ಯುವಕರೇ ಕ್ರೀಡಾ ಚಟುವಟಿಕೆಯಲ್ಲಿ ಹೆಚ್ಚು ಪಾಲ್ಗೊಳ್ಳಿ


Team Udayavani, Nov 20, 2022, 3:03 PM IST

TDY-9

ದೇವನಹಳ್ಳಿ: ಯುವಕರು ದೃಢಸಂಕಲ್ಪ ಮಾಡಿ ನಿರಂತರ ಅಭ್ಯಾಸ, ಕಠಿಣ ಪರಿಶ್ರಮವಿದ್ದರೆ ಕ್ರೀಡೆಯಲ್ಲಿ ಸಾಧನೆ ಮಾಡಬಹುದು ಎಂದು ಶಾಸಕ ಎಲ್‌.ಎನ್‌.ನಾರಾಯಣಸ್ವಾಮಿ ತಿಳಿಸಿದರು.

ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಆಟದ ಮೈದಾನದಲ್ಲಿ ವಹ್ನಿಕುಲ ತಿಗಳ ಪ್ರಿಮಿಯರ್‌ ಲೀಗ್‌ ಕ್ರಿಕೆಟ್‌ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ದುಶ್ಚಟಗಳಿಗೆ ಯುವಕರು ಒಳಗಾಗುತ್ತಿದ್ದು, ಕ್ರೀಡಾ ಚಟುವಟಿಕೆಗಳಲ್ಲಿ ಯುವಕರು ಹೆಚ್ಚು ಪಾಲ್ಗೊಳ್ಳಬೇಕು. ಕ್ರೀಡೆಯನ್ನು ಆರೋಗ್ಯದ ಹಿತಕ್ಕಾಗಿ ಇಲ್ಲವೇ ದೇಹ ದಂಡಿಸಲು ಆಯ್ಕೆ ಮಾಡಿಕೊಳ್ಳುವ ಬದಲು ಸಾಧನೆಗೆ ರಹದಾರಿಯಾಗಿ ಆಯ್ಕೆ ಮಾಡಿಕೊಳ್ಳಬಹುದು ಎಂದರು.

ಕ್ರೀಡಾರಂಗದಲ್ಲಿ ಸಾಧನೆ ಮಾಡಿರುವ ಸಾಧಕರು ಯುವಕರಿಗೆ ಸ್ಫೂರ್ತಿಯಾಗಬೇಕು. ಆಟವಾಡುವಾಗ ಗೆಲುವಿನ ತುಡಿತದ ಜೊತೆಗೆ ಕ್ರೀಡಾಸ್ಫೂರ್ತಿ ಮೆರೆಯ ಬೇಕು. ತಿಗಳ ಸಮುದಾಯದ ಯುವಕರು ಕ್ರಿಕೆಟ್‌ ಪಂದ್ಯಾವಳಿಯನ್ನು ರೂಪಿಸಿ ಕ್ರೀಡಾಸ್ಪೂರ್ತಿ ಮೆರೆಯುತ್ತಿರುವುದು ಉತ್ತಮ ಕಾರ್ಯವಾಗಿದೆ ಎಂದರು.

ಯುವಕರನ್ನು ಸಂಘಟಿಸಲು ಅನುಕೂಲ: ಕಳೆದ ಎರಡು ವರ್ಷಗಳಿಂದ ಕೊರೊನಾದಿಂದ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಜನರನ್ನು ಒಗ್ಗೂಡಿಸಿ ಆಚರಿಸಲು ಅನುಮತಿ ದೊರೆಯುತ್ತಿರಲಿಲ್ಲ. ಇದೀಗ ಕೊರೊನಾ ಇಳಿಮುಖ ಆಗಿರುವುದರಿಂದ ಕ್ರೀಡೆಗಳ ಕಡೆ ಯುವಕರು ಹೆಚ್ಚಿನ ಒಲವನ್ನು ಹೊಂದಿದ್ದು, ಕ್ರಿಕೆಟ್‌ ಟೂರ್ನಿಮೆಂಟ್‌ ಯುವಕರನ್ನು ಸಂಘಟಿಸಲು ಅನುಕೂಲ ಆಗುತ್ತದೆ. ಆರೋಗ್ಯ ಹೆಚ್ಚಿಸಿಕೊಳ್ಳಲು ಕ್ರೀಡೆಗಳ ಕಡೆ ಯುವಕರು ಮುಖ ಮಾಡಬೇಕು ಎಂದರು.

