ಜಿಪಂ 2 ಕ್ಷೇತ್ರ ಹೆಚ್ಚಳ, ತಾಪಂ 19 ಕ್ಷೇತ್ರ ಕಡಿತ

ಕ್ಷೇತ್ರ ಪುನರ್‌ ವಿಂಗಡಣೆ , ಆಕಾಂಕ್ಷಿಗಳಿಗೆ ಕ್ಷೇತ್ರಗಳ ಹುಡುಕಾಟ, 35 ಸಾವಿರ ಜನಸಂಖ್ಯೆಗೆ ಒಂದು ಜಿಪಂ ಕ್ಷೇತ್ರ

Team Udayavani, Feb 22, 2021, 12:11 PM IST

ಜಿಪಂ 2 ಕ್ಷೇತ್ರ ಹೆಚ್ಚಳ, ತಾಪಂ 19 ಕ್ಷೇತ್ರ ಕಡಿತ

ದೇವನಹಳ್ಳಿ: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಅವಧಿ ಮುಕ್ತಾಯ ಹಂತಕ್ಕೆ ಬಂದಿದ್ದು, ಚುನಾವಣೆ ದೃಷ್ಟಿಯಿಂದ ಕ್ಷೇತ್ರ ಪುನರ್‌ ವಿಂಗಡಣೆ ಮಾಡಿದೆ. ಜಿಪಂ ಕ್ಷೇತ್ರ ಪುನರ್‌ ವಿಂಗಡಣೆಯಲ್ಲಿ ಎರಡು ಕ್ಷೇತ್ರ ಹೆಚ್ಚಳವಾಗಿದೆ. ತಾಪಂಗೆ 19 ಕ್ಷೇತ್ರ ಇಳಿಕೆ ಮಾಡಲಾಗಿದೆ. ಜಿಲ್ಲೆಯಲ್ಲಿ 23 ಜಿಪಂ ಕ್ಷೇತ್ರ, 58 ತಾಪಂ ಕ್ಷೇತ್ರಗಳನ್ನು ಚುನಾವಣಾ ಆಯೋಗ ನಿಗದಿಗೊಳಿಸಿದೆ.

ಇತ್ತೀಚೆಗೆ ತಾಪಂ ರದ್ದು ಮಾಡಿ, ಕೇವಲ ಎರಡು ಹಂತದ ವ್ಯವಸ್ಥೆ ಜಾರಿಗೊಳಿಸಲು ಸರ್ಕಾರ ಮುಂದಾಗಿತ್ತು. ಇದು ಚರ್ಚೆಗೆ ಎಡೆ ಮಾಡಿಕೊಟ್ಟಿತ್ತು. ಕ್ಷೇತ್ರ ಪುನರ್‌ವಿಂಗಡಣೆಯಿಂದ ತಾಪಂ ರದ್ದಾಗುವುದಿಲ್ಲ ಎಂಬುವುದು ರಾಜಕೀಯ ನಾಯಕರ ವಿಶ್ಲೇಷಣೆಯಾಗಿದೆ.

ಗ್ರಾಮಮಟ್ಟಕ್ಕೆ ಆಡಳಿತ ತಲುಪಿಸುವ ಉದ್ದೇಶದಿಂದ ಚುನಾವಣಾ ಆಯೋಗವು ತಾಪಂ, ಜಿಪಂ ಕ್ಷೇತ್ರಗಳ ಪುನರ್‌ವಿಂಗಡಣೆಗೆ ಸಿದ್ಧತೆ ಮಾಡುವಂತೆ ಸೂಚನೆ ನೀಡಿದ್ದು, ಮುಂದಿನ ಚುನಾವಣೆಗೆ ತಾಪಂ ಸ್ಥಾನಗಳ ಸಂಖ್ಯೆ ಕಡಿಮೆಯಾಗಲಿದ್ದು, ಜಿಪಂ ಸ್ಥಾನ ಹೆಚ್ಚಾಗಲಿವೆ. ಆಯೋಗದ ಆದೇಶದಂತೆ ಜಿಲ್ಲೆಯಲ್ಲಿ  ಹೊಸದಾಗಿ ಎರಡು ಜಿಪಂ ಕ್ಷೇತ್ರ ಸೃಷ್ಟಿಯಾಗಲಿದ್ದು, ತಾಪಂನ 19 ಕ್ಷೇತ್ರಗಳು ರದ್ದಾಗಲಿವೆ.

ಗ್ರಾಮವನ್ನೇ ಕ್ಷೇತ್ರದ ಹೆಸರು: ಭೌಗೋಳಿಕವಾಗಿ ಗ್ರಾಪಂಗಳನ್ನು ಸೇರಿಸಿಕೊಳ್ಳಲಾಗಿದೆ. ಜಿಪಂ ಮತ್ತು ತಾಪಂ ಕ್ಷೇತ್ರಗಳಿಗೆ ಅನುಗುಣವಾಗಿ ಮತದಾರರ ಸಂಖ್ಯೆ ಹಾಗೂ ಗ್ರಾಮ ದೊಡ್ಡದಾಗಿದ್ದರೆ, ಆ ಗ್ರಾಮವನ್ನೇ ಕ್ಷೇತ್ರವನ್ನಾಗಿ ಹೆಸರಿಸಬಹುದು. ಈಗಾಗಲೇ ತಾಲೂಕುಗಳಲ್ಲಿ ಕ್ಷೇತ್ರಗಳ ಬದಲಾವಣೆ ಆಗದಿದ್ದರೆ ಆ ತಾಲೂಕಿನಲ್ಲಿ ಯಾವುದೇ ಬದಲಾವಣೆ ಮಾಡುವಂತಿಲ್ಲ ಎಂದು ತಿಳಿಸಿದೆ.

