ಆಟೋ ಏರಿದ ಸಂಚಾರ ಪೊಲೀಸರು!

ಮೀಟರ್‌ಗಿಂತ ಹೆಚ್ಚು ಹಣ ಪಡೆವ ಚಾಲಕರಿಗೆ ಎಚ್ಚರಿಕೆ | ಮಾರುವೇಶದ ಕಾರ್ಯಾಚರಣೆ

Team Udayavani, May 30, 2019, 10:02 AM IST

30-May-5

ನಿಯಮಪಾಲನೆ ಕುರಿತು ನಗರದ ಆಟೋ ಚಾಲಕರ ಜತೆ ಸಂಚಾರ ಪೊಲೀಸ್‌ ಅಧಿಕಾರಿ ಮಾತುಕತೆ.

ಬೆಂಗಳೂರು: ನಗರದ ಸಂಚಾರ ಪೊಲೀಸರು ತಮ್ಮ ಚೈಕ್‌, ಜೀಪ್‌ಗ್ಳನ್ನು ಬಿಟ್ಟು ಆಟೋಗಳನ್ನು ಹತ್ತುತ್ತಿದ್ದಾರೆ. ಇದರರ್ಥ ಟ್ರಾಫಿಕ್‌ ಪೊಲೀಸರ ಎಲ್ಲ ವಾಹನಗಳೂ ಏಕಾಏಕಿ ಕೈಕೊಟ್ಟಿವೆ ಅಂತಲ್ಲ. ಪ್ರಯಾಣಿಕರಿಂದ, ಆಟೋ ಮೀಟರ್‌ನಲ್ಲಿ ಬರುವ ಮೊತ್ತಕ್ಕಿಂತಲೂ ಹೆಚ್ಚು ಹಣ ವಸೂಲಿ ಮಾಡುತ್ತಿರುವ ಚಾಲಾಕಿ ಚಾಲಕರಿಗೆ ಬಿಸಿ ಮುಟ್ಟಿಸಲು ನಗರ ಸಂಚಾರ ಪೊಲೀಸರು ಮಾರುವೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಪ್ರಯಾಣಿಕರಿಂದ ಮೀಟರ್‌ ದರಕ್ಕಿಂತ ಹೆಚ್ಚು ಹಣ ಕೇಳುವುದು ಮತ್ತು ಕೇಳಿದ ಪ್ರದೇಶಗಳಿಗೆ ಹೋಗುವುದಕ್ಕೆ ನಿರಾಕರಿಸುವ ಆಟೋ ಚಾಲಕರ ಮೇಲೆ ಸಂಚಾರ ಪೊಲೀಸರು ಒಂದು ಕಣ್ಣಿಟ್ಟಿದ್ದಾರೆ. ಇತ್ತೀಚೆಗೆ ಸಂಚಾರ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆ ಇದಕ್ಕೆ ಸಾಕ್ಷಿ.

ಕಳೆದ ಎರಡು ತಿಂಗಳಿಂದ ಆಟೋ ಚಾಲಕರ ಮೇಲೆ ಸಾರ್ವಜನಿಕ ವಲಯದಿಂದ ಹೆಚ್ಚು ದೂರುಗಳು ಬಂದ ಹಿನ್ನೆಲೆ, ಸಂಚಾರಿ ಪೊಲೀಸರು ಮೇ 21ರಿಂದ 24ರವರೆಗೆ ನಗರದ ವಿವಿಧ ಪ್ರದೇಶಗಳಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು. ಬೆಂಗಳೂರು ಪೂರ್ವ ಸಂಚಾರ ವಿಭಾಗದ 21 ಪ್ರದೇಶಗಳಲ್ಲಿ ಮತ್ತು ಬೆಂಗಳೂರು ಉತ್ತರ ಸಂಚಾರ ವಿಭಾಗದ 5 ಪ್ರದೇಶಗಳಲ್ಲಿ, ಸಂಚಾರ ಪೊಲೀಸರೇ ಪ್ರಯಾಣಿಕರ ಸೊಗಿನಲ್ಲಿ ಆಟೋಗಳಲ್ಲಿ ಪ್ರಯಾಣ ಮಾಡಿ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ನಿಯಮ ಉಲ್ಲಂಘಿಸಿದ ಆಟೋ ಚಾಲಕರಿಂದ ಒಟ್ಟು 8,64,600 ರೂ. ದಂಡ ಸಂಗ್ರಹಿಸಲಾಗಿದೆ!

