16ರಂದು ಅರಣ್ಯ ಇಲಾಖೆ ಕಚೇರಿಗೆ ಮುತ್ತಿಗೆ

ಕಾಡುಪ್ರಾಣಿಗಳ ಹಾವಳಿ ತಡೆ, ಬೆಳೆ ನಷ್ಟ ಪರಿಹಾರಕ್ಕೆ ರೈತ ಸಂಘ ಮನವಿ

Team Udayavani, Aug 12, 2019, 3:21 PM IST

12-Agust-37

ಬಂಗಾರಪೇಟೆ ಎಪಿಎಂಸಿ ಆವರಣದಲ್ಲಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಮರಗಲ್ ಶ್ರೀನಿವಾಸ್‌, ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಅಧ್ಯಕ್ಷತೆಯಲ್ಲಿ ರೈತರ ಸಭೆ ನಡೆಯಿತು.

ಬಂಗಾರಪೇಟೆ: ಕಾಡುಪ್ರಾಣಿಗಳು ಹಾವಳಿಗೆ ಶಾಶ್ವತ ಪರಿಹಾರ, ಬೆಳೆ ನಷ್ಟಕ್ಕೆ ಪ್ರತಿ ಎಕರೆಗೆ 5 ಲಕ್ಷ ರೂ. ಪರಿಹಾರ ನೀಡಬೇಕೆಂದು ಒತ್ತಾಯಿಸಿ ಆ.16ರಂದು ಅರಣ್ಯ ಇಲಾಖೆ ಕಚೇರಿಗೆ ಜಾನುವಾರು, ನಾಶವಾದ ಬೆಳೆಗಳ ಸಮೇತ ಮುತ್ತಿಗೆ ಹಾಕಲು ನಿರ್ಧರಿಸಿರುವುದಾಗಿ ರೈತ ಸಂಘ ಅಧ್ಯಕ್ಷ ಮರಗಲ್ ಶ್ರೀನಿವಾಸ್‌ ಹೇಳಿದರು.

ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆಯ ಸಭಾಂಗಣದಲ್ಲಿ ಕರೆದಿದ್ದ ರೈತ ಸಂಘದ ಸಭೆಯಲ್ಲಿ ಮಾತನಾಡಿದ ಅವರು, ಒಂದು ಕಡೆ ಭೀಕರ ಬರಗಾಲ, ಮತ್ತೂಂದೆಡೆ ಆಲಿಕಲ್ಲು ಮಳೆ ಹಾಗೂ ಇವುಗಳ ಮಧ್ಯೆ ಬಿರುಗಾಳಿಗೆ ಬೆಳೆ ನಾಶವಾಗಿ ಸಂಕಷ್ಟದಲ್ಲಿರುವ ರೈತರಿಗೆ ಕಾಡು ಪ್ರಾಣಿಗಳ ಹಾವಳಿಗೆ ಇರುವ ಬೆಳೆಗಳು ಸಂಪೂರ್ಣ ನಾಶವಾಗಿ ಸಾಲದ ಸುಳಿಗೆ ಸಿಲುಕಿ ಒದ್ದಾಡುತ್ತಿದ್ದರೂ ಸರ್ಕಾರದ ನಿರ್ಲಕ್ಷ್ಯ ಮುಂದುವರಿದಿದೆ ಎಂದು ಆರೋಪಿಸಿದರು.