ದೇವನಹಳ್ಳಿ: ತಾಲೂಕಿನಲ್ಲಿ ನಾಲ್ಕು ಇದ್ದ ಜಿಪಂ ಕ್ಷೇತ್ರಗಳು ಇದೀಗ ಒಂದು ಜಿಪಂ ಹೆಚ್ಚುವರಿ ಯಾಗಿದ್ದು, ಒಟ್ಟು 5 ಜಿಪಂ ಕ್ಷೇತ್ರಗಳಲ್ಲಿ 5 ಜಿಪಂ ಸದಸ್ಯರನ್ನು ಒಳಗೊಂಡಿರುತ್ತದೆ. ಯಾವ ಕ್ಷೇತ್ರ ಜಿಪಂ ಕ್ಷೇತ್ರವಾಗಲಿದೆ ಎಂಬುದು ಚರ್ಚೆಗೆ ಗ್ರಾಸವಾಗಿದೆ.

ಹೊಸಕೋಟೆ: ತಾಲೂಕಿನಲ್ಲಿ ಈ ಹಿಂದೆ 6 ಜಿಪಂ ಕ್ಷೇತ್ರಗಳಿದ್ದು, ಇದೀಗ ಒಂದು ಕ್ಷೇತ್ರ ಹೆಚ್ಚುವರಿಯಾಗುವ ಮೂಲಕ 7ಕ್ಕೇರಿದೆ. ಅಲ್ಲಿಯೂ ಸಹ ಯಾವ ಕ್ಷೇತ್ರ ಹೊಸದಾಗಿ ಸೇರ್ಪಡೆಗೊಳ್ಳುತ್ತದೆ ಎಂಬುವುದು ಜನರಲ್ಲಿ ಕೂತೂಹಲ ಮೂಡಿಸಿದೆ.

ರಾಜ್ಯ ಚುನಾವಣಾ ಆಯೋಗದ ಕ್ಷೇತ್ರಗಳ ಪುನರ್‌ ವಿಂಗಡಣೆ ಆದೇಶ ಪರಿಣಾಮ ಚುನಾವಣೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಕ್ಷೇತ್ರ ಹುಡುಕಾಟದ ತಲೆಬಿಸಿ ಶುರುವಾಗಿದೆ. ತಾಪಂ ಕ್ಷೇತ್ರಗಳು ಇಳಿಕೆಯಾಗಿರುವುದರಿಂದ ಯಾವ ಕ್ಷೇತ್ರ ರದ್ದಾಗುತ್ತದೆ ಎಂಬ ಚಿಂತೆ ಸದಸ್ಯರನ್ನು ಕಾಡುತ್ತಿದೆ.

ತಾಪಂ, ಜಿಪಂ ಅಧಿಕಾ ರ ಏಪ್ರಿಲ್‌ ಅಂತ್ಯಕ್ಕೆ ಮುಗಿಯಲಿದ್ದು, ಚುನಾವಣೆಯನ್ನು ಸರಿಯಾದ ಸಮಯಕ್ಕೆ ನಡೆಸಬೇಕು. ಆಯೋಗ 2011ರ ಜನಗಣತಿ ಪ್ರಕಾರ ಕ್ಷೇತ್ರ ಪುನರ್‌ ವಿಂಗಡನೆ ಮಾಡಿದೆ. ಸಿ.ನಾರಾಯಣಸ್ವಾಮಿ, ಮಾಜಿ ಸಂಸದ

ತಾಪಂ ಕ್ಷೇತ್ರಗಳನ್ನು ರದ್ದುಗೊಳಿಸುತ್ತಿರುವುದರಿಂದ ಗೊಂದಲ ಮೂಡಿಸುವಂತಿದೆ. ಜನಸಂಖ್ಯೆ ಆಧಾರದಲ್ಲಿ ಕಡಿಮೆ ಮಾಡಿರುವುದು ಒಳ್ಳೆಯದು. ಕ್ಷೇತ್ರಗಳಿಗೆ ಈಗ ಬರುತ್ತಿರುವ ಅನುದಾನ ಸಾಲದಾಗಿದ್ದು, ಹೆಚ್ಚಿಸಿದರೆ ಅನುಕೂಲವಾಗಲಿದೆ. ತಾಪಂರದ್ದುಗೊಳಿಸಿದರೆ ಸ್ಥಳೀಯ ಅಧಿಕಾರ ಮೊಟುಕುಗೊಳಿಸುವಂತೆ ಆಗುವುದರ ಜೊತೆಗೆ ಅಭಿವೃದ್ಧಿಗೆ ಹೊಡೆತ ಬೀಳುತ್ತದೆ. ಕಾರಹಳ್ಳಿ ಶ್ರೀನಿವಾಸ್‌, ತಾಪಂ ಸದಸ್ಯ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.