ಪೂರ್ವ ವಿಭಾಗದ ಸಂಚಾರ ಪೊಲೀಸರು ಮೇ 21ಮತ್ತು 22ರಂದು ವಿಶೇಷ ಕಾರ್ಯಾಚರಣೆ ನಡೆಸಿ, 7091 ದೂರುಗಳನ್ನು ದಾಖಲಿಸಿದ್ದಾರೆ. ಎರಡೇ ದಿನದಲ್ಲಿ 8,14,300 ರೂ.ದಂಡ ಮೊತ್ತ ಸಂಗ್ರಹವಾಗಿದೆ. ಉತ್ತರ ವಿಭಾಗದ ಸಂಚಾರ ಪೊಲೀಸರು, ಉಳಿದ 2 ದಿನಗಳ ಕಾರ್ಯಾಚರಣೆಯಲ್ಲಿ 50,300 ರೂ.ದಂಡ ಸಂಗ್ರಹಿಸಿದ್ದರೆ.

ಸಂಚಾರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಪ್ರಯಾಣಿಕರು ಕೇಳಿದ ಪ್ರದೇಶಗಳಿಗೆ ಹೋಗಲು ನಿರಾಕರಿಸಿದ ಮತ್ತು ನಿಗದಿತ ಮೊತ್ತಕ್ಕಿಂತ ಹೆಚ್ಚು ಬಾಡಿಗೆ ಕೇಳಿದ ದೂರುಗಳ ಸಂಖ್ಯೆಯೇ ಹೆಚ್ಚಾಗಿದೆ. ಎರಡು ವಲಯಗಳಲ್ಲಿ ಸಾರ್ವಜನಿಕರು ಹೇಳಿದ ಪ್ರದೇಶಗಳಿಗೆ ಹೋಗಲು ನಿರಾಕರಿಸಿದಕ್ಕೆ 382 ಪ್ರಕರಣಗಳು ಮತ್ತು ನಿಗದಿತ ಮೊತ್ತಕ್ಕಿಂತ ಹೆಚ್ಚು ಹಣ ಕೇಳಿದ ಆರೋಪದ ಮೇಲೆ 304 ದೂರುಗಳು ದಾಖಲಾಗಿವೆ.

ದೂರು ದಾಖಲಾಗಿಲ್ಲ: ‘ಆಟೋ ಚಾಲಕರು ಪ್ರಯಾಣಿಕರಿಂದ ಹೆಚ್ಚು ವರಿ ಹಣ ಕೇಳಿರುವ ದೂರುಗಳ ಬಗ್ಗೆ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಲಾಗಿತ್ತು. ಇಲ್ಲಿಯವರೆಗೆ ಯಾವುದೇ ದೂರುಗಳು ದಾಖಲಾಗಿಲ್ಲ ಎಂದು ವರದಿ ಬಂದಿದೆ’ ಎನ್ನುತ್ತಾರೆ ಆಟೋರಿಕ್ಷಾ ಚಾಲಕರ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ರುದ್ರಮೂರ್ತಿ.

ಕಾರ್ಯಾಚರಣೆ ನಡೆಸಿದ ಟ್ರಾಫಿಕ್‌ ಪೊಲೀಸರು, ಒಮ್ಮೆ ಹೋದ ಮಾರ್ಗದಲ್ಲೇ ಮತ್ತೂಮ್ಮೆ ಬರುವಂತೆ ಕೇಳಿದ್ದಾರೆ. ಆದರೆ ಕೆಲವೊಂದು ಪ್ರದೇಶಗಳಿಗೆ ಹೋದರೆ, ವಾಪಸ್‌ ಬರುವಾಗ ಪ್ರಯಾಣಿಕರು ಸಿಗುವುದಿಲ್ಲ. ಆಗ ಖಾಲಿ ಬರಬೇಕಾಗುತ್ತದೆ ಎಂಬ ಕಾರಣಕ್ಕೆ ಚಾಲಕರು ಬಾಡಿಗೆ ಬರುವುದಿಲ್ಲ ಎಂದು ಹೇಳಿದ್ದಾರೆ. ಇದನ್ನೇ ನೆಪ ಮಾಡಿಕೊಂಡು ಪೊಲೀಸರು ದಂಡ ವಿಧಿಸಿದ್ದಾರೆ ಎಂದು ರುದ್ರಮೂರ್ತಿ ಆರೋಪಿಸುತ್ತಾರೆ.

