ಧರೆಗುರುಳಿದ ಕಂಬಗಳು; ಗ್ರಾಮಗಳಲ್ಲೀಗ ಕತ್ತಲು

ಮನೆ-ಅಂಗಡಿ-ಮುಂಗಟ್ಟುಗಳು ಜಲಾವೃತ•ಕುಸಿಯುತ್ತಿರುವ ಮನೆ ಗೋಡೆ-ಮೇಲ್ಛಾವಣಿ•ಅಧಿಕಾರಿಗಳ ಭೇಟಿ

Team Udayavani, Aug 8, 2019, 12:13 PM IST

8–Agust-27

ಬಂಕಾಪುರ: ಮಳೆಗೆ ಮುರಿದಿರುವ ವಿದ್ಯುತ್‌ ಕಂಬ ತೆರವುಗೊಳಿಸುತ್ತಿರುವ ಸಿಬ್ಬಂದಿ.

ಬಂಕಾಪುರ: ಪಟ್ಟಣದಲ್ಲಿ ಬುಧವಾರ ಕೂಡಾ ವರುಣನ ಅರ್ಭಟ ಮುಂದುವರಿದಿದ್ದು, ವಿದ್ಯುತ್‌ ಕಂಬಗಳು ಧರೆಗುರುಳಿದ್ದು, ಕೆಲವು ಗ್ರಾಮಗಳಲ್ಲಿ ವಿದ್ಯತ್‌ ಸಂಪರ್ಕ ಕಡಿತಗೊಂಡು ಕತ್ತಲು ಆವರಿಸಿದೆ.

ಸಿಂಗಾಪುರ, ಹುವಗುಂದ, ಹೋತನಹಳ್ಳಿ, ಮೂಕಬಸರಿಕಟ್ಟಿ, ಚಂದಾಪುರ, ಹಳೆಬಂಕಾಪುರ, ಹುಲಿಕಟ್ಟಿ, ಶಿಡ್ಲಾಪುರ, ಹೊಟ್ಟೂರ ಗ್ರಾಮಗಳ ರಸ್ತೆಗಳು ಜಲಾವೃತಗೊಂಡು ರಸ್ತೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ವಿದ್ಯುತ್‌ ಸಂಪರ್ಕ ಇಲ್ಲದೇ ಇರುವುದರಿಂದ ಗ್ರಾಮಸ್ಥರಿಗೆ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದೆ. ಬಾಡ ಗ್ರಾಮದಲ್ಲಿ ಟಿ.ಸಿ.ಜಲಾವೃತಗೊಂಡು ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ.

ಜನಜೀವನ ತತ್ತರ: ವರುಣನ ರುದ್ರತಾಂಡವಕ್ಕೆ ಜನಜೀವನ ತತ್ತರಗೊಂಡಿದ್ದು, ಮನೆ, ಅಂಗಡಿ ಮುಂಗ್ಗಟ್ಟುಗಳಲ್ಲಿ ನೀರು ಹೊಕ್ಕು ಹಾನಿ ಸಂಭವಿಸಿದೆ. ಪಟ್ಟಣದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಮನೆಗೋಡೆ, ಮೇಲ್ಛಾವಣಿಗಳು ಕುಸಿಯುವುದು ಮುಂದುವರಿದಿದೆ. ಅಶೋಕ ಆಲದಕಟ್ಟಿ, ಇರ್ಶದ ಖತೀಬ, ಮನಿಯಾರ, ಪಠಾಣ, ಶಬ್ಬರ ದೊಡ್ಡಮನಿ ಸೇರಿದಂತೆ ಮತ್ತಿತರ ಮನೆ ಗೋಡೆಗಳು ಕುಸಿದಿವೆ. ಕಲ್ಯಾಣ ಗ್ರಾಮದಲ್ಲಿಯ 2 ಮನೆಗಳು, ಹನಕನಹಳ್ಳಿ ಗ್ರಾಮದ 3 ಮನೆಗಳು ಲಕ್ಕಿಕೋಪ್ಪ ಗ್ರಾಮದ 6 ಮನೆಗಳು ಕುಸಿದಿರುವ ಬಗ್ಗೆ ತಿಳಿದು ಬಂದಿದೆ.

ಬಹುತೇಕ ಕೆರೆಗಳು ಭರ್ತಿ: ಬಂಕಾಪುರ ಹೋಬಳಿಯ ಹೋತನಹಳ್ಳಿ ಎಂಟೆತ್ತಿನ ಕೆರೆ, ಲಿಂಗದೇವರಟ್ಟಿಯ ಕೆರೆ, ಹುಲಿಕಟ್ಟಿ ಶಿಡ್ಲಾಪುರ ಮದ್ಯದಲ್ಲಿರುವ ಡೊಂಕೇರೆ, ಜೇಸನಕಟ್ಟಿ ಕೆರೆ, ಜೊಂಡಿಗೇರಿ ಕೆರೆ, ಹುನಗುಂದ ಕೆರೆ, ಹಳೆಬಂಕಾಪುರ ಎರಿಕೆರೆ, ಮಲ್ಲನಾಯಕನಕೊಪ್ಪದ ಕೆರೆ ಸೇರಿದಂತೆ ಹೋಬಳಿ ಭಾಗದ ಬಹುತೇಕ ಕೆರೆಗಳು ತುಂಬಿ ಕೋಡಿ ಬಿದ್ದಿವೆ.

ಅಧಿಕಾರಿಗಳ ಭೇಟಿ-ಪರಿಶೀಲನೆ: ಕಂದಾಯ, ಕೃಷಿ ಇಲಾಖೆ ಹಾಗೂ ಪುರಸಭೆ ಅಧಿಕಾರಿಗಳು ಜಲಾವೃತಗೊಂಡ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.ಹೆಸ್ಕಾಂ ಲೈನ್‌ಮನ್‌ಗಳು ವಿದ್ಯುತ್‌ ಸಂಪರ್ಕ ಕಡಿತಗೊಂಡ ಗ್ರಾಮಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲು ಮಳೆಯನ್ನೂ ಲೆಕ್ಕಿಸದೇ ಶ್ರಮಿಸುತ್ತಿದ್ದಾರೆ.

ಸುಮಾರು 833 ಹೆಕ್ಟೇರ್‌ಗಿಂತಲೂ ಅಧಿಕ ಪ್ರದೇಶದಲ್ಲಿ ಸೋಯಾಬೀನ್‌, ಹತ್ತಿ, ಶೇಂಗಾ, ಗೋವಿನಜೋಳ, ಕೆಲವು ಭಾಗಗಳಲ್ಲಿ ಭತ್ತದ ಬೆಳೆಗಳು ಜಲಾವೃತಗೊಂಡಿದ್ದು, ಮಳೆಯ ಅರ್ಭಟ ಮುಂದುವರಿದಿದ್ದು, ಹಾನಿಗೊಳಗಾಗುವ ಬೆಳೆಗಳ ಪ್ರದೇಶ ಇನ್ನು ಅಧಿಕವಾಗುವ ಸಾಧ್ಯತೆಯಿದೆ.
ಅರುಣಕುಮಾರ ಕ್ಯಾಲಕೊಂಡ,
ಸಹಾಯಕ ಕೃಷಿ ಅಧಿಕಾರಿ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.