ಜ್ಞಾಪಕಶಕ್ತಿ ವೃದ್ಧಿ: ಕ್ರೀಡೆ ಯುವಕರ ಸರ್ವಾಂಗೀಣ ಅಭಿವೃದ್ಧಿಗೆ ಪೂರಕ ಆಗಲಿದೆ. ಕ್ರೀಡೆಯಲ್ಲಿ ಹೆಚ್ಚು ಹೆಚ್ಚು ಭಾಗವಹಿಸಬೇಕು.ಇತ್ತೀಚಿನ ದಿನಗಳಲ್ಲಿ ಮೊಬೈಲ್‌, ಗೇಮ್‌, ವಾಟ್ಸಾಪ್‌, ಪೇಸ್‌ಬುಕ್‌ನಲ್ಲಿ ಯುವಕರು ತಲ್ಲೀನರಾಗಿದ್ದಾರೆ. ಅದನ್ನು ಬಿಟ್ಟು ಕ್ರೀಡಾಚಟುವಟಿಕೆಗಳ ಕಡೆ ಹೆಚ್ಚು ಗಮನ ಕೊಡಬೇಕು. ಕ್ರೀಡಾಚಟುವಟಿಕೆಗಳು ಯುವಕರ ಸದೃಢ ಆರೋಗ್ಯದ ಜೊತೆಗೆ ಜ್ಞಾಪಕಶಕ್ತಿಯನ್ನು ವೃದ್ಧಿಸಲು ಸಹಕಾರಿ ಆಗುತ್ತದೆ ಎಂದರು.

ತಿಗಳ ಸಮುದಾಯ ಶ್ರಮಜೀವಿಗಳು: ಮೌಕ್ತಿಕಾಂಬ ದೇವಾಲಯದ ಅಧ್ಯಕ್ಷ ಶಿವನಾಪುರ ವಿಜಯಕುಮಾರ್‌ ಮಾತನಾಡಿ, ತಿಗಳ ಸಮಾಜದ ಯುವಕರು ವಹ್ನಿಕುಲ ತಿಗಳ ಪ್ರಿಮಿಯರ್‌ ಲೀಗ್‌ ಕ್ರಿಕೆಟ್‌ ಪಂದ್ಯಾವಳಿಗಳನ್ನು ಮಾಡಿ ಯುವಕರಿಗೆ ಪ್ರೋತ್ಸಾಹ ನೀಡುವ ಕೆಲಸವನ್ನು ಮಾಡುತ್ತಿದ್ದಾರೆ. ತಿಗಳ ಸಮುದಾಯ ಶ್ರಮಜೀವಿಗಳು. ಇರುವ ಭೂಮಿಯಲ್ಲಿ ತರಕಾರಿ ಹಣ್ಣು, ಹೂಗಳನ್ನು ನೀಡುತ್ತಿದೆ. ಸ್ಪರ್ಧಾತ್ಮಕ ಯುವಕರು ಕ್ರೀಡಾ ಚಟುವಟಿಕೆಗಳಲ್ಲಿ ಉತ್ಸಾಹದಿಂದ ಭಾಗವಹಿಸಬೇಕು. ಆದಾಗ ಮಾತ್ರ ನಿಮ್ಮ ಜೀವನದ ಸಮಗ್ರ ಸಾಧಿಸಬಹುದು ಎಂದು ಹೇಳಿದರು.

ತಾಲೂಕು ತಿಗಳ ಸಂಘದ ಅಧ್ಯಕ್ಷ ಗೋಪಾಲಕೃಷ್ಣ, ಕರವೇ(ಚಲಪತಿ ಬಣದ)ರಾಜ್ಯ ಗೌರವಾಧ್ಯಕ್ಷ ಚಂದ್ರಶೇಖರ್‌, ಮೌಕ್ತಿಕಾಂಬ ದೇವಾಲಯದ ಉಪಾಧ್ಯಕ್ಷ ರಾಮಚಂದ್ರ, ದೇವಾಸ್ಥಾನದ ಪೂಜಾರಿ ರವಿಕುಮಾರ್‌, ಮುಖಂಡ ಡಾ.ವೆಂಕಟರಾಜು, ಮುನಿರಾಜು, ಗೋಪಾಲಪ್ಪ, ವಿಜಯಪುರ ಮುನಿವೀರಣ್ಣ, ಮುನೀಂದ್ರ, ಮಂಜುನಾಥ್‌, ವಸಂತ್‌, ಮುನಿರಾಜು, ನವೀನ್‌, ಕಿಶೋರ್‌, ಪಾಂಡು, ಹರೀಶ್‌, ಮುನಿವೆಂಕಟಪ್ಪ ಹಾಗೂ ಯುವಕರು ಇದ್ದರು.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.