‘ಸಂಚಾರ ಪೊಲೀಸರು ದಾಖಲಿಸಿಕೊಂಡಿರುವ ಎಲ್ಲ ದೂರುಗಳು ಸತ್ಯವಲ್ಲ. ಉದ್ದೇಶಪೂರ್ವಕವಾಗಿ ಕೆಲವು ದೂರುಗಳನ್ನು ದಾಖಲಿಸಿದ್ದಾರೆ. ಮೇಲಧಿಕಾರಿಗಳು ತಮಗೆ ನೀಡಿರುವ ಟಾರ್ಗೆಟ್ ತಲುಪುವ ಉದ್ದೇಶದಿಂದ ಇಲ್ಲದ ಕಾರಣಗಳನ್ನು ನೀಡಿ ದೂರು ದಾಖಲಿಸಿಕೊಳ್ಳುತ್ತಿದ್ದಾರೆ,’ ಎಂದು ರಾಜ್ಯ ಖಾಸಗಿ ವಾಣಿಜ್ಯ ವಾಹನ ಚಾಲಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್‌.ಪಿ.ಚಂದ್ರು ಆರೋಪಿಸುತ್ತಾರೆ.

ಪ್ರಯಾಣಿಕರನ್ನು ಇಳಿಸಲು ಆಟೋ ನಿಲ್ಲಿಸಿದರೂ ಅದನ್ನು ‘ನೋ ಪಾರ್ಕಿಂಗ್‌’ ಎಂದು ಪರಿಗಣಿಸಿ ದಂಡ ವಿಧಿಸಲಾಗುತ್ತದೆ. ಆಟೋ ಸಂಚಾರ ಇರುವುದೇ ‘ಒಪ್ಪಂದದ ಮೇರೆ’ಗೆ. ಹೀಗಿರುವಾಗ ಪ್ರಯಾಣಿಕರೊಂದಿಗೆ ಮಾತನಾಡದೆ ಅವರು ಕೇಳಿದ ಕಡೆ ಹೋಗಲು ಹೇಗೆ ಸಾಧ್ಯ ಎಂದು ಅವರು ಪ್ರಶ್ನೆ ಮಾಡುತ್ತಾರೆ.

ಸಹಾಯವಾಣಿಗೆ ಕರೆ ಮಾಡಿ
ಆಟೋ ಚಾಲಕರು ಬಾಡಿಗೆ ಬರಲು ನಿರಾಕರಿಸಿದರೆ, ಮೀಟರ್‌ ಹಾಕಲು ನಿರಾಕರಿಸಿದರೆ ಅಥವಾ ಮೀಟರ್‌ ಮೊತ್ತಕ್ಕಿಂತಲೂ ಹೆಚ್ಚು ಬಾಡಿಗೆ ಕೇಳಿದರೆ ಇಲ್ಲವೇ ಆಟೋ ಚಾಲಕರಿಂದ ಯಾವುದೇ ರೀತಿಯ ತೊಂದರೆ ಎದುರಾದರೆ, ಪ್ರಯಾಣಿಕರು ಸಹಾಯವಾಣಿ: 080- 22868444/22868550 ಕ್ಕೆ ಕರೆ ಮಾಡಿ ದೂರು ನೀಡಬಹುದು.

ದೂರುಗಳು ದಾಖಲಾದಂತೆಲ್ಲ ಕಾರ್ಯಾಚರಣೆ ನಡೆಸಲಾಗುವುದು. ದಂಡ ವಿಧಿಸುವುದರ ಜತೆಗೆ ಮುಂದಿನ ಕ್ರಮದ ಬಗ್ಗೆ ಸಾರಿಗೆ ಇಲಾಖೆ ಅಧಿಕಾರಿಗಳ ಜತೆ ಚರ್ಚಿಸಿ ತೀರ್ಮಾನಿಸುತ್ತೇವೆ.
ಜಗದೀಶ್‌, ಪೂರ್ವ ಸಂಚಾರ ವಿಭಾಗದ ಡಿಸಿಪಿ

— ಹಿತೇಶ್ ವೈ.

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.