ಕಾಡುಪ್ರಾಣಿಗಳ ಹಾವಳಿ: ಕೃಷಿ ಕ್ಷೇತ್ರ ದಿನೇದಿನೆ ಅವನತಿಯತ್ತ ಸಾಗುತ್ತಿದೆ. ಜೊತೆಗೆ ಮನುಷ್ಯನ ದುರಾಸೆಗೆ ಪರಿಸರ ನಾಶವಾಗುತ್ತಿದೆ. ಪ್ರಾಣಿಗಳು ಆಹಾರ, ನೀರಿಗಾಗಿ ರೈತರ ಬೆಳೆಗಳತ್ತ ಮುಖ ಮಾಡುತ್ತಿವೆ. ಭೀಕರ ಬರಗಾಲದ ಜೊತೆಗೆ ಮಳೆ ಇಲ್ಲದೆ ತತ್ತರಿಸಿ ಸಾಲ ಮಾಡಿ ಕೊಳವೆಬಾವಿ ಕೊರೆಸಿ ಕಷ್ಟಪಟ್ಟು ಬೆಳೆದಂತಹ ಬೆಳೆ ಕಣ್ಣ ಮುಂದೆಯೇ ಕಾಡುಪ್ರಾಣಿಗಳ ಹಾವಳಿಗೆ ನಾಶವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹಣ ದುರ್ಬಳಕೆ: ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ತಾಲೂಕಿನ ಗಡಿಭಾಗದ ಹೋಬಳಿಗಳಾದ ಬೂದಿಕೋಟೆ, ಕಾಮಸಮುದ್ರ ವ್ಯಾಪ್ತಿಯಲ್ಲಿ ಆನೆಗಳು ಮತ್ತಿತರ ಪ್ರಾಣಿಗಳಿಂದ ರೈತರ ಬೆಳೆಗಳು ರಾತ್ರೋರಾತ್ರಿ ಪ್ರಾಣಿಗಳ ಹಾವಳಿಗೆ ನಾಶವಾಗುತ್ತಿದ್ದರೂ ನೆಪಮಾತ್ರಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಕಾರ್ಯಾಚರಣೆ ಮಾಡಿ ರೈತರು ಮತ್ತು ಪ್ರಾಣಿಗಳ ಹೆಸರಿನಲ್ಲಿ ಲಕ್ಷಾಂತರ ರೂ. ಹಣ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದರು.

ಸಮಯಕ್ಕೆ ಸರಿಯಾಗಿ ಬೆಳೆ ಸಮೀಕ್ಷೆ ಮಾಡದೆ ಪರಿಹಾರವನ್ನು ಸಹ ನೀಡುತ್ತಿಲ್ಲ. ಸರ್ಕಾರದಿಂದ 5 ಲಕ್ಷ ರೂ. ಮಂಜೂರಾದರೆ ರೈತರಿಗೆ 2 ಲಕ್ಷ ರೂ. ಕೊಟ್ಟ ಕೈ ತೊಳೆದುಕೊಳ್ಳುತ್ತಿದ್ದಾರೆ. ಬರಗಾಲದಲ್ಲಿ ಕಷ್ಟಾಪಟ್ಟು ಬೆಳೆದ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ಇದ್ದರೂ ಅದಕ್ಕೆ ತಕ್ಕಂತೆ ಪರಿಹಾರ ನೀಡುತ್ತಿಲ್ಲ. ಸಂಬಂಧಪಟ್ಟ ಅಧಿಕಾರಿಗಳಿಗೆ ರೈತರ ಮೇಲೆ ಕಾಳಜಿ ಇಲ್ಲ ಎಂದು ದೂರಿದರು.

ಸಭೆಯಲ್ಲಿ ಜಿಲ್ಲಾ ಸಂಚಾಲಕ ಕೆ.ಶ್ರೀನಿವಾಸಗೌಡ, ಉದಯ್‌ಕುಮಾರ್‌, ತಾಲೂಕ ಅಧ್ಯಕ್ಷ ಐತಾಂಡಹಳ್ಳಿ ಅಂಬರೀಶ್‌, ಚಂದ್ರಪ್ಪ, ಮಂಜುನಾಥ್‌, ಚಂದ್ರು, ಮಂಗಸಂದ್ರ ನಾಗೇಶ್‌, ವೆಂಕಟೇಶಪ್ಪ, ತಿಮ್ಮಣ್ಣ, ರಂಜಿತ್‌, ಸಾಗರ್‌, ಹನುಮಯ್ಯ, ಮುನಿನಾ ರಾಯಣಪ್ಪ, ಶ್ರೀನಿವಾಸರೆಡ್ಡಿ, ಬ್ಯಾಟರಾಯಪ್ಪ, ಟಿ.ಮುನಿಯಪ್ಪ, ನರಸಾಪುರ ಪುರುಷೋತ್ತಮ್‌, ಈಕಾಂಬಳ್ಳಿ ಮಂಜು, ಪುತ್ತೇರಿ ರಾಜು ಮುಂತಾದವರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.