ್ಯ ಗೌರವಾಧ್ಯಕ್ಷ ಚಂದ್ರಶೇಖರ್‌, ಮೌಕ್ತಿಕಾಂಬ ದೇವಾಲಯದ ಉಪಾಧ್ಯಕ್ಷ ರಾಮಚಂದ್ರ, ದೇವಾಸ್ಥಾನದ ಪೂಜಾರಿ ರವಿಕುಮಾರ್‌, ಮುಖಂಡ ಡಾ.ವೆಂಕಟರಾಜು, ಮುನಿರಾಜು, ಗೋಪಾಲಪ್ಪ, ವಿಜಯಪುರ ಮುನಿವೀರಣ್ಣ, ಮುನೀಂದ್ರ, ಮಂಜುನಾಥ್‌, ವಸಂತ್‌, ಮುನಿರಾಜು, ನವೀನ್‌, ಕಿಶೋರ್‌, ಪಾಂಡು, ಹರೀಶ್‌, ಮುನಿವೆಂಕಟಪ್ಪ ಹಾಗೂ ಯುವಕರು ಇದ್ದರು.

ಟಾಪ್ ನ್ಯೂಸ್

1-saddsadsad-asds

ಜೆಡಿಎಸ್ 25 ಸ್ಥಾನ ಗೆಲ್ಲಲ್ಲ, ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಗ್ಯಾರಂಟಿ: ಡಾ.ಯತೀಂದ್ರ

1-sadsad-as-d

ವಿಶ್ವ ಚಾಂಪಿಯನ್‌ಶಿಪ್: ಪ್ರಶಸ್ತಿ ಮುಡಿಗೇರಿಸಿಕೊಂಡ ಬಾಕ್ಸರ್ ನಿಖತ್ ಜರೀನ್

ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ

ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ನ್ಪೋಟ್ಸ್‌ನ “ಟ್ರೋಫಿ ಟೂರ್‌’

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ಸ್ಪೋರ್ಟ್ಸ್ ನ “ಟ್ರೋಫಿ ಟೂರ್‌’

HDK

50 ಕೊಡ್ತಿರಿ ಅಂತ ಗೊತ್ತಿದೆ,ಬೇಕಿರೋದು 123 ಸ್ಥಾನ : ಹೆಚ್.ಡಿ.ಕುಮಾರಸ್ವಾಮಿ

14-wwqwe

ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ

1-ww-ewewe

ಮೋದಿ ಸರಕಾರ 9 ವರ್ಷಗಳಲ್ಲಿ ಏನು ಕಡಿದು ಗುಡ್ಡೆ ಹಾಕಿದೆ: ನಲಪಾಡ್ ಪ್ರಶ್ನೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-12

ನೆಲಮಂಗಲ ಪೊಲೀಸರ ಭರ್ಜರಿ ಬೇಟೆ

tdy-14

53 ಲಕ್ಷದ ಪುರಸಭೆ ಉಳಿತಾಯ ಬಜೆಟ್‌

tdy-8

ಆನ್‌ಲೈನ್‌ನಲ್ಲಿ ಮೋಸ ಹೋಗುತ್ತಿರುವವರಲ್ಲಿ ಶಿಕ್ಷಿತರೇ ಹೆಚ್ಚು

tdy-11

ಘಾಟಿಯಲ್ಲಿ ಸಾಮೂಹಿಕ ವಿವಾಹ

moorti

108 ಅಡಿ ಮಾದಪ್ಪನ ಪ್ರತಿಮೆ ಲೋಕಾರ್ಪಣೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-saddsadsad-asds

ಜೆಡಿಎಸ್ 25 ಸ್ಥಾನ ಗೆಲ್ಲಲ್ಲ, ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಗ್ಯಾರಂಟಿ: ಡಾ.ಯತೀಂದ್ರ

1-sadsad-as-d

ವಿಶ್ವ ಚಾಂಪಿಯನ್‌ಶಿಪ್: ಪ್ರಶಸ್ತಿ ಮುಡಿಗೇರಿಸಿಕೊಂಡ ಬಾಕ್ಸರ್ ನಿಖತ್ ಜರೀನ್

ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ

ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ನ್ಪೋಟ್ಸ್‌ನ “ಟ್ರೋಫಿ ಟೂರ್‌’

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ಸ್ಪೋರ್ಟ್ಸ್ ನ “ಟ್ರೋಫಿ ಟೂರ್‌’

HDK

50 ಕೊಡ್ತಿರಿ ಅಂತ ಗೊತ್ತಿದೆ,ಬೇಕಿರೋದು 123 ಸ್ಥಾನ : ಹೆಚ್.ಡಿ